Homeಮುಖಪುಟರೈತ ಹೋರಾಟದ ಬಿಸಿ: ಪಂಜಾಬ್, ಹರಿಯಾಣಗಳಲ್ಲಿ ಜಿಯೋ ಚಂದಾದಾರರ ಗಣನೀಯ ಕುಸಿತ

ರೈತ ಹೋರಾಟದ ಬಿಸಿ: ಪಂಜಾಬ್, ಹರಿಯಾಣಗಳಲ್ಲಿ ಜಿಯೋ ಚಂದಾದಾರರ ಗಣನೀಯ ಕುಸಿತ

ರಿಲಯನ್ಸ್ ಕಂಪನಿಗೆ ಕಾರ್ಪೊರೇಟ್ ಫಾರ್ಮಿಂಗ್, ಕಂಟ್ರ್ಯಾಕ್ಟ್ ಫಾರ್ಮಿಂಗ್ ಮಾಡಲು ಅನುಕೂಲವಾಗುವಂತೆ ಕೃಷಿ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

- Advertisement -
- Advertisement -

2020 ರ ಡಿಸೆಂಬರ್‌ನಲ್ಲಿ ಭಾರತದ ಅತಿದೊಡ್ಡ ಟೆಲಿಕಾಂ ಆಪರೇಟರ್ ರಿಲಯನ್ಸ್ ಜಿಯೋನ ವೈರ್‌ಲೆಸ್ ಚಂದಾದಾರರ ಸಂಖ್ಯೆ ಪಂಜಾಬ್ ಮತ್ತು ಹರಿಯಾಣಗಳಲ್ಲಿ ಭಾರೀ ಕುಸಿತ ಕಂಡಿದೆ. ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಂದ ಅದರ ಮೂಲ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಎದುರಿಸುತ್ತಿರುವ ವಿರೋಧ ಇದಕ್ಕೆ ಕಾರಣವಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ರಿಲಯನ್ಸ್ ಕಂಪನಿಗೆ ಕಾರ್ಪೋರೇಟ್ ಫಾರ್ಮಿಂಗ್ ಮತ್ತು ಕಂಟ್ರ್ಯಾಕ್ಟ್ ಫಾರ್ಮಿಂಗ್ ಮಾಡಲು ಅನುಕೂಲವಾಗುವ ರೀತಿಯಲ್ಲಿ ಹೊಸ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ರೈತ ಸಂಘಟನೆಗಳು ಆರೋಪ ಮಾಡಿವೆ.

ಜನವರಿ-ಫೆಬ್ರುವರಿಯಲ್ಲಿ ಈ ಕುಸಿತ ಇನ್ನಷ್ಟು ಹೆಚ್ಚಿರುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಭಾರತೀಯ ದೂರಸಂಪರ್ಕ ನಿಯಂತ್ರಣ ನಿಗಮ) ಬಿಡುಗಡೆ ಮಾಡಿದ ಡಿಸೆಂಬರ್ 2020 ರ ಅಂಕಿ ಅಂಶಗಳ ಪ್ರಕಾರ, ಪಂಜಾಬ್ ಮತ್ತು ಹರಿಯಾಣಗಳಲ್ಲಿ ರಿಲಯನ್ಸ್ ಜಿಯೋ ಡಿಸೆಂಬರ್ ತಿಂಗಳಲ್ಲಿ ಲಕ್ಷಾಂತರ ಚಂದಾದಾರರನ್ನು ಕಳೆದುಕೊಂಡಿದೆ. ಅಲ್ಲದೆ, ಡಿಸೆಂಬರ್ ಅವಧಿಯಲ್ಲಿ, ಈ ಎರಡು ರಾಜ್ಯಗಳಲ್ಲಿ ಚಂದಾದಾರರನ್ನು ಕಳೆದುಕೊಂಡ ಏಕೈಕ ಪ್ರಮುಖ ಆಪರೇಟರ್ ಜಿಯೋ ಆಗಿದೆ.

ಪಂಜಾಬ್‌ನಲ್ಲಿ, ಡಿಸೆಂಬರ್ ಅಂತ್ಯದ ವೇಳೆಗೆ ಜಿಯೋ 1.25 ಕೋಟಿ ಚಂದಾದಾರರನ್ನು ಹೊಂದಿದ್ದು, ಹಿಂದಿನ 18 ತಿಂಗಳಲ್ಲಿ ಇದು ಅತ್ಯಂತ ಕಡಿಮೆಯಾಗಿದೆ. ಇದು 2020 ರ ನವೆಂಬರ್ ವೇಳೆಗೆ 1.40 ಕೋಟಿ ಚಂದಾದಾರರನ್ನು ಹೊಂದಿತ್ತು. ಅಂದರೆ ಡಿಸೆಂಬರ್ ತಿಂಗಳೊಂದರಲ್ಲೇ ಪಂಜಾಬಿನಲ್ಲಿ 15 ಲಕ್ಷ ಚಂದಾದಾರರು ಜಿಯೋ ತೊರೆದಿದ್ದಾರೆ.

