Homeಮುಖಪುಟಭತ್ತ ನಾಟಿಗೂ ಮುನ್ನವೇ ದೆಹಲಿ ಸೇರುತ್ತಿರುವ ರೈತರು: ಹೋರಾಟಕ್ಕೆ ಮತ್ತಷ್ಟು ಬಲ

ಭತ್ತ ನಾಟಿಗೂ ಮುನ್ನವೇ ದೆಹಲಿ ಸೇರುತ್ತಿರುವ ರೈತರು: ಹೋರಾಟಕ್ಕೆ ಮತ್ತಷ್ಟು ಬಲ

ಬುಧವಾರ ಮುಂಜಾನೆ ನೂರಾರು ರೈತರನ್ನು ಹೊತ್ತ ಸುಮಾರು 125ಕ್ಕೂ ಹೆಚ್ಚು ಟ್ರಕ್‌ಗಳು ಸಿಂಘು, ಟಿಕ್ರಿ ಗಡಿಗಳತ್ತ ಹೊರಟಿವೆ..

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪಂಜಾಬ್‌ನ ಲೂಧಿಯಾನದ ಗ್ರಾಮಗಳಲ್ಲಿ ತಾವಿರುವಲ್ಲಿಯೇ ಮೇ 26 ರಂದು `ಕರಾಳ ದಿನ’ವನ್ನು ಆಚರಿಸಿದ್ದ ರೈತರು ಇದೀಗ ಗಡಿಗಳತ್ತ ಪಯಣ ಬೆಳೆಸಿದ್ದಾರೆ. ನಾಟಿ ಆರಂಭವಾಗುವ ಮೊದಲೇ ರೈತ ಹೋರಾಟವನ್ನು ಬಲಗೊಳಿಸಲು ಪಂಜಾಬ್‌ನ ವಿವಿಧ ಭಾಗಗಳಿಂದ ರೈತರು ದೆಹಲಿ ಗಡಿಗಳತ್ತ ಹೊರಟಿದ್ದಾರೆ ಎಂದು ರೈತ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

ಬುಧವಾರ ಮುಂಜಾನೆ ನೂರಾರು ರೈತರನ್ನು ಹೊತ್ತ ಸುಮಾರು 125ಕ್ಕೂ ಹೆಚ್ಚು ವಾಹನಗಳು ಮುಖ್ಯವಾಗಿ ಲೂಧಿಯಾನ ಜಿಲ್ಲಯ ಜಾಗ್ರಾನ್‌, ಸುಧಾಅರ್‌, ಸಿಧ್ವಾನ್‌ ಬೆಟ್, ರಾಯ್‌ಕೋಟ್‌ ಮತ್ತು ಹಂಬ್ರನ್‌ಗಳಿಂದ ಸಿಂಘು ಮತ್ತು ಟಿಕ್ರಿ ಹೋರಾಟದ ಗಡಿಗಳತ್ತ ಹೊರಟಿದ್ದಾರೆ

`ಭಾರತೀಯ ಕಿಸಾನ್‌ ಯೂನಿಯನ್‌ (ಡಕೊಂಡಾ) ಸಂಘಟನೆಯ ಬ್ಯಾನರ್‌ನೊಂದಿಗೆ ಸುಮಾರು 700 ರೈತರು ವಾಹನಗಳ ಮೂಲಕ ದೆಹಲಿ ಗಡಿಗಳಿಗೆ ತೆರಳಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರು ಹೋರಾಟವನ್ನು ಸೇರಿಕೊಳ್ಳಲಿದ್ದಾರೆ. ಗ್ರಾಮಗಳಲ್ಲಿ ನಡೆಯುತ್ತಿರುವ ಹೋರಾಟವು ಜೂನ್‌ 10ರವರೆಗೆ ಮುಂದುವರೆಯಲಿದೆ. ನಂತರ ರೈತರು ಭತ್ತದ ನಾಟಿ ಮಾಡುವತ್ತ ಗಮನಹರಿಸಬೇಕಾಗಬಹುದು ಎಂದು ರೈತ ಹೋರಾಟವನ್ನು ಬೆಂಬಲಿಸುವ ಇಕ್ವಿಂಲಾಬಿ ಕೇಂದ್ರ ಪಂಜಾಬ್‌ನ ಪ್ರಧಾನ ಕಾರ್ಯದರ್ಶಿ ಕಮಲ್‌ಜಿತ್ ಖನ್ನಾ ತಿಳಿಸಿದರು.

