Homeಚಳವಳಿರೈತ ಹೋರಾಟದ ಆಧಾರ ಸ್ತಂಭಗಳಾಗಿವೆ ಈ ಆಸ್ಪತ್ರೆಗಳು ಮತ್ತು ವೈದ್ಯರು..!

ರೈತ ಹೋರಾಟದ ಆಧಾರ ಸ್ತಂಭಗಳಾಗಿವೆ ಈ ಆಸ್ಪತ್ರೆಗಳು ಮತ್ತು ವೈದ್ಯರು..!

ದೆಹಲಿಯ ಗಡಿಗಳಲ್ಲಿ ಲೈಫ್ ಕೇರ್ ಫೌಂಡೇಷನ್‌ನಂತಹ ಸಂಸ್ಥೆಗಳು 6, 7 ಬೆಡ್‌ಗಳಿರುವ ಸಣ್ಣ ಪ್ರಮಾಣದ 24 ಗಂಟೆಗಳು ಕಾರ್ಯ ನಿರ್ವಹಿಸುವ ಆಸ್ಪತ್ರೆಗಳನ್ನು ನಡೆಸುತ್ತಿವೆ.

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ನಡೆಸುತ್ತಿರುವ ರೈತ ಹೋರಾಟದಲ್ಲಿ ಹಸಿವು ನೀಗಿಸುವ ಲಂಗರ್‌ಗಳಂತೆ ಇನ್ನಷ್ಟು ಆಧಾರ ಸ್ತಂಭಗಳಾಗಿರುವುದು ವೈದ್ಯರು, ಆಸ್ಪತ್ರೆಗಳು, ಪುಟ್ಟ ಕ್ಲಿನಿಕ್‌ಗಳು, ಆಂಬ್ಯುಲೆನ್ಸ್ ಮತ್ತು ಔಷಧಾಲಯಗಳು.

ಹೌದು, ಹೊಲಗಳಲ್ಲಿ ದುಡಿಯುವ ರೈತರಿಗೆ ಚಳಿ ಹೊಸದಲ್ಲದೆ ಇರಬಹುದು. ಆದರೆ ಈಗ ದೆಹಲಿಯ ಗಡಿಗಳಲ್ಲಿ ಬೀಡುಬಿಟ್ಟಿರುವ ರೈತರಿಗೆ ಇಲ್ಲಿನ ವಾತಾವರಣ, ತೀವ್ರಚಳಿ, ಮಂಜು ಅವರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿದೆ. ಈಗಾಗಲೇ ತೀವ್ರ ಚಳಿಗೆ ಹಲವಾರು ರೈತರು ಬಲಿಯಾಗಿದ್ದಾರೆ.

ಹೀಗಾಗಿ ಎಲ್ಲಾ ಪ್ರತಿಭಟನಾ ಸ್ಥಳಗಳಲ್ಲಿಯೂ ಆಸ್ಪತ್ರೆಗಳು, ವೈದ್ಯರು ದಂಡು, ನೂರಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ನೀವು ಕಾಣಬಹುದು. ಆಂಬ್ಯುಲೆನ್ಸ್‌ಗಳೆ ಇಲ್ಲಿ ಆಸ್ಪತ್ರೆಗಳಾಗಿ, ಕ್ಲಿನಿಕ್‌ಗಳಾಗಿ ಹೆಚ್ಚು ಕಾರ್ಯ ನಿರ್ವಹಿಸುತ್ತಿವೆ. ಇವುಗಳ ನಡುವೆ ಲೈಫ್ ಕೇರ್ ಫೌಂಡೇಷನ್‌ನಂತಹ ಸಂಸ್ಥೆಗಳು 6, 7 ಬೆಡ್‌ಗಳಿರುವ ಸಣ್ಣ ಪ್ರಮಾಣದ 24 ಗಂಟೆಗಳು ಕಾರ್ಯ ನಿರ್ವಹಿಸುವ ಆಸ್ಪತ್ರೆಗಳನ್ನು ನಡೆಸುತ್ತಿವೆ.

