Homeಮುಖಪುಟಭತ್ತ ನಾಟಿಗೂ ಮುನ್ನವೇ ದೆಹಲಿ ಸೇರುತ್ತಿರುವ ರೈತರು: ಹೋರಾಟಕ್ಕೆ ಮತ್ತಷ್ಟು ಬಲ

ಭತ್ತ ನಾಟಿಗೂ ಮುನ್ನವೇ ದೆಹಲಿ ಸೇರುತ್ತಿರುವ ರೈತರು: ಹೋರಾಟಕ್ಕೆ ಮತ್ತಷ್ಟು ಬಲ

ಬುಧವಾರ ಮುಂಜಾನೆ ನೂರಾರು ರೈತರನ್ನು ಹೊತ್ತ ಸುಮಾರು 125ಕ್ಕೂ ಹೆಚ್ಚು ಟ್ರಕ್‌ಗಳು ಸಿಂಘು, ಟಿಕ್ರಿ ಗಡಿಗಳತ್ತ ಹೊರಟಿವೆ..

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪಂಜಾಬ್‌ನ ಲೂಧಿಯಾನದ ಗ್ರಾಮಗಳಲ್ಲಿ ತಾವಿರುವಲ್ಲಿಯೇ ಮೇ 26 ರಂದು `ಕರಾಳ ದಿನ’ವನ್ನು ಆಚರಿಸಿದ್ದ ರೈತರು ಇದೀಗ ಗಡಿಗಳತ್ತ ಪಯಣ ಬೆಳೆಸಿದ್ದಾರೆ. ನಾಟಿ ಆರಂಭವಾಗುವ ಮೊದಲೇ ರೈತ ಹೋರಾಟವನ್ನು ಬಲಗೊಳಿಸಲು ಪಂಜಾಬ್‌ನ ವಿವಿಧ ಭಾಗಗಳಿಂದ ರೈತರು ದೆಹಲಿ ಗಡಿಗಳತ್ತ ಹೊರಟಿದ್ದಾರೆ ಎಂದು ರೈತ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

ಬುಧವಾರ ಮುಂಜಾನೆ ನೂರಾರು ರೈತರನ್ನು ಹೊತ್ತ ಸುಮಾರು 125ಕ್ಕೂ ಹೆಚ್ಚು ವಾಹನಗಳು ಮುಖ್ಯವಾಗಿ ಲೂಧಿಯಾನ ಜಿಲ್ಲಯ ಜಾಗ್ರಾನ್‌, ಸುಧಾಅರ್‌, ಸಿಧ್ವಾನ್‌ ಬೆಟ್, ರಾಯ್‌ಕೋಟ್‌ ಮತ್ತು ಹಂಬ್ರನ್‌ಗಳಿಂದ ಸಿಂಘು ಮತ್ತು ಟಿಕ್ರಿ ಹೋರಾಟದ ಗಡಿಗಳತ್ತ ಹೊರಟಿದ್ದಾರೆ

`ಭಾರತೀಯ ಕಿಸಾನ್‌ ಯೂನಿಯನ್‌ (ಡಕೊಂಡಾ) ಸಂಘಟನೆಯ ಬ್ಯಾನರ್‌ನೊಂದಿಗೆ ಸುಮಾರು 700 ರೈತರು ವಾಹನಗಳ ಮೂಲಕ ದೆಹಲಿ ಗಡಿಗಳಿಗೆ ತೆರಳಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರು ಹೋರಾಟವನ್ನು ಸೇರಿಕೊಳ್ಳಲಿದ್ದಾರೆ. ಗ್ರಾಮಗಳಲ್ಲಿ ನಡೆಯುತ್ತಿರುವ ಹೋರಾಟವು ಜೂನ್‌ 10ರವರೆಗೆ ಮುಂದುವರೆಯಲಿದೆ. ನಂತರ ರೈತರು ಭತ್ತದ ನಾಟಿ ಮಾಡುವತ್ತ ಗಮನಹರಿಸಬೇಕಾಗಬಹುದು ಎಂದು ರೈತ ಹೋರಾಟವನ್ನು ಬೆಂಬಲಿಸುವ ಇಕ್ವಿಂಲಾಬಿ ಕೇಂದ್ರ ಪಂಜಾಬ್‌ನ ಪ್ರಧಾನ ಕಾರ್ಯದರ್ಶಿ ಕಮಲ್‌ಜಿತ್ ಖನ್ನಾ ತಿಳಿಸಿದರು.

