Homeಚಳವಳಿರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

ಇಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಮಕ್ಕಳಿಗೆ ದಿನವೂ ಬೆಳಗ್ಗೆ ಇಂಗ್ಲೀಷ್, ಗಣಿತ, ಸಮಾಜ, ವಿಜ್ಞಾನ, ಚಿತ್ರಕಲೆ ವಿಷಯಗಳನ್ನು ಹೇಳಿಕೊಡಲಾಗುತ್ತದೆ. ಪ್ರತಿಭಟನೆಯಲ್ಲಿ ಇಷ್ಟು ಸೇವೆ ಮಾಡಲು ಅವಕಶ ಸಿಕ್ಕಿದೆ. ಅಷ್ಟು ಸಾಕು- ರಮಣೀಕ್

- Advertisement -
- Advertisement -

ಹೋರಾಟ ಸಂಘಟಿತವಾಗಲು ಯಾಕೆ ಹೋರಾಟ ನಡೆಸುತ್ತಿದ್ದೇವೆ ಎಂಬುದರ ಅರಿವು ಹೆಚ್ಚು ಅವಶ್ಯಕತೆಯಿದೆ. ಅಂತಹ ಒಂದು ಹೋರಾಟ ಗಟ್ಟಿಯಾಗಿ ನಿಲ್ಲಲು ಅದಕ್ಕೆ ಸಂವಿಧಾನ ನೀಡಿರುವ ಹಕ್ಕುಗಳ ಅರಿವಿರಬೇಕು. ಈ ಅರಿವು ತುಂಬುವ ಕೆಲಸವನ್ನು ಕಿಸಾನ್ ಗ್ರಂಥಾಲಯಗಳು ಮಾಡುತ್ತಿವೆ ಎನ್ನುತ್ತಾರೆ ಪಂಜಾಬ್‌ನ ನರೇಶ್.

ಹೌದು, ಐತಿಹಾಸಿಕ ರೈತ ಹೋರಾಟದಲ್ಲಿ ಸಿಂಘು ಗಡಿಯಲ್ಲಿ ಒಂದರಲ್ಲೇ ಪುಸ್ತಕಗಳ ಮಳಿಗೆಗಳನ್ನು ಇಟ್ಟುಕೊಂಡು, ಪ್ರತಿಭಟನಾಕಾರರಿಗೆ ಉಚಿತವಾಗಿ ಓದಲು ನೀಡುತ್ತಿರುವ ನೂರಕ್ಕೂ ಹೆಚ್ಚು ಗ್ರಂಥಾಲಯಗಳಿವೆ. ಇವುಗಳು ರೈತ ಹೋರಾಟದಲ್ಲಿ ಭಾಗವಹಿಸಿರುವವರಿಗೆ ಜ್ಞಾನದ ಎರಕ ಹೊಯ್ಯುತ್ತಿವೆ.

ಕಿಸಾನ್ ಹೋರಾಟದಲ್ಲಿ ಅಮೆರಿಕಾ ಮೂಲದ power in education international org. ಎಂಬ ಸಂಘಟನೆ ತಮ್ಮ ಗ್ರಂಥಾಲಯದಲ್ಲಿ ಸಂವಿಧಾನದ ಕುರಿತು ತಿಳವಳಿಕೆ ಮೂಡಿಸುವ ಕೆಲಸಕ್ಕೆ ಕೈ ಹಾಕಿದೆ. ಪಂಜಾಬಿ, ಹಿಂದಿ, ಆಂಗ್ಲ ಭಾಷೆಗಳಲ್ಲಿ ಸಂವಿಧಾನದ ಪ್ರತಿಗಳನ್ನು, ಪುಸ್ತಕಗಳನ್ನು ಓದಲು ನೀಡುತ್ತಿವೆ.

ಇದನ್ನೂ ಓದಿ: ಖಾಲಿಸ್ತಾನಿ, ಅಲ್‌ಖೈದ ಭಯೋತ್ಪಾದಕರನ್ನು ಹುಡುಕಿಕೊಡಿ: ದೆಹಲಿಯಲ್ಲಿ ಪೋಸ್ಟರ್ ಅಂಟಿಸಿದ ಪೊಲೀಸರು!

“ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಬರೆದಿರುವ ಸಂವಿಧಾನದ ಓದು ನಮ್ಮ ಹಕ್ಕುಗಳನ್ನು ನಮಗೆ ಮತ್ತಷ್ಟು ತಿಳಿಯಲು ಸಹಾಯಕವಾಗಿದೆ. ಹಾಗಾಗಿ ಸಂವಿಧಾನದ ಓದು ಅತೀ ಅವಶ್ಯಕವಾಗಿದೆ. ನಾವು ಸಿಂಘು ಗಡಿಯಲ್ಲಿ ಇರುವುದರಿಂದ, ಇಲ್ಲಿ ಪಂಜಾಬಿ ಮಾತನಾಡುವವರ ಸಂಖ್ಯೆ ಹೆಚ್ಚಿರುವ ಕಾರಣ ಪಂಜಾಬಿ ಭಾಷೆಯಲ್ಲಿರುವ ಸಂವಿಧಾನದ ಪ್ರತಿಗಳನ್ನು ಇಡಲಾಗಿದೆ. ಇಲ್ಲೇ ಓದುವವರಿಗೆ ಉಚಿತವಾಗಿ ನೀಡಲಾಗುತ್ತದೆ. ಟ್ಯ್ರಾಲಿಯಲ್ಲಿ ಇರುವವರಿಗೆ 2 ದಿನಗಳು ನೀಡಲಾಗುತ್ತದೆ. ಕೊಂಡುಕೊಳ್ಳುವವರಿಗೆ ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ನರೇಶ್ ಮಾಹಿತಿ ನೀಡಿದ್ದಾರೆ.

ಇದರ ಜೊತೆಗೆ ಅಂಬೇಡ್ಕರ್‌ ಸ್ಟೂಡೆಂಟ್ಸ್ ಅಸೋಸಿಯೇಷನ್ ಕೂಡ ಸಂವಿಧಾನ ಮತ್ತು ಅಂಬೇಡ್ಕರ್ ಕುರಿತ ಪುಸ್ತಕಗಳನ್ನು ಜನರಿಗೆ ನೀಡುತ್ತಿದ್ದು. ತಮ್ಮ ಟೆಂಟ್ ಹೊರಗೆಯೂ ಈ ವಿಚಾರಗಳ ಕುರಿತು ಹಲವು ಮಾಹಿತಿ ನೀಡುತ್ತಿವೆ. ಜೊತೆಗೆ ಪ್ರತಿದಿನ ವಿದ್ಯಾರ್ಥಿಗಳು ಚರ್ಚೆಗಳನ್ನು ನಡೆಸುತ್ತಾರೆ.

ಇದನ್ನೂ ಓದಿ:  ‘ಪಿಎಂಒ ಮಾತ್ರವಲ್ಲ ಎನ್‌ಎಸ್‌ಎ ಕೂಡ ಅರ್ನಾಬ್ ಜೊತೆಯಿತ್ತು’: ಅರ್ನಾಬ್ ವಾಟ್ಸಾಪ್ ಲೀಕ್ ಸಂಪೂರ್ಣ ವಿವರ

ಸಿಂಘು ಗಡಿಯಲ್ಲಿರುವ ಮತ್ತೊಂದು ವಿಶೇಷ ಗ್ರಂಥಾಲಯ ಸಾಂಜಿ ಸಾತ್. ಸಾಂಜಿ ಎಂದರೆ ಚರ್ಚೆ, ಸಾತ್ ಎಂದರೆ ಜೊತೆಗೆ ಎಂದರ್ಥ. ಒಟ್ಟಾಗಿ ಕುಳಿತು ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸ್ಥಳ ಇದಾಗಿದೆ. ಏಳು ಮಂದಿ ಯುವಕರು ಈ ಸಾಂಜಿ ಸಾತ್ ಎನ್ನುವ ಗ್ರಂಥಾಲಯ ಮತ್ತು ಚರ್ಚಾ ಸ್ಥಳವನ್ನು ಆರಂಭಿಸಿದ್ದಾರೆ.

ಮೊದಲಿಗೆ ಚಿಕ್ಕದಾಗಿ ಗ್ರಂಥಾಲಯ ಆರಂಭ ಮಾಡಿದ್ದ ಈ ತಂಡಕ್ಕೆ, ಪುಸ್ತಕಗಳು, ಹೆಚ್ಚು ದೇಣಿಗೆಯಿಂದ ಇದು ಇಂದು ದೊಡ್ಡ ಗ್ರಂಥಾಲಯವಾಗಿ ಮಾರ್ಪಟ್ಟಿದೆ. ಈ ಸ್ಥಳದಲ್ಲಿ ಪುಸ್ತಕ ಪ್ರೇಮಿಗಳು, ಚರ್ಚೆಗಳಲ್ಲಿ ಭಾಗವಹಿಸುವವರು, ಕ್ರಾಂತಿ ಗೀತೆಗಳನ್ನು ಹಾಡುವವರು, ಬರೆಯುವವರು, ಕೇಳಿಸಿಕೊಳ್ಳುವವರು ಮತ್ತು ಮಕ್ಕಳು ಎಲ್ಲರೂ ಭಾಗವಹಿಸುತ್ತಾರೆ.

