Homeಚಳವಳಿರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

ಇಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಮಕ್ಕಳಿಗೆ ದಿನವೂ ಬೆಳಗ್ಗೆ ಇಂಗ್ಲೀಷ್, ಗಣಿತ, ಸಮಾಜ, ವಿಜ್ಞಾನ, ಚಿತ್ರಕಲೆ ವಿಷಯಗಳನ್ನು ಹೇಳಿಕೊಡಲಾಗುತ್ತದೆ. ಪ್ರತಿಭಟನೆಯಲ್ಲಿ ಇಷ್ಟು ಸೇವೆ ಮಾಡಲು ಅವಕಶ ಸಿಕ್ಕಿದೆ. ಅಷ್ಟು ಸಾಕು- ರಮಣೀಕ್

- Advertisement -
- Advertisement -

ಹೋರಾಟ ಸಂಘಟಿತವಾಗಲು ಯಾಕೆ ಹೋರಾಟ ನಡೆಸುತ್ತಿದ್ದೇವೆ ಎಂಬುದರ ಅರಿವು ಹೆಚ್ಚು ಅವಶ್ಯಕತೆಯಿದೆ. ಅಂತಹ ಒಂದು ಹೋರಾಟ ಗಟ್ಟಿಯಾಗಿ ನಿಲ್ಲಲು ಅದಕ್ಕೆ ಸಂವಿಧಾನ ನೀಡಿರುವ ಹಕ್ಕುಗಳ ಅರಿವಿರಬೇಕು. ಈ ಅರಿವು ತುಂಬುವ ಕೆಲಸವನ್ನು ಕಿಸಾನ್ ಗ್ರಂಥಾಲಯಗಳು ಮಾಡುತ್ತಿವೆ ಎನ್ನುತ್ತಾರೆ ಪಂಜಾಬ್‌ನ ನರೇಶ್.

ಹೌದು, ಐತಿಹಾಸಿಕ ರೈತ ಹೋರಾಟದಲ್ಲಿ ಸಿಂಘು ಗಡಿಯಲ್ಲಿ ಒಂದರಲ್ಲೇ ಪುಸ್ತಕಗಳ ಮಳಿಗೆಗಳನ್ನು ಇಟ್ಟುಕೊಂಡು, ಪ್ರತಿಭಟನಾಕಾರರಿಗೆ ಉಚಿತವಾಗಿ ಓದಲು ನೀಡುತ್ತಿರುವ ನೂರಕ್ಕೂ ಹೆಚ್ಚು ಗ್ರಂಥಾಲಯಗಳಿವೆ. ಇವುಗಳು ರೈತ ಹೋರಾಟದಲ್ಲಿ ಭಾಗವಹಿಸಿರುವವರಿಗೆ ಜ್ಞಾನದ ಎರಕ ಹೊಯ್ಯುತ್ತಿವೆ.

ಕಿಸಾನ್ ಹೋರಾಟದಲ್ಲಿ ಅಮೆರಿಕಾ ಮೂಲದ power in education international org. ಎಂಬ ಸಂಘಟನೆ ತಮ್ಮ ಗ್ರಂಥಾಲಯದಲ್ಲಿ ಸಂವಿಧಾನದ ಕುರಿತು ತಿಳವಳಿಕೆ ಮೂಡಿಸುವ ಕೆಲಸಕ್ಕೆ ಕೈ ಹಾಕಿದೆ. ಪಂಜಾಬಿ, ಹಿಂದಿ, ಆಂಗ್ಲ ಭಾಷೆಗಳಲ್ಲಿ ಸಂವಿಧಾನದ ಪ್ರತಿಗಳನ್ನು, ಪುಸ್ತಕಗಳನ್ನು ಓದಲು ನೀಡುತ್ತಿವೆ.

ಇದನ್ನೂ ಓದಿ: ಖಾಲಿಸ್ತಾನಿ, ಅಲ್‌ಖೈದ ಭಯೋತ್ಪಾದಕರನ್ನು ಹುಡುಕಿಕೊಡಿ: ದೆಹಲಿಯಲ್ಲಿ ಪೋಸ್ಟರ್ ಅಂಟಿಸಿದ ಪೊಲೀಸರು!

“ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಬರೆದಿರುವ ಸಂವಿಧಾನದ ಓದು ನಮ್ಮ ಹಕ್ಕುಗಳನ್ನು ನಮಗೆ ಮತ್ತಷ್ಟು ತಿಳಿಯಲು ಸಹಾಯಕವಾಗಿದೆ. ಹಾಗಾಗಿ ಸಂವಿಧಾನದ ಓದು ಅತೀ ಅವಶ್ಯಕವಾಗಿದೆ. ನಾವು ಸಿಂಘು ಗಡಿಯಲ್ಲಿ ಇರುವುದರಿಂದ, ಇಲ್ಲಿ ಪಂಜಾಬಿ ಮಾತನಾಡುವವರ ಸಂಖ್ಯೆ ಹೆಚ್ಚಿರುವ ಕಾರಣ ಪಂಜಾಬಿ ಭಾಷೆಯಲ್ಲಿರುವ ಸಂವಿಧಾನದ ಪ್ರತಿಗಳನ್ನು ಇಡಲಾಗಿದೆ. ಇಲ್ಲೇ ಓದುವವರಿಗೆ ಉಚಿತವಾಗಿ ನೀಡಲಾಗುತ್ತದೆ. ಟ್ಯ್ರಾಲಿಯಲ್ಲಿ ಇರುವವರಿಗೆ 2 ದಿನಗಳು ನೀಡಲಾಗುತ್ತದೆ. ಕೊಂಡುಕೊಳ್ಳುವವರಿಗೆ ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ನರೇಶ್ ಮಾಹಿತಿ ನೀಡಿದ್ದಾರೆ.

ಇದರ ಜೊತೆಗೆ ಅಂಬೇಡ್ಕರ್‌ ಸ್ಟೂಡೆಂಟ್ಸ್ ಅಸೋಸಿಯೇಷನ್ ಕೂಡ ಸಂವಿಧಾನ ಮತ್ತು ಅಂಬೇಡ್ಕರ್ ಕುರಿತ ಪುಸ್ತಕಗಳನ್ನು ಜನರಿಗೆ ನೀಡುತ್ತಿದ್ದು. ತಮ್ಮ ಟೆಂಟ್ ಹೊರಗೆಯೂ ಈ ವಿಚಾರಗಳ ಕುರಿತು ಹಲವು ಮಾಹಿತಿ ನೀಡುತ್ತಿವೆ. ಜೊತೆಗೆ ಪ್ರತಿದಿನ ವಿದ್ಯಾರ್ಥಿಗಳು ಚರ್ಚೆಗಳನ್ನು ನಡೆಸುತ್ತಾರೆ.

ಇದನ್ನೂ ಓದಿ:  ‘ಪಿಎಂಒ ಮಾತ್ರವಲ್ಲ ಎನ್‌ಎಸ್‌ಎ ಕೂಡ ಅರ್ನಾಬ್ ಜೊತೆಯಿತ್ತು’: ಅರ್ನಾಬ್ ವಾಟ್ಸಾಪ್ ಲೀಕ್ ಸಂಪೂರ್ಣ ವಿವರ

ಸಿಂಘು ಗಡಿಯಲ್ಲಿರುವ ಮತ್ತೊಂದು ವಿಶೇಷ ಗ್ರಂಥಾಲಯ ಸಾಂಜಿ ಸಾತ್. ಸಾಂಜಿ ಎಂದರೆ ಚರ್ಚೆ, ಸಾತ್ ಎಂದರೆ ಜೊತೆಗೆ ಎಂದರ್ಥ. ಒಟ್ಟಾಗಿ ಕುಳಿತು ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸ್ಥಳ ಇದಾಗಿದೆ. ಏಳು ಮಂದಿ ಯುವಕರು ಈ ಸಾಂಜಿ ಸಾತ್ ಎನ್ನುವ ಗ್ರಂಥಾಲಯ ಮತ್ತು ಚರ್ಚಾ ಸ್ಥಳವನ್ನು ಆರಂಭಿಸಿದ್ದಾರೆ.

ಮೊದಲಿಗೆ ಚಿಕ್ಕದಾಗಿ ಗ್ರಂಥಾಲಯ ಆರಂಭ ಮಾಡಿದ್ದ ಈ ತಂಡಕ್ಕೆ, ಪುಸ್ತಕಗಳು, ಹೆಚ್ಚು ದೇಣಿಗೆಯಿಂದ ಇದು ಇಂದು ದೊಡ್ಡ ಗ್ರಂಥಾಲಯವಾಗಿ ಮಾರ್ಪಟ್ಟಿದೆ. ಈ ಸ್ಥಳದಲ್ಲಿ ಪುಸ್ತಕ ಪ್ರೇಮಿಗಳು, ಚರ್ಚೆಗಳಲ್ಲಿ ಭಾಗವಹಿಸುವವರು, ಕ್ರಾಂತಿ ಗೀತೆಗಳನ್ನು ಹಾಡುವವರು, ಬರೆಯುವವರು, ಕೇಳಿಸಿಕೊಳ್ಳುವವರು ಮತ್ತು ಮಕ್ಕಳು ಎಲ್ಲರೂ ಭಾಗವಹಿಸುತ್ತಾರೆ.