ಬಿಕೆಯು ಡಕೊಂಡಾ ಜೊತೆಯಲ್ಲಿ ಕೀರ್ತಿ ಕಿಸಾನ್‌ ಯೂನಿಯನ್‌ ಹಾಗೂ ಬಿಕೆಯು (ಉಗ್ರಹಾನ್‌) ಸಂಘಟನೆಯ ಸದಸ್ಯರು ಹೋರಾಟದ ಗಡಿಗಳಿಗೆ ಹೋಗುತ್ತಿದ್ದಾರೆ ಎಂದು ಅವರು ತಿಳಿಸಿದರು.

ರೈತರೊಂದಿಗೆ ಬಿಕೆಯು ಡಕೊಂಡ ಸಂಘಟನೆಯ ಜಿಲ್ಲಾಧ್ಯಕ್ಷರಾದ ಮೊಹಿಂದರ್‌ ಸಿಂಗ್‌, ಜಿಲ್ಲಾ ಕಾರ್ಯದರ್ಶಿ ಇಂದರ್‌ಜಿತ್‌ ಸಿಂಗ್‌ ಹಾಗೂ ಮಾಧ್ಯಮ ಕಾರ್ಯದರ್ಶಸಿ ಗುರ್ಪ್ರೀತ್‌ ಸಿಂಗ್‌ ಅವರು ಹೋರಾಟದಲ್ಲಿ ಭಾಗವಹಿಸಲಿದ್ದು, ರೈತರು ಹತ್ತು ದಿನಗಳ ಕಾಲ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಇದರಲ್ಲಿ ರೈತ ಮಹಿಳೆಯರು ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದಿದ್ದಾರೆ.

ಬಿಕೆಯು ಲಖೋವಾಲ್‌ ಪ್ರದೇಶದ ಪ್ರಧಾನ ಕಾರ್ಯದರ್ಶಿ ಹರೀಂದರ್‌ ಸಿಂಗ್‌ ಲಖೋವಾಲ್‌ ಅವರ ಪ್ರಕಾರ, `ರಾಜ್ಯದ ವಿವಿಧ ಜೆಲ್ಲಿಗಳ ಸುಮಾರು 80-100 ರೈತರು ಮತ್ತು ಕೃಷಿ ಕಾರ್ಮಿಕರು ಬುಧವಾರ ದೆಹಲಿ ಗಡಿಗಳಿಗೆ ಹೋಗುತ್ತಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ನಮ್ಮ ಹೆಚ್ಚಿನ ಸದಸ್ಯರು ಗಡಿಗಳಲ್ಲಿರುವ ಪ್ರತಿಭಟನಾಕಾರರನ್ನು ಸೇರುವ ನಿರೀಕ್ಷೆಯಿದೆ’ ಎಂದರು.

ಲೂಧಿಯಾನದ ಕೋಕ್ರಾನ್‌ ತಕ್ರಾನ್‌ ಗ್ರಾಮದ ರೈತ ರವೀಂದರ್‌ ಸಿಂಗ್‌ ಪ್ರತಿಭಟನಾ ಸ್ಥಳಕ್ಕೆ ಹೋಗುತ್ತಿರುವುದರ ಬಗ್ಗೆ ಮಾತನಾಡಿ, ಕಡು ಬಿಸಿಲಿನ ನಡುವೆಯೂ ನಾವು ಹೋರಾಟದ ಗಡಿಗಳಲ್ಲಿ ಉಳಿದುಕೊಳ್ಳಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ಭತ್ತದ ನಾಟಿ ನಂತರ ಇನ್ನು ಹೆಚ್ಚು ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಭಾಗವಹಿಸುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ಒಟ್ಟಿನಲ್ಲಿ 6 ತಿಂಗಳು ಪೂರೈಸಿರುವ ರೈತ ಹೋರಾಟ ತನ್ನ ಕಾವು ಕಳೆದುಕೊಂಡಿಲ್ಲ. ಬದಲಿಗೆ ಮತ್ತಷ್ಟು ಬಲಶಾಲಿಯಾಗುತ್ತಿದೆ. ಜೂನ್ 05 ರಂದು ಗಡಿಗಳಲ್ಲಿ ಸುಗ್ರಿವಾಜ್ಞೆಗಳಿಗೆ ಒಂದು ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಸಂಪೂರ್ಣ ಕ್ರಾಂತಿ ದಿವಸ್ ಆಚರಿಸಲು ಕರೆ ನೀಡಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...