Homeಚಳವಳಿರೈತ ಹೋರಾಟದ ಆಧಾರ ಸ್ತಂಭಗಳಾಗಿವೆ ಈ ಆಸ್ಪತ್ರೆಗಳು ಮತ್ತು ವೈದ್ಯರು..!

ರೈತ ಹೋರಾಟದ ಆಧಾರ ಸ್ತಂಭಗಳಾಗಿವೆ ಈ ಆಸ್ಪತ್ರೆಗಳು ಮತ್ತು ವೈದ್ಯರು..!

ದೆಹಲಿಯ ಗಡಿಗಳಲ್ಲಿ ಲೈಫ್ ಕೇರ್ ಫೌಂಡೇಷನ್‌ನಂತಹ ಸಂಸ್ಥೆಗಳು 6, 7 ಬೆಡ್‌ಗಳಿರುವ ಸಣ್ಣ ಪ್ರಮಾಣದ 24 ಗಂಟೆಗಳು ಕಾರ್ಯ ನಿರ್ವಹಿಸುವ ಆಸ್ಪತ್ರೆಗಳನ್ನು ನಡೆಸುತ್ತಿವೆ.

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ನಡೆಸುತ್ತಿರುವ ರೈತ ಹೋರಾಟದಲ್ಲಿ ಹಸಿವು ನೀಗಿಸುವ ಲಂಗರ್‌ಗಳಂತೆ ಇನ್ನಷ್ಟು ಆಧಾರ ಸ್ತಂಭಗಳಾಗಿರುವುದು ವೈದ್ಯರು, ಆಸ್ಪತ್ರೆಗಳು, ಪುಟ್ಟ ಕ್ಲಿನಿಕ್‌ಗಳು, ಆಂಬ್ಯುಲೆನ್ಸ್ ಮತ್ತು ಔಷಧಾಲಯಗಳು.

ಹೌದು, ಹೊಲಗಳಲ್ಲಿ ದುಡಿಯುವ ರೈತರಿಗೆ ಚಳಿ ಹೊಸದಲ್ಲದೆ ಇರಬಹುದು. ಆದರೆ ಈಗ ದೆಹಲಿಯ ಗಡಿಗಳಲ್ಲಿ ಬೀಡುಬಿಟ್ಟಿರುವ ರೈತರಿಗೆ ಇಲ್ಲಿನ ವಾತಾವರಣ, ತೀವ್ರಚಳಿ, ಮಂಜು ಅವರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿದೆ. ಈಗಾಗಲೇ ತೀವ್ರ ಚಳಿಗೆ ಹಲವಾರು ರೈತರು ಬಲಿಯಾಗಿದ್ದಾರೆ.

ಹೀಗಾಗಿ ಎಲ್ಲಾ ಪ್ರತಿಭಟನಾ ಸ್ಥಳಗಳಲ್ಲಿಯೂ ಆಸ್ಪತ್ರೆಗಳು, ವೈದ್ಯರು ದಂಡು, ನೂರಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ನೀವು ಕಾಣಬಹುದು. ಆಂಬ್ಯುಲೆನ್ಸ್‌ಗಳೆ ಇಲ್ಲಿ ಆಸ್ಪತ್ರೆಗಳಾಗಿ, ಕ್ಲಿನಿಕ್‌ಗಳಾಗಿ ಹೆಚ್ಚು ಕಾರ್ಯ ನಿರ್ವಹಿಸುತ್ತಿವೆ. ಇವುಗಳ ನಡುವೆ ಲೈಫ್ ಕೇರ್ ಫೌಂಡೇಷನ್‌ನಂತಹ ಸಂಸ್ಥೆಗಳು 6, 7 ಬೆಡ್‌ಗಳಿರುವ ಸಣ್ಣ ಪ್ರಮಾಣದ 24 ಗಂಟೆಗಳು ಕಾರ್ಯ ನಿರ್ವಹಿಸುವ ಆಸ್ಪತ್ರೆಗಳನ್ನು ನಡೆಸುತ್ತಿವೆ.

