Homeಮುಖಪುಟರೈತ ಹೋರಾಟದ ಬಿಸಿ: ಪಂಜಾಬ್, ಹರಿಯಾಣಗಳಲ್ಲಿ ಜಿಯೋ ಚಂದಾದಾರರ ಗಣನೀಯ ಕುಸಿತ

ರೈತ ಹೋರಾಟದ ಬಿಸಿ: ಪಂಜಾಬ್, ಹರಿಯಾಣಗಳಲ್ಲಿ ಜಿಯೋ ಚಂದಾದಾರರ ಗಣನೀಯ ಕುಸಿತ

ರಿಲಯನ್ಸ್ ಕಂಪನಿಗೆ ಕಾರ್ಪೊರೇಟ್ ಫಾರ್ಮಿಂಗ್, ಕಂಟ್ರ್ಯಾಕ್ಟ್ ಫಾರ್ಮಿಂಗ್ ಮಾಡಲು ಅನುಕೂಲವಾಗುವಂತೆ ಕೃಷಿ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

- Advertisement -
- Advertisement -

2020 ರ ಡಿಸೆಂಬರ್‌ನಲ್ಲಿ ಭಾರತದ ಅತಿದೊಡ್ಡ ಟೆಲಿಕಾಂ ಆಪರೇಟರ್ ರಿಲಯನ್ಸ್ ಜಿಯೋನ ವೈರ್‌ಲೆಸ್ ಚಂದಾದಾರರ ಸಂಖ್ಯೆ ಪಂಜಾಬ್ ಮತ್ತು ಹರಿಯಾಣಗಳಲ್ಲಿ ಭಾರೀ ಕುಸಿತ ಕಂಡಿದೆ. ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಂದ ಅದರ ಮೂಲ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಎದುರಿಸುತ್ತಿರುವ ವಿರೋಧ ಇದಕ್ಕೆ ಕಾರಣವಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ರಿಲಯನ್ಸ್ ಕಂಪನಿಗೆ ಕಾರ್ಪೋರೇಟ್ ಫಾರ್ಮಿಂಗ್ ಮತ್ತು ಕಂಟ್ರ್ಯಾಕ್ಟ್ ಫಾರ್ಮಿಂಗ್ ಮಾಡಲು ಅನುಕೂಲವಾಗುವ ರೀತಿಯಲ್ಲಿ ಹೊಸ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ರೈತ ಸಂಘಟನೆಗಳು ಆರೋಪ ಮಾಡಿವೆ.

ಜನವರಿ-ಫೆಬ್ರುವರಿಯಲ್ಲಿ ಈ ಕುಸಿತ ಇನ್ನಷ್ಟು ಹೆಚ್ಚಿರುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಭಾರತೀಯ ದೂರಸಂಪರ್ಕ ನಿಯಂತ್ರಣ ನಿಗಮ) ಬಿಡುಗಡೆ ಮಾಡಿದ ಡಿಸೆಂಬರ್ 2020 ರ ಅಂಕಿ ಅಂಶಗಳ ಪ್ರಕಾರ, ಪಂಜಾಬ್ ಮತ್ತು ಹರಿಯಾಣಗಳಲ್ಲಿ ರಿಲಯನ್ಸ್ ಜಿಯೋ ಡಿಸೆಂಬರ್ ತಿಂಗಳಲ್ಲಿ ಲಕ್ಷಾಂತರ ಚಂದಾದಾರರನ್ನು ಕಳೆದುಕೊಂಡಿದೆ. ಅಲ್ಲದೆ, ಡಿಸೆಂಬರ್ ಅವಧಿಯಲ್ಲಿ, ಈ ಎರಡು ರಾಜ್ಯಗಳಲ್ಲಿ ಚಂದಾದಾರರನ್ನು ಕಳೆದುಕೊಂಡ ಏಕೈಕ ಪ್ರಮುಖ ಆಪರೇಟರ್ ಜಿಯೋ ಆಗಿದೆ.

ಪಂಜಾಬ್‌ನಲ್ಲಿ, ಡಿಸೆಂಬರ್ ಅಂತ್ಯದ ವೇಳೆಗೆ ಜಿಯೋ 1.25 ಕೋಟಿ ಚಂದಾದಾರರನ್ನು ಹೊಂದಿದ್ದು, ಹಿಂದಿನ 18 ತಿಂಗಳಲ್ಲಿ ಇದು ಅತ್ಯಂತ ಕಡಿಮೆಯಾಗಿದೆ. ಇದು 2020 ರ ನವೆಂಬರ್ ವೇಳೆಗೆ 1.40 ಕೋಟಿ ಚಂದಾದಾರರನ್ನು ಹೊಂದಿತ್ತು. ಅಂದರೆ ಡಿಸೆಂಬರ್ ತಿಂಗಳೊಂದರಲ್ಲೇ ಪಂಜಾಬಿನಲ್ಲಿ 15 ಲಕ್ಷ ಚಂದಾದಾರರು ಜಿಯೋ ತೊರೆದಿದ್ದಾರೆ.