“ಪ್ರತಿಭಟನೆಯಲ್ಲಿ ಭಾಗವಹಿಸಿರುವ ಸುಮಾರು 100ಕ್ಕೂ ಹೆಚ್ಚು ಮಕ್ಕಳಿಗೆ ದಿನವೂ ಬೆಳಗ್ಗೆ ಇಂಗ್ಲೀಷ್, ಗಣಿತ, ಸಮಾಜ, ವಿಜ್ಞಾನ, ಚಿತ್ರಕಲೆ ವಿಷಯಗಳನ್ನು ಹೇಳಿಕೊಡಲಾಗುತ್ತದೆ. ಸಂಜೆ 50-60 ಮಂದಿ, ‘ಪ್ರತಿಭಟನೆ ಯಾವ ರೀತಿ ನಡೆಯುತ್ತಿದೆ. ಯಾವ ರೀತಿ ನಡೆಸಬಹುದು’ ಎಂಬ ವಿಚಾರಗಳ ಜೊತೆಗೆ ಸೈದ್ಧಾಂತಿಕ ವಿಚಾರಗಳನ್ನು ಚರ್ಚೆ ಮಾಡಲಾಗುತ್ತದೆ” ಎಂದು ಸಾಂಜಿ ಸಾತ್‌ ನೋಡಿಕೊಳ್ಳುವ ರಮಣೀಕ್ ಹೇಳುತ್ತಾರೆ.

ಇದನ್ನೂ ಓದಿ: ರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ಸಾಂಜಿ ಸಾತ್ ಕಟ್ಟಿದ ಬಗ್ಗೆ ಮಾತನಾಡಿದ ರಮಣೀಕ್, “ಪ್ರತಿಭಟನೆಗೆ ಬೆಂಬಲ ನೀಡಲು ಬಂದ ನಮ್ಮ ಏಳು ಜನರ ತಂಡ, ಯಾವ ರೀತಿಯಲ್ಲಿ ಇಲ್ಲಿ ಸೇವೆ ಮಾಡುವುದು ಎಂದು ಯೋಚಿಸುತ್ತಿದ್ದೇವು. ಆಗ ನಮಗೆ ಗ್ರಂಥಾಲಯ ಇಡುವ ಯೋಜನೆ ಹೊಳೆಯಿತು. ಕೆಲವು ಪುಸ್ತಕಗಳಿಂದ ಶುರುವಾದ ಈ ಗ್ರಂಥಾಲಯ ಇಂದು ಸಾಂಜಿ ಸಾತ್ ಆಗಿ ಮಾರ್ಪಟ್ಟಿದೆ. ಇಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಮಕ್ಕಳಿಗೆ ದಿನವೂ ಬೆಳಗ್ಗೆ ಇಂಗ್ಲೀಷ್, ಗಣಿತ, ಸಮಾಜ, ವಿಜ್ಞಾನ, ಚಿತ್ರಕಲೆ ವಿಷಯಗಳನ್ನು ಹೇಳಿಕೊಡಲಾಗುತ್ತದೆ. ಪ್ರತಿಭಟನೆಯಲ್ಲಿ ಇಷ್ಟು ಸೇವೆ ಮಾಡಲು ಅವಕಶ ಸಿಕ್ಕಿದೆ. ಅಷ್ಟು ಸಾಕು” ಎನ್ನುತ್ತಾರೆ.

ಗ್ರಂಥಾಲಯಗಳಲ್ಲಿ ಹಲವು ಪುಸ್ತಕಗಳನ್ನು ಓದುಗರಿಗೆ ಉಚಿತವಾಗಿ ಹಂಚಲಾಗುತ್ತಿದೆ. ಈಗಾಗಲೇ ರೈತ ಹೋರಾಟದ ಕುರಿತು ಹಲವು ಪುಸ್ತಕಗಳು ಪ್ರಕಟವಾಗಿದ್ದು, ಇವುಗಳನ್ನು ಸ್ಟಾಲ್‌ಗಳಲ್ಲಿ ಇಡಲಾಗುತ್ತಿದೆ. ಹೊರಗಿನಿಂದ ಬಂದವರು, ಇಲ್ಲಿಯೇ ಓದುವವರಿಗೂ ಇವುಗಳನ್ನು ಹಂಚಲಾಗುತ್ತಿದೆ.

ಕೃಷಿ ಕಾನೂನುಗಳ ರದ್ದತಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ 60 ದಿನಗಳಾಗುತ್ತಾ ಬಂದರು ಇನ್ನು ತನ್ನ ಕಾವು ಕಳೆದುಕೊಳ್ಳದಿರಲು ಇರುವ ಪ್ರಮುಖ ಅಂಶಗಳಲ್ಲಿ ಈ ಗ್ರಂಥಾಲಯಗಳೂ ಪ್ರಮುಖ ಪಾತ್ರವಹಿಸಿವೆ.


ಇದನ್ನೂ ಓದಿ: ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...