Homeಮುಖಪುಟಹಿಂದಕ್ಕೆ ಹೆಜ್ಜೆ ಇಡಲೊಪ್ಪದ ರೈತರು: ಸ್ಥಳ ಖಾಲಿ ಮಾಡಿದ ಹೆಚ್ಚುವರಿ ಪೊಲೀಸರು!

ಹಿಂದಕ್ಕೆ ಹೆಜ್ಜೆ ಇಡಲೊಪ್ಪದ ರೈತರು: ಸ್ಥಳ ಖಾಲಿ ಮಾಡಿದ ಹೆಚ್ಚುವರಿ ಪೊಲೀಸರು!

ಇಂದು ಮುಂಜಾನೆ ಮತ್ತೆ ನೀರು, ವಿದ್ಯುತ್ ಸಂಪರ್ಕವನ್ನು ಒದಗಿಸಲಾಗಿದೆ. ರೈತರು ಎಂದಿನಂತೆ ತಮ್ಮ ನಿತ್ಯ ಕರ್ಮಗಳಲ್ಲಿ ತೊಡಗಿಕೊಂಡಿದ್ದಾರೆ. ಅಡುಗೆ ಮಾಡುವುದು, ಸಣ್ಣ ಸಣ್ಣ ಪ್ರತಿಭಟನಾ ಮೆರವಣಿಗೆ ನಡೆಸುತ್ತಿರುವುದು ಕಂಡುಬಂದಿದೆ.

- Advertisement -
- Advertisement -

ಭಾರಿ ಭದ್ರತಾ ಪಡೆ, ಪೊಲೀಸರ ಜಮಾವಣೆಯ ನಂತರವೂ ರೈತರು ಹಿಂದಕ್ಕೆ ಹೋಗಲು ನಿರಾಕರಿಸಿದ ಪರಿಣಾಮ, ನಿನ್ನೆ ಹೆಚ್ಚುವರಿಯಾಗಿ ನಿಯೋಜನೆಗೊಂಡಿದ್ದ ಪೊಲೀಸರು ಶುಕ್ರವಾರ ಮುಂಜಾನೆ ಸ್ಥಳ ಖಾಲಿ ಮಾಡಿದರು ಎಂದು ದಿ ವೈರ್ ಪ್ರತ್ಯಕ್ಷದರ್ಶಿ ವರದಿ ತಿಳಿಸಿದೆ.

ಇದರಿಂದಾಗಿ, ಗುರುವಾರ ರಾತ್ರಿಯೊಳಗೆ ಗಾಜಿಪುರ ಗಡಿಯಿಂದ ಪ್ರತಿಭಟನಾಕಾರರು ಜಾಗ ಖಾಲಿ ಮಾಡಲು ಉತ್ತರಪ್ರದೇಶ ಸರ್ಕಾರ ನೀಡಿದ್ದ ಮೌಖಿಕ ಗಡುವು ವಿಫಲಗೊಂಡಿದೆ. ಲಿಖಿತ ಆದೇಶ ಹೊರಡಿಸಲು ಸುಪ್ರೀಂಕೋರ್ಟ್ ಭಯ ಕಾರಣವಿರಬಹುದು, ಹೀಗಾಗಿ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ಜಮಾವಣೆ ಮಾಡಿ ರೈತರನ್ನು ಬೆದರಿಸುವ ತಂತ್ರ ಹೂಡಲಾಗಿತ್ತು ಎನಿಸುತ್ತದೆ.

ಯಾವುದೇ ಲಿಖಿತ ಆದೇಶವಿಲ್ಲದಿದ್ದರೂ ಗಾಜಿಪುರ ಜಿಲ್ಲಾಧಿಕಾರಿ ನಿನ್ನೆ ಸಾಯಂಕಾಲ ಮೌಖಿಕ ಆದೇಶ ಹೊರಡಿಸಿ, ಗುರುವಾರ ರಾತ್ರಿಯೊಳಗೆ ಜಾಗ ಖಾಲಿ ಮಾಡಲು ರೈತರಿಗೆ ಗಡುವು ನಿಡಿದ್ದರು, ಭಾರಿ ಸಂಖ್ಯೆಯಲ್ಲಿ ಪೊಲೀಸರು ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಿ, 144 ಸೆಕ್ಷನ್ ವಿಧಿಸಿದ್ದರು. ಆದರೆ ರೈತ ಮುಖಂಡ ರಾಕೇಶ್ ಟಿಕಾಯತ್ ಮಾಡಿದ ಭಾವನಾತ್ಮಕ ಭಾಷಣ ಮತ್ತು ಅವರ ಕಣ್ಣೀರು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಗಡಿಗಳತ್ತ ತೆರಳಲು ಪ್ರೇರಣೆಯಾಗಿದೆ.

