Homeಚಳವಳಿರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

ಇಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಮಕ್ಕಳಿಗೆ ದಿನವೂ ಬೆಳಗ್ಗೆ ಇಂಗ್ಲೀಷ್, ಗಣಿತ, ಸಮಾಜ, ವಿಜ್ಞಾನ, ಚಿತ್ರಕಲೆ ವಿಷಯಗಳನ್ನು ಹೇಳಿಕೊಡಲಾಗುತ್ತದೆ. ಪ್ರತಿಭಟನೆಯಲ್ಲಿ ಇಷ್ಟು ಸೇವೆ ಮಾಡಲು ಅವಕಶ ಸಿಕ್ಕಿದೆ. ಅಷ್ಟು ಸಾಕು- ರಮಣೀಕ್

- Advertisement -
- Advertisement -

ಹೋರಾಟ ಸಂಘಟಿತವಾಗಲು ಯಾಕೆ ಹೋರಾಟ ನಡೆಸುತ್ತಿದ್ದೇವೆ ಎಂಬುದರ ಅರಿವು ಹೆಚ್ಚು ಅವಶ್ಯಕತೆಯಿದೆ. ಅಂತಹ ಒಂದು ಹೋರಾಟ ಗಟ್ಟಿಯಾಗಿ ನಿಲ್ಲಲು ಅದಕ್ಕೆ ಸಂವಿಧಾನ ನೀಡಿರುವ ಹಕ್ಕುಗಳ ಅರಿವಿರಬೇಕು. ಈ ಅರಿವು ತುಂಬುವ ಕೆಲಸವನ್ನು ಕಿಸಾನ್ ಗ್ರಂಥಾಲಯಗಳು ಮಾಡುತ್ತಿವೆ ಎನ್ನುತ್ತಾರೆ ಪಂಜಾಬ್‌ನ ನರೇಶ್.

ಹೌದು, ಐತಿಹಾಸಿಕ ರೈತ ಹೋರಾಟದಲ್ಲಿ ಸಿಂಘು ಗಡಿಯಲ್ಲಿ ಒಂದರಲ್ಲೇ ಪುಸ್ತಕಗಳ ಮಳಿಗೆಗಳನ್ನು ಇಟ್ಟುಕೊಂಡು, ಪ್ರತಿಭಟನಾಕಾರರಿಗೆ ಉಚಿತವಾಗಿ ಓದಲು ನೀಡುತ್ತಿರುವ ನೂರಕ್ಕೂ ಹೆಚ್ಚು ಗ್ರಂಥಾಲಯಗಳಿವೆ. ಇವುಗಳು ರೈತ ಹೋರಾಟದಲ್ಲಿ ಭಾಗವಹಿಸಿರುವವರಿಗೆ ಜ್ಞಾನದ ಎರಕ ಹೊಯ್ಯುತ್ತಿವೆ.

ಕಿಸಾನ್ ಹೋರಾಟದಲ್ಲಿ ಅಮೆರಿಕಾ ಮೂಲದ power in education international org. ಎಂಬ ಸಂಘಟನೆ ತಮ್ಮ ಗ್ರಂಥಾಲಯದಲ್ಲಿ ಸಂವಿಧಾನದ ಕುರಿತು ತಿಳವಳಿಕೆ ಮೂಡಿಸುವ ಕೆಲಸಕ್ಕೆ ಕೈ ಹಾಕಿದೆ. ಪಂಜಾಬಿ, ಹಿಂದಿ, ಆಂಗ್ಲ ಭಾಷೆಗಳಲ್ಲಿ ಸಂವಿಧಾನದ ಪ್ರತಿಗಳನ್ನು, ಪುಸ್ತಕಗಳನ್ನು ಓದಲು ನೀಡುತ್ತಿವೆ.

ಇದನ್ನೂ ಓದಿ: ಖಾಲಿಸ್ತಾನಿ, ಅಲ್‌ಖೈದ ಭಯೋತ್ಪಾದಕರನ್ನು ಹುಡುಕಿಕೊಡಿ: ದೆಹಲಿಯಲ್ಲಿ ಪೋಸ್ಟರ್ ಅಂಟಿಸಿದ ಪೊಲೀಸರು!

“ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಬರೆದಿರುವ ಸಂವಿಧಾನದ ಓದು ನಮ್ಮ ಹಕ್ಕುಗಳನ್ನು ನಮಗೆ ಮತ್ತಷ್ಟು ತಿಳಿಯಲು ಸಹಾಯಕವಾಗಿದೆ. ಹಾಗಾಗಿ ಸಂವಿಧಾನದ ಓದು ಅತೀ ಅವಶ್ಯಕವಾಗಿದೆ. ನಾವು ಸಿಂಘು ಗಡಿಯಲ್ಲಿ ಇರುವುದರಿಂದ, ಇಲ್ಲಿ ಪಂಜಾಬಿ ಮಾತನಾಡುವವರ ಸಂಖ್ಯೆ ಹೆಚ್ಚಿರುವ ಕಾರಣ ಪಂಜಾಬಿ ಭಾಷೆಯಲ್ಲಿರುವ ಸಂವಿಧಾನದ ಪ್ರತಿಗಳನ್ನು ಇಡಲಾಗಿದೆ. ಇಲ್ಲೇ ಓದುವವರಿಗೆ ಉಚಿತವಾಗಿ ನೀಡಲಾಗುತ್ತದೆ. ಟ್ಯ್ರಾಲಿಯಲ್ಲಿ ಇರುವವರಿಗೆ 2 ದಿನಗಳು ನೀಡಲಾಗುತ್ತದೆ. ಕೊಂಡುಕೊಳ್ಳುವವರಿಗೆ ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ನರೇಶ್ ಮಾಹಿತಿ ನೀಡಿದ್ದಾರೆ.

ಇದರ ಜೊತೆಗೆ ಅಂಬೇಡ್ಕರ್‌ ಸ್ಟೂಡೆಂಟ್ಸ್ ಅಸೋಸಿಯೇಷನ್ ಕೂಡ ಸಂವಿಧಾನ ಮತ್ತು ಅಂಬೇಡ್ಕರ್ ಕುರಿತ ಪುಸ್ತಕಗಳನ್ನು ಜನರಿಗೆ ನೀಡುತ್ತಿದ್ದು. ತಮ್ಮ ಟೆಂಟ್ ಹೊರಗೆಯೂ ಈ ವಿಚಾರಗಳ ಕುರಿತು ಹಲವು ಮಾಹಿತಿ ನೀಡುತ್ತಿವೆ. ಜೊತೆಗೆ ಪ್ರತಿದಿನ ವಿದ್ಯಾರ್ಥಿಗಳು ಚರ್ಚೆಗಳನ್ನು ನಡೆಸುತ್ತಾರೆ.

ಇದನ್ನೂ ಓದಿ:  ‘ಪಿಎಂಒ ಮಾತ್ರವಲ್ಲ ಎನ್‌ಎಸ್‌ಎ ಕೂಡ ಅರ್ನಾಬ್ ಜೊತೆಯಿತ್ತು’: ಅರ್ನಾಬ್ ವಾಟ್ಸಾಪ್ ಲೀಕ್ ಸಂಪೂರ್ಣ ವಿವರ

ಸಿಂಘು ಗಡಿಯಲ್ಲಿರುವ ಮತ್ತೊಂದು ವಿಶೇಷ ಗ್ರಂಥಾಲಯ ಸಾಂಜಿ ಸಾತ್. ಸಾಂಜಿ ಎಂದರೆ ಚರ್ಚೆ, ಸಾತ್ ಎಂದರೆ ಜೊತೆಗೆ ಎಂದರ್ಥ. ಒಟ್ಟಾಗಿ ಕುಳಿತು ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸ್ಥಳ ಇದಾಗಿದೆ. ಏಳು ಮಂದಿ ಯುವಕರು ಈ ಸಾಂಜಿ ಸಾತ್ ಎನ್ನುವ ಗ್ರಂಥಾಲಯ ಮತ್ತು ಚರ್ಚಾ ಸ್ಥಳವನ್ನು ಆರಂಭಿಸಿದ್ದಾರೆ.

ಮೊದಲಿಗೆ ಚಿಕ್ಕದಾಗಿ ಗ್ರಂಥಾಲಯ ಆರಂಭ ಮಾಡಿದ್ದ ಈ ತಂಡಕ್ಕೆ, ಪುಸ್ತಕಗಳು, ಹೆಚ್ಚು ದೇಣಿಗೆಯಿಂದ ಇದು ಇಂದು ದೊಡ್ಡ ಗ್ರಂಥಾಲಯವಾಗಿ ಮಾರ್ಪಟ್ಟಿದೆ. ಈ ಸ್ಥಳದಲ್ಲಿ ಪುಸ್ತಕ ಪ್ರೇಮಿಗಳು, ಚರ್ಚೆಗಳಲ್ಲಿ ಭಾಗವಹಿಸುವವರು, ಕ್ರಾಂತಿ ಗೀತೆಗಳನ್ನು ಹಾಡುವವರು, ಬರೆಯುವವರು, ಕೇಳಿಸಿಕೊಳ್ಳುವವರು ಮತ್ತು ಮಕ್ಕಳು ಎಲ್ಲರೂ ಭಾಗವಹಿಸುತ್ತಾರೆ.