ಇದನ್ನೂ ಓದಿ: Breaking: ಕೃಷಿ ಕಾನೂನುಗಳನ್ನು ಒಂದೂವರೆ ವರ್ಷ ತಡೆಯಲ್ಲಿಡಲು ಮುಂದಾದ ಕೇಂದ್ರ!

ಸಿಂಘು ಗಡಿಯಲ್ಲಿರುವ ಲೈಫ್ ಕೇರ್ ಫೌಂಡೇಷನ್‌ನ ಕಿಸಾನ್ ಆಸ್ಪತ್ರೆ

ಸಿಂಘು ಗಡಿಯಲ್ಲಿರುವ ಲೈಫ್ ಕೇರ್ ಫೌಂಡೇಷನ್‌ನ ಕಿಸಾನ್ ಆಸ್ಪತ್ರೆಯಲ್ಲಿ ಸುಮಾರು 20 ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆಸ್ಪತ್ರೆ ಮತ್ತು ಪಕ್ಕದಲ್ಲೇ ಮೆಡಿಕಲ್ ಎರಡನ್ನು ಹೊಂದಿರುವ ಈ ಸಂಸ್ಥೆ ಸಾವಿರಾರು ಜನರಿಗೆ ಉಚಿತವಾಗಿ ಸೇವೆ ನೀಡುತ್ತಿದೆ.

“ಪ್ರತಿಭಟನೆ ಆರಂಭವಾದಾಗ ನಾವು ಒಂದು ಆಂಬ್ಯುಲೆನ್ಸ್‌ನಲ್ಲಿ ಇಲ್ಲಿ ಕ್ಲಿನಿಕ್ ಆರಂಭ ಮಾಡಿದ್ದೆವು. ಕಡಿಮೆ ಸಿಬ್ಬಂದಿ ಇದ್ದರು. ಆದರೆ ದಿನ ಕಳೆದಂತೆ ಪ್ರತಿಭಟನೆ ತೀವ್ರಗೊಳ್ಳತೊಡಗಿತು. ಕೆಲವು ರೈತರು ಸಾವನ್ನಪ್ಪಿದರು. ಹಾಗಾಗಿ ನಮ್ಮ ಸಂಸ್ಥೆ ಇಲ್ಲಿ ಸಣ್ಣ ಆಸ್ಪತ್ರೆ ನಿರ್ಮಿಸಲು ಯೋಚಿಸಿ, ಕಾರ್ಯರೂಪಕ್ಕೆ ತಂದಿತು. ಈಗ ವೈದ್ಯರು, ನರ್ಸ್‌ಗಳು, ಲ್ಯಾಬ್ ಟೆಕ್ನಿಷಿಯನ್ ಸೇರಿ 20 ಮಂದಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಪಕ್ಕದಲ್ಲಿ ಮೆಡಿಕಲ್ ಇದೆ. ಅಲ್ಲಿ ಔಷಧಿಗಳನ್ನು ವಿತರಿಸಲಾಗುತ್ತಿದೆ” ಎಂದು 12 ವರ್ಷಗಳಿಂದ ಸ್ಟಾಫ್ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿರುವ ಪೂಜಾ ನಾನುಗೌರಿ.ಕಾಂಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: NIAಯಿಂದ ಸಮನ್ಸ್‌ ಪಡೆದಿದ್ದ ‘ಖಾಲ್ಸಾ ಏಡ್‌’ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

