Homeಚಳವಳಿರೈತ ಹೋರಾಟದ ಆಧಾರ ಸ್ತಂಭಗಳಾಗಿವೆ ಈ ಆಸ್ಪತ್ರೆಗಳು ಮತ್ತು ವೈದ್ಯರು..!

ರೈತ ಹೋರಾಟದ ಆಧಾರ ಸ್ತಂಭಗಳಾಗಿವೆ ಈ ಆಸ್ಪತ್ರೆಗಳು ಮತ್ತು ವೈದ್ಯರು..!

ದೆಹಲಿಯ ಗಡಿಗಳಲ್ಲಿ ಲೈಫ್ ಕೇರ್ ಫೌಂಡೇಷನ್‌ನಂತಹ ಸಂಸ್ಥೆಗಳು 6, 7 ಬೆಡ್‌ಗಳಿರುವ ಸಣ್ಣ ಪ್ರಮಾಣದ 24 ಗಂಟೆಗಳು ಕಾರ್ಯ ನಿರ್ವಹಿಸುವ ಆಸ್ಪತ್ರೆಗಳನ್ನು ನಡೆಸುತ್ತಿವೆ.

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ನಡೆಸುತ್ತಿರುವ ರೈತ ಹೋರಾಟದಲ್ಲಿ ಹಸಿವು ನೀಗಿಸುವ ಲಂಗರ್‌ಗಳಂತೆ ಇನ್ನಷ್ಟು ಆಧಾರ ಸ್ತಂಭಗಳಾಗಿರುವುದು ವೈದ್ಯರು, ಆಸ್ಪತ್ರೆಗಳು, ಪುಟ್ಟ ಕ್ಲಿನಿಕ್‌ಗಳು, ಆಂಬ್ಯುಲೆನ್ಸ್ ಮತ್ತು ಔಷಧಾಲಯಗಳು.

ಹೌದು, ಹೊಲಗಳಲ್ಲಿ ದುಡಿಯುವ ರೈತರಿಗೆ ಚಳಿ ಹೊಸದಲ್ಲದೆ ಇರಬಹುದು. ಆದರೆ ಈಗ ದೆಹಲಿಯ ಗಡಿಗಳಲ್ಲಿ ಬೀಡುಬಿಟ್ಟಿರುವ ರೈತರಿಗೆ ಇಲ್ಲಿನ ವಾತಾವರಣ, ತೀವ್ರಚಳಿ, ಮಂಜು ಅವರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿದೆ. ಈಗಾಗಲೇ ತೀವ್ರ ಚಳಿಗೆ ಹಲವಾರು ರೈತರು ಬಲಿಯಾಗಿದ್ದಾರೆ.

ಹೀಗಾಗಿ ಎಲ್ಲಾ ಪ್ರತಿಭಟನಾ ಸ್ಥಳಗಳಲ್ಲಿಯೂ ಆಸ್ಪತ್ರೆಗಳು, ವೈದ್ಯರು ದಂಡು, ನೂರಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ನೀವು ಕಾಣಬಹುದು. ಆಂಬ್ಯುಲೆನ್ಸ್‌ಗಳೆ ಇಲ್ಲಿ ಆಸ್ಪತ್ರೆಗಳಾಗಿ, ಕ್ಲಿನಿಕ್‌ಗಳಾಗಿ ಹೆಚ್ಚು ಕಾರ್ಯ ನಿರ್ವಹಿಸುತ್ತಿವೆ. ಇವುಗಳ ನಡುವೆ ಲೈಫ್ ಕೇರ್ ಫೌಂಡೇಷನ್‌ನಂತಹ ಸಂಸ್ಥೆಗಳು 6, 7 ಬೆಡ್‌ಗಳಿರುವ ಸಣ್ಣ ಪ್ರಮಾಣದ 24 ಗಂಟೆಗಳು ಕಾರ್ಯ ನಿರ್ವಹಿಸುವ ಆಸ್ಪತ್ರೆಗಳನ್ನು ನಡೆಸುತ್ತಿವೆ.