“ಪ್ರತಿಭಟನೆಯಲ್ಲಿ ಭಾಗವಹಿಸಿರುವ ಸುಮಾರು 100ಕ್ಕೂ ಹೆಚ್ಚು ಮಕ್ಕಳಿಗೆ ದಿನವೂ ಬೆಳಗ್ಗೆ ಇಂಗ್ಲೀಷ್, ಗಣಿತ, ಸಮಾಜ, ವಿಜ್ಞಾನ, ಚಿತ್ರಕಲೆ ವಿಷಯಗಳನ್ನು ಹೇಳಿಕೊಡಲಾಗುತ್ತದೆ. ಸಂಜೆ 50-60 ಮಂದಿ, ‘ಪ್ರತಿಭಟನೆ ಯಾವ ರೀತಿ ನಡೆಯುತ್ತಿದೆ. ಯಾವ ರೀತಿ ನಡೆಸಬಹುದು’ ಎಂಬ ವಿಚಾರಗಳ ಜೊತೆಗೆ ಸೈದ್ಧಾಂತಿಕ ವಿಚಾರಗಳನ್ನು ಚರ್ಚೆ ಮಾಡಲಾಗುತ್ತದೆ” ಎಂದು ಸಾಂಜಿ ಸಾತ್‌ ನೋಡಿಕೊಳ್ಳುವ ರಮಣೀಕ್ ಹೇಳುತ್ತಾರೆ.

ಇದನ್ನೂ ಓದಿ: ರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ಸಾಂಜಿ ಸಾತ್ ಕಟ್ಟಿದ ಬಗ್ಗೆ ಮಾತನಾಡಿದ ರಮಣೀಕ್, “ಪ್ರತಿಭಟನೆಗೆ ಬೆಂಬಲ ನೀಡಲು ಬಂದ ನಮ್ಮ ಏಳು ಜನರ ತಂಡ, ಯಾವ ರೀತಿಯಲ್ಲಿ ಇಲ್ಲಿ ಸೇವೆ ಮಾಡುವುದು ಎಂದು ಯೋಚಿಸುತ್ತಿದ್ದೇವು. ಆಗ ನಮಗೆ ಗ್ರಂಥಾಲಯ ಇಡುವ ಯೋಜನೆ ಹೊಳೆಯಿತು. ಕೆಲವು ಪುಸ್ತಕಗಳಿಂದ ಶುರುವಾದ ಈ ಗ್ರಂಥಾಲಯ ಇಂದು ಸಾಂಜಿ ಸಾತ್ ಆಗಿ ಮಾರ್ಪಟ್ಟಿದೆ. ಇಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಮಕ್ಕಳಿಗೆ ದಿನವೂ ಬೆಳಗ್ಗೆ ಇಂಗ್ಲೀಷ್, ಗಣಿತ, ಸಮಾಜ, ವಿಜ್ಞಾನ, ಚಿತ್ರಕಲೆ ವಿಷಯಗಳನ್ನು ಹೇಳಿಕೊಡಲಾಗುತ್ತದೆ. ಪ್ರತಿಭಟನೆಯಲ್ಲಿ ಇಷ್ಟು ಸೇವೆ ಮಾಡಲು ಅವಕಶ ಸಿಕ್ಕಿದೆ. ಅಷ್ಟು ಸಾಕು” ಎನ್ನುತ್ತಾರೆ.

ಗ್ರಂಥಾಲಯಗಳಲ್ಲಿ ಹಲವು ಪುಸ್ತಕಗಳನ್ನು ಓದುಗರಿಗೆ ಉಚಿತವಾಗಿ ಹಂಚಲಾಗುತ್ತಿದೆ. ಈಗಾಗಲೇ ರೈತ ಹೋರಾಟದ ಕುರಿತು ಹಲವು ಪುಸ್ತಕಗಳು ಪ್ರಕಟವಾಗಿದ್ದು, ಇವುಗಳನ್ನು ಸ್ಟಾಲ್‌ಗಳಲ್ಲಿ ಇಡಲಾಗುತ್ತಿದೆ. ಹೊರಗಿನಿಂದ ಬಂದವರು, ಇಲ್ಲಿಯೇ ಓದುವವರಿಗೂ ಇವುಗಳನ್ನು ಹಂಚಲಾಗುತ್ತಿದೆ.

ಕೃಷಿ ಕಾನೂನುಗಳ ರದ್ದತಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ 60 ದಿನಗಳಾಗುತ್ತಾ ಬಂದರು ಇನ್ನು ತನ್ನ ಕಾವು ಕಳೆದುಕೊಳ್ಳದಿರಲು ಇರುವ ಪ್ರಮುಖ ಅಂಶಗಳಲ್ಲಿ ಈ ಗ್ರಂಥಾಲಯಗಳೂ ಪ್ರಮುಖ ಪಾತ್ರವಹಿಸಿವೆ.


ಇದನ್ನೂ ಓದಿ: ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...