Homeಮುಖಪುಟಭತ್ತ ನಾಟಿಗೂ ಮುನ್ನವೇ ದೆಹಲಿ ಸೇರುತ್ತಿರುವ ರೈತರು: ಹೋರಾಟಕ್ಕೆ ಮತ್ತಷ್ಟು ಬಲ

ಭತ್ತ ನಾಟಿಗೂ ಮುನ್ನವೇ ದೆಹಲಿ ಸೇರುತ್ತಿರುವ ರೈತರು: ಹೋರಾಟಕ್ಕೆ ಮತ್ತಷ್ಟು ಬಲ

ಬುಧವಾರ ಮುಂಜಾನೆ ನೂರಾರು ರೈತರನ್ನು ಹೊತ್ತ ಸುಮಾರು 125ಕ್ಕೂ ಹೆಚ್ಚು ಟ್ರಕ್‌ಗಳು ಸಿಂಘು, ಟಿಕ್ರಿ ಗಡಿಗಳತ್ತ ಹೊರಟಿವೆ..

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪಂಜಾಬ್‌ನ ಲೂಧಿಯಾನದ ಗ್ರಾಮಗಳಲ್ಲಿ ತಾವಿರುವಲ್ಲಿಯೇ ಮೇ 26 ರಂದು `ಕರಾಳ ದಿನ’ವನ್ನು ಆಚರಿಸಿದ್ದ ರೈತರು ಇದೀಗ ಗಡಿಗಳತ್ತ ಪಯಣ ಬೆಳೆಸಿದ್ದಾರೆ. ನಾಟಿ ಆರಂಭವಾಗುವ ಮೊದಲೇ ರೈತ ಹೋರಾಟವನ್ನು ಬಲಗೊಳಿಸಲು ಪಂಜಾಬ್‌ನ ವಿವಿಧ ಭಾಗಗಳಿಂದ ರೈತರು ದೆಹಲಿ ಗಡಿಗಳತ್ತ ಹೊರಟಿದ್ದಾರೆ ಎಂದು ರೈತ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

ಬುಧವಾರ ಮುಂಜಾನೆ ನೂರಾರು ರೈತರನ್ನು ಹೊತ್ತ ಸುಮಾರು 125ಕ್ಕೂ ಹೆಚ್ಚು ವಾಹನಗಳು ಮುಖ್ಯವಾಗಿ ಲೂಧಿಯಾನ ಜಿಲ್ಲಯ ಜಾಗ್ರಾನ್‌, ಸುಧಾಅರ್‌, ಸಿಧ್ವಾನ್‌ ಬೆಟ್, ರಾಯ್‌ಕೋಟ್‌ ಮತ್ತು ಹಂಬ್ರನ್‌ಗಳಿಂದ ಸಿಂಘು ಮತ್ತು ಟಿಕ್ರಿ ಹೋರಾಟದ ಗಡಿಗಳತ್ತ ಹೊರಟಿದ್ದಾರೆ

`ಭಾರತೀಯ ಕಿಸಾನ್‌ ಯೂನಿಯನ್‌ (ಡಕೊಂಡಾ) ಸಂಘಟನೆಯ ಬ್ಯಾನರ್‌ನೊಂದಿಗೆ ಸುಮಾರು 700 ರೈತರು ವಾಹನಗಳ ಮೂಲಕ ದೆಹಲಿ ಗಡಿಗಳಿಗೆ ತೆರಳಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರು ಹೋರಾಟವನ್ನು ಸೇರಿಕೊಳ್ಳಲಿದ್ದಾರೆ. ಗ್ರಾಮಗಳಲ್ಲಿ ನಡೆಯುತ್ತಿರುವ ಹೋರಾಟವು ಜೂನ್‌ 10ರವರೆಗೆ ಮುಂದುವರೆಯಲಿದೆ. ನಂತರ ರೈತರು ಭತ್ತದ ನಾಟಿ ಮಾಡುವತ್ತ ಗಮನಹರಿಸಬೇಕಾಗಬಹುದು ಎಂದು ರೈತ ಹೋರಾಟವನ್ನು ಬೆಂಬಲಿಸುವ ಇಕ್ವಿಂಲಾಬಿ ಕೇಂದ್ರ ಪಂಜಾಬ್‌ನ ಪ್ರಧಾನ ಕಾರ್ಯದರ್ಶಿ ಕಮಲ್‌ಜಿತ್ ಖನ್ನಾ ತಿಳಿಸಿದರು.

