Homeಮುಖಪುಟಭತ್ತ ನಾಟಿಗೂ ಮುನ್ನವೇ ದೆಹಲಿ ಸೇರುತ್ತಿರುವ ರೈತರು: ಹೋರಾಟಕ್ಕೆ ಮತ್ತಷ್ಟು ಬಲ

ಭತ್ತ ನಾಟಿಗೂ ಮುನ್ನವೇ ದೆಹಲಿ ಸೇರುತ್ತಿರುವ ರೈತರು: ಹೋರಾಟಕ್ಕೆ ಮತ್ತಷ್ಟು ಬಲ

ಬುಧವಾರ ಮುಂಜಾನೆ ನೂರಾರು ರೈತರನ್ನು ಹೊತ್ತ ಸುಮಾರು 125ಕ್ಕೂ ಹೆಚ್ಚು ಟ್ರಕ್‌ಗಳು ಸಿಂಘು, ಟಿಕ್ರಿ ಗಡಿಗಳತ್ತ ಹೊರಟಿವೆ..

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪಂಜಾಬ್‌ನ ಲೂಧಿಯಾನದ ಗ್ರಾಮಗಳಲ್ಲಿ ತಾವಿರುವಲ್ಲಿಯೇ ಮೇ 26 ರಂದು `ಕರಾಳ ದಿನ’ವನ್ನು ಆಚರಿಸಿದ್ದ ರೈತರು ಇದೀಗ ಗಡಿಗಳತ್ತ ಪಯಣ ಬೆಳೆಸಿದ್ದಾರೆ. ನಾಟಿ ಆರಂಭವಾಗುವ ಮೊದಲೇ ರೈತ ಹೋರಾಟವನ್ನು ಬಲಗೊಳಿಸಲು ಪಂಜಾಬ್‌ನ ವಿವಿಧ ಭಾಗಗಳಿಂದ ರೈತರು ದೆಹಲಿ ಗಡಿಗಳತ್ತ ಹೊರಟಿದ್ದಾರೆ ಎಂದು ರೈತ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

ಬುಧವಾರ ಮುಂಜಾನೆ ನೂರಾರು ರೈತರನ್ನು ಹೊತ್ತ ಸುಮಾರು 125ಕ್ಕೂ ಹೆಚ್ಚು ವಾಹನಗಳು ಮುಖ್ಯವಾಗಿ ಲೂಧಿಯಾನ ಜಿಲ್ಲಯ ಜಾಗ್ರಾನ್‌, ಸುಧಾಅರ್‌, ಸಿಧ್ವಾನ್‌ ಬೆಟ್, ರಾಯ್‌ಕೋಟ್‌ ಮತ್ತು ಹಂಬ್ರನ್‌ಗಳಿಂದ ಸಿಂಘು ಮತ್ತು ಟಿಕ್ರಿ ಹೋರಾಟದ ಗಡಿಗಳತ್ತ ಹೊರಟಿದ್ದಾರೆ

`ಭಾರತೀಯ ಕಿಸಾನ್‌ ಯೂನಿಯನ್‌ (ಡಕೊಂಡಾ) ಸಂಘಟನೆಯ ಬ್ಯಾನರ್‌ನೊಂದಿಗೆ ಸುಮಾರು 700 ರೈತರು ವಾಹನಗಳ ಮೂಲಕ ದೆಹಲಿ ಗಡಿಗಳಿಗೆ ತೆರಳಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರು ಹೋರಾಟವನ್ನು ಸೇರಿಕೊಳ್ಳಲಿದ್ದಾರೆ. ಗ್ರಾಮಗಳಲ್ಲಿ ನಡೆಯುತ್ತಿರುವ ಹೋರಾಟವು ಜೂನ್‌ 10ರವರೆಗೆ ಮುಂದುವರೆಯಲಿದೆ. ನಂತರ ರೈತರು ಭತ್ತದ ನಾಟಿ ಮಾಡುವತ್ತ ಗಮನಹರಿಸಬೇಕಾಗಬಹುದು ಎಂದು ರೈತ ಹೋರಾಟವನ್ನು ಬೆಂಬಲಿಸುವ ಇಕ್ವಿಂಲಾಬಿ ಕೇಂದ್ರ ಪಂಜಾಬ್‌ನ ಪ್ರಧಾನ ಕಾರ್ಯದರ್ಶಿ ಕಮಲ್‌ಜಿತ್ ಖನ್ನಾ ತಿಳಿಸಿದರು.