ಇದನ್ನೂ ಓದಿ: Breaking: ಕೃಷಿ ಕಾನೂನುಗಳನ್ನು ಒಂದೂವರೆ ವರ್ಷ ತಡೆಯಲ್ಲಿಡಲು ಮುಂದಾದ ಕೇಂದ್ರ!

ಸಿಂಘು ಗಡಿಯಲ್ಲಿರುವ ಲೈಫ್ ಕೇರ್ ಫೌಂಡೇಷನ್‌ನ ಕಿಸಾನ್ ಆಸ್ಪತ್ರೆ

ಸಿಂಘು ಗಡಿಯಲ್ಲಿರುವ ಲೈಫ್ ಕೇರ್ ಫೌಂಡೇಷನ್‌ನ ಕಿಸಾನ್ ಆಸ್ಪತ್ರೆಯಲ್ಲಿ ಸುಮಾರು 20 ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆಸ್ಪತ್ರೆ ಮತ್ತು ಪಕ್ಕದಲ್ಲೇ ಮೆಡಿಕಲ್ ಎರಡನ್ನು ಹೊಂದಿರುವ ಈ ಸಂಸ್ಥೆ ಸಾವಿರಾರು ಜನರಿಗೆ ಉಚಿತವಾಗಿ ಸೇವೆ ನೀಡುತ್ತಿದೆ.

“ಪ್ರತಿಭಟನೆ ಆರಂಭವಾದಾಗ ನಾವು ಒಂದು ಆಂಬ್ಯುಲೆನ್ಸ್‌ನಲ್ಲಿ ಇಲ್ಲಿ ಕ್ಲಿನಿಕ್ ಆರಂಭ ಮಾಡಿದ್ದೆವು. ಕಡಿಮೆ ಸಿಬ್ಬಂದಿ ಇದ್ದರು. ಆದರೆ ದಿನ ಕಳೆದಂತೆ ಪ್ರತಿಭಟನೆ ತೀವ್ರಗೊಳ್ಳತೊಡಗಿತು. ಕೆಲವು ರೈತರು ಸಾವನ್ನಪ್ಪಿದರು. ಹಾಗಾಗಿ ನಮ್ಮ ಸಂಸ್ಥೆ ಇಲ್ಲಿ ಸಣ್ಣ ಆಸ್ಪತ್ರೆ ನಿರ್ಮಿಸಲು ಯೋಚಿಸಿ, ಕಾರ್ಯರೂಪಕ್ಕೆ ತಂದಿತು. ಈಗ ವೈದ್ಯರು, ನರ್ಸ್‌ಗಳು, ಲ್ಯಾಬ್ ಟೆಕ್ನಿಷಿಯನ್ ಸೇರಿ 20 ಮಂದಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಪಕ್ಕದಲ್ಲಿ ಮೆಡಿಕಲ್ ಇದೆ. ಅಲ್ಲಿ ಔಷಧಿಗಳನ್ನು ವಿತರಿಸಲಾಗುತ್ತಿದೆ” ಎಂದು 12 ವರ್ಷಗಳಿಂದ ಸ್ಟಾಫ್ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿರುವ ಪೂಜಾ ನಾನುಗೌರಿ.ಕಾಂಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: NIAಯಿಂದ ಸಮನ್ಸ್‌ ಪಡೆದಿದ್ದ ‘ಖಾಲ್ಸಾ ಏಡ್‌’ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