ಇದನ್ನೂ ಓದಿ: Breaking: ಕೃಷಿ ಕಾನೂನುಗಳನ್ನು ಒಂದೂವರೆ ವರ್ಷ ತಡೆಯಲ್ಲಿಡಲು ಮುಂದಾದ ಕೇಂದ್ರ!

ಸಿಂಘು ಗಡಿಯಲ್ಲಿರುವ ಲೈಫ್ ಕೇರ್ ಫೌಂಡೇಷನ್‌ನ ಕಿಸಾನ್ ಆಸ್ಪತ್ರೆ

ಸಿಂಘು ಗಡಿಯಲ್ಲಿರುವ ಲೈಫ್ ಕೇರ್ ಫೌಂಡೇಷನ್‌ನ ಕಿಸಾನ್ ಆಸ್ಪತ್ರೆಯಲ್ಲಿ ಸುಮಾರು 20 ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆಸ್ಪತ್ರೆ ಮತ್ತು ಪಕ್ಕದಲ್ಲೇ ಮೆಡಿಕಲ್ ಎರಡನ್ನು ಹೊಂದಿರುವ ಈ ಸಂಸ್ಥೆ ಸಾವಿರಾರು ಜನರಿಗೆ ಉಚಿತವಾಗಿ ಸೇವೆ ನೀಡುತ್ತಿದೆ.

“ಪ್ರತಿಭಟನೆ ಆರಂಭವಾದಾಗ ನಾವು ಒಂದು ಆಂಬ್ಯುಲೆನ್ಸ್‌ನಲ್ಲಿ ಇಲ್ಲಿ ಕ್ಲಿನಿಕ್ ಆರಂಭ ಮಾಡಿದ್ದೆವು. ಕಡಿಮೆ ಸಿಬ್ಬಂದಿ ಇದ್ದರು. ಆದರೆ ದಿನ ಕಳೆದಂತೆ ಪ್ರತಿಭಟನೆ ತೀವ್ರಗೊಳ್ಳತೊಡಗಿತು. ಕೆಲವು ರೈತರು ಸಾವನ್ನಪ್ಪಿದರು. ಹಾಗಾಗಿ ನಮ್ಮ ಸಂಸ್ಥೆ ಇಲ್ಲಿ ಸಣ್ಣ ಆಸ್ಪತ್ರೆ ನಿರ್ಮಿಸಲು ಯೋಚಿಸಿ, ಕಾರ್ಯರೂಪಕ್ಕೆ ತಂದಿತು. ಈಗ ವೈದ್ಯರು, ನರ್ಸ್‌ಗಳು, ಲ್ಯಾಬ್ ಟೆಕ್ನಿಷಿಯನ್ ಸೇರಿ 20 ಮಂದಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಪಕ್ಕದಲ್ಲಿ ಮೆಡಿಕಲ್ ಇದೆ. ಅಲ್ಲಿ ಔಷಧಿಗಳನ್ನು ವಿತರಿಸಲಾಗುತ್ತಿದೆ” ಎಂದು 12 ವರ್ಷಗಳಿಂದ ಸ್ಟಾಫ್ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿರುವ ಪೂಜಾ ನಾನುಗೌರಿ.ಕಾಂಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: NIAಯಿಂದ ಸಮನ್ಸ್‌ ಪಡೆದಿದ್ದ ‘ಖಾಲ್ಸಾ ಏಡ್‌’ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

