Homeಮುಖಪುಟರೈತ ಹೋರಾಟದ ಬಿಸಿ: ಪಂಜಾಬ್, ಹರಿಯಾಣಗಳಲ್ಲಿ ಜಿಯೋ ಚಂದಾದಾರರ ಗಣನೀಯ ಕುಸಿತ

ರೈತ ಹೋರಾಟದ ಬಿಸಿ: ಪಂಜಾಬ್, ಹರಿಯಾಣಗಳಲ್ಲಿ ಜಿಯೋ ಚಂದಾದಾರರ ಗಣನೀಯ ಕುಸಿತ

ರಿಲಯನ್ಸ್ ಕಂಪನಿಗೆ ಕಾರ್ಪೊರೇಟ್ ಫಾರ್ಮಿಂಗ್, ಕಂಟ್ರ್ಯಾಕ್ಟ್ ಫಾರ್ಮಿಂಗ್ ಮಾಡಲು ಅನುಕೂಲವಾಗುವಂತೆ ಕೃಷಿ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

- Advertisement -
- Advertisement -

2020 ರ ಡಿಸೆಂಬರ್‌ನಲ್ಲಿ ಭಾರತದ ಅತಿದೊಡ್ಡ ಟೆಲಿಕಾಂ ಆಪರೇಟರ್ ರಿಲಯನ್ಸ್ ಜಿಯೋನ ವೈರ್‌ಲೆಸ್ ಚಂದಾದಾರರ ಸಂಖ್ಯೆ ಪಂಜಾಬ್ ಮತ್ತು ಹರಿಯಾಣಗಳಲ್ಲಿ ಭಾರೀ ಕುಸಿತ ಕಂಡಿದೆ. ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಂದ ಅದರ ಮೂಲ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಎದುರಿಸುತ್ತಿರುವ ವಿರೋಧ ಇದಕ್ಕೆ ಕಾರಣವಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ರಿಲಯನ್ಸ್ ಕಂಪನಿಗೆ ಕಾರ್ಪೋರೇಟ್ ಫಾರ್ಮಿಂಗ್ ಮತ್ತು ಕಂಟ್ರ್ಯಾಕ್ಟ್ ಫಾರ್ಮಿಂಗ್ ಮಾಡಲು ಅನುಕೂಲವಾಗುವ ರೀತಿಯಲ್ಲಿ ಹೊಸ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ರೈತ ಸಂಘಟನೆಗಳು ಆರೋಪ ಮಾಡಿವೆ.

ಜನವರಿ-ಫೆಬ್ರುವರಿಯಲ್ಲಿ ಈ ಕುಸಿತ ಇನ್ನಷ್ಟು ಹೆಚ್ಚಿರುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಭಾರತೀಯ ದೂರಸಂಪರ್ಕ ನಿಯಂತ್ರಣ ನಿಗಮ) ಬಿಡುಗಡೆ ಮಾಡಿದ ಡಿಸೆಂಬರ್ 2020 ರ ಅಂಕಿ ಅಂಶಗಳ ಪ್ರಕಾರ, ಪಂಜಾಬ್ ಮತ್ತು ಹರಿಯಾಣಗಳಲ್ಲಿ ರಿಲಯನ್ಸ್ ಜಿಯೋ ಡಿಸೆಂಬರ್ ತಿಂಗಳಲ್ಲಿ ಲಕ್ಷಾಂತರ ಚಂದಾದಾರರನ್ನು ಕಳೆದುಕೊಂಡಿದೆ. ಅಲ್ಲದೆ, ಡಿಸೆಂಬರ್ ಅವಧಿಯಲ್ಲಿ, ಈ ಎರಡು ರಾಜ್ಯಗಳಲ್ಲಿ ಚಂದಾದಾರರನ್ನು ಕಳೆದುಕೊಂಡ ಏಕೈಕ ಪ್ರಮುಖ ಆಪರೇಟರ್ ಜಿಯೋ ಆಗಿದೆ.

ಪಂಜಾಬ್‌ನಲ್ಲಿ, ಡಿಸೆಂಬರ್ ಅಂತ್ಯದ ವೇಳೆಗೆ ಜಿಯೋ 1.25 ಕೋಟಿ ಚಂದಾದಾರರನ್ನು ಹೊಂದಿದ್ದು, ಹಿಂದಿನ 18 ತಿಂಗಳಲ್ಲಿ ಇದು ಅತ್ಯಂತ ಕಡಿಮೆಯಾಗಿದೆ. ಇದು 2020 ರ ನವೆಂಬರ್ ವೇಳೆಗೆ 1.40 ಕೋಟಿ ಚಂದಾದಾರರನ್ನು ಹೊಂದಿತ್ತು. ಅಂದರೆ ಡಿಸೆಂಬರ್ ತಿಂಗಳೊಂದರಲ್ಲೇ ಪಂಜಾಬಿನಲ್ಲಿ 15 ಲಕ್ಷ ಚಂದಾದಾರರು ಜಿಯೋ ತೊರೆದಿದ್ದಾರೆ.

