Homeಚಳವಳಿರೈತ ಹೋರಾಟದ ಆಧಾರ ಸ್ತಂಭಗಳಾಗಿವೆ ಈ ಆಸ್ಪತ್ರೆಗಳು ಮತ್ತು ವೈದ್ಯರು..!

ರೈತ ಹೋರಾಟದ ಆಧಾರ ಸ್ತಂಭಗಳಾಗಿವೆ ಈ ಆಸ್ಪತ್ರೆಗಳು ಮತ್ತು ವೈದ್ಯರು..!

ದೆಹಲಿಯ ಗಡಿಗಳಲ್ಲಿ ಲೈಫ್ ಕೇರ್ ಫೌಂಡೇಷನ್‌ನಂತಹ ಸಂಸ್ಥೆಗಳು 6, 7 ಬೆಡ್‌ಗಳಿರುವ ಸಣ್ಣ ಪ್ರಮಾಣದ 24 ಗಂಟೆಗಳು ಕಾರ್ಯ ನಿರ್ವಹಿಸುವ ಆಸ್ಪತ್ರೆಗಳನ್ನು ನಡೆಸುತ್ತಿವೆ.

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ನಡೆಸುತ್ತಿರುವ ರೈತ ಹೋರಾಟದಲ್ಲಿ ಹಸಿವು ನೀಗಿಸುವ ಲಂಗರ್‌ಗಳಂತೆ ಇನ್ನಷ್ಟು ಆಧಾರ ಸ್ತಂಭಗಳಾಗಿರುವುದು ವೈದ್ಯರು, ಆಸ್ಪತ್ರೆಗಳು, ಪುಟ್ಟ ಕ್ಲಿನಿಕ್‌ಗಳು, ಆಂಬ್ಯುಲೆನ್ಸ್ ಮತ್ತು ಔಷಧಾಲಯಗಳು.

ಹೌದು, ಹೊಲಗಳಲ್ಲಿ ದುಡಿಯುವ ರೈತರಿಗೆ ಚಳಿ ಹೊಸದಲ್ಲದೆ ಇರಬಹುದು. ಆದರೆ ಈಗ ದೆಹಲಿಯ ಗಡಿಗಳಲ್ಲಿ ಬೀಡುಬಿಟ್ಟಿರುವ ರೈತರಿಗೆ ಇಲ್ಲಿನ ವಾತಾವರಣ, ತೀವ್ರಚಳಿ, ಮಂಜು ಅವರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿದೆ. ಈಗಾಗಲೇ ತೀವ್ರ ಚಳಿಗೆ ಹಲವಾರು ರೈತರು ಬಲಿಯಾಗಿದ್ದಾರೆ.

ಹೀಗಾಗಿ ಎಲ್ಲಾ ಪ್ರತಿಭಟನಾ ಸ್ಥಳಗಳಲ್ಲಿಯೂ ಆಸ್ಪತ್ರೆಗಳು, ವೈದ್ಯರು ದಂಡು, ನೂರಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ನೀವು ಕಾಣಬಹುದು. ಆಂಬ್ಯುಲೆನ್ಸ್‌ಗಳೆ ಇಲ್ಲಿ ಆಸ್ಪತ್ರೆಗಳಾಗಿ, ಕ್ಲಿನಿಕ್‌ಗಳಾಗಿ ಹೆಚ್ಚು ಕಾರ್ಯ ನಿರ್ವಹಿಸುತ್ತಿವೆ. ಇವುಗಳ ನಡುವೆ ಲೈಫ್ ಕೇರ್ ಫೌಂಡೇಷನ್‌ನಂತಹ ಸಂಸ್ಥೆಗಳು 6, 7 ಬೆಡ್‌ಗಳಿರುವ ಸಣ್ಣ ಪ್ರಮಾಣದ 24 ಗಂಟೆಗಳು ಕಾರ್ಯ ನಿರ್ವಹಿಸುವ ಆಸ್ಪತ್ರೆಗಳನ್ನು ನಡೆಸುತ್ತಿವೆ.

