Homeಮುಖಪುಟಭತ್ತ ನಾಟಿಗೂ ಮುನ್ನವೇ ದೆಹಲಿ ಸೇರುತ್ತಿರುವ ರೈತರು: ಹೋರಾಟಕ್ಕೆ ಮತ್ತಷ್ಟು ಬಲ

ಭತ್ತ ನಾಟಿಗೂ ಮುನ್ನವೇ ದೆಹಲಿ ಸೇರುತ್ತಿರುವ ರೈತರು: ಹೋರಾಟಕ್ಕೆ ಮತ್ತಷ್ಟು ಬಲ

ಬುಧವಾರ ಮುಂಜಾನೆ ನೂರಾರು ರೈತರನ್ನು ಹೊತ್ತ ಸುಮಾರು 125ಕ್ಕೂ ಹೆಚ್ಚು ಟ್ರಕ್‌ಗಳು ಸಿಂಘು, ಟಿಕ್ರಿ ಗಡಿಗಳತ್ತ ಹೊರಟಿವೆ..

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪಂಜಾಬ್‌ನ ಲೂಧಿಯಾನದ ಗ್ರಾಮಗಳಲ್ಲಿ ತಾವಿರುವಲ್ಲಿಯೇ ಮೇ 26 ರಂದು `ಕರಾಳ ದಿನ’ವನ್ನು ಆಚರಿಸಿದ್ದ ರೈತರು ಇದೀಗ ಗಡಿಗಳತ್ತ ಪಯಣ ಬೆಳೆಸಿದ್ದಾರೆ. ನಾಟಿ ಆರಂಭವಾಗುವ ಮೊದಲೇ ರೈತ ಹೋರಾಟವನ್ನು ಬಲಗೊಳಿಸಲು ಪಂಜಾಬ್‌ನ ವಿವಿಧ ಭಾಗಗಳಿಂದ ರೈತರು ದೆಹಲಿ ಗಡಿಗಳತ್ತ ಹೊರಟಿದ್ದಾರೆ ಎಂದು ರೈತ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

ಬುಧವಾರ ಮುಂಜಾನೆ ನೂರಾರು ರೈತರನ್ನು ಹೊತ್ತ ಸುಮಾರು 125ಕ್ಕೂ ಹೆಚ್ಚು ವಾಹನಗಳು ಮುಖ್ಯವಾಗಿ ಲೂಧಿಯಾನ ಜಿಲ್ಲಯ ಜಾಗ್ರಾನ್‌, ಸುಧಾಅರ್‌, ಸಿಧ್ವಾನ್‌ ಬೆಟ್, ರಾಯ್‌ಕೋಟ್‌ ಮತ್ತು ಹಂಬ್ರನ್‌ಗಳಿಂದ ಸಿಂಘು ಮತ್ತು ಟಿಕ್ರಿ ಹೋರಾಟದ ಗಡಿಗಳತ್ತ ಹೊರಟಿದ್ದಾರೆ

`ಭಾರತೀಯ ಕಿಸಾನ್‌ ಯೂನಿಯನ್‌ (ಡಕೊಂಡಾ) ಸಂಘಟನೆಯ ಬ್ಯಾನರ್‌ನೊಂದಿಗೆ ಸುಮಾರು 700 ರೈತರು ವಾಹನಗಳ ಮೂಲಕ ದೆಹಲಿ ಗಡಿಗಳಿಗೆ ತೆರಳಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರು ಹೋರಾಟವನ್ನು ಸೇರಿಕೊಳ್ಳಲಿದ್ದಾರೆ. ಗ್ರಾಮಗಳಲ್ಲಿ ನಡೆಯುತ್ತಿರುವ ಹೋರಾಟವು ಜೂನ್‌ 10ರವರೆಗೆ ಮುಂದುವರೆಯಲಿದೆ. ನಂತರ ರೈತರು ಭತ್ತದ ನಾಟಿ ಮಾಡುವತ್ತ ಗಮನಹರಿಸಬೇಕಾಗಬಹುದು ಎಂದು ರೈತ ಹೋರಾಟವನ್ನು ಬೆಂಬಲಿಸುವ ಇಕ್ವಿಂಲಾಬಿ ಕೇಂದ್ರ ಪಂಜಾಬ್‌ನ ಪ್ರಧಾನ ಕಾರ್ಯದರ್ಶಿ ಕಮಲ್‌ಜಿತ್ ಖನ್ನಾ ತಿಳಿಸಿದರು.