ಪಂಜಾಬ್‌ನ ಅಮೃತ್‌ಸರದ ಕ್ಲಿನಿಕಲ್ ಲ್ಯಾಬೊರೇಟರಿ ಅಸೋಸಿಯೆಷನ್‌ ಸದಸ್ಯರು, 15 ದಿನಕ್ಕೆ ಒಂದರಂತೆ 25 ಜನರ ತಂಡ ಸಿಂಘು ಬಾರ್ಡರ್‌, ಟಿಕ್ರಿ ಬಾರ್ಡ್‌ರ್‌ಗಳಲ್ಲಿ ಉಳಿದುಕೊಂಡು ರೈತರ ಸೇವೆ ಮಾಡುತ್ತಿದೆ. ರಕ್ತದ ಪರೀಕ್ಷೆ, ಮಧುಮೇಹ ಪರೀಕ್ಷೆ ಮಾಡುವ ಇವರ ತಂಡ ವರದಿ ಆಧಾರದಲ್ಲಿ ಚಿಕಿತ್ಸೆಗೆ ಶಿಫಾರಸು ಮಾಡುವ ಕೆಲಸ ಮಾಡುತ್ತಿದೆ.

ತಮ್ಮ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಸೇವೆ ಬಗ್ಗೆ ಮಾತನಾಡಿದ ಮಂಜಿಂದರ್‌ ಸಿಂಗ್, ರಂದೀಪ್ ಸಿಂಗ್ ಮತ್ತು ಗುರು ವಿಶ್ವಾಸ್‌ ಸಿಂಗ್, “ನಾವು ಕಳೆದ ವಾರದಿಂದ ಇಲ್ಲಿ ಉಳಿದುಕೊಂಡಿದ್ದೇವೆ. ಈ ಮೊದಲು ಟಿಕ್ರಿ ಗಡಿಯಲ್ಲಿ ಇದ್ದೆವು. ರಕ್ತ ಮತ್ತು ಮಧುಮೇಹ ಪರೀಕ್ಷೆ ನಡೆಸುತ್ತೆವೆ. ದೇಶದ ರೈತರು ಇಂದು ಕಷ್ಟದಲ್ಲಿದ್ದಾರೆ. ನಮ್ಮಿಂದಾಗುವ ಎಲ್ಲಾ ಸೇವೆ ಮಾಡಲು ನಾವು ತಯಾರಿದ್ದೇವೆ. ಪ್ರತಿಭಟನೆ ಮುಗಿಯುವವರೆಗೂ ನಾವು ಇಲ್ಲಿಯೇ ಇರಲು ತೀರ್ಮಾನಿಸಿದ್ದೇವೆ” ಎಂದಿದ್ದಾರೆ.

ಅಮೃತ್‌ಸರದ ಕ್ಲಿನಿಕಲ್ ಲ್ಯಾಬೊರೇಟರಿ ಅಸೋಸಿಯೆಷನ್ ಸದಸ್ಯರು

ಇದನ್ನೂ ಓದಿ: ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

ಇನ್ನೂ ಪಂಜಾಬಿನಲ್ಲಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ಆರಂಭವಾದಾಗಿನಿಂದಲೂ ರೈತರ ಜೊತೆಗೆ ನಿಂತು ಸೇವೆ ನೀಡುತ್ತಿರುವ ಅಂತಾರಾಷ್ಟ್ರೀಯ ಸಂಸ್ಥೆ ಯುನೈಟೆಡ್ ಸಿಖ್ಸ್, ಗಡಿಗಳಲ್ಲೂ ಪ್ರತಿಭಟನಾ ನಿರತ ರೈತರ ಸೇವೆಗೆ ಆಧಾರ ಸ್ತಂಭವಾಗಿ ನಿಂತಿದೆ.

ನೈಸರ್ಗಿಕ ವಿಕೋಪಗಳು, ಆರೋಗ್ಯ, ಶಿಕ್ಷಣ ಮತ್ತು ಹೋರಾಟಗಳಲ್ಲಿ ಪ್ರಮುಖವಾಗಿ ತೊಡಗಿಸಿಕೊಳ್ಳುವ ಈ ಸಂಸ್ಥೆ ಸಿಂಘು ಗಡಿಯಲ್ಲಿ ದೆಹಲಿ ಚಲೋ ಆರಂಭವಾದಾಗಿನಿಂದಲೂ ಇದೆ. ಅದು ಮೂರು ಬೆಡ್‌ಗಳ ಪುಟ್ಟ ಆಸ್ಪತ್ರೆ ಜೊತೆಗೆ ಮೆಡಿಕಲ್ ಶಾಪ್ ಹೊಂದಿದೆ.