ಇದನ್ನೂ ಓದಿ: Breaking: ಕೃಷಿ ಕಾನೂನುಗಳನ್ನು ಒಂದೂವರೆ ವರ್ಷ ತಡೆಯಲ್ಲಿಡಲು ಮುಂದಾದ ಕೇಂದ್ರ!

ಸಿಂಘು ಗಡಿಯಲ್ಲಿರುವ ಲೈಫ್ ಕೇರ್ ಫೌಂಡೇಷನ್‌ನ ಕಿಸಾನ್ ಆಸ್ಪತ್ರೆ

ಸಿಂಘು ಗಡಿಯಲ್ಲಿರುವ ಲೈಫ್ ಕೇರ್ ಫೌಂಡೇಷನ್‌ನ ಕಿಸಾನ್ ಆಸ್ಪತ್ರೆಯಲ್ಲಿ ಸುಮಾರು 20 ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆಸ್ಪತ್ರೆ ಮತ್ತು ಪಕ್ಕದಲ್ಲೇ ಮೆಡಿಕಲ್ ಎರಡನ್ನು ಹೊಂದಿರುವ ಈ ಸಂಸ್ಥೆ ಸಾವಿರಾರು ಜನರಿಗೆ ಉಚಿತವಾಗಿ ಸೇವೆ ನೀಡುತ್ತಿದೆ.

“ಪ್ರತಿಭಟನೆ ಆರಂಭವಾದಾಗ ನಾವು ಒಂದು ಆಂಬ್ಯುಲೆನ್ಸ್‌ನಲ್ಲಿ ಇಲ್ಲಿ ಕ್ಲಿನಿಕ್ ಆರಂಭ ಮಾಡಿದ್ದೆವು. ಕಡಿಮೆ ಸಿಬ್ಬಂದಿ ಇದ್ದರು. ಆದರೆ ದಿನ ಕಳೆದಂತೆ ಪ್ರತಿಭಟನೆ ತೀವ್ರಗೊಳ್ಳತೊಡಗಿತು. ಕೆಲವು ರೈತರು ಸಾವನ್ನಪ್ಪಿದರು. ಹಾಗಾಗಿ ನಮ್ಮ ಸಂಸ್ಥೆ ಇಲ್ಲಿ ಸಣ್ಣ ಆಸ್ಪತ್ರೆ ನಿರ್ಮಿಸಲು ಯೋಚಿಸಿ, ಕಾರ್ಯರೂಪಕ್ಕೆ ತಂದಿತು. ಈಗ ವೈದ್ಯರು, ನರ್ಸ್‌ಗಳು, ಲ್ಯಾಬ್ ಟೆಕ್ನಿಷಿಯನ್ ಸೇರಿ 20 ಮಂದಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಪಕ್ಕದಲ್ಲಿ ಮೆಡಿಕಲ್ ಇದೆ. ಅಲ್ಲಿ ಔಷಧಿಗಳನ್ನು ವಿತರಿಸಲಾಗುತ್ತಿದೆ” ಎಂದು 12 ವರ್ಷಗಳಿಂದ ಸ್ಟಾಫ್ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿರುವ ಪೂಜಾ ನಾನುಗೌರಿ.ಕಾಂಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: NIAಯಿಂದ ಸಮನ್ಸ್‌ ಪಡೆದಿದ್ದ ‘ಖಾಲ್ಸಾ ಏಡ್‌’ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

