Homeಚಳವಳಿರೈತ ಹೋರಾಟದ ಆಧಾರ ಸ್ತಂಭಗಳಾಗಿವೆ ಈ ಆಸ್ಪತ್ರೆಗಳು ಮತ್ತು ವೈದ್ಯರು..!

ರೈತ ಹೋರಾಟದ ಆಧಾರ ಸ್ತಂಭಗಳಾಗಿವೆ ಈ ಆಸ್ಪತ್ರೆಗಳು ಮತ್ತು ವೈದ್ಯರು..!

ದೆಹಲಿಯ ಗಡಿಗಳಲ್ಲಿ ಲೈಫ್ ಕೇರ್ ಫೌಂಡೇಷನ್‌ನಂತಹ ಸಂಸ್ಥೆಗಳು 6, 7 ಬೆಡ್‌ಗಳಿರುವ ಸಣ್ಣ ಪ್ರಮಾಣದ 24 ಗಂಟೆಗಳು ಕಾರ್ಯ ನಿರ್ವಹಿಸುವ ಆಸ್ಪತ್ರೆಗಳನ್ನು ನಡೆಸುತ್ತಿವೆ.

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ನಡೆಸುತ್ತಿರುವ ರೈತ ಹೋರಾಟದಲ್ಲಿ ಹಸಿವು ನೀಗಿಸುವ ಲಂಗರ್‌ಗಳಂತೆ ಇನ್ನಷ್ಟು ಆಧಾರ ಸ್ತಂಭಗಳಾಗಿರುವುದು ವೈದ್ಯರು, ಆಸ್ಪತ್ರೆಗಳು, ಪುಟ್ಟ ಕ್ಲಿನಿಕ್‌ಗಳು, ಆಂಬ್ಯುಲೆನ್ಸ್ ಮತ್ತು ಔಷಧಾಲಯಗಳು.

ಹೌದು, ಹೊಲಗಳಲ್ಲಿ ದುಡಿಯುವ ರೈತರಿಗೆ ಚಳಿ ಹೊಸದಲ್ಲದೆ ಇರಬಹುದು. ಆದರೆ ಈಗ ದೆಹಲಿಯ ಗಡಿಗಳಲ್ಲಿ ಬೀಡುಬಿಟ್ಟಿರುವ ರೈತರಿಗೆ ಇಲ್ಲಿನ ವಾತಾವರಣ, ತೀವ್ರಚಳಿ, ಮಂಜು ಅವರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿದೆ. ಈಗಾಗಲೇ ತೀವ್ರ ಚಳಿಗೆ ಹಲವಾರು ರೈತರು ಬಲಿಯಾಗಿದ್ದಾರೆ.

ಹೀಗಾಗಿ ಎಲ್ಲಾ ಪ್ರತಿಭಟನಾ ಸ್ಥಳಗಳಲ್ಲಿಯೂ ಆಸ್ಪತ್ರೆಗಳು, ವೈದ್ಯರು ದಂಡು, ನೂರಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ನೀವು ಕಾಣಬಹುದು. ಆಂಬ್ಯುಲೆನ್ಸ್‌ಗಳೆ ಇಲ್ಲಿ ಆಸ್ಪತ್ರೆಗಳಾಗಿ, ಕ್ಲಿನಿಕ್‌ಗಳಾಗಿ ಹೆಚ್ಚು ಕಾರ್ಯ ನಿರ್ವಹಿಸುತ್ತಿವೆ. ಇವುಗಳ ನಡುವೆ ಲೈಫ್ ಕೇರ್ ಫೌಂಡೇಷನ್‌ನಂತಹ ಸಂಸ್ಥೆಗಳು 6, 7 ಬೆಡ್‌ಗಳಿರುವ ಸಣ್ಣ ಪ್ರಮಾಣದ 24 ಗಂಟೆಗಳು ಕಾರ್ಯ ನಿರ್ವಹಿಸುವ ಆಸ್ಪತ್ರೆಗಳನ್ನು ನಡೆಸುತ್ತಿವೆ.