ಬಿಕೆಯು ಡಕೊಂಡಾ ಜೊತೆಯಲ್ಲಿ ಕೀರ್ತಿ ಕಿಸಾನ್‌ ಯೂನಿಯನ್‌ ಹಾಗೂ ಬಿಕೆಯು (ಉಗ್ರಹಾನ್‌) ಸಂಘಟನೆಯ ಸದಸ್ಯರು ಹೋರಾಟದ ಗಡಿಗಳಿಗೆ ಹೋಗುತ್ತಿದ್ದಾರೆ ಎಂದು ಅವರು ತಿಳಿಸಿದರು.

ರೈತರೊಂದಿಗೆ ಬಿಕೆಯು ಡಕೊಂಡ ಸಂಘಟನೆಯ ಜಿಲ್ಲಾಧ್ಯಕ್ಷರಾದ ಮೊಹಿಂದರ್‌ ಸಿಂಗ್‌, ಜಿಲ್ಲಾ ಕಾರ್ಯದರ್ಶಿ ಇಂದರ್‌ಜಿತ್‌ ಸಿಂಗ್‌ ಹಾಗೂ ಮಾಧ್ಯಮ ಕಾರ್ಯದರ್ಶಸಿ ಗುರ್ಪ್ರೀತ್‌ ಸಿಂಗ್‌ ಅವರು ಹೋರಾಟದಲ್ಲಿ ಭಾಗವಹಿಸಲಿದ್ದು, ರೈತರು ಹತ್ತು ದಿನಗಳ ಕಾಲ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಇದರಲ್ಲಿ ರೈತ ಮಹಿಳೆಯರು ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದಿದ್ದಾರೆ.

ಬಿಕೆಯು ಲಖೋವಾಲ್‌ ಪ್ರದೇಶದ ಪ್ರಧಾನ ಕಾರ್ಯದರ್ಶಿ ಹರೀಂದರ್‌ ಸಿಂಗ್‌ ಲಖೋವಾಲ್‌ ಅವರ ಪ್ರಕಾರ, `ರಾಜ್ಯದ ವಿವಿಧ ಜೆಲ್ಲಿಗಳ ಸುಮಾರು 80-100 ರೈತರು ಮತ್ತು ಕೃಷಿ ಕಾರ್ಮಿಕರು ಬುಧವಾರ ದೆಹಲಿ ಗಡಿಗಳಿಗೆ ಹೋಗುತ್ತಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ನಮ್ಮ ಹೆಚ್ಚಿನ ಸದಸ್ಯರು ಗಡಿಗಳಲ್ಲಿರುವ ಪ್ರತಿಭಟನಾಕಾರರನ್ನು ಸೇರುವ ನಿರೀಕ್ಷೆಯಿದೆ’ ಎಂದರು.

ಲೂಧಿಯಾನದ ಕೋಕ್ರಾನ್‌ ತಕ್ರಾನ್‌ ಗ್ರಾಮದ ರೈತ ರವೀಂದರ್‌ ಸಿಂಗ್‌ ಪ್ರತಿಭಟನಾ ಸ್ಥಳಕ್ಕೆ ಹೋಗುತ್ತಿರುವುದರ ಬಗ್ಗೆ ಮಾತನಾಡಿ, ಕಡು ಬಿಸಿಲಿನ ನಡುವೆಯೂ ನಾವು ಹೋರಾಟದ ಗಡಿಗಳಲ್ಲಿ ಉಳಿದುಕೊಳ್ಳಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ಭತ್ತದ ನಾಟಿ ನಂತರ ಇನ್ನು ಹೆಚ್ಚು ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಭಾಗವಹಿಸುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ಒಟ್ಟಿನಲ್ಲಿ 6 ತಿಂಗಳು ಪೂರೈಸಿರುವ ರೈತ ಹೋರಾಟ ತನ್ನ ಕಾವು ಕಳೆದುಕೊಂಡಿಲ್ಲ. ಬದಲಿಗೆ ಮತ್ತಷ್ಟು ಬಲಶಾಲಿಯಾಗುತ್ತಿದೆ. ಜೂನ್ 05 ರಂದು ಗಡಿಗಳಲ್ಲಿ ಸುಗ್ರಿವಾಜ್ಞೆಗಳಿಗೆ ಒಂದು ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಸಂಪೂರ್ಣ ಕ್ರಾಂತಿ ದಿವಸ್ ಆಚರಿಸಲು ಕರೆ ನೀಡಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...