Homeಮುಖಪುಟಭತ್ತ ನಾಟಿಗೂ ಮುನ್ನವೇ ದೆಹಲಿ ಸೇರುತ್ತಿರುವ ರೈತರು: ಹೋರಾಟಕ್ಕೆ ಮತ್ತಷ್ಟು ಬಲ

ಭತ್ತ ನಾಟಿಗೂ ಮುನ್ನವೇ ದೆಹಲಿ ಸೇರುತ್ತಿರುವ ರೈತರು: ಹೋರಾಟಕ್ಕೆ ಮತ್ತಷ್ಟು ಬಲ

ಬುಧವಾರ ಮುಂಜಾನೆ ನೂರಾರು ರೈತರನ್ನು ಹೊತ್ತ ಸುಮಾರು 125ಕ್ಕೂ ಹೆಚ್ಚು ಟ್ರಕ್‌ಗಳು ಸಿಂಘು, ಟಿಕ್ರಿ ಗಡಿಗಳತ್ತ ಹೊರಟಿವೆ..

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪಂಜಾಬ್‌ನ ಲೂಧಿಯಾನದ ಗ್ರಾಮಗಳಲ್ಲಿ ತಾವಿರುವಲ್ಲಿಯೇ ಮೇ 26 ರಂದು `ಕರಾಳ ದಿನ’ವನ್ನು ಆಚರಿಸಿದ್ದ ರೈತರು ಇದೀಗ ಗಡಿಗಳತ್ತ ಪಯಣ ಬೆಳೆಸಿದ್ದಾರೆ. ನಾಟಿ ಆರಂಭವಾಗುವ ಮೊದಲೇ ರೈತ ಹೋರಾಟವನ್ನು ಬಲಗೊಳಿಸಲು ಪಂಜಾಬ್‌ನ ವಿವಿಧ ಭಾಗಗಳಿಂದ ರೈತರು ದೆಹಲಿ ಗಡಿಗಳತ್ತ ಹೊರಟಿದ್ದಾರೆ ಎಂದು ರೈತ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

ಬುಧವಾರ ಮುಂಜಾನೆ ನೂರಾರು ರೈತರನ್ನು ಹೊತ್ತ ಸುಮಾರು 125ಕ್ಕೂ ಹೆಚ್ಚು ವಾಹನಗಳು ಮುಖ್ಯವಾಗಿ ಲೂಧಿಯಾನ ಜಿಲ್ಲಯ ಜಾಗ್ರಾನ್‌, ಸುಧಾಅರ್‌, ಸಿಧ್ವಾನ್‌ ಬೆಟ್, ರಾಯ್‌ಕೋಟ್‌ ಮತ್ತು ಹಂಬ್ರನ್‌ಗಳಿಂದ ಸಿಂಘು ಮತ್ತು ಟಿಕ್ರಿ ಹೋರಾಟದ ಗಡಿಗಳತ್ತ ಹೊರಟಿದ್ದಾರೆ

`ಭಾರತೀಯ ಕಿಸಾನ್‌ ಯೂನಿಯನ್‌ (ಡಕೊಂಡಾ) ಸಂಘಟನೆಯ ಬ್ಯಾನರ್‌ನೊಂದಿಗೆ ಸುಮಾರು 700 ರೈತರು ವಾಹನಗಳ ಮೂಲಕ ದೆಹಲಿ ಗಡಿಗಳಿಗೆ ತೆರಳಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರು ಹೋರಾಟವನ್ನು ಸೇರಿಕೊಳ್ಳಲಿದ್ದಾರೆ. ಗ್ರಾಮಗಳಲ್ಲಿ ನಡೆಯುತ್ತಿರುವ ಹೋರಾಟವು ಜೂನ್‌ 10ರವರೆಗೆ ಮುಂದುವರೆಯಲಿದೆ. ನಂತರ ರೈತರು ಭತ್ತದ ನಾಟಿ ಮಾಡುವತ್ತ ಗಮನಹರಿಸಬೇಕಾಗಬಹುದು ಎಂದು ರೈತ ಹೋರಾಟವನ್ನು ಬೆಂಬಲಿಸುವ ಇಕ್ವಿಂಲಾಬಿ ಕೇಂದ್ರ ಪಂಜಾಬ್‌ನ ಪ್ರಧಾನ ಕಾರ್ಯದರ್ಶಿ ಕಮಲ್‌ಜಿತ್ ಖನ್ನಾ ತಿಳಿಸಿದರು.