ಹರಿಯಾಣದಲ್ಲಿ, ಜಿಯೋ ವೈರ್‌ಲೆಸ್ ಚಂದಾದಾರರ ಸಂಖ್ಯೆ 2020 ರ ನವೆಂಬರ್‌ನಲ್ಲಿ 94.48 ಲಕ್ಷದಿಂದ 2020 ರ ಡಿಸೆಂಬರ್‌ನಲ್ಲಿ 89.87 ಲಕ್ಷಕ್ಕೆ ಇಳಿದಿದೆ. ಇದು 2016 ರ ಸೆಪ್ಟೆಂಬರ್‌ನಲ್ಲಿ ಹರಿಯಾಣದಲ್ಲಿ ಜಿಯೋ ಪ್ರಾರಂಭವಾದ ನಂತರ ಕಂಡ ದೊಡ್ಡ ಕುಸಿತವಾಗಿದೆ.
ಇಂಡಿಯನ್ ಎಕ್ಸ್‌ಪ್ರೆಸ್‌ ಇದಕ್ಕೆ ಪ್ರತಿಕ್ರಿಯೆ ಕೋರಿ ರಿಲಯನ್ಸ್ ಜಿಯೋಗೆ ಕಳುಹಿಸಿದ ಇ-ಮೇಲ್ ಪ್ರಶ್ನೆಗೆ ಉತ್ತರ ಬಂದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

ಅಖಿಲ ಭಾರತ ಮಟ್ಟದಲ್ಲೂ ಜಿಯೋ ಸಾಧನೆ ಹೇಳಿಕೊಳ್ಳುವಂತಿಲ್ಲ. 2020 ರ ಡಿಸೆಂಬರ್‌ನ ಟೆಲಿಕಾಂ ನಿಗಮ ನೀಡಿದ ದತ್ತಾಂಶದ ಪ್ರಕಾರ, ಇಡೀ ದೇಶದಲ್ಲಿ ರಿಲಯನ್ಸ್ ಜಿಯೋ 4.78 ಲಕ್ಷ ಹೊಸ ಬಳಕೆದಾರರನ್ನು ಪಡೆದಿದ್ದರೆ, ಭಾರ್ತಿ ಏರ್‌ಟೆಲ್ 40.51 ಲಕ್ಷ ಹೊಸ ಬಳಕೆದಾರರನ್ನು ಪಡೆದುಕೊಂಡಿದೆ. ಆದರೆ ವೊಡಾಫೋನ್ ಐಡಿಯಾ 56.9 ಲಕ್ಷ ಬಳಕೆದಾರರನ್ನು ಕಳೆದುಕೊಂಡಿದೆ.

ನವೆಂಬರ್ ಅಂತ್ಯದ ವೇಳೆಗೆ ದೆಹಲಿಯ ಹೊರಗಿನ ಗಡಿಗಳಲ್ಲಿ ಮೂರು ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆ ತೀವ್ರಗೊಂಡಿತು. ಸ್ವಲ್ಪ ಸಮಯದ ನಂತರ ಜಿಯೋ ಪೋರ್ಟ್-ಔಟ್ ವಿನಂತಿಗಳನ್ನು ಸ್ವೀಕರಿಸಲು ಪ್ರಾರಂಭಿಸಿತು. ಡಿಸೆಂಬರ್ 11 ರಂದು, ಜಿಯೋ ತನ್ನ ಪ್ರತಿಸ್ಪರ್ಧಿಗಳಾದ ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾವು “ತನ್ನ ವಿರುದ್ಧ ದುರುದ್ದೇಶಪೂರಿತ ಅಭಿಯಾನಗಳನ್ನು” ನಡೆಸುತ್ತಿದೆ ಎಂದು ದೂರಿತ್ತು. ಈ ಆರೋಪಗಳನ್ನು ಪ್ರತಿಸ್ಪರ್ಧಿಗಳು ನಿರಾಕರಿಸಿದ್ದರು.

ನಂತರ, ಈ ಎರಡು ರಾಜ್ಯಗಳಲ್ಲಿ ಜಿಯೋ ಬಳಕೆಯಲ್ಲಿರುವ ಹಲವಾರು ಟೆಲಿಕಾಂ ಟವರ್‌ಗಳು ಮತ್ತು ಫೈಬರ್ ಕೇಬಲ್‌ಗಳನ್ನು ಹಲವು ಪ್ರತಿಭಟನಾಕಾರರು ನಾಶ ಮಾಡಿದ್ದಾಗಿ ವರದಿಯಾಗಿತ್ತು.


ಇದನ್ನೂ ಓದಿ: ಜಿಯೋದಿಂದ ಹೊರನಡೆದ 26 ಲಕ್ಷ ಗ್ರಾಹಕರು: ರೈತರ ಬಾಯ್ಕಾಟ್ ಕರೆಗೆ Jio ಕಂಗಾಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...