ಬರೀ ಆರೋಗ್ಯ ಸೇವೆಗೆ ಮಾತ್ರ ತನ್ನ ಸೇವೆ ಮೀಸಲಿರಿಸದ ಈ ಸಂಸ್ಥೆ ಪ್ರತಿಭಟನಾ ನಿರತ ರೈತರಿಗೆ ದಿನ ಬಳಕೆಯ ಮೂಲ ವಸ್ತುಗಳಿಂದ ಹಿಡಿದು ರೈತರಿಗೆ ಚಳಿಯಿಂದ ತಪ್ಪಿಸಿಕೊಳ್ಳಲು, ಮಲಗಲು ಸ್ಲೀಪಿಂಗ್ ಬ್ಯಾಗ್‌ಗಳನ್ನು ಉಚಿತವಾಗಿ ನೀಡುತ್ತಿದೆ.

ದೆಹಲಿ ಚಲೋ ಆರಂಭವಾದ ತಕ್ಷಣ ಪಂಜಾಬ್‌ನಲ್ಲಿಯೇ ಇದ್ದ ನಾವು 2 ಆಂಬ್ಯುಲೆನ್ಸ್‌ಗಳು ಮತ್ತು ವೈದ್ಯರೊಂದಿಗೆ ಇಲ್ಲಿಗೆ ಬಂದೆವು. ತಕ್ಷಣ ಊಟ, ನೀರಿನ ವ್ಯವಸ್ಥೆ ಮಾಡಿದೆವು. ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಬರುತ್ತಿದ್ದ ಕಾರಣ ಮೂರು ಬೆಡ್‌ಗಳ ಸಣ್ಣ ಆಸ್ಪತ್ರೆ ಮಾಡಿಕೊಂಡೆವು. ಹರಿಯಾಣದ ಆರೋಗ್ಯ ಆಸ್ಪತ್ರೆ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿ‌ರುವವರನ್ನು ಅಲ್ಲಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುತ್ತೆವೆ ಎಂದು ಯುನೈಟೆಡ್ ಸಿಖ್ಸ್‌ ಸಂಸ್ಥೆಯ ಅಧಿಕಾರಿ ರಾಜೇಂಧರ್ ಸಿಂಗ್ ತಿಳಿಸಿದ್ದಾರೆ.

ಗಡಿಗಳಲ್ಲಿ ವಿಪರೀತ ಎನಿಸುವಷ್ಟು ಚಳಿ ಇದೆ. ಇದರಿಂದ ದೇಹದ ಭಾಗಗಳು ಹೆಚ್ಚಾಗಿ ನೋವಿಗೆ ಒಳಗಾಗುತ್ತಿದ್ದು, ಇಂತವರಿಗೆ ಆಸ್ಪತ್ರೆಗಳು ನೆರವು ನೀಡುತ್ತಿದೆ. ರೈತ ಹೋರಾಟದಲ್ಲಿ ಹೆಚ್ಚಾಗಿರುವ ವೃದ್ಧರು ಬೇಗನೆ ಕಾಯಿಲೆಗೆ ಒಳಗಾಗುತ್ತಿದ್ದು, ಆಸ್ಪತ್ರೆಗಳು, ವೈದ್ಯರು ಇಲ್ಲದಿದ್ದರೇ ಈ ಐತಿಹಾಸಿಕ ಹೋರಾಟದ ಗತಿ ಬೇರೆ ರೀತಿಯಲ್ಲಿರುತ್ತಿತ್ತು ಎನಿಸುತ್ತದೆ.


ಇದನ್ನೂ ಓದಿ: ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...