ಪಂಜಾಬ್‌ನ ಅಮೃತ್‌ಸರದ ಕ್ಲಿನಿಕಲ್ ಲ್ಯಾಬೊರೇಟರಿ ಅಸೋಸಿಯೆಷನ್‌ ಸದಸ್ಯರು, 15 ದಿನಕ್ಕೆ ಒಂದರಂತೆ 25 ಜನರ ತಂಡ ಸಿಂಘು ಬಾರ್ಡರ್‌, ಟಿಕ್ರಿ ಬಾರ್ಡ್‌ರ್‌ಗಳಲ್ಲಿ ಉಳಿದುಕೊಂಡು ರೈತರ ಸೇವೆ ಮಾಡುತ್ತಿದೆ. ರಕ್ತದ ಪರೀಕ್ಷೆ, ಮಧುಮೇಹ ಪರೀಕ್ಷೆ ಮಾಡುವ ಇವರ ತಂಡ ವರದಿ ಆಧಾರದಲ್ಲಿ ಚಿಕಿತ್ಸೆಗೆ ಶಿಫಾರಸು ಮಾಡುವ ಕೆಲಸ ಮಾಡುತ್ತಿದೆ.

ತಮ್ಮ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಸೇವೆ ಬಗ್ಗೆ ಮಾತನಾಡಿದ ಮಂಜಿಂದರ್‌ ಸಿಂಗ್, ರಂದೀಪ್ ಸಿಂಗ್ ಮತ್ತು ಗುರು ವಿಶ್ವಾಸ್‌ ಸಿಂಗ್, “ನಾವು ಕಳೆದ ವಾರದಿಂದ ಇಲ್ಲಿ ಉಳಿದುಕೊಂಡಿದ್ದೇವೆ. ಈ ಮೊದಲು ಟಿಕ್ರಿ ಗಡಿಯಲ್ಲಿ ಇದ್ದೆವು. ರಕ್ತ ಮತ್ತು ಮಧುಮೇಹ ಪರೀಕ್ಷೆ ನಡೆಸುತ್ತೆವೆ. ದೇಶದ ರೈತರು ಇಂದು ಕಷ್ಟದಲ್ಲಿದ್ದಾರೆ. ನಮ್ಮಿಂದಾಗುವ ಎಲ್ಲಾ ಸೇವೆ ಮಾಡಲು ನಾವು ತಯಾರಿದ್ದೇವೆ. ಪ್ರತಿಭಟನೆ ಮುಗಿಯುವವರೆಗೂ ನಾವು ಇಲ್ಲಿಯೇ ಇರಲು ತೀರ್ಮಾನಿಸಿದ್ದೇವೆ” ಎಂದಿದ್ದಾರೆ.

ಅಮೃತ್‌ಸರದ ಕ್ಲಿನಿಕಲ್ ಲ್ಯಾಬೊರೇಟರಿ ಅಸೋಸಿಯೆಷನ್ ಸದಸ್ಯರು

ಇದನ್ನೂ ಓದಿ: ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

ಇನ್ನೂ ಪಂಜಾಬಿನಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಆರಂಭವಾದಾಗಿನಿಂದಲೂ ರೈತರ ಜೊತೆಗೆ ನಿಂತು ಸೇವೆ ನೀಡುತ್ತಿರುವ ಅಂತಾರಾಷ್ಟ್ರೀಯ ಸಂಸ್ಥೆ ಯುನೈಟೆಡ್ ಸಿಖ್ಸ್, ಗಡಿಗಳಲ್ಲೂ ಪ್ರತಿಭಟನಾ ನಿರತ ರೈತರ ಸೇವೆಗೆ ಆಧಾರ ಸ್ತಂಭವಾಗಿ ನಿಂತಿದೆ.

ನೈಸರ್ಗಿಕ ವಿಕೋಪಗಳು, ಆರೋಗ್ಯ, ಶಿಕ್ಷಣ ಮತ್ತು ಹೋರಾಟಗಳಲ್ಲಿ ಪ್ರಮುಖವಾಗಿ ತೊಡಗಿಸಿಕೊಳ್ಳುವ ಈ ಸಂಸ್ಥೆ ಸಿಂಘು ಗಡಿಯಲ್ಲಿ ದೆಹಲಿ ಚಲೋ ಆರಂಭವಾದಾಗಿನಿಂದಲೂ ಇದೆ. ಅದು ಮೂರು ಬೆಡ್‌ಗಳ ಪುಟ್ಟ ಆಸ್ಪತ್ರೆ ಜೊತೆಗೆ ಮೆಡಿಕಲ್ ಶಾಪ್ ಹೊಂದಿದೆ.