ಪಂಜಾಬ್‌ನ ಅಮೃತ್‌ಸರದ ಕ್ಲಿನಿಕಲ್ ಲ್ಯಾಬೊರೇಟರಿ ಅಸೋಸಿಯೆಷನ್‌ ಸದಸ್ಯರು, 15 ದಿನಕ್ಕೆ ಒಂದರಂತೆ 25 ಜನರ ತಂಡ ಸಿಂಘು ಬಾರ್ಡರ್‌, ಟಿಕ್ರಿ ಬಾರ್ಡ್‌ರ್‌ಗಳಲ್ಲಿ ಉಳಿದುಕೊಂಡು ರೈತರ ಸೇವೆ ಮಾಡುತ್ತಿದೆ. ರಕ್ತದ ಪರೀಕ್ಷೆ, ಮಧುಮೇಹ ಪರೀಕ್ಷೆ ಮಾಡುವ ಇವರ ತಂಡ ವರದಿ ಆಧಾರದಲ್ಲಿ ಚಿಕಿತ್ಸೆಗೆ ಶಿಫಾರಸು ಮಾಡುವ ಕೆಲಸ ಮಾಡುತ್ತಿದೆ.

ತಮ್ಮ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಸೇವೆ ಬಗ್ಗೆ ಮಾತನಾಡಿದ ಮಂಜಿಂದರ್‌ ಸಿಂಗ್, ರಂದೀಪ್ ಸಿಂಗ್ ಮತ್ತು ಗುರು ವಿಶ್ವಾಸ್‌ ಸಿಂಗ್, “ನಾವು ಕಳೆದ ವಾರದಿಂದ ಇಲ್ಲಿ ಉಳಿದುಕೊಂಡಿದ್ದೇವೆ. ಈ ಮೊದಲು ಟಿಕ್ರಿ ಗಡಿಯಲ್ಲಿ ಇದ್ದೆವು. ರಕ್ತ ಮತ್ತು ಮಧುಮೇಹ ಪರೀಕ್ಷೆ ನಡೆಸುತ್ತೆವೆ. ದೇಶದ ರೈತರು ಇಂದು ಕಷ್ಟದಲ್ಲಿದ್ದಾರೆ. ನಮ್ಮಿಂದಾಗುವ ಎಲ್ಲಾ ಸೇವೆ ಮಾಡಲು ನಾವು ತಯಾರಿದ್ದೇವೆ. ಪ್ರತಿಭಟನೆ ಮುಗಿಯುವವರೆಗೂ ನಾವು ಇಲ್ಲಿಯೇ ಇರಲು ತೀರ್ಮಾನಿಸಿದ್ದೇವೆ” ಎಂದಿದ್ದಾರೆ.

ಅಮೃತ್‌ಸರದ ಕ್ಲಿನಿಕಲ್ ಲ್ಯಾಬೊರೇಟರಿ ಅಸೋಸಿಯೆಷನ್ ಸದಸ್ಯರು

ಇದನ್ನೂ ಓದಿ: ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

ಇನ್ನೂ ಪಂಜಾಬಿನಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಆರಂಭವಾದಾಗಿನಿಂದಲೂ ರೈತರ ಜೊತೆಗೆ ನಿಂತು ಸೇವೆ ನೀಡುತ್ತಿರುವ ಅಂತಾರಾಷ್ಟ್ರೀಯ ಸಂಸ್ಥೆ ಯುನೈಟೆಡ್ ಸಿಖ್ಸ್, ಗಡಿಗಳಲ್ಲೂ ಪ್ರತಿಭಟನಾ ನಿರತ ರೈತರ ಸೇವೆಗೆ ಆಧಾರ ಸ್ತಂಭವಾಗಿ ನಿಂತಿದೆ.

ನೈಸರ್ಗಿಕ ವಿಕೋಪಗಳು, ಆರೋಗ್ಯ, ಶಿಕ್ಷಣ ಮತ್ತು ಹೋರಾಟಗಳಲ್ಲಿ ಪ್ರಮುಖವಾಗಿ ತೊಡಗಿಸಿಕೊಳ್ಳುವ ಈ ಸಂಸ್ಥೆ ಸಿಂಘು ಗಡಿಯಲ್ಲಿ ದೆಹಲಿ ಚಲೋ ಆರಂಭವಾದಾಗಿನಿಂದಲೂ ಇದೆ. ಅದು ಮೂರು ಬೆಡ್‌ಗಳ ಪುಟ್ಟ ಆಸ್ಪತ್ರೆ ಜೊತೆಗೆ ಮೆಡಿಕಲ್ ಶಾಪ್ ಹೊಂದಿದೆ.