ಹರಿಯಾಣದಲ್ಲಿ, ಜಿಯೋ ವೈರ್‌ಲೆಸ್ ಚಂದಾದಾರರ ಸಂಖ್ಯೆ 2020 ರ ನವೆಂಬರ್‌ನಲ್ಲಿ 94.48 ಲಕ್ಷದಿಂದ 2020 ರ ಡಿಸೆಂಬರ್‌ನಲ್ಲಿ 89.87 ಲಕ್ಷಕ್ಕೆ ಇಳಿದಿದೆ. ಇದು 2016 ರ ಸೆಪ್ಟೆಂಬರ್‌ನಲ್ಲಿ ಹರಿಯಾಣದಲ್ಲಿ ಜಿಯೋ ಪ್ರಾರಂಭವಾದ ನಂತರ ಕಂಡ ದೊಡ್ಡ ಕುಸಿತವಾಗಿದೆ.
ಇಂಡಿಯನ್ ಎಕ್ಸ್‌ಪ್ರೆಸ್‌ ಇದಕ್ಕೆ ಪ್ರತಿಕ್ರಿಯೆ ಕೋರಿ ರಿಲಯನ್ಸ್ ಜಿಯೋಗೆ ಕಳುಹಿಸಿದ ಇ-ಮೇಲ್ ಪ್ರಶ್ನೆಗೆ ಉತ್ತರ ಬಂದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

ಅಖಿಲ ಭಾರತ ಮಟ್ಟದಲ್ಲೂ ಜಿಯೋ ಸಾಧನೆ ಹೇಳಿಕೊಳ್ಳುವಂತಿಲ್ಲ. 2020 ರ ಡಿಸೆಂಬರ್‌ನ ಟೆಲಿಕಾಂ ನಿಗಮ ನೀಡಿದ ದತ್ತಾಂಶದ ಪ್ರಕಾರ, ಇಡೀ ದೇಶದಲ್ಲಿ ರಿಲಯನ್ಸ್ ಜಿಯೋ 4.78 ಲಕ್ಷ ಹೊಸ ಬಳಕೆದಾರರನ್ನು ಪಡೆದಿದ್ದರೆ, ಭಾರ್ತಿ ಏರ್‌ಟೆಲ್ 40.51 ಲಕ್ಷ ಹೊಸ ಬಳಕೆದಾರರನ್ನು ಪಡೆದುಕೊಂಡಿದೆ. ಆದರೆ ವೊಡಾಫೋನ್ ಐಡಿಯಾ 56.9 ಲಕ್ಷ ಬಳಕೆದಾರರನ್ನು ಕಳೆದುಕೊಂಡಿದೆ.

ನವೆಂಬರ್ ಅಂತ್ಯದ ವೇಳೆಗೆ ದೆಹಲಿಯ ಹೊರಗಿನ ಗಡಿಗಳಲ್ಲಿ ಮೂರು ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆ ತೀವ್ರಗೊಂಡಿತು. ಸ್ವಲ್ಪ ಸಮಯದ ನಂತರ ಜಿಯೋ ಪೋರ್ಟ್-ಔಟ್ ವಿನಂತಿಗಳನ್ನು ಸ್ವೀಕರಿಸಲು ಪ್ರಾರಂಭಿಸಿತು. ಡಿಸೆಂಬರ್ 11 ರಂದು, ಜಿಯೋ ತನ್ನ ಪ್ರತಿಸ್ಪರ್ಧಿಗಳಾದ ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾವು “ತನ್ನ ವಿರುದ್ಧ ದುರುದ್ದೇಶಪೂರಿತ ಅಭಿಯಾನಗಳನ್ನು” ನಡೆಸುತ್ತಿದೆ ಎಂದು ದೂರಿತ್ತು. ಈ ಆರೋಪಗಳನ್ನು ಪ್ರತಿಸ್ಪರ್ಧಿಗಳು ನಿರಾಕರಿಸಿದ್ದರು.

ನಂತರ, ಈ ಎರಡು ರಾಜ್ಯಗಳಲ್ಲಿ ಜಿಯೋ ಬಳಕೆಯಲ್ಲಿರುವ ಹಲವಾರು ಟೆಲಿಕಾಂ ಟವರ್‌ಗಳು ಮತ್ತು ಫೈಬರ್ ಕೇಬಲ್‌ಗಳನ್ನು ಹಲವು ಪ್ರತಿಭಟನಾಕಾರರು ನಾಶ ಮಾಡಿದ್ದಾಗಿ ವರದಿಯಾಗಿತ್ತು.


ಇದನ್ನೂ ಓದಿ: ಜಿಯೋದಿಂದ ಹೊರನಡೆದ 26 ಲಕ್ಷ ಗ್ರಾಹಕರು: ರೈತರ ಬಾಯ್ಕಾಟ್ ಕರೆಗೆ Jio ಕಂಗಾಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...