Homeಚಳವಳಿಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು

ಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು

ಕರ್ನಾಟಕದ ರೈತರು ಎಂಎಸ್‌ಪಿಗಿಂತ ಕನಿಷ್ಠ ಒಂದು ಸಾವಿರ ಕಡಿಮೆ ಬೆಲೆ ಪಡೆಯುತ್ತಿದ್ದಾರೆ. ಹೀಗಾಗಿ ಮಾರ್ಚ್ 5 ರಿಂದ ಕರ್ನಾಟಕದಲ್ಲಿ 'ಎಂಎಸ್‌ಪಿ ದಿಲಾವ್' ಆಂದೋಲನವನ್ನು ಪ್ರಾರಂಭಿಸಲಾಗುವುದು. 

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಂಬರುವ ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಅಭಿಯಾನ ನಡೆಸಲು ರೈತ ಮುಖಂಡರು ನಿರ್ಧರಿಸಿದ್ದಾರೆ.

ಇಂದು ನಡೆದ ಪತ್ರಿಕಾಗೋಷ್ಠಿಯಲ್ಲು ಮಾತನಾಡಿದ ರೈತ ಮುಖಂಡ, ಸ್ವರಾಜ್ ಇಂಡಿಯಾದ ಅಧ್ಯಕ್ಷ ಯೋಗೇಂದ್ರ ಯಾದವ್, ನಾವು ಮಾರ್ಚ್ 15ರ ವರೆಗಿನ ಕಾರ್ಯಕ್ರಮಗಳನ್ನು ಅಂತಿಮಗೊಳಿಸಿದ್ದೇವೆ ಎಂದು ಕಾರ್ಯಕ್ರಮದ ವಿವರಗಳನ್ನು ನೀಡಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ ಮುಖಂಡರಾದ ಬಲ್ಬೀರ್ ಎಸ್ ರಾಜೇವಾಲ್ ಮಾತನಾಡಿ, ’ಬಿಜೆಪಿಗೆ ಚುನಾವಣಾ ಭಾಷೆಯೊಂದೇ ಅರ್ಥವಾಗುವುದು. ಹಾಗಾಗಿ ನಾವು ಈ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಅಭಿಯಾನ ನಡೆಸುತ್ತೇವೆ. ಪಶ್ಚಿಮ ಬಂಗಾಳ ಮತ್ತು ಕೇರಳ ರಾಜ್ಯಗಳಿಗೆ ನಮ್ಮ ತಂಡಗಳನ್ನು ಕಳುಹಿಸುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿ: ಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

’ನಾವು ಯಾವುದೇ ಪಕ್ಷವನ್ನು ಬೆಂಬಲಿಸಿ ಅಭಿಯಾನ ಮಾಡುವುದಿಲ್ಲ. ಆದರೆ ಬಿಜೆಪಿಯನ್ನು ಸೋಲಿಸಬಲ್ಲ ಅಭ್ಯರ್ಥಿಗಳಿಗೆ ಮತ ಚಲಾಯಿಸುವಂತೆ ಜನರಲ್ಲಿ ಮನವಿ ಮಾಡುತ್ತೇವೆ. ರೈತರ ಬಗ್ಗೆ ಮೋದಿ ಸರ್ಕಾರದ ವರ್ತನೆ ಬಗ್ಗೆ ನಾವು ಜನರಿಗೆ ವಿವರಿಸಿ ಹೇಳುತ್ತೇವೆ’ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡರಾದ ಬಲ್ಬೀರ್ ಎಸ್ ರಾಜೇವಾಲ್ ತಿಳಿಸಿದ್ದಾರೆ.

“ಈ ವಿಧಾನಸಭಾ ಚುನಾವಣೆಯಲ್ಲಿ, ರೈತ ವಿರೋಧಿ ಕಾನೂನುಗಳನ್ನು ತಂದ ಬಿಜೆಪಿ ಮತ್ತು ಅದರ ಮಿತ್ರರಾಷ್ಟ್ರಗಳಿಗೆ ಶಿಕ್ಷೆ ವಿಧಿಸುವಂತೆ ನಾವು ಜನರಲ್ಲಿ ಮನವಿ ಮಾಡುತ್ತೇವೆ. ನಾವು ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಹೋಗುತ್ತೇವೆ. ಈ ಅಭಿಯಾನ ಮಾರ್ಚ್ 12 ರಂದು ಕೋಲ್ಕತ್ತಾದಲ್ಲಿ ಸಾರ್ವಜನಿಕ ಸಭೆಯೊಂದಿಗೆ ಪ್ರಾರಂಭವಾಗಲಿದೆ’ ಎಂದು ಸ್ವರಾಜ್ ಇಂಡಿಯಾದ ಯೋಗೇಂದ್ರ ಯಾದವ್ ತಿಳಿಸಿದ್ದಾರೆ.

