Homeಮುಖಪುಟಹಿಂದಕ್ಕೆ ಹೆಜ್ಜೆ ಇಡಲೊಪ್ಪದ ರೈತರು: ಸ್ಥಳ ಖಾಲಿ ಮಾಡಿದ ಹೆಚ್ಚುವರಿ ಪೊಲೀಸರು!

ಹಿಂದಕ್ಕೆ ಹೆಜ್ಜೆ ಇಡಲೊಪ್ಪದ ರೈತರು: ಸ್ಥಳ ಖಾಲಿ ಮಾಡಿದ ಹೆಚ್ಚುವರಿ ಪೊಲೀಸರು!

ಇಂದು ಮುಂಜಾನೆ ಮತ್ತೆ ನೀರು, ವಿದ್ಯುತ್ ಸಂಪರ್ಕವನ್ನು ಒದಗಿಸಲಾಗಿದೆ. ರೈತರು ಎಂದಿನಂತೆ ತಮ್ಮ ನಿತ್ಯ ಕರ್ಮಗಳಲ್ಲಿ ತೊಡಗಿಕೊಂಡಿದ್ದಾರೆ. ಅಡುಗೆ ಮಾಡುವುದು, ಸಣ್ಣ ಸಣ್ಣ ಪ್ರತಿಭಟನಾ ಮೆರವಣಿಗೆ ನಡೆಸುತ್ತಿರುವುದು ಕಂಡುಬಂದಿದೆ.

- Advertisement -
- Advertisement -

ಭಾರಿ ಭದ್ರತಾ ಪಡೆ, ಪೊಲೀಸರ ಜಮಾವಣೆಯ ನಂತರವೂ ರೈತರು ಹಿಂದಕ್ಕೆ ಹೋಗಲು ನಿರಾಕರಿಸಿದ ಪರಿಣಾಮ, ನಿನ್ನೆ ಹೆಚ್ಚುವರಿಯಾಗಿ ನಿಯೋಜನೆಗೊಂಡಿದ್ದ ಪೊಲೀಸರು ಶುಕ್ರವಾರ ಮುಂಜಾನೆ ಸ್ಥಳ ಖಾಲಿ ಮಾಡಿದರು ಎಂದು ದಿ ವೈರ್ ಪ್ರತ್ಯಕ್ಷದರ್ಶಿ ವರದಿ ತಿಳಿಸಿದೆ.

ಇದರಿಂದಾಗಿ, ಗುರುವಾರ ರಾತ್ರಿಯೊಳಗೆ ಗಾಜಿಪುರ ಗಡಿಯಿಂದ ಪ್ರತಿಭಟನಾಕಾರರು ಜಾಗ ಖಾಲಿ ಮಾಡಲು ಉತ್ತರಪ್ರದೇಶ ಸರ್ಕಾರ ನೀಡಿದ್ದ ಮೌಖಿಕ ಗಡುವು ವಿಫಲಗೊಂಡಿದೆ. ಲಿಖಿತ ಆದೇಶ ಹೊರಡಿಸಲು ಸುಪ್ರೀಂಕೋರ್ಟ್ ಭಯ ಕಾರಣವಿರಬಹುದು, ಹೀಗಾಗಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ಜಮಾವಣೆ ಮಾಡಿ ರೈತರನ್ನು ಬೆದರಿಸುವ ತಂತ್ರ ಹೂಡಲಾಗಿತ್ತು ಎನಿಸುತ್ತದೆ.

ಯಾವುದೇ ಲಿಖಿತ ಆದೇಶವಿಲ್ಲದಿದ್ದರೂ ಗಾಜಿಪುರ ಜಿಲ್ಲಾಧಿಕಾರಿ ನಿನ್ನೆ ಸಾಯಂಕಾಲ ಮೌಖಿಕ ಆದೇಶ ಹೊರಡಿಸಿ, ಗುರುವಾರ ರಾತ್ರಿಯೊಳಗೆ ಜಾಗ ಖಾಲಿ ಮಾಡಲು ರೈತರಿಗೆ ಗಡುವು ನಿಡಿದ್ದರು, ಭಾರಿ ಸಂಖ್ಯೆಯಲ್ಲಿ ಪೊಲೀಸರು ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಿ, 144 ಸೆಕ್ಷನ್ ವಿಧಿಸಿದ್ದರು. ಆದರೆ ರೈತ ಮುಖಂಡ ರಾಕೇಶ್ ಟಿಕಾಯತ್ ಮಾಡಿದ ಭಾವನಾತ್ಮಕ ಭಾಷಣ ಮತ್ತು ಅವರ ಕಣ್ಣೀರು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಗಡಿಗಳತ್ತ ತೆರಳಲು ಪ್ರೇರಣೆಯಾಗಿದೆ.