ಇದನ್ನೂ ಓದಿ: Breaking: ಕೃಷಿ ಕಾನೂನುಗಳನ್ನು ಒಂದೂವರೆ ವರ್ಷ ತಡೆಯಲ್ಲಿಡಲು ಮುಂದಾದ ಕೇಂದ್ರ!

ಸಿಂಘು ಗಡಿಯಲ್ಲಿರುವ ಲೈಫ್ ಕೇರ್ ಫೌಂಡೇಷನ್‌ನ ಕಿಸಾನ್ ಆಸ್ಪತ್ರೆ

ಸಿಂಘು ಗಡಿಯಲ್ಲಿರುವ ಲೈಫ್ ಕೇರ್ ಫೌಂಡೇಷನ್‌ನ ಕಿಸಾನ್ ಆಸ್ಪತ್ರೆಯಲ್ಲಿ ಸುಮಾರು 20 ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆಸ್ಪತ್ರೆ ಮತ್ತು ಪಕ್ಕದಲ್ಲೇ ಮೆಡಿಕಲ್ ಎರಡನ್ನು ಹೊಂದಿರುವ ಈ ಸಂಸ್ಥೆ ಸಾವಿರಾರು ಜನರಿಗೆ ಉಚಿತವಾಗಿ ಸೇವೆ ನೀಡುತ್ತಿದೆ.

“ಪ್ರತಿಭಟನೆ ಆರಂಭವಾದಾಗ ನಾವು ಒಂದು ಆಂಬ್ಯುಲೆನ್ಸ್‌ನಲ್ಲಿ ಇಲ್ಲಿ ಕ್ಲಿನಿಕ್ ಆರಂಭ ಮಾಡಿದ್ದೆವು. ಕಡಿಮೆ ಸಿಬ್ಬಂದಿ ಇದ್ದರು. ಆದರೆ ದಿನ ಕಳೆದಂತೆ ಪ್ರತಿಭಟನೆ ತೀವ್ರಗೊಳ್ಳತೊಡಗಿತು. ಕೆಲವು ರೈತರು ಸಾವನ್ನಪ್ಪಿದರು. ಹಾಗಾಗಿ ನಮ್ಮ ಸಂಸ್ಥೆ ಇಲ್ಲಿ ಸಣ್ಣ ಆಸ್ಪತ್ರೆ ನಿರ್ಮಿಸಲು ಯೋಚಿಸಿ, ಕಾರ್ಯರೂಪಕ್ಕೆ ತಂದಿತು. ಈಗ ವೈದ್ಯರು, ನರ್ಸ್‌ಗಳು, ಲ್ಯಾಬ್ ಟೆಕ್ನಿಷಿಯನ್ ಸೇರಿ 20 ಮಂದಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಪಕ್ಕದಲ್ಲಿ ಮೆಡಿಕಲ್ ಇದೆ. ಅಲ್ಲಿ ಔಷಧಿಗಳನ್ನು ವಿತರಿಸಲಾಗುತ್ತಿದೆ” ಎಂದು 12 ವರ್ಷಗಳಿಂದ ಸ್ಟಾಫ್ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿರುವ ಪೂಜಾ ನಾನುಗೌರಿ.ಕಾಂಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: NIAಯಿಂದ ಸಮನ್ಸ್‌ ಪಡೆದಿದ್ದ ‘ಖಾಲ್ಸಾ ಏಡ್‌’ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

