Homeಚಳವಳಿರೈತ ಹೋರಾಟ: ರೈತರೊಂದಿಗೆ ಮಾತುಕತೆ ನಡೆಸಿ ಎಂದು ಪ್ರಧಾನಿಗೆ ಪತ್ರ ಬರೆದ ಹರಿಯಾಣ ಡಿಸಿಎಂ

ರೈತ ಹೋರಾಟ: ರೈತರೊಂದಿಗೆ ಮಾತುಕತೆ ನಡೆಸಿ ಎಂದು ಪ್ರಧಾನಿಗೆ ಪತ್ರ ಬರೆದ ಹರಿಯಾಣ ಡಿಸಿಎಂ

"ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸುತ್ತೇವೆ. ಈ ಆಂದೋಲನವು ನಮ್ಮ ಬೇಡಿಕೆಗಳು ಈಡೇರುವವರೆಗೂ ಮುಂದುವರಿಯುತ್ತದೆ”- ರಾಕೇಶ್ ಟಿಕಾಯತ್, ರೈತ ಮುಖಂಡ

- Advertisement -
- Advertisement -

ದೇಶಾದ್ಯಂತ ಕೊರೊನಾ ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನಾ ನಿರತ ರೈತರೊಂದಿಗೆ ಮಾತುಕತೆ ಪುನರಾರಂಭಿಸುವಂತೆ ಹರಿಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಏಪ್ರಿಲ್ 15 ರಂದು ಪ್ರಧಾನಿಗೆ ಬರೆದ ಪತ್ರದಲ್ಲಿ, ಜೆಜೆಪಿ ನಾಯಕ, ದುಷ್ಯಂತ್ ಸಿಂಗ್ ಚೌತಾಲ ಚೌತಲಾ ಅವರು ಮೂರರಿಂದ ನಾಲ್ಕು ಹಿರಿಯ ಕ್ಯಾಬಿನೆಟ್ ಮಂತ್ರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ರೈತರೊಂದಿಗೆ ಮಾತುಕತೆ ಪುನರಾರಂಭಿಸಲು ಒತ್ತಾಯಿಸಿದ್ದಾರೆ.

“ಕೇಂದ್ರ ಸರ್ಕಾರದ ಹೊಸದಾಗಿ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ನಮ್ಮ ‘ಅನ್ನದಾತರು’ ದೆಹಲಿ ಗಡಿಯಲ್ಲಿ ರಸ್ತೆಗಳಲ್ಲಿದ್ದಾರೆ ಎಂದು ನಿಮ್ಮ ರೀತಿಯ ಗಮನಕ್ಕೆ ತರಲು ನಾನು ಬಯಸುತ್ತೇನೆ. ಈ ಆಂದೋಲನ ನೂರು ದಿನಗಳಿಗಿಂತ ಹೆಚ್ಚು ಕಾಲ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಪರಸ್ಪರ ಚರ್ಚೆಯ ಮೂಲಕ ಪ್ರತಿಯೊಂದು ಸಮಸ್ಯೆಗೆ ಪರಿಹಾರವಿದೆ ಎಂದು ನಾನು ನಂಬುತ್ತೇನೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ರೈತರ ಆಕ್ರೋಶದ ಪರಿಣಾಮ: ಸರ್ಕಾರ ಪತನದ ಭೀತಿಯಲ್ಲಿ ಹರಿಯಾಣ ಸಿಎಂ!

“ಪ್ರತಿಭಟನಾ ನಿರತ ರೈತರೊಂದಿಗೆ ಮಾತುಕತೆ ನಡೆಸುವ ನಿಟ್ಟಿನಲ್ಲಿ, ಮೂರರಿಂದ ನಾಲ್ಕು ಹಿರಿಯ ಕ್ಯಾಬಿನೆಟ್ ಮಂತ್ರಿಗಳನ್ನು ಒಳಗೊಂಡ ತಂಡವು ಈ ವಿಷಯದಲ್ಲಿ ಸೌಹಾರ್ದಯುತ ತೀರ್ಮಾನವನ್ನು ತರಲು ರೈತರೊಂದಿಗೆ ಮಾತುಕತೆ ಪುನರಾರಂಭಿಸಬಹುದು” ಎಂದು ಚೌಟಾಲ ಪತ್ರದಲ್ಲಿ ತಿಳಿಸಿದ್ದಾರೆ.

