Homeಚಳವಳಿಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು

ಪಂಚರಾಜ್ಯ ಚುನಾವಣೆ: ಬಿಜೆಪಿ ವಿರುದ್ಧ ಅಭಿಯಾನಕ್ಕೆ ಮುಂದಾದ ದೆಹಲಿ ರೈತ ಮುಖಂಡರು

ಕರ್ನಾಟಕದ ರೈತರು ಎಂಎಸ್‌ಪಿಗಿಂತ ಕನಿಷ್ಠ ಒಂದು ಸಾವಿರ ಕಡಿಮೆ ಬೆಲೆ ಪಡೆಯುತ್ತಿದ್ದಾರೆ. ಹೀಗಾಗಿ ಮಾರ್ಚ್ 5 ರಿಂದ ಕರ್ನಾಟಕದಲ್ಲಿ 'ಎಂಎಸ್‌ಪಿ ದಿಲಾವ್' ಆಂದೋಲನವನ್ನು ಪ್ರಾರಂಭಿಸಲಾಗುವುದು. 

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಂಬರುವ ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಅಭಿಯಾನ ನಡೆಸಲು ರೈತ ಮುಖಂಡರು ನಿರ್ಧರಿಸಿದ್ದಾರೆ.

ಇಂದು ನಡೆದ ಪತ್ರಿಕಾಗೋಷ್ಠಿಯಲ್ಲು ಮಾತನಾಡಿದ ರೈತ ಮುಖಂಡ, ಸ್ವರಾಜ್ ಇಂಡಿಯಾದ ಅಧ್ಯಕ್ಷ ಯೋಗೇಂದ್ರ ಯಾದವ್, ನಾವು ಮಾರ್ಚ್ 15ರ ವರೆಗಿನ ಕಾರ್ಯಕ್ರಮಗಳನ್ನು ಅಂತಿಮಗೊಳಿಸಿದ್ದೇವೆ ಎಂದು ಕಾರ್ಯಕ್ರಮದ ವಿವರಗಳನ್ನು ನೀಡಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ ಮುಖಂಡರಾದ ಬಲ್ಬೀರ್ ಎಸ್ ರಾಜೇವಾಲ್ ಮಾತನಾಡಿ, ’ಬಿಜೆಪಿಗೆ ಚುನಾವಣಾ ಭಾಷೆಯೊಂದೇ ಅರ್ಥವಾಗುವುದು. ಹಾಗಾಗಿ ನಾವು ಈ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಅಭಿಯಾನ ನಡೆಸುತ್ತೇವೆ. ಪಶ್ಚಿಮ ಬಂಗಾಳ ಮತ್ತು ಕೇರಳ ರಾಜ್ಯಗಳಿಗೆ ನಮ್ಮ ತಂಡಗಳನ್ನು ಕಳುಹಿಸುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿ: ಕೇರಳ ಚುನಾವಣೆ: ಸದ್ಯದ ಸ್ಥಿತಿ ಮತ್ತು ಮೈತ್ರಿಕೂಟಗಳಲ್ಲಿ ಸೀಟು ಹಂಚಿಕೆ ಹಗ್ಗಜಗ್ಗಾಟ

’ನಾವು ಯಾವುದೇ ಪಕ್ಷವನ್ನು ಬೆಂಬಲಿಸಿ ಅಭಿಯಾನ ಮಾಡುವುದಿಲ್ಲ. ಆದರೆ ಬಿಜೆಪಿಯನ್ನು ಸೋಲಿಸಬಲ್ಲ ಅಭ್ಯರ್ಥಿಗಳಿಗೆ ಮತ ಚಲಾಯಿಸುವಂತೆ ಜನರಲ್ಲಿ ಮನವಿ ಮಾಡುತ್ತೇವೆ. ರೈತರ ಬಗ್ಗೆ ಮೋದಿ ಸರ್ಕಾರದ ವರ್ತನೆ ಬಗ್ಗೆ ನಾವು ಜನರಿಗೆ ವಿವರಿಸಿ ಹೇಳುತ್ತೇವೆ’ ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡರಾದ ಬಲ್ಬೀರ್ ಎಸ್ ರಾಜೇವಾಲ್ ತಿಳಿಸಿದ್ದಾರೆ.

“ಈ ವಿಧಾನಸಭಾ ಚುನಾವಣೆಯಲ್ಲಿ, ರೈತ ವಿರೋಧಿ ಕಾನೂನುಗಳನ್ನು ತಂದ ಬಿಜೆಪಿ ಮತ್ತು ಅದರ ಮಿತ್ರರಾಷ್ಟ್ರಗಳಿಗೆ ಶಿಕ್ಷೆ ವಿಧಿಸುವಂತೆ ನಾವು ಜನರಲ್ಲಿ ಮನವಿ ಮಾಡುತ್ತೇವೆ. ನಾವು ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಹೋಗುತ್ತೇವೆ. ಈ ಅಭಿಯಾನ ಮಾರ್ಚ್ 12 ರಂದು ಕೋಲ್ಕತ್ತಾದಲ್ಲಿ ಸಾರ್ವಜನಿಕ ಸಭೆಯೊಂದಿಗೆ ಪ್ರಾರಂಭವಾಗಲಿದೆ’ ಎಂದು ಸ್ವರಾಜ್ ಇಂಡಿಯಾದ ಯೋಗೇಂದ್ರ ಯಾದವ್ ತಿಳಿಸಿದ್ದಾರೆ.