ಬರೀ ಆರೋಗ್ಯ ಸೇವೆಗೆ ಮಾತ್ರ ತನ್ನ ಸೇವೆ ಮೀಸಲಿರಿಸದ ಈ ಸಂಸ್ಥೆ ಪ್ರತಿಭಟನಾ ನಿರತ ರೈತರಿಗೆ ದಿನ ಬಳಕೆಯ ಮೂಲ ವಸ್ತುಗಳಿಂದ ಹಿಡಿದು ರೈತರಿಗೆ ಚಳಿಯಿಂದ ತಪ್ಪಿಸಿಕೊಳ್ಳಲು, ಮಲಗಲು ಸ್ಲೀಪಿಂಗ್ ಬ್ಯಾಗ್‌ಗಳನ್ನು ಉಚಿತವಾಗಿ ನೀಡುತ್ತಿದೆ.

ದೆಹಲಿ ಚಲೋ ಆರಂಭವಾದ ತಕ್ಷಣ ಪಂಜಾಬ್‌ನಲ್ಲಿಯೇ ಇದ್ದ ನಾವು 2 ಆಂಬ್ಯುಲೆನ್ಸ್‌ಗಳು ಮತ್ತು ವೈದ್ಯರೊಂದಿಗೆ ಇಲ್ಲಿಗೆ ಬಂದೆವು. ತಕ್ಷಣ ಊಟ, ನೀರಿನ ವ್ಯವಸ್ಥೆ ಮಾಡಿದೆವು. ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಬರುತ್ತಿದ್ದ ಕಾರಣ ಮೂರು ಬೆಡ್‌ಗಳ ಸಣ್ಣ ಆಸ್ಪತ್ರೆ ಮಾಡಿಕೊಂಡೆವು. ಹರಿಯಾಣದ ಆರೋಗ್ಯ ಆಸ್ಪತ್ರೆ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿ‌ರುವವರನ್ನು ಅಲ್ಲಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುತ್ತೆವೆ ಎಂದು ಯುನೈಟೆಡ್ ಸಿಖ್ಸ್‌ ಸಂಸ್ಥೆಯ ಅಧಿಕಾರಿ ರಾಜೇಂಧರ್ ಸಿಂಗ್ ತಿಳಿಸಿದ್ದಾರೆ.

ಗಡಿಗಳಲ್ಲಿ ವಿಪರೀತ ಎನಿಸುವಷ್ಟು ಚಳಿ ಇದೆ. ಇದರಿಂದ ದೇಹದ ಭಾಗಗಳು ಹೆಚ್ಚಾಗಿ ನೋವಿಗೆ ಒಳಗಾಗುತ್ತಿದ್ದು, ಇಂತವರಿಗೆ ಆಸ್ಪತ್ರೆಗಳು ನೆರವು ನೀಡುತ್ತಿದೆ. ರೈತ ಹೋರಾಟದಲ್ಲಿ ಹೆಚ್ಚಾಗಿರುವ ವೃದ್ಧರು ಬೇಗನೆ ಕಾಯಿಲೆಗೆ ಒಳಗಾಗುತ್ತಿದ್ದು, ಆಸ್ಪತ್ರೆಗಳು, ವೈದ್ಯರು ಇಲ್ಲದಿದ್ದರೇ ಈ ಐತಿಹಾಸಿಕ ಹೋರಾಟದ ಗತಿ ಬೇರೆ ರೀತಿಯಲ್ಲಿರುತ್ತಿತ್ತು ಎನಿಸುತ್ತದೆ.


ಇದನ್ನೂ ಓದಿ: ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...