ಬಿಕೆಯು ಡಕೊಂಡಾ ಜೊತೆಯಲ್ಲಿ ಕೀರ್ತಿ ಕಿಸಾನ್‌ ಯೂನಿಯನ್‌ ಹಾಗೂ ಬಿಕೆಯು (ಉಗ್ರಹಾನ್‌) ಸಂಘಟನೆಯ ಸದಸ್ಯರು ಹೋರಾಟದ ಗಡಿಗಳಿಗೆ ಹೋಗುತ್ತಿದ್ದಾರೆ ಎಂದು ಅವರು ತಿಳಿಸಿದರು.

ರೈತರೊಂದಿಗೆ ಬಿಕೆಯು ಡಕೊಂಡ ಸಂಘಟನೆಯ ಜಿಲ್ಲಾಧ್ಯಕ್ಷರಾದ ಮೊಹಿಂದರ್‌ ಸಿಂಗ್‌, ಜಿಲ್ಲಾ ಕಾರ್ಯದರ್ಶಿ ಇಂದರ್‌ಜಿತ್‌ ಸಿಂಗ್‌ ಹಾಗೂ ಮಾಧ್ಯಮ ಕಾರ್ಯದರ್ಶಸಿ ಗುರ್ಪ್ರೀತ್‌ ಸಿಂಗ್‌ ಅವರು ಹೋರಾಟದಲ್ಲಿ ಭಾಗವಹಿಸಲಿದ್ದು, ರೈತರು ಹತ್ತು ದಿನಗಳ ಕಾಲ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಇದರಲ್ಲಿ ರೈತ ಮಹಿಳೆಯರು ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದಿದ್ದಾರೆ.

ಬಿಕೆಯು ಲಖೋವಾಲ್‌ ಪ್ರದೇಶದ ಪ್ರಧಾನ ಕಾರ್ಯದರ್ಶಿ ಹರೀಂದರ್‌ ಸಿಂಗ್‌ ಲಖೋವಾಲ್‌ ಅವರ ಪ್ರಕಾರ, `ರಾಜ್ಯದ ವಿವಿಧ ಜೆಲ್ಲಿಗಳ ಸುಮಾರು 80-100 ರೈತರು ಮತ್ತು ಕೃಷಿ ಕಾರ್ಮಿಕರು ಬುಧವಾರ ದೆಹಲಿ ಗಡಿಗಳಿಗೆ ಹೋಗುತ್ತಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ನಮ್ಮ ಹೆಚ್ಚಿನ ಸದಸ್ಯರು ಗಡಿಗಳಲ್ಲಿರುವ ಪ್ರತಿಭಟನಾಕಾರರನ್ನು ಸೇರುವ ನಿರೀಕ್ಷೆಯಿದೆ’ ಎಂದರು.

ಲೂಧಿಯಾನದ ಕೋಕ್ರಾನ್‌ ತಕ್ರಾನ್‌ ಗ್ರಾಮದ ರೈತ ರವೀಂದರ್‌ ಸಿಂಗ್‌ ಪ್ರತಿಭಟನಾ ಸ್ಥಳಕ್ಕೆ ಹೋಗುತ್ತಿರುವುದರ ಬಗ್ಗೆ ಮಾತನಾಡಿ, ಕಡು ಬಿಸಿಲಿನ ನಡುವೆಯೂ ನಾವು ಹೋರಾಟದ ಗಡಿಗಳಲ್ಲಿ ಉಳಿದುಕೊಳ್ಳಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ಭತ್ತದ ನಾಟಿ ನಂತರ ಇನ್ನು ಹೆಚ್ಚು ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಭಾಗವಹಿಸುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ಒಟ್ಟಿನಲ್ಲಿ 6 ತಿಂಗಳು ಪೂರೈಸಿರುವ ರೈತ ಹೋರಾಟ ತನ್ನ ಕಾವು ಕಳೆದುಕೊಂಡಿಲ್ಲ. ಬದಲಿಗೆ ಮತ್ತಷ್ಟು ಬಲಶಾಲಿಯಾಗುತ್ತಿದೆ. ಜೂನ್ 05 ರಂದು ಗಡಿಗಳಲ್ಲಿ ಸುಗ್ರಿವಾಜ್ಞೆಗಳಿಗೆ ಒಂದು ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಸಂಪೂರ್ಣ ಕ್ರಾಂತಿ ದಿವಸ್ ಆಚರಿಸಲು ಕರೆ ನೀಡಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...