Homeಮುಖಪುಟರೈತ ಪರೇಡ್‌: ಲೈವ್ ಬ್ಲಾಗ್‌

ರೈತ ಪರೇಡ್‌: ಲೈವ್ ಬ್ಲಾಗ್‌

- Advertisement -
- Advertisement -
  • ದೆಹಲಿ ರೈತ ಪರೇಡ್‌ | ತುರ್ತು ಸಭೆ ಕರೆದ ಗೃಹ ಸಚಿವ ಅಮಿತ್‌ ಶಾ, ಹೆಚ್ಚುವರಿ ಭದ್ರತಾ ಪಡೆ ನಿಯೋಜಿಸಲು ಸೂಚನೆ

  • ದೆಹಲಿ ರೈತ ಪರೇಡ್‌ | ರೈತರ ಟ್ರ್ಯಾಕ್ಟರ್‌ ಪರೇಡ್‌ ವೇಳೆ ನಡೆದ ಗದ್ದಲದ ಹಿನ್ನೆಲೆಯಲ್ಲಿ ಭದ್ರತಾ ಪಡೆ ನಿಯೋಜನೆಗೆ ಸೂಚನೆ

  • ಬೆಂಗಳೂರು | ಗಣರಾಜ್ಯೋತ್ಸವ ದಿನದಂದೇ ಹೋರಾಟ ನಡೆದಿರೋದು ತುರ್ತು ವಿಚಾರ; ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ

  • ಕೇಂದ್ರ ಸರ್ಕಾರ ಜನ ವಿರೋಧಿ ಸರ್ಕಾರ : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಎಸ್ ದೊರೆಸ್ವಾಮಿ ಹೇಳಿಕೆ

  • ಬೆಂಗಳೂರು; ಬೆಂಗಳೂರು ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ ಗೆ ಸುಮಾರು 10000 ಜನರ ಮೆರವಣಿಗೆ

  • ಬೆಂಗಳೂರು; ಹೊಸಕೋಟೆ ಮಾರ್ಗವಾಗಿ ಸುಮಾರು 200 ವಾಹನಗಳು ಮತ್ತು 1000 ಜನರ ಮೆರವಣಿಗೆ

  • ಬೆಂಗಳೂರು; ದೇವನಹಳ್ಳಿ ಮಾರ್ಗವಾಗಿ ಸುಮಾರು 250 ವಾಹನಗಳೊಂದಿಗೆ 1500 ಜನರ ವಾಹನ ಜಾಥಾ

  • ಬೆಂಗಳೂರು; ಮೈಸೂರು ಕಡೆಯಿಂದ 50 ಟ್ರಾಕ್ಟರ್‌ಗಳು, 500 ವಾಹನಗಳು ಮತ್ತು ಸುಮಾರು ಮೂರು ಸಾವಿರ ಜನರ ವಾಹನ ಜಾಥಾ

  • ಬೆಂಗಳೂರು; ಸ್ವಾತಂತ್ರ್ಯ ಉದ್ಯಾನ ಸಮಾವೇಶಕ್ಕೆ ತುಮಕೂರು ಕಡೆಯಿಂದ 50 ಟ್ರಾಕ್ಟರ್‌ಗಳು, 500 ವಾಹನಗಳು ಮತ್ತು ಸುಮಾರು 5000 ಜನರ ಪಾದಯಾತ್ರೆ

  • ಬೆಂಗಳೂರು; ನೇಗಿಲು ಮತ್ತು ಲೇಖನಿ ಒಂದಾದರೆ ಮಾತ್ರ ಈ ದೇಶಕ್ಕೆ ಭವಿಷ್ಯವಿದೆ;  ವಿದ್ಯಾರ್ಥಿ ಮುಖಂಡ ವಾಸುದೇವ ರೆಡ್ಡಿ

  • ರೈತ ಹೋರಾಟದಲ್ಲಿ ಆದ ಅನಿರೀಕ್ಷಿತ ಬೆಳವಣಿಗೆಯನ್ನು ಖಂಡಿಸುತ್ತೇವೆ : ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿಕೆ

  • ಸಮಾಜ ವಿರೋಧಿ ಶಕ್ತಿಗಳು ಈ ಹೋರಾಟದಲ್ಲಿ ನುಸುಳಿ, ಖಂಡನೀಯ ಚಟುವಟಿಕೆಯಲ್ಲಿ ಭಾಗಿಯಾಗಿವೆ: ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿಕೆ

  • ಅಂತಹ ಶಕ್ತಿಗಳೊಂದಿಗೆ ನಮಗೆ ಯಾವುದೇ ನಂಟಿಲ್ಲ, ಪರೇಡ್‌ನಲ್ಲಿ ಎಲ್ಲರೂ ಮೋರ್ಚಾದ ನಿಯಮಗಳಿಗೆ ಬದ್ಧವಾಗಿರಬೇಕು: ಸಂಯುಕ್ತ ಕಿಸಾನ್‌ ಮೋರ್ಚಾ ಆಗ್ರಹ

  • ಶಾಂತಿ ಅತಿ ದೊಡ್ಡ ಶಕ್ತಿ, ಬಹುಪಾಲು ಶಾಂತಿಯುತವಾಗಿಯೇ ನಡೆದ ರೈತರ ಪರೇಡ್‌ ಯಶಸ್ವಿಯಾಗಿದೆ: ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿಕೆ

  • 56 ಇಂಚಿನ ಮೋದಿ ಎದೆಯ ಮೇಲೆ ರೈತರ ಟ್ರ್ಯಾಕ್ಟರ್‌ ಓಡ್ತಾ ಇದೆ; ಮಾವಳ್ಳಿ ಶಂಕರ್‌

  • ಬೆಂಗಳೂರು: ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಮಾವೇಶ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್‌ ದೊರೆಸ್ವಾಮಿ ಹಾಗೂ ರೈತ ಮುಖಂಡರು ಭಾಗಿ

  • ಮೊದಲು ಖಾಲ್ಸಾ ಮತ್ತು ಕಿಸಾನ್‌ ಏಕ್ತಾ ಮೋರ್ಚಾ ಬಾವುಟ ಹಾರಿಸಿದ ರೈತರಿಂದ, ನಂತರ ತ್ರಿವರ್ಣ ಧ್ವಜಾರೋಹಣ

  • ದೆಹಲಿ; ಉತ್ತರಾಖಂಡದ ನವನೀತ ಬಳಿ ಶೂಟೌಟ್‌, ಪೊಲೀಸ್‌-ರೈತರ ನಡುವೆ ಘರ್ಷಣೆ

  • ದೆಹಲಿ; ಅಲ್ಲಲ್ಲಿ ಕೈಮೀರಿದಸ್ಥಿತಿ, ಬ್ಯಾರಿಕೇಡ್‌ ಮುರಿದು ನುಗ್ಗಿದ ರೈತರಿಗೆ ಪೊಲೀಸರಿಂದ ಎಚ್ಚರಿಕೆ

  • ಕೆಂಪು ಕೋಟೆಯ ಮೇಲೆ ರೈತ ಧ್ವಜ ಹಾರಿಸಿದ ರೈತ ಹೋರಾಟಗಾರರು; ಗಾಝಿಪುರದಿಂದ ಸಾಗರದೋಪಾದಿಯಲ್ಲಿ ಹರಿದು ಬಂದ ರೈತ ಸಾಗರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...