ಶನಿವಾರವಷ್ಟೇ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರೈತರು ತಮ್ಮ ಪ್ರತಿಭಟನೆಯನ್ನು ಕೈಬಿಟ್ಟು ಮನೆಗೆ ಹಿಂದಿರುಗುವಂತೆ ಮನವಿ ಮಾಡಿದ್ದರು.

ಕೊರೊನಾದಿಂದ ರೈತರು ತೊಂದರೆಗೆ ಸಿಲುಕುವುದಕ್ಕೆ ನಾನು ಬಿಡುವುದಿಲ್ಲ. ಆದಷ್ಟು ಬೇಗ ಕಂದ್ರ ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಬೇಕು ಎಂದು ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಹೇಳಿದ್ದಾರೆ.

ಇದನ್ನೂ ಓದಿ: ಶಾಹಿನ್‌ಬಾಗ್‌‌ ಅನ್ನು ನಡೆಸಿಕೊಂಡಂತೆ ರೈತ ಹೋರಾಟಗಾರರನ್ನು ನಡೆಸದಿರಿ: ಕೇಂದ್ರಕ್ಕೆ ಟಿಕಾಯತ್‌

ಕಳೆದ ಸೆಪ್ಟೆಂಬರ್‌ನಲ್ಲಿ ಒಕ್ಕೂಟ ಸರ್ಕಾರ ಜಾರಿಗೆ ತಂದ ಮೂರು ವಿವಾದಿತ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನದ ಲಕ್ಷಾಂತರ ರೈತರು ದೆಹಲಿಯ ನಾಲ್ಕು ಗಡಿ ಬಿಂದುಗಳಾದ ಸಿಂಘು, ಟಿಕ್ರಿ (ಹರಿಯಾಣದ ಉದ್ದಕ್ಕೂ), ಶಹಜಾನ್‌ಪುರ ಮತ್ತು ಗಾಜಿಪುರ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

“ಈ ಕಾನೂನುಗಳನ್ನು ರದ್ದುಪಡಿಸುವವರೆಗೂ ರೈತರು ಮನೆಗೆ ಹಿಂತಿರುಗುವುದಿಲ್ಲ. ಕೇಂದ್ರವು ಕೊರೊನಾ ವೈರಸ್ ಬಗ್ಗೆ ಮಾತನಾಡುತ್ತಾರೆ ಆದರೆ ಶಹೀನ್‌ಬಾಗ್‌ ಅನ್ನು ನಡೆಸಿಕೊಂಡಂತೆ ರೈತರನ್ನು ನಡೆಸಿಕೊಳ್ಳಬಾರದು ಎಂದು ಸರ್ಕಾರಕ್ಕೆ ತಿಳಿಸಿದ್ದೇವೆ. ಈ ಆಂದೋಲನ ಕೊನೆಗೊಳ್ಳುವುದಿಲ್ಲ. ನಾವು ಕೊರೊನಾ ವೈರಸ್ ಮಾರ್ಗಸೂಚಿಗಳನ್ನು ಅನುಸರಿಸುತ್ತೇವೆ. ಈ ಆಂದೋಲನವು ನಮ್ಮ ಬೇಡಿಕೆಗಳು ಈಡೇರುವವರೆಗೂ ಮುಂದುವರಿಯುತ್ತದೆ” ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.


ಇದನ್ನೂ ಓದಿ: ಕೆಂಪು ಕೋಟೆ ದಾಂಧಲೆ ಪ್ರಕರಣ: ಜಾಮೀನು ದೊರೆತ ಕೆಲವೇ ಗಂಟೆಗಳಲ್ಲಿ ಮತ್ತೆ ದೀಪ್ ಸಿಧು ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...