ಪಂಜಾಬ್‌ನ ಅಮೃತ್‌ಸರದ ಕ್ಲಿನಿಕಲ್ ಲ್ಯಾಬೊರೇಟರಿ ಅಸೋಸಿಯೆಷನ್‌ ಸದಸ್ಯರು, 15 ದಿನಕ್ಕೆ ಒಂದರಂತೆ 25 ಜನರ ತಂಡ ಸಿಂಘು ಬಾರ್ಡರ್‌, ಟಿಕ್ರಿ ಬಾರ್ಡ್‌ರ್‌ಗಳಲ್ಲಿ ಉಳಿದುಕೊಂಡು ರೈತರ ಸೇವೆ ಮಾಡುತ್ತಿದೆ. ರಕ್ತದ ಪರೀಕ್ಷೆ, ಮಧುಮೇಹ ಪರೀಕ್ಷೆ ಮಾಡುವ ಇವರ ತಂಡ ವರದಿ ಆಧಾರದಲ್ಲಿ ಚಿಕಿತ್ಸೆಗೆ ಶಿಫಾರಸು ಮಾಡುವ ಕೆಲಸ ಮಾಡುತ್ತಿದೆ.

ತಮ್ಮ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಸೇವೆ ಬಗ್ಗೆ ಮಾತನಾಡಿದ ಮಂಜಿಂದರ್‌ ಸಿಂಗ್, ರಂದೀಪ್ ಸಿಂಗ್ ಮತ್ತು ಗುರು ವಿಶ್ವಾಸ್‌ ಸಿಂಗ್, “ನಾವು ಕಳೆದ ವಾರದಿಂದ ಇಲ್ಲಿ ಉಳಿದುಕೊಂಡಿದ್ದೇವೆ. ಈ ಮೊದಲು ಟಿಕ್ರಿ ಗಡಿಯಲ್ಲಿ ಇದ್ದೆವು. ರಕ್ತ ಮತ್ತು ಮಧುಮೇಹ ಪರೀಕ್ಷೆ ನಡೆಸುತ್ತೆವೆ. ದೇಶದ ರೈತರು ಇಂದು ಕಷ್ಟದಲ್ಲಿದ್ದಾರೆ. ನಮ್ಮಿಂದಾಗುವ ಎಲ್ಲಾ ಸೇವೆ ಮಾಡಲು ನಾವು ತಯಾರಿದ್ದೇವೆ. ಪ್ರತಿಭಟನೆ ಮುಗಿಯುವವರೆಗೂ ನಾವು ಇಲ್ಲಿಯೇ ಇರಲು ತೀರ್ಮಾನಿಸಿದ್ದೇವೆ” ಎಂದಿದ್ದಾರೆ.

ಅಮೃತ್‌ಸರದ ಕ್ಲಿನಿಕಲ್ ಲ್ಯಾಬೊರೇಟರಿ ಅಸೋಸಿಯೆಷನ್ ಸದಸ್ಯರು

ಇದನ್ನೂ ಓದಿ: ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

ಇನ್ನೂ ಪಂಜಾಬಿನಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಆರಂಭವಾದಾಗಿನಿಂದಲೂ ರೈತರ ಜೊತೆಗೆ ನಿಂತು ಸೇವೆ ನೀಡುತ್ತಿರುವ ಅಂತಾರಾಷ್ಟ್ರೀಯ ಸಂಸ್ಥೆ ಯುನೈಟೆಡ್ ಸಿಖ್ಸ್, ಗಡಿಗಳಲ್ಲೂ ಪ್ರತಿಭಟನಾ ನಿರತ ರೈತರ ಸೇವೆಗೆ ಆಧಾರ ಸ್ತಂಭವಾಗಿ ನಿಂತಿದೆ.

ನೈಸರ್ಗಿಕ ವಿಕೋಪಗಳು, ಆರೋಗ್ಯ, ಶಿಕ್ಷಣ ಮತ್ತು ಹೋರಾಟಗಳಲ್ಲಿ ಪ್ರಮುಖವಾಗಿ ತೊಡಗಿಸಿಕೊಳ್ಳುವ ಈ ಸಂಸ್ಥೆ ಸಿಂಘು ಗಡಿಯಲ್ಲಿ ದೆಹಲಿ ಚಲೋ ಆರಂಭವಾದಾಗಿನಿಂದಲೂ ಇದೆ. ಅದು ಮೂರು ಬೆಡ್‌ಗಳ ಪುಟ್ಟ ಆಸ್ಪತ್ರೆ ಜೊತೆಗೆ ಮೆಡಿಕಲ್ ಶಾಪ್ ಹೊಂದಿದೆ.