ಬಿಕೆಯು ಡಕೊಂಡಾ ಜೊತೆಯಲ್ಲಿ ಕೀರ್ತಿ ಕಿಸಾನ್‌ ಯೂನಿಯನ್‌ ಹಾಗೂ ಬಿಕೆಯು (ಉಗ್ರಹಾನ್‌) ಸಂಘಟನೆಯ ಸದಸ್ಯರು ಹೋರಾಟದ ಗಡಿಗಳಿಗೆ ಹೋಗುತ್ತಿದ್ದಾರೆ ಎಂದು ಅವರು ತಿಳಿಸಿದರು.

ರೈತರೊಂದಿಗೆ ಬಿಕೆಯು ಡಕೊಂಡ ಸಂಘಟನೆಯ ಜಿಲ್ಲಾಧ್ಯಕ್ಷರಾದ ಮೊಹಿಂದರ್‌ ಸಿಂಗ್‌, ಜಿಲ್ಲಾ ಕಾರ್ಯದರ್ಶಿ ಇಂದರ್‌ಜಿತ್‌ ಸಿಂಗ್‌ ಹಾಗೂ ಮಾಧ್ಯಮ ಕಾರ್ಯದರ್ಶಸಿ ಗುರ್ಪ್ರೀತ್‌ ಸಿಂಗ್‌ ಅವರು ಹೋರಾಟದಲ್ಲಿ ಭಾಗವಹಿಸಲಿದ್ದು, ರೈತರು ಹತ್ತು ದಿನಗಳ ಕಾಲ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಇದರಲ್ಲಿ ರೈತ ಮಹಿಳೆಯರು ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದಿದ್ದಾರೆ.

ಬಿಕೆಯು ಲಖೋವಾಲ್‌ ಪ್ರದೇಶದ ಪ್ರಧಾನ ಕಾರ್ಯದರ್ಶಿ ಹರೀಂದರ್‌ ಸಿಂಗ್‌ ಲಖೋವಾಲ್‌ ಅವರ ಪ್ರಕಾರ, `ರಾಜ್ಯದ ವಿವಿಧ ಜೆಲ್ಲಿಗಳ ಸುಮಾರು 80-100 ರೈತರು ಮತ್ತು ಕೃಷಿ ಕಾರ್ಮಿಕರು ಬುಧವಾರ ದೆಹಲಿ ಗಡಿಗಳಿಗೆ ಹೋಗುತ್ತಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ನಮ್ಮ ಹೆಚ್ಚಿನ ಸದಸ್ಯರು ಗಡಿಗಳಲ್ಲಿರುವ ಪ್ರತಿಭಟನಾಕಾರರನ್ನು ಸೇರುವ ನಿರೀಕ್ಷೆಯಿದೆ’ ಎಂದರು.

ಲೂಧಿಯಾನದ ಕೋಕ್ರಾನ್‌ ತಕ್ರಾನ್‌ ಗ್ರಾಮದ ರೈತ ರವೀಂದರ್‌ ಸಿಂಗ್‌ ಪ್ರತಿಭಟನಾ ಸ್ಥಳಕ್ಕೆ ಹೋಗುತ್ತಿರುವುದರ ಬಗ್ಗೆ ಮಾತನಾಡಿ, ಕಡು ಬಿಸಿಲಿನ ನಡುವೆಯೂ ನಾವು ಹೋರಾಟದ ಗಡಿಗಳಲ್ಲಿ ಉಳಿದುಕೊಳ್ಳಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ಭತ್ತದ ನಾಟಿ ನಂತರ ಇನ್ನು ಹೆಚ್ಚು ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಭಾಗವಹಿಸುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ಒಟ್ಟಿನಲ್ಲಿ 6 ತಿಂಗಳು ಪೂರೈಸಿರುವ ರೈತ ಹೋರಾಟ ತನ್ನ ಕಾವು ಕಳೆದುಕೊಂಡಿಲ್ಲ. ಬದಲಿಗೆ ಮತ್ತಷ್ಟು ಬಲಶಾಲಿಯಾಗುತ್ತಿದೆ. ಜೂನ್ 05 ರಂದು ಗಡಿಗಳಲ್ಲಿ ಸುಗ್ರಿವಾಜ್ಞೆಗಳಿಗೆ ಒಂದು ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಸಂಪೂರ್ಣ ಕ್ರಾಂತಿ ದಿವಸ್ ಆಚರಿಸಲು ಕರೆ ನೀಡಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...