ಬಿಕೆಯು ಡಕೊಂಡಾ ಜೊತೆಯಲ್ಲಿ ಕೀರ್ತಿ ಕಿಸಾನ್‌ ಯೂನಿಯನ್‌ ಹಾಗೂ ಬಿಕೆಯು (ಉಗ್ರಹಾನ್‌) ಸಂಘಟನೆಯ ಸದಸ್ಯರು ಹೋರಾಟದ ಗಡಿಗಳಿಗೆ ಹೋಗುತ್ತಿದ್ದಾರೆ ಎಂದು ಅವರು ತಿಳಿಸಿದರು.

ರೈತರೊಂದಿಗೆ ಬಿಕೆಯು ಡಕೊಂಡ ಸಂಘಟನೆಯ ಜಿಲ್ಲಾಧ್ಯಕ್ಷರಾದ ಮೊಹಿಂದರ್‌ ಸಿಂಗ್‌, ಜಿಲ್ಲಾ ಕಾರ್ಯದರ್ಶಿ ಇಂದರ್‌ಜಿತ್‌ ಸಿಂಗ್‌ ಹಾಗೂ ಮಾಧ್ಯಮ ಕಾರ್ಯದರ್ಶಸಿ ಗುರ್ಪ್ರೀತ್‌ ಸಿಂಗ್‌ ಅವರು ಹೋರಾಟದಲ್ಲಿ ಭಾಗವಹಿಸಲಿದ್ದು, ರೈತರು ಹತ್ತು ದಿನಗಳ ಕಾಲ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಇದರಲ್ಲಿ ರೈತ ಮಹಿಳೆಯರು ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದಿದ್ದಾರೆ.

ಬಿಕೆಯು ಲಖೋವಾಲ್‌ ಪ್ರದೇಶದ ಪ್ರಧಾನ ಕಾರ್ಯದರ್ಶಿ ಹರೀಂದರ್‌ ಸಿಂಗ್‌ ಲಖೋವಾಲ್‌ ಅವರ ಪ್ರಕಾರ, `ರಾಜ್ಯದ ವಿವಿಧ ಜೆಲ್ಲಿಗಳ ಸುಮಾರು 80-100 ರೈತರು ಮತ್ತು ಕೃಷಿ ಕಾರ್ಮಿಕರು ಬುಧವಾರ ದೆಹಲಿ ಗಡಿಗಳಿಗೆ ಹೋಗುತ್ತಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ನಮ್ಮ ಹೆಚ್ಚಿನ ಸದಸ್ಯರು ಗಡಿಗಳಲ್ಲಿರುವ ಪ್ರತಿಭಟನಾಕಾರರನ್ನು ಸೇರುವ ನಿರೀಕ್ಷೆಯಿದೆ’ ಎಂದರು.

ಲೂಧಿಯಾನದ ಕೋಕ್ರಾನ್‌ ತಕ್ರಾನ್‌ ಗ್ರಾಮದ ರೈತ ರವೀಂದರ್‌ ಸಿಂಗ್‌ ಪ್ರತಿಭಟನಾ ಸ್ಥಳಕ್ಕೆ ಹೋಗುತ್ತಿರುವುದರ ಬಗ್ಗೆ ಮಾತನಾಡಿ, ಕಡು ಬಿಸಿಲಿನ ನಡುವೆಯೂ ನಾವು ಹೋರಾಟದ ಗಡಿಗಳಲ್ಲಿ ಉಳಿದುಕೊಳ್ಳಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ಭತ್ತದ ನಾಟಿ ನಂತರ ಇನ್ನು ಹೆಚ್ಚು ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಭಾಗವಹಿಸುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ಒಟ್ಟಿನಲ್ಲಿ 6 ತಿಂಗಳು ಪೂರೈಸಿರುವ ರೈತ ಹೋರಾಟ ತನ್ನ ಕಾವು ಕಳೆದುಕೊಂಡಿಲ್ಲ. ಬದಲಿಗೆ ಮತ್ತಷ್ಟು ಬಲಶಾಲಿಯಾಗುತ್ತಿದೆ. ಜೂನ್ 05 ರಂದು ಗಡಿಗಳಲ್ಲಿ ಸುಗ್ರಿವಾಜ್ಞೆಗಳಿಗೆ ಒಂದು ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಸಂಪೂರ್ಣ ಕ್ರಾಂತಿ ದಿವಸ್ ಆಚರಿಸಲು ಕರೆ ನೀಡಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...