ಪಂಜಾಬ್‌ನ ಅಮೃತ್‌ಸರದ ಕ್ಲಿನಿಕಲ್ ಲ್ಯಾಬೊರೇಟರಿ ಅಸೋಸಿಯೆಷನ್‌ ಸದಸ್ಯರು, 15 ದಿನಕ್ಕೆ ಒಂದರಂತೆ 25 ಜನರ ತಂಡ ಸಿಂಘು ಬಾರ್ಡರ್‌, ಟಿಕ್ರಿ ಬಾರ್ಡ್‌ರ್‌ಗಳಲ್ಲಿ ಉಳಿದುಕೊಂಡು ರೈತರ ಸೇವೆ ಮಾಡುತ್ತಿದೆ. ರಕ್ತದ ಪರೀಕ್ಷೆ, ಮಧುಮೇಹ ಪರೀಕ್ಷೆ ಮಾಡುವ ಇವರ ತಂಡ ವರದಿ ಆಧಾರದಲ್ಲಿ ಚಿಕಿತ್ಸೆಗೆ ಶಿಫಾರಸು ಮಾಡುವ ಕೆಲಸ ಮಾಡುತ್ತಿದೆ.

ತಮ್ಮ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಸೇವೆ ಬಗ್ಗೆ ಮಾತನಾಡಿದ ಮಂಜಿಂದರ್‌ ಸಿಂಗ್, ರಂದೀಪ್ ಸಿಂಗ್ ಮತ್ತು ಗುರು ವಿಶ್ವಾಸ್‌ ಸಿಂಗ್, “ನಾವು ಕಳೆದ ವಾರದಿಂದ ಇಲ್ಲಿ ಉಳಿದುಕೊಂಡಿದ್ದೇವೆ. ಈ ಮೊದಲು ಟಿಕ್ರಿ ಗಡಿಯಲ್ಲಿ ಇದ್ದೆವು. ರಕ್ತ ಮತ್ತು ಮಧುಮೇಹ ಪರೀಕ್ಷೆ ನಡೆಸುತ್ತೆವೆ. ದೇಶದ ರೈತರು ಇಂದು ಕಷ್ಟದಲ್ಲಿದ್ದಾರೆ. ನಮ್ಮಿಂದಾಗುವ ಎಲ್ಲಾ ಸೇವೆ ಮಾಡಲು ನಾವು ತಯಾರಿದ್ದೇವೆ. ಪ್ರತಿಭಟನೆ ಮುಗಿಯುವವರೆಗೂ ನಾವು ಇಲ್ಲಿಯೇ ಇರಲು ತೀರ್ಮಾನಿಸಿದ್ದೇವೆ” ಎಂದಿದ್ದಾರೆ.

ಅಮೃತ್‌ಸರದ ಕ್ಲಿನಿಕಲ್ ಲ್ಯಾಬೊರೇಟರಿ ಅಸೋಸಿಯೆಷನ್ ಸದಸ್ಯರು

ಇದನ್ನೂ ಓದಿ: ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

ಇನ್ನೂ ಪಂಜಾಬಿನಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಆರಂಭವಾದಾಗಿನಿಂದಲೂ ರೈತರ ಜೊತೆಗೆ ನಿಂತು ಸೇವೆ ನೀಡುತ್ತಿರುವ ಅಂತಾರಾಷ್ಟ್ರೀಯ ಸಂಸ್ಥೆ ಯುನೈಟೆಡ್ ಸಿಖ್ಸ್, ಗಡಿಗಳಲ್ಲೂ ಪ್ರತಿಭಟನಾ ನಿರತ ರೈತರ ಸೇವೆಗೆ ಆಧಾರ ಸ್ತಂಭವಾಗಿ ನಿಂತಿದೆ.

ನೈಸರ್ಗಿಕ ವಿಕೋಪಗಳು, ಆರೋಗ್ಯ, ಶಿಕ್ಷಣ ಮತ್ತು ಹೋರಾಟಗಳಲ್ಲಿ ಪ್ರಮುಖವಾಗಿ ತೊಡಗಿಸಿಕೊಳ್ಳುವ ಈ ಸಂಸ್ಥೆ ಸಿಂಘು ಗಡಿಯಲ್ಲಿ ದೆಹಲಿ ಚಲೋ ಆರಂಭವಾದಾಗಿನಿಂದಲೂ ಇದೆ. ಅದು ಮೂರು ಬೆಡ್‌ಗಳ ಪುಟ್ಟ ಆಸ್ಪತ್ರೆ ಜೊತೆಗೆ ಮೆಡಿಕಲ್ ಶಾಪ್ ಹೊಂದಿದೆ.