ಬಿಕೆಯು ಡಕೊಂಡಾ ಜೊತೆಯಲ್ಲಿ ಕೀರ್ತಿ ಕಿಸಾನ್‌ ಯೂನಿಯನ್‌ ಹಾಗೂ ಬಿಕೆಯು (ಉಗ್ರಹಾನ್‌) ಸಂಘಟನೆಯ ಸದಸ್ಯರು ಹೋರಾಟದ ಗಡಿಗಳಿಗೆ ಹೋಗುತ್ತಿದ್ದಾರೆ ಎಂದು ಅವರು ತಿಳಿಸಿದರು.

ರೈತರೊಂದಿಗೆ ಬಿಕೆಯು ಡಕೊಂಡ ಸಂಘಟನೆಯ ಜಿಲ್ಲಾಧ್ಯಕ್ಷರಾದ ಮೊಹಿಂದರ್‌ ಸಿಂಗ್‌, ಜಿಲ್ಲಾ ಕಾರ್ಯದರ್ಶಿ ಇಂದರ್‌ಜಿತ್‌ ಸಿಂಗ್‌ ಹಾಗೂ ಮಾಧ್ಯಮ ಕಾರ್ಯದರ್ಶಸಿ ಗುರ್ಪ್ರೀತ್‌ ಸಿಂಗ್‌ ಅವರು ಹೋರಾಟದಲ್ಲಿ ಭಾಗವಹಿಸಲಿದ್ದು, ರೈತರು ಹತ್ತು ದಿನಗಳ ಕಾಲ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಇದರಲ್ಲಿ ರೈತ ಮಹಿಳೆಯರು ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದಿದ್ದಾರೆ.

ಬಿಕೆಯು ಲಖೋವಾಲ್‌ ಪ್ರದೇಶದ ಪ್ರಧಾನ ಕಾರ್ಯದರ್ಶಿ ಹರೀಂದರ್‌ ಸಿಂಗ್‌ ಲಖೋವಾಲ್‌ ಅವರ ಪ್ರಕಾರ, `ರಾಜ್ಯದ ವಿವಿಧ ಜೆಲ್ಲಿಗಳ ಸುಮಾರು 80-100 ರೈತರು ಮತ್ತು ಕೃಷಿ ಕಾರ್ಮಿಕರು ಬುಧವಾರ ದೆಹಲಿ ಗಡಿಗಳಿಗೆ ಹೋಗುತ್ತಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ನಮ್ಮ ಹೆಚ್ಚಿನ ಸದಸ್ಯರು ಗಡಿಗಳಲ್ಲಿರುವ ಪ್ರತಿಭಟನಾಕಾರರನ್ನು ಸೇರುವ ನಿರೀಕ್ಷೆಯಿದೆ’ ಎಂದರು.

ಲೂಧಿಯಾನದ ಕೋಕ್ರಾನ್‌ ತಕ್ರಾನ್‌ ಗ್ರಾಮದ ರೈತ ರವೀಂದರ್‌ ಸಿಂಗ್‌ ಪ್ರತಿಭಟನಾ ಸ್ಥಳಕ್ಕೆ ಹೋಗುತ್ತಿರುವುದರ ಬಗ್ಗೆ ಮಾತನಾಡಿ, ಕಡು ಬಿಸಿಲಿನ ನಡುವೆಯೂ ನಾವು ಹೋರಾಟದ ಗಡಿಗಳಲ್ಲಿ ಉಳಿದುಕೊಳ್ಳಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ಭತ್ತದ ನಾಟಿ ನಂತರ ಇನ್ನು ಹೆಚ್ಚು ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಭಾಗವಹಿಸುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ಒಟ್ಟಿನಲ್ಲಿ 6 ತಿಂಗಳು ಪೂರೈಸಿರುವ ರೈತ ಹೋರಾಟ ತನ್ನ ಕಾವು ಕಳೆದುಕೊಂಡಿಲ್ಲ. ಬದಲಿಗೆ ಮತ್ತಷ್ಟು ಬಲಶಾಲಿಯಾಗುತ್ತಿದೆ. ಜೂನ್ 05 ರಂದು ಗಡಿಗಳಲ್ಲಿ ಸುಗ್ರಿವಾಜ್ಞೆಗಳಿಗೆ ಒಂದು ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಸಂಪೂರ್ಣ ಕ್ರಾಂತಿ ದಿವಸ್ ಆಚರಿಸಲು ಕರೆ ನೀಡಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...