ಹರಿಯಾಣದಲ್ಲಿ, ಜಿಯೋ ವೈರ್‌ಲೆಸ್ ಚಂದಾದಾರರ ಸಂಖ್ಯೆ 2020 ರ ನವೆಂಬರ್‌ನಲ್ಲಿ 94.48 ಲಕ್ಷದಿಂದ 2020 ರ ಡಿಸೆಂಬರ್‌ನಲ್ಲಿ 89.87 ಲಕ್ಷಕ್ಕೆ ಇಳಿದಿದೆ. ಇದು 2016 ರ ಸೆಪ್ಟೆಂಬರ್‌ನಲ್ಲಿ ಹರಿಯಾಣದಲ್ಲಿ ಜಿಯೋ ಪ್ರಾರಂಭವಾದ ನಂತರ ಕಂಡ ದೊಡ್ಡ ಕುಸಿತವಾಗಿದೆ.
ಇಂಡಿಯನ್ ಎಕ್ಸ್‌ಪ್ರೆಸ್‌ ಇದಕ್ಕೆ ಪ್ರತಿಕ್ರಿಯೆ ಕೋರಿ ರಿಲಯನ್ಸ್ ಜಿಯೋಗೆ ಕಳುಹಿಸಿದ ಇ-ಮೇಲ್ ಪ್ರಶ್ನೆಗೆ ಉತ್ತರ ಬಂದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಜಿಯೋ ಟವರ್ ಮೇಲಿನ ರೈತರ ದಾಳಿಗೆ ಬೆದರಿದ ರಿಲಾಯನ್ಸ್: ಗುತ್ತಿಗೆ ಕೃಷಿ ಮಾಡುವುದಿಲ್ಲವೆಂದು ಹೇಳಿಕೆ

ಅಖಿಲ ಭಾರತ ಮಟ್ಟದಲ್ಲೂ ಜಿಯೋ ಸಾಧನೆ ಹೇಳಿಕೊಳ್ಳುವಂತಿಲ್ಲ. 2020 ರ ಡಿಸೆಂಬರ್‌ನ ಟೆಲಿಕಾಂ ನಿಗಮ ನೀಡಿದ ದತ್ತಾಂಶದ ಪ್ರಕಾರ, ಇಡೀ ದೇಶದಲ್ಲಿ ರಿಲಯನ್ಸ್ ಜಿಯೋ 4.78 ಲಕ್ಷ ಹೊಸ ಬಳಕೆದಾರರನ್ನು ಪಡೆದಿದ್ದರೆ, ಭಾರ್ತಿ ಏರ್‌ಟೆಲ್ 40.51 ಲಕ್ಷ ಹೊಸ ಬಳಕೆದಾರರನ್ನು ಪಡೆದುಕೊಂಡಿದೆ. ಆದರೆ ವೊಡಾಫೋನ್ ಐಡಿಯಾ 56.9 ಲಕ್ಷ ಬಳಕೆದಾರರನ್ನು ಕಳೆದುಕೊಂಡಿದೆ.

ನವೆಂಬರ್ ಅಂತ್ಯದ ವೇಳೆಗೆ ದೆಹಲಿಯ ಹೊರಗಿನ ಗಡಿಗಳಲ್ಲಿ ಮೂರು ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆ ತೀವ್ರಗೊಂಡಿತು. ಸ್ವಲ್ಪ ಸಮಯದ ನಂತರ ಜಿಯೋ ಪೋರ್ಟ್-ಔಟ್ ವಿನಂತಿಗಳನ್ನು ಸ್ವೀಕರಿಸಲು ಪ್ರಾರಂಭಿಸಿತು. ಡಿಸೆಂಬರ್ 11 ರಂದು, ಜಿಯೋ ತನ್ನ ಪ್ರತಿಸ್ಪರ್ಧಿಗಳಾದ ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾವು “ತನ್ನ ವಿರುದ್ಧ ದುರುದ್ದೇಶಪೂರಿತ ಅಭಿಯಾನಗಳನ್ನು” ನಡೆಸುತ್ತಿದೆ ಎಂದು ದೂರಿತ್ತು. ಈ ಆರೋಪಗಳನ್ನು ಪ್ರತಿಸ್ಪರ್ಧಿಗಳು ನಿರಾಕರಿಸಿದ್ದರು.

ನಂತರ, ಈ ಎರಡು ರಾಜ್ಯಗಳಲ್ಲಿ ಜಿಯೋ ಬಳಕೆಯಲ್ಲಿರುವ ಹಲವಾರು ಟೆಲಿಕಾಂ ಟವರ್‌ಗಳು ಮತ್ತು ಫೈಬರ್ ಕೇಬಲ್‌ಗಳನ್ನು ಹಲವು ಪ್ರತಿಭಟನಾಕಾರರು ನಾಶ ಮಾಡಿದ್ದಾಗಿ ವರದಿಯಾಗಿತ್ತು.


ಇದನ್ನೂ ಓದಿ: ಜಿಯೋದಿಂದ ಹೊರನಡೆದ 26 ಲಕ್ಷ ಗ್ರಾಹಕರು: ರೈತರ ಬಾಯ್ಕಾಟ್ ಕರೆಗೆ Jio ಕಂಗಾಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...