Homeಚಳವಳಿರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

ಇಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಮಕ್ಕಳಿಗೆ ದಿನವೂ ಬೆಳಗ್ಗೆ ಇಂಗ್ಲೀಷ್, ಗಣಿತ, ಸಮಾಜ, ವಿಜ್ಞಾನ, ಚಿತ್ರಕಲೆ ವಿಷಯಗಳನ್ನು ಹೇಳಿಕೊಡಲಾಗುತ್ತದೆ. ಪ್ರತಿಭಟನೆಯಲ್ಲಿ ಇಷ್ಟು ಸೇವೆ ಮಾಡಲು ಅವಕಶ ಸಿಕ್ಕಿದೆ. ಅಷ್ಟು ಸಾಕು- ರಮಣೀಕ್

- Advertisement -
- Advertisement -

ಹೋರಾಟ ಸಂಘಟಿತವಾಗಲು ಯಾಕೆ ಹೋರಾಟ ನಡೆಸುತ್ತಿದ್ದೇವೆ ಎಂಬುದರ ಅರಿವು ಹೆಚ್ಚು ಅವಶ್ಯಕತೆಯಿದೆ. ಅಂತಹ ಒಂದು ಹೋರಾಟ ಗಟ್ಟಿಯಾಗಿ ನಿಲ್ಲಲು ಅದಕ್ಕೆ ಸಂವಿಧಾನ ನೀಡಿರುವ ಹಕ್ಕುಗಳ ಅರಿವಿರಬೇಕು. ಈ ಅರಿವು ತುಂಬುವ ಕೆಲಸವನ್ನು ಕಿಸಾನ್ ಗ್ರಂಥಾಲಯಗಳು ಮಾಡುತ್ತಿವೆ ಎನ್ನುತ್ತಾರೆ ಪಂಜಾಬ್‌ನ ನರೇಶ್.

ಹೌದು, ಐತಿಹಾಸಿಕ ರೈತ ಹೋರಾಟದಲ್ಲಿ ಸಿಂಘು ಗಡಿಯಲ್ಲಿ ಒಂದರಲ್ಲೇ ಪುಸ್ತಕಗಳ ಮಳಿಗೆಗಳನ್ನು ಇಟ್ಟುಕೊಂಡು, ಪ್ರತಿಭಟನಾಕಾರರಿಗೆ ಉಚಿತವಾಗಿ ಓದಲು ನೀಡುತ್ತಿರುವ ನೂರಕ್ಕೂ ಹೆಚ್ಚು ಗ್ರಂಥಾಲಯಗಳಿವೆ. ಇವುಗಳು ರೈತ ಹೋರಾಟದಲ್ಲಿ ಭಾಗವಹಿಸಿರುವವರಿಗೆ ಜ್ಞಾನದ ಎರಕ ಹೊಯ್ಯುತ್ತಿವೆ.

ಕಿಸಾನ್ ಹೋರಾಟದಲ್ಲಿ ಅಮೆರಿಕಾ ಮೂಲದ power in education international org. ಎಂಬ ಸಂಘಟನೆ ತಮ್ಮ ಗ್ರಂಥಾಲಯದಲ್ಲಿ ಸಂವಿಧಾನದ ಕುರಿತು ತಿಳವಳಿಕೆ ಮೂಡಿಸುವ ಕೆಲಸಕ್ಕೆ ಕೈ ಹಾಕಿದೆ. ಪಂಜಾಬಿ, ಹಿಂದಿ, ಆಂಗ್ಲ ಭಾಷೆಗಳಲ್ಲಿ ಸಂವಿಧಾನದ ಪ್ರತಿಗಳನ್ನು, ಪುಸ್ತಕಗಳನ್ನು ಓದಲು ನೀಡುತ್ತಿವೆ.

ಇದನ್ನೂ ಓದಿ: ಖಾಲಿಸ್ತಾನಿ, ಅಲ್‌ಖೈದ ಭಯೋತ್ಪಾದಕರನ್ನು ಹುಡುಕಿಕೊಡಿ: ದೆಹಲಿಯಲ್ಲಿ ಪೋಸ್ಟರ್ ಅಂಟಿಸಿದ ಪೊಲೀಸರು!

“ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಬರೆದಿರುವ ಸಂವಿಧಾನದ ಓದು ನಮ್ಮ ಹಕ್ಕುಗಳನ್ನು ನಮಗೆ ಮತ್ತಷ್ಟು ತಿಳಿಯಲು ಸಹಾಯಕವಾಗಿದೆ. ಹಾಗಾಗಿ ಸಂವಿಧಾನದ ಓದು ಅತೀ ಅವಶ್ಯಕವಾಗಿದೆ. ನಾವು ಸಿಂಘು ಗಡಿಯಲ್ಲಿ ಇರುವುದರಿಂದ, ಇಲ್ಲಿ ಪಂಜಾಬಿ ಮಾತನಾಡುವವರ ಸಂಖ್ಯೆ ಹೆಚ್ಚಿರುವ ಕಾರಣ ಪಂಜಾಬಿ ಭಾಷೆಯಲ್ಲಿರುವ ಸಂವಿಧಾನದ ಪ್ರತಿಗಳನ್ನು ಇಡಲಾಗಿದೆ. ಇಲ್ಲೇ ಓದುವವರಿಗೆ ಉಚಿತವಾಗಿ ನೀಡಲಾಗುತ್ತದೆ. ಟ್ಯ್ರಾಲಿಯಲ್ಲಿ ಇರುವವರಿಗೆ 2 ದಿನಗಳು ನೀಡಲಾಗುತ್ತದೆ. ಕೊಂಡುಕೊಳ್ಳುವವರಿಗೆ ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ನರೇಶ್ ಮಾಹಿತಿ ನೀಡಿದ್ದಾರೆ.

ಇದರ ಜೊತೆಗೆ ಅಂಬೇಡ್ಕರ್‌ ಸ್ಟೂಡೆಂಟ್ಸ್ ಅಸೋಸಿಯೇಷನ್ ಕೂಡ ಸಂವಿಧಾನ ಮತ್ತು ಅಂಬೇಡ್ಕರ್ ಕುರಿತ ಪುಸ್ತಕಗಳನ್ನು ಜನರಿಗೆ ನೀಡುತ್ತಿದ್ದು. ತಮ್ಮ ಟೆಂಟ್ ಹೊರಗೆಯೂ ಈ ವಿಚಾರಗಳ ಕುರಿತು ಹಲವು ಮಾಹಿತಿ ನೀಡುತ್ತಿವೆ. ಜೊತೆಗೆ ಪ್ರತಿದಿನ ವಿದ್ಯಾರ್ಥಿಗಳು ಚರ್ಚೆಗಳನ್ನು ನಡೆಸುತ್ತಾರೆ.

ಇದನ್ನೂ ಓದಿ:  ‘ಪಿಎಂಒ ಮಾತ್ರವಲ್ಲ ಎನ್‌ಎಸ್‌ಎ ಕೂಡ ಅರ್ನಾಬ್ ಜೊತೆಯಿತ್ತು’: ಅರ್ನಾಬ್ ವಾಟ್ಸಾಪ್ ಲೀಕ್ ಸಂಪೂರ್ಣ ವಿವರ

ಸಿಂಘು ಗಡಿಯಲ್ಲಿರುವ ಮತ್ತೊಂದು ವಿಶೇಷ ಗ್ರಂಥಾಲಯ ಸಾಂಜಿ ಸಾತ್. ಸಾಂಜಿ ಎಂದರೆ ಚರ್ಚೆ, ಸಾತ್ ಎಂದರೆ ಜೊತೆಗೆ ಎಂದರ್ಥ. ಒಟ್ಟಾಗಿ ಕುಳಿತು ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸ್ಥಳ ಇದಾಗಿದೆ. ಏಳು ಮಂದಿ ಯುವಕರು ಈ ಸಾಂಜಿ ಸಾತ್ ಎನ್ನುವ ಗ್ರಂಥಾಲಯ ಮತ್ತು ಚರ್ಚಾ ಸ್ಥಳವನ್ನು ಆರಂಭಿಸಿದ್ದಾರೆ.

ಮೊದಲಿಗೆ ಚಿಕ್ಕದಾಗಿ ಗ್ರಂಥಾಲಯ ಆರಂಭ ಮಾಡಿದ್ದ ಈ ತಂಡಕ್ಕೆ, ಪುಸ್ತಕಗಳು, ಹೆಚ್ಚು ದೇಣಿಗೆಯಿಂದ ಇದು ಇಂದು ದೊಡ್ಡ ಗ್ರಂಥಾಲಯವಾಗಿ ಮಾರ್ಪಟ್ಟಿದೆ. ಈ ಸ್ಥಳದಲ್ಲಿ ಪುಸ್ತಕ ಪ್ರೇಮಿಗಳು, ಚರ್ಚೆಗಳಲ್ಲಿ ಭಾಗವಹಿಸುವವರು, ಕ್ರಾಂತಿ ಗೀತೆಗಳನ್ನು ಹಾಡುವವರು, ಬರೆಯುವವರು, ಕೇಳಿಸಿಕೊಳ್ಳುವವರು ಮತ್ತು ಮಕ್ಕಳು ಎಲ್ಲರೂ ಭಾಗವಹಿಸುತ್ತಾರೆ.