“ಪ್ರತಿಭಟನೆಯಲ್ಲಿ ಭಾಗವಹಿಸಿರುವ ಸುಮಾರು 100ಕ್ಕೂ ಹೆಚ್ಚು ಮಕ್ಕಳಿಗೆ ದಿನವೂ ಬೆಳಗ್ಗೆ ಇಂಗ್ಲೀಷ್, ಗಣಿತ, ಸಮಾಜ, ವಿಜ್ಞಾನ, ಚಿತ್ರಕಲೆ ವಿಷಯಗಳನ್ನು ಹೇಳಿಕೊಡಲಾಗುತ್ತದೆ. ಸಂಜೆ 50-60 ಮಂದಿ, ‘ಪ್ರತಿಭಟನೆ ಯಾವ ರೀತಿ ನಡೆಯುತ್ತಿದೆ. ಯಾವ ರೀತಿ ನಡೆಸಬಹುದು’ ಎಂಬ ವಿಚಾರಗಳ ಜೊತೆಗೆ ಸೈದ್ಧಾಂತಿಕ ವಿಚಾರಗಳನ್ನು ಚರ್ಚೆ ಮಾಡಲಾಗುತ್ತದೆ” ಎಂದು ಸಾಂಜಿ ಸಾತ್‌ ನೋಡಿಕೊಳ್ಳುವ ರಮಣೀಕ್ ಹೇಳುತ್ತಾರೆ.

ಇದನ್ನೂ ಓದಿ: ರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ಸಾಂಜಿ ಸಾತ್ ಕಟ್ಟಿದ ಬಗ್ಗೆ ಮಾತನಾಡಿದ ರಮಣೀಕ್, “ಪ್ರತಿಭಟನೆಗೆ ಬೆಂಬಲ ನೀಡಲು ಬಂದ ನಮ್ಮ ಏಳು ಜನರ ತಂಡ, ಯಾವ ರೀತಿಯಲ್ಲಿ ಇಲ್ಲಿ ಸೇವೆ ಮಾಡುವುದು ಎಂದು ಯೋಚಿಸುತ್ತಿದ್ದೇವು. ಆಗ ನಮಗೆ ಗ್ರಂಥಾಲಯ ಇಡುವ ಯೋಜನೆ ಹೊಳೆಯಿತು. ಕೆಲವು ಪುಸ್ತಕಗಳಿಂದ ಶುರುವಾದ ಈ ಗ್ರಂಥಾಲಯ ಇಂದು ಸಾಂಜಿ ಸಾತ್ ಆಗಿ ಮಾರ್ಪಟ್ಟಿದೆ. ಇಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಮಕ್ಕಳಿಗೆ ದಿನವೂ ಬೆಳಗ್ಗೆ ಇಂಗ್ಲೀಷ್, ಗಣಿತ, ಸಮಾಜ, ವಿಜ್ಞಾನ, ಚಿತ್ರಕಲೆ ವಿಷಯಗಳನ್ನು ಹೇಳಿಕೊಡಲಾಗುತ್ತದೆ. ಪ್ರತಿಭಟನೆಯಲ್ಲಿ ಇಷ್ಟು ಸೇವೆ ಮಾಡಲು ಅವಕಶ ಸಿಕ್ಕಿದೆ. ಅಷ್ಟು ಸಾಕು” ಎನ್ನುತ್ತಾರೆ.

ಗ್ರಂಥಾಲಯಗಳಲ್ಲಿ ಹಲವು ಪುಸ್ತಕಗಳನ್ನು ಓದುಗರಿಗೆ ಉಚಿತವಾಗಿ ಹಂಚಲಾಗುತ್ತಿದೆ. ಈಗಾಗಲೇ ರೈತ ಹೋರಾಟದ ಕುರಿತು ಹಲವು ಪುಸ್ತಕಗಳು ಪ್ರಕಟವಾಗಿದ್ದು, ಇವುಗಳನ್ನು ಸ್ಟಾಲ್‌ಗಳಲ್ಲಿ ಇಡಲಾಗುತ್ತಿದೆ. ಹೊರಗಿನಿಂದ ಬಂದವರು, ಇಲ್ಲಿಯೇ ಓದುವವರಿಗೂ ಇವುಗಳನ್ನು ಹಂಚಲಾಗುತ್ತಿದೆ.

ಕೃಷಿ ಕಾನೂನುಗಳ ರದ್ದತಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ 60 ದಿನಗಳಾಗುತ್ತಾ ಬಂದರು ಇನ್ನು ತನ್ನ ಕಾವು ಕಳೆದುಕೊಳ್ಳದಿರಲು ಇರುವ ಪ್ರಮುಖ ಅಂಶಗಳಲ್ಲಿ ಈ ಗ್ರಂಥಾಲಯಗಳೂ ಪ್ರಮುಖ ಪಾತ್ರವಹಿಸಿವೆ.


ಇದನ್ನೂ ಓದಿ: ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...