ರಾತ್ರಿಯಿಡಿ ನೀರು ಮತ್ತು ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು. ವಿದ್ಯುತ್, ನೀರು ಏನಾದರೂ ಕಟ್ ಮಾಡಲಿ, ನಾವು ನಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ. ಮೂರು ಕಾಯ್ದೆಗಳು ರದ್ದು ಮಾಡುವವರೆಗೂ ನಾವಿಲ್ಲಿಂದ ಕದಲುವುದಿಲ್ಲ ಎಂದು ರೈತ ಪ್ರತಿಭಟನಾಕಾರರು ತಮ್ಮ ಬಿಗಿ ಪಟ್ಟನ್ನು ಸಡಿಲಿಸದ ಪರಿಣಾಮ ಹೆಚ್ಚುವರಿಯಾಗಿ ನಿಯೋಜಿತಗೊಂಡಿದ್ದ ಭದ್ರತಾ ಪಡೆಗಳು, ಪೊಲೀಸರು ಇವತ್ತು ಮುಂಜಾನೆ ಸ್ಥಳ ಖಾಲಿ ಮಾಡಲು ಶುರು ಮಾಡಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ನನ್ನತ್ರ ಯಾವುದು ಜಮೀನ್ ಇಲ್ಲ. ಆದರೆ ನನ್ನ ಆತ್ಮಾಭಿಮಾನಕ್ಕಾಗಿ ನಾನಿಲ್ಲಿರುವೆ. ಹೋರಾಟದ ಕೊನೆಯವರೆಗೂ ನಾನು ಇಲ್ಲೇ ಇರುವೆ ಎಂದು ಮಹೇಂದರ್ ಸಿಂಗ್, (ಗೊರ್ನೆಕುರ್ದ್, ಪಂಜಾಬ್) ತಿಳಿಸಿದ್ದಾರೆ.

ಇಂದು ಮುಂಜಾನೆ ಮತ್ತೆ ನೀರು, ವಿದ್ಯುತ್ ಸಂಪರ್ಕವನ್ನು ಒದಗಿಸಲಾಗಿದೆ. ರೈತರು ಎಂದಿನಂತೆ ತಮ್ಮ ನಿತ್ಯ ಕರ್ಮಗಳಲ್ಲಿ ತೊಡಗಿಕೊಂಡಿದ್ದಾರೆ. ಅಡುಗೆ ಮಾಡುವುದು, ಸಣ್ಣ ಸಣ್ಣ ಪ್ರತಿಭಟನಾ ಮೆರವಣಿಗೆ ನಡೆಸುತ್ತಿರುವುದು ಕಂಡುಬಂದಿದೆ.

ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ರೈತರು “ಗೋದಿ ಮೀಡಿಯಾಗಳು ಮೋದಿ ಹೇಳಿದಂತೆ ಕೇಳಿ ಸುಳ್ಳು ವರದಿ ಮಾಡುತ್ತಿದ್ದಾರೆ. ಆದರೆ ನಾವು ಇಲ್ಲಿಂದ ಕದಲುವುದಿಲ್ಲ. ನಮ್ಮ ಹಕ್ಕುಗಳನ್ನು ಪಡೆದೇ ಇಲ್ಲಿಂದ ತೆರಳುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ‘#ಮೋದಿ ಒಬ್ಬ ಹೇಡಿ’ – ಮಧ್ಯರಾತ್ರಿಯಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್‌ ಆದ ಹ್ಯಾಶ್‌ಟ್ಯಾಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...