ಮಾರ್ಚ್ 6 ರಂದು ರೈತ ಹೋರಾಟವು 100 ನೇ ದಿನಕ್ಕೆ ಕಾಲಿಡುತ್ತಿದೆ. ಅಂದು ರೈತರು ಕುಂಡ್ಲಿ-ಮಾನೇಸರ್-ಪಾಲ್ವಾಲ್ ಎಕ್ಸ್‌ಪ್ರೆಸ್ ವೇಯನ್ನು ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ ವಿವಿಧ ಸ್ಥಳಗಳಲ್ಲಿ ನಿರ್ಬಂಧಿಸುತ್ತಾರೆ ಎಂದು ಯೋಗೇಂದ್ರ ಯಾದವ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಅಸ್ಸಾಂನಲ್ಲಿ ಅಧಿಕಾರಕ್ಕೆ ಬಂದರೆ ಗೃಹಿಣಿಯರಿಗೆ ತಿಂಗಳಿಗೆ ₹ 2,000 ಸಹಾಯ ಧನ- ಪ್ರಿಯಾಂಕ ಗಾಂಧಿ

ಕಾರ್ಮಿಕ ಸಂಘಗಳು ರೈತ ಮುಖಂಡರನ್ನು ಭೇಟಿಯಾಗಿದ್ದು, ಮಾರ್ಚ್ 15 ರಂದು 10 ಕಾರ್ಮಿಕ ಸಂಘಗಳು ಪ್ರತಿಭಟನೆ ನಡೆಸಲಿದ್ದಾರೆ. ರೈತರು ಮತ್ತು ಕಾರ್ಮಿಕರು ಒಗ್ಗೂಡಬೇಕು ಎಂದು ಅವರು ನಿರ್ಧರಿಸಿದ್ದಾರೆ. ಹೀಗಾಗಿ ಈ ಪ್ರತಿಭಟನೆಗೆ ರೈತರು ಬೆಂಬಲ ನೀಡಲಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ

ಮಾರ್ಚ್ 8 ರಂದು ಸಂಯುಕ್ತ ಕಿಸಾನ್ ಮೋರ್ಚಾ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಮಹಿಳಾ ಕಿಸಾನ್ ದಿವಾಸ್ ಎಂದು ಗುರುತಿಸುತ್ತದೆ. ದೇಶಾದ್ಯಂತದ ಎಲ್ಲಾ ಎಸ್‌ಕೆಎಂ ಪ್ರತಿಭಟನಾ ತಾಣಗಳು ಆ ದಿನದಂದು ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿವೆ. ಅಂದು ಮಹಿಳೆಯರೇ ವೇದಿಕೆಯ ಎಲ್ಲಾ ಹಂತಗಳನ್ನು ನಿರ್ವಹಿಸುತ್ತಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಸಂಯುಕ್ತ ಕಿಸಾನ್ ಮೋರ್ಚಾ, ರೈತರ ಆಂದೋಲನವನ್ನು ಬೆಂಬಲಿಸಲು ಮತ್ತು ಮಹಿಳಾ ರೈತರು ದೇಶಕ್ಕೆ ನೀಡಿದ ಕೊಡುಗೆಗಳನ್ನು ತಿಳಿಸಲು ಮಹಿಳಾ ಸಂಘಟನೆಗಳನ್ನು ಮತ್ತು ಇತರರನ್ನು ಆಹ್ವಾನಿಸುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಲಾಗಿದೆ.

ಕರ್ನಾಟಕದ ರೈತರು ಎಂಎಸ್‌ಪಿಗಿಂತ ಕನಿಷ್ಠ ಒಂದು ಸಾವಿರ ಕಡಿಮೆ ಬೆಲೆ ಪಡೆಯುತ್ತಿದ್ದಾರೆ. ಹೀಗಾಗಿ ಮಾರ್ಚ್ 5 ರಿಂದ ಕರ್ನಾಟಕದಲ್ಲಿ ‘ಎಂಎಸ್‌ಪಿ ದಿಲಾವ್’ ಆಂದೋಲನವನ್ನು ಪ್ರಾರಂಭಿಸಲಾಗುವುದು.  ಬೆಳೆಗಳಿಗೆ ಎಂಎಸ್‌ಪಿ ಖಾತ್ರಿಪಡಿಸಿಕೊಡುವಂತೆ ಪ್ರಧಾನಮಂತ್ರಿ ಅವರನ್ನು ಒತ್ತಾಯಿಸುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಯೋಗೇಂದ್ರ ಯಾದವ್ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: ದೆಹಲಿ ಹಿಂಸಾಚಾರ: ಮಾಧ್ಯಮಗಳಿಗೆ ಮಾಹಿತಿ ಸೋರಿಕೆ – ಪೊಲೀಸರಿಗೆ ಹೈಕೋರ್ಟ್ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...