ಬರೀ ಆರೋಗ್ಯ ಸೇವೆಗೆ ಮಾತ್ರ ತನ್ನ ಸೇವೆ ಮೀಸಲಿರಿಸದ ಈ ಸಂಸ್ಥೆ ಪ್ರತಿಭಟನಾ ನಿರತ ರೈತರಿಗೆ ದಿನ ಬಳಕೆಯ ಮೂಲ ವಸ್ತುಗಳಿಂದ ಹಿಡಿದು ರೈತರಿಗೆ ಚಳಿಯಿಂದ ತಪ್ಪಿಸಿಕೊಳ್ಳಲು, ಮಲಗಲು ಸ್ಲೀಪಿಂಗ್ ಬ್ಯಾಗ್‌ಗಳನ್ನು ಉಚಿತವಾಗಿ ನೀಡುತ್ತಿದೆ.

ದೆಹಲಿ ಚಲೋ ಆರಂಭವಾದ ತಕ್ಷಣ ಪಂಜಾಬ್‌ನಲ್ಲಿಯೇ ಇದ್ದ ನಾವು 2 ಆಂಬ್ಯುಲೆನ್ಸ್‌ಗಳು ಮತ್ತು ವೈದ್ಯರೊಂದಿಗೆ ಇಲ್ಲಿಗೆ ಬಂದೆವು. ತಕ್ಷಣ ಊಟ, ನೀರಿನ ವ್ಯವಸ್ಥೆ ಮಾಡಿದೆವು. ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಬರುತ್ತಿದ್ದ ಕಾರಣ ಮೂರು ಬೆಡ್‌ಗಳ ಸಣ್ಣ ಆಸ್ಪತ್ರೆ ಮಾಡಿಕೊಂಡೆವು. ಹರಿಯಾಣದ ಆರೋಗ್ಯ ಆಸ್ಪತ್ರೆ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿ‌ರುವವರನ್ನು ಅಲ್ಲಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುತ್ತೆವೆ ಎಂದು ಯುನೈಟೆಡ್ ಸಿಖ್ಸ್‌ ಸಂಸ್ಥೆಯ ಅಧಿಕಾರಿ ರಾಜೇಂಧರ್ ಸಿಂಗ್ ತಿಳಿಸಿದ್ದಾರೆ.

ಗಡಿಗಳಲ್ಲಿ ವಿಪರೀತ ಎನಿಸುವಷ್ಟು ಚಳಿ ಇದೆ. ಇದರಿಂದ ದೇಹದ ಭಾಗಗಳು ಹೆಚ್ಚಾಗಿ ನೋವಿಗೆ ಒಳಗಾಗುತ್ತಿದ್ದು, ಇಂತವರಿಗೆ ಆಸ್ಪತ್ರೆಗಳು ನೆರವು ನೀಡುತ್ತಿದೆ. ರೈತ ಹೋರಾಟದಲ್ಲಿ ಹೆಚ್ಚಾಗಿರುವ ವೃದ್ಧರು ಬೇಗನೆ ಕಾಯಿಲೆಗೆ ಒಳಗಾಗುತ್ತಿದ್ದು, ಆಸ್ಪತ್ರೆಗಳು, ವೈದ್ಯರು ಇಲ್ಲದಿದ್ದರೇ ಈ ಐತಿಹಾಸಿಕ ಹೋರಾಟದ ಗತಿ ಬೇರೆ ರೀತಿಯಲ್ಲಿರುತ್ತಿತ್ತು ಎನಿಸುತ್ತದೆ.


ಇದನ್ನೂ ಓದಿ: ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...