ಬರೀ ಆರೋಗ್ಯ ಸೇವೆಗೆ ಮಾತ್ರ ತನ್ನ ಸೇವೆ ಮೀಸಲಿರಿಸದ ಈ ಸಂಸ್ಥೆ ಪ್ರತಿಭಟನಾ ನಿರತ ರೈತರಿಗೆ ದಿನ ಬಳಕೆಯ ಮೂಲ ವಸ್ತುಗಳಿಂದ ಹಿಡಿದು ರೈತರಿಗೆ ಚಳಿಯಿಂದ ತಪ್ಪಿಸಿಕೊಳ್ಳಲು, ಮಲಗಲು ಸ್ಲೀಪಿಂಗ್ ಬ್ಯಾಗ್‌ಗಳನ್ನು ಉಚಿತವಾಗಿ ನೀಡುತ್ತಿದೆ.

ದೆಹಲಿ ಚಲೋ ಆರಂಭವಾದ ತಕ್ಷಣ ಪಂಜಾಬ್‌ನಲ್ಲಿಯೇ ಇದ್ದ ನಾವು 2 ಆಂಬ್ಯುಲೆನ್ಸ್‌ಗಳು ಮತ್ತು ವೈದ್ಯರೊಂದಿಗೆ ಇಲ್ಲಿಗೆ ಬಂದೆವು. ತಕ್ಷಣ ಊಟ, ನೀರಿನ ವ್ಯವಸ್ಥೆ ಮಾಡಿದೆವು. ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಬರುತ್ತಿದ್ದ ಕಾರಣ ಮೂರು ಬೆಡ್‌ಗಳ ಸಣ್ಣ ಆಸ್ಪತ್ರೆ ಮಾಡಿಕೊಂಡೆವು. ಹರಿಯಾಣದ ಆರೋಗ್ಯ ಆಸ್ಪತ್ರೆ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿ‌ರುವವರನ್ನು ಅಲ್ಲಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುತ್ತೆವೆ ಎಂದು ಯುನೈಟೆಡ್ ಸಿಖ್ಸ್‌ ಸಂಸ್ಥೆಯ ಅಧಿಕಾರಿ ರಾಜೇಂಧರ್ ಸಿಂಗ್ ತಿಳಿಸಿದ್ದಾರೆ.

ಗಡಿಗಳಲ್ಲಿ ವಿಪರೀತ ಎನಿಸುವಷ್ಟು ಚಳಿ ಇದೆ. ಇದರಿಂದ ದೇಹದ ಭಾಗಗಳು ಹೆಚ್ಚಾಗಿ ನೋವಿಗೆ ಒಳಗಾಗುತ್ತಿದ್ದು, ಇಂತವರಿಗೆ ಆಸ್ಪತ್ರೆಗಳು ನೆರವು ನೀಡುತ್ತಿದೆ. ರೈತ ಹೋರಾಟದಲ್ಲಿ ಹೆಚ್ಚಾಗಿರುವ ವೃದ್ಧರು ಬೇಗನೆ ಕಾಯಿಲೆಗೆ ಒಳಗಾಗುತ್ತಿದ್ದು, ಆಸ್ಪತ್ರೆಗಳು, ವೈದ್ಯರು ಇಲ್ಲದಿದ್ದರೇ ಈ ಐತಿಹಾಸಿಕ ಹೋರಾಟದ ಗತಿ ಬೇರೆ ರೀತಿಯಲ್ಲಿರುತ್ತಿತ್ತು ಎನಿಸುತ್ತದೆ.


ಇದನ್ನೂ ಓದಿ: ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...