“ಪ್ರತಿಭಟನೆಯಲ್ಲಿ ಭಾಗವಹಿಸಿರುವ ಸುಮಾರು 100ಕ್ಕೂ ಹೆಚ್ಚು ಮಕ್ಕಳಿಗೆ ದಿನವೂ ಬೆಳಗ್ಗೆ ಇಂಗ್ಲೀಷ್, ಗಣಿತ, ಸಮಾಜ, ವಿಜ್ಞಾನ, ಚಿತ್ರಕಲೆ ವಿಷಯಗಳನ್ನು ಹೇಳಿಕೊಡಲಾಗುತ್ತದೆ. ಸಂಜೆ 50-60 ಮಂದಿ, ‘ಪ್ರತಿಭಟನೆ ಯಾವ ರೀತಿ ನಡೆಯುತ್ತಿದೆ. ಯಾವ ರೀತಿ ನಡೆಸಬಹುದು’ ಎಂಬ ವಿಚಾರಗಳ ಜೊತೆಗೆ ಸೈದ್ಧಾಂತಿಕ ವಿಚಾರಗಳನ್ನು ಚರ್ಚೆ ಮಾಡಲಾಗುತ್ತದೆ” ಎಂದು ಸಾಂಜಿ ಸಾತ್‌ ನೋಡಿಕೊಳ್ಳುವ ರಮಣೀಕ್ ಹೇಳುತ್ತಾರೆ.

ಇದನ್ನೂ ಓದಿ: ರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ಸಾಂಜಿ ಸಾತ್ ಕಟ್ಟಿದ ಬಗ್ಗೆ ಮಾತನಾಡಿದ ರಮಣೀಕ್, “ಪ್ರತಿಭಟನೆಗೆ ಬೆಂಬಲ ನೀಡಲು ಬಂದ ನಮ್ಮ ಏಳು ಜನರ ತಂಡ, ಯಾವ ರೀತಿಯಲ್ಲಿ ಇಲ್ಲಿ ಸೇವೆ ಮಾಡುವುದು ಎಂದು ಯೋಚಿಸುತ್ತಿದ್ದೇವು. ಆಗ ನಮಗೆ ಗ್ರಂಥಾಲಯ ಇಡುವ ಯೋಜನೆ ಹೊಳೆಯಿತು. ಕೆಲವು ಪುಸ್ತಕಗಳಿಂದ ಶುರುವಾದ ಈ ಗ್ರಂಥಾಲಯ ಇಂದು ಸಾಂಜಿ ಸಾತ್ ಆಗಿ ಮಾರ್ಪಟ್ಟಿದೆ. ಇಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಮಕ್ಕಳಿಗೆ ದಿನವೂ ಬೆಳಗ್ಗೆ ಇಂಗ್ಲೀಷ್, ಗಣಿತ, ಸಮಾಜ, ವಿಜ್ಞಾನ, ಚಿತ್ರಕಲೆ ವಿಷಯಗಳನ್ನು ಹೇಳಿಕೊಡಲಾಗುತ್ತದೆ. ಪ್ರತಿಭಟನೆಯಲ್ಲಿ ಇಷ್ಟು ಸೇವೆ ಮಾಡಲು ಅವಕಶ ಸಿಕ್ಕಿದೆ. ಅಷ್ಟು ಸಾಕು” ಎನ್ನುತ್ತಾರೆ.

ಗ್ರಂಥಾಲಯಗಳಲ್ಲಿ ಹಲವು ಪುಸ್ತಕಗಳನ್ನು ಓದುಗರಿಗೆ ಉಚಿತವಾಗಿ ಹಂಚಲಾಗುತ್ತಿದೆ. ಈಗಾಗಲೇ ರೈತ ಹೋರಾಟದ ಕುರಿತು ಹಲವು ಪುಸ್ತಕಗಳು ಪ್ರಕಟವಾಗಿದ್ದು, ಇವುಗಳನ್ನು ಸ್ಟಾಲ್‌ಗಳಲ್ಲಿ ಇಡಲಾಗುತ್ತಿದೆ. ಹೊರಗಿನಿಂದ ಬಂದವರು, ಇಲ್ಲಿಯೇ ಓದುವವರಿಗೂ ಇವುಗಳನ್ನು ಹಂಚಲಾಗುತ್ತಿದೆ.

ಕೃಷಿ ಕಾನೂನುಗಳ ರದ್ದತಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ 60 ದಿನಗಳಾಗುತ್ತಾ ಬಂದರು ಇನ್ನು ತನ್ನ ಕಾವು ಕಳೆದುಕೊಳ್ಳದಿರಲು ಇರುವ ಪ್ರಮುಖ ಅಂಶಗಳಲ್ಲಿ ಈ ಗ್ರಂಥಾಲಯಗಳೂ ಪ್ರಮುಖ ಪಾತ್ರವಹಿಸಿವೆ.


ಇದನ್ನೂ ಓದಿ: ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...