ರಾತ್ರಿಯಿಡಿ ನೀರು ಮತ್ತು ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿತ್ತು. ವಿದ್ಯುತ್, ನೀರು ಏನಾದರೂ ಕಟ್ ಮಾಡಲಿ, ನಾವು ನಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ. ಮೂರು ಕಾಯ್ದೆಗಳು ರದ್ದು ಮಾಡುವವರೆಗೂ ನಾವಿಲ್ಲಿಂದ ಕದಲುವುದಿಲ್ಲ ಎಂದು ರೈತ ಪ್ರತಿಭಟನಾಕಾರರು ತಮ್ಮ ಬಿಗಿ ಪಟ್ಟನ್ನು ಸಡಿಲಿಸದ ಪರಿಣಾಮ ಹೆಚ್ಚುವರಿಯಾಗಿ ನಿಯೋಜಿತಗೊಂಡಿದ್ದ ಭದ್ರತಾ ಪಡೆಗಳು, ಪೊಲೀಸರು ಇವತ್ತು ಮುಂಜಾನೆ ಸ್ಥಳ ಖಾಲಿ ಮಾಡಲು ಶುರು ಮಾಡಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ.

ನನ್ನತ್ರ ಯಾವುದು ಜಮೀನ್ ಇಲ್ಲ. ಆದರೆ ನನ್ನ ಆತ್ಮಾಭಿಮಾನಕ್ಕಾಗಿ ನಾನಿಲ್ಲಿರುವೆ. ಹೋರಾಟದ ಕೊನೆಯವರೆಗೂ ನಾನು ಇಲ್ಲೇ ಇರುವೆ ಎಂದು ಮಹೇಂದರ್ ಸಿಂಗ್, (ಗೊರ್ನೆಕುರ್ದ್, ಪಂಜಾಬ್) ತಿಳಿಸಿದ್ದಾರೆ.

ಇಂದು ಮುಂಜಾನೆ ಮತ್ತೆ ನೀರು, ವಿದ್ಯುತ್ ಸಂಪರ್ಕವನ್ನು ಒದಗಿಸಲಾಗಿದೆ. ರೈತರು ಎಂದಿನಂತೆ ತಮ್ಮ ನಿತ್ಯ ಕರ್ಮಗಳಲ್ಲಿ ತೊಡಗಿಕೊಂಡಿದ್ದಾರೆ. ಅಡುಗೆ ಮಾಡುವುದು, ಸಣ್ಣ ಸಣ್ಣ ಪ್ರತಿಭಟನಾ ಮೆರವಣಿಗೆ ನಡೆಸುತ್ತಿರುವುದು ಕಂಡುಬಂದಿದೆ.

ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ರೈತರು “ಗೋದಿ ಮೀಡಿಯಾಗಳು ಮೋದಿ ಹೇಳಿದಂತೆ ಕೇಳಿ ಸುಳ್ಳು ವರದಿ ಮಾಡುತ್ತಿದ್ದಾರೆ. ಆದರೆ ನಾವು ಇಲ್ಲಿಂದ ಕದಲುವುದಿಲ್ಲ. ನಮ್ಮ ಹಕ್ಕುಗಳನ್ನು ಪಡೆದೇ ಇಲ್ಲಿಂದ ತೆರಳುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ: ‘#ಮೋದಿ ಒಬ್ಬ ಹೇಡಿ’ – ಮಧ್ಯರಾತ್ರಿಯಿಂದಲೇ ಟ್ವಿಟರ್‌ನಲ್ಲಿ ಟ್ರೆಂಡ್‌ ಆದ ಹ್ಯಾಶ್‌ಟ್ಯಾಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...