ಮಾರ್ಚ್ 6 ರಂದು ರೈತ ಹೋರಾಟವು 100 ನೇ ದಿನಕ್ಕೆ ಕಾಲಿಡುತ್ತಿದೆ. ಅಂದು ರೈತರು ಕುಂಡ್ಲಿ-ಮಾನೇಸರ್-ಪಾಲ್ವಾಲ್ ಎಕ್ಸ್‌ಪ್ರೆಸ್ ವೇಯನ್ನು ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ ವಿವಿಧ ಸ್ಥಳಗಳಲ್ಲಿ ನಿರ್ಬಂಧಿಸುತ್ತಾರೆ ಎಂದು ಯೋಗೇಂದ್ರ ಯಾದವ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಸ್ಸಾಂನಲ್ಲಿ ಅಧಿಕಾರಕ್ಕೆ ಬಂದರೆ ಗೃಹಿಣಿಯರಿಗೆ ತಿಂಗಳಿಗೆ ₹ 2,000 ಸಹಾಯ ಧನ- ಪ್ರಿಯಾಂಕ ಗಾಂಧಿ

ಕಾರ್ಮಿಕ ಸಂಘಗಳು ರೈತ ಮುಖಂಡರನ್ನು ಭೇಟಿಯಾಗಿದ್ದು, ಮಾರ್ಚ್ 15 ರಂದು 10 ಕಾರ್ಮಿಕ ಸಂಘಗಳು ಪ್ರತಿಭಟನೆ ನಡೆಸಲಿದ್ದಾರೆ. ರೈತರು ಮತ್ತು ಕಾರ್ಮಿಕರು ಒಗ್ಗೂಡಬೇಕು ಎಂದು ಅವರು ನಿರ್ಧರಿಸಿದ್ದಾರೆ. ಹೀಗಾಗಿ ಈ ಪ್ರತಿಭಟನೆಗೆ ರೈತರು ಬೆಂಬಲ ನೀಡಲಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ

ಮಾರ್ಚ್ 8 ರಂದು ಸಂಯುಕ್ತ ಕಿಸಾನ್ ಮೋರ್ಚಾ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಮಹಿಳಾ ಕಿಸಾನ್ ದಿವಾಸ್ ಎಂದು ಗುರುತಿಸುತ್ತದೆ. ದೇಶಾದ್ಯಂತದ ಎಲ್ಲಾ ಎಸ್‌ಕೆಎಂ ಪ್ರತಿಭಟನಾ ತಾಣಗಳು ಆ ದಿನದಂದು ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿವೆ. ಅಂದು ಮಹಿಳೆಯರೇ ವೇದಿಕೆಯ ಎಲ್ಲಾ ಹಂತಗಳನ್ನು ನಿರ್ವಹಿಸುತ್ತಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಸಂಯುಕ್ತ ಕಿಸಾನ್ ಮೋರ್ಚಾ, ರೈತರ ಆಂದೋಲನವನ್ನು ಬೆಂಬಲಿಸಲು ಮತ್ತು ಮಹಿಳಾ ರೈತರು ದೇಶಕ್ಕೆ ನೀಡಿದ ಕೊಡುಗೆಗಳನ್ನು ತಿಳಿಸಲು ಮಹಿಳಾ ಸಂಘಟನೆಗಳನ್ನು ಮತ್ತು ಇತರರನ್ನು ಆಹ್ವಾನಿಸುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗಿದೆ.

ಕರ್ನಾಟಕದ ರೈತರು ಎಂಎಸ್‌ಪಿಗಿಂತ ಕನಿಷ್ಠ ಒಂದು ಸಾವಿರ ಕಡಿಮೆ ಬೆಲೆ ಪಡೆಯುತ್ತಿದ್ದಾರೆ. ಹೀಗಾಗಿ ಮಾರ್ಚ್ 5 ರಿಂದ ಕರ್ನಾಟಕದಲ್ಲಿ ‘ಎಂಎಸ್‌ಪಿ ದಿಲಾವ್’ ಆಂದೋಲನವನ್ನು ಪ್ರಾರಂಭಿಸಲಾಗುವುದು.  ಬೆಳೆಗಳಿಗೆ ಎಂಎಸ್‌ಪಿ ಖಾತ್ರಿಪಡಿಸಿಕೊಡುವಂತೆ ಪ್ರಧಾನಮಂತ್ರಿ ಅವರನ್ನು ಒತ್ತಾಯಿಸುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಯೋಗೇಂದ್ರ ಯಾದವ್ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ದೆಹಲಿ ಹಿಂಸಾಚಾರ: ಮಾಧ್ಯಮಗಳಿಗೆ ಮಾಹಿತಿ ಸೋರಿಕೆ – ಪೊಲೀಸರಿಗೆ ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...