ಬರೀ ಆರೋಗ್ಯ ಸೇವೆಗೆ ಮಾತ್ರ ತನ್ನ ಸೇವೆ ಮೀಸಲಿರಿಸದ ಈ ಸಂಸ್ಥೆ ಪ್ರತಿಭಟನಾ ನಿರತ ರೈತರಿಗೆ ದಿನ ಬಳಕೆಯ ಮೂಲ ವಸ್ತುಗಳಿಂದ ಹಿಡಿದು ರೈತರಿಗೆ ಚಳಿಯಿಂದ ತಪ್ಪಿಸಿಕೊಳ್ಳಲು, ಮಲಗಲು ಸ್ಲೀಪಿಂಗ್ ಬ್ಯಾಗ್‌ಗಳನ್ನು ಉಚಿತವಾಗಿ ನೀಡುತ್ತಿದೆ.

ದೆಹಲಿ ಚಲೋ ಆರಂಭವಾದ ತಕ್ಷಣ ಪಂಜಾಬ್‌ನಲ್ಲಿಯೇ ಇದ್ದ ನಾವು 2 ಆಂಬ್ಯುಲೆನ್ಸ್‌ಗಳು ಮತ್ತು ವೈದ್ಯರೊಂದಿಗೆ ಇಲ್ಲಿಗೆ ಬಂದೆವು. ತಕ್ಷಣ ಊಟ, ನೀರಿನ ವ್ಯವಸ್ಥೆ ಮಾಡಿದೆವು. ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಬರುತ್ತಿದ್ದ ಕಾರಣ ಮೂರು ಬೆಡ್‌ಗಳ ಸಣ್ಣ ಆಸ್ಪತ್ರೆ ಮಾಡಿಕೊಂಡೆವು. ಹರಿಯಾಣದ ಆರೋಗ್ಯ ಆಸ್ಪತ್ರೆ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿ‌ರುವವರನ್ನು ಅಲ್ಲಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುತ್ತೆವೆ ಎಂದು ಯುನೈಟೆಡ್ ಸಿಖ್ಸ್‌ ಸಂಸ್ಥೆಯ ಅಧಿಕಾರಿ ರಾಜೇಂಧರ್ ಸಿಂಗ್ ತಿಳಿಸಿದ್ದಾರೆ.

ಗಡಿಗಳಲ್ಲಿ ವಿಪರೀತ ಎನಿಸುವಷ್ಟು ಚಳಿ ಇದೆ. ಇದರಿಂದ ದೇಹದ ಭಾಗಗಳು ಹೆಚ್ಚಾಗಿ ನೋವಿಗೆ ಒಳಗಾಗುತ್ತಿದ್ದು, ಇಂತವರಿಗೆ ಆಸ್ಪತ್ರೆಗಳು ನೆರವು ನೀಡುತ್ತಿದೆ. ರೈತ ಹೋರಾಟದಲ್ಲಿ ಹೆಚ್ಚಾಗಿರುವ ವೃದ್ಧರು ಬೇಗನೆ ಕಾಯಿಲೆಗೆ ಒಳಗಾಗುತ್ತಿದ್ದು, ಆಸ್ಪತ್ರೆಗಳು, ವೈದ್ಯರು ಇಲ್ಲದಿದ್ದರೇ ಈ ಐತಿಹಾಸಿಕ ಹೋರಾಟದ ಗತಿ ಬೇರೆ ರೀತಿಯಲ್ಲಿರುತ್ತಿತ್ತು ಎನಿಸುತ್ತದೆ.


ಇದನ್ನೂ ಓದಿ: ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...