Homeಚಳವಳಿರೈತ ಹೋರಾಟ: ರೈಲ್ ರೋಕೋ ಚಳವಳಿಗೆ ರಾಜ್ಯದಲ್ಲಿ ಭಾರಿ ಬೆಂಬಲ

ರೈತ ಹೋರಾಟ: ರೈಲ್ ರೋಕೋ ಚಳವಳಿಗೆ ರಾಜ್ಯದಲ್ಲಿ ಭಾರಿ ಬೆಂಬಲ

ರಾಜ್ಯದ್ಯಂತ ನಡೆದ ರೈಲ್ ರೋಕೋ ಪ್ರತಿಭಟನೆಯ ಚಿತ್ರಗಳು ಇಲ್ಲಿವೆ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ರದ್ದತಿಗೆ ಆಗ್ರಹಿಸಿ ನಡೆಯುತ್ತಿರುವ ರೈತ ಹೋರಾಟಕ್ಕೆ ಬೆಂಬಲವಾಗಿ ಇಂದು ರಾಜ್ಯದಲ್ಲಿಯೂ ರೈಲ್ ರೋಕೋ ಚಳವಳಿ ನಡೆಯಿತು. ರಾಜ್ಯದ ಬೆಂಗಳೂರು, ರಾಯಚೂರು, ದಾವಣಗೆರೆ, ಬಂಗಾರಪೇಟೆ, ತುಮಕೂರು, ಬೆಳಗಾವಿ, ವಿಜಯಪುರ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ರೈಲು ತಡೆ ಪ್ರತಿಭಟನೆ ನಡೆಸಲಾಗಿದೆ.

ರೈತ ಹೋರಾಟದ ಮುಂದಾಳತ್ಮ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚ್ ಫೆಬ್ರವರಿ 10 ರಂದು ಪತ್ರಿಕಾ ಹೇಳಿಕೆಯಲ್ಲಿ ಫೆಬ್ರವರಿ 18 ರಂದು ದೇಶಾದ್ಯಂತ ರೈಲ್ ರೊಕೋ ಚಳವಳಿ ನಡೆಸಲು ಕರೆ ನೀಡಿತ್ತು. ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ರೈಲು ತಡೆ ನಡೆಸಲು ತಿಳಿಸಲಾಗಿತ್ತು. ರೈತ ಮುಖಂಡರ ಕರೆಗೆ ರಾಜ್ಯದ ರೈತ ಸಂಘಟನೆಗಳು ಬೆಂಬಲ ನೀಡಿ ರೈಲು ತಡೆ ನಡೆಸಿ, ಕೃಷಿ ಕಾನೂನುಗಳನ್ನು ಹಿಂಪಡೆಯಲು ಆಗ್ರಹಿಸಿದ್ದಾರೆ.

ಕೃಷಿ ಕಾಯ್ದೆ ವಿರೋಧಿಸಿ ರೈತ ದಲಿತ ಕಾರ್ಮಿಕ ಐಕ್ಯ ಹೋರಾಟದ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಲ್ಲಿ 12 ಗಂಟೆಯಿಂದ ರೈಲು ತಡೆ ಚಳವಳಿ ನಡೆಸಲಾಯಿತು. ರೈಲ್ ರೋಕೋಗೆ ಪೊಲೀಸರು ಅನುಮತಿ ನೀಡದಿದ್ದಕ್ಕೆ ಪ್ರತಿಕ್ರಿಯಿಸಿದ ರೈತ ಮುಖಂಡ ಕುರುಬರೂರು ಶಾಂತಕುಮಾರ್‌, ದೇಶಾದ್ಯಂತ ರೈಲು ತಡೆಗೆ ರಾಷ್ಟ್ರೀಯ ಸಂಘಟನೆಗಳು ಕರೆ ನೀಡಿರುವಾಗ ಪೊಲೀಸರ ಅನುಮತಿ ಏಕೆ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ರಾಮಮಂದಿರಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದಕ್ಕೆ ಬೆದರಿಕೆ: ಕುಮಾರಸ್ವಾಮಿ ಆರೋಪ

ರೈಲು ತಡೆ ಚಳುವಳಿ ಭಾಗವಾಗಿ, ರಾಯಚೂರಿನಲ್ಲಿ AIUTUC ಮತ್ತು AIKKMS ಸಂಘಟನೆಯ RKS( ರೈತ ಕೃಷಿ ಕಾರ್ಮಿಕ ಸಂಘಟನೆ) ಸದಸ್ಯರು ಬೆಳಗ್ಗೆ 10 ಗಂಟೆಯಿಂದ ರೈಲು ತಡೆ ನಡೆಸಲು ರೈಲು ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಪೊಲೀಸರು ಮತ್ತು ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಹೋರಾಟಗಾರರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದರು.

ಇತ್ತ ತುಮಕೂರಿನಲ್ಲಿಯೂ AIKKMS ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ವಿಜಯಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ದಾವಣಗೆರೆ ಜಿಲ್ಲೆಗಳಲ್ಲೂ ರೈಲು ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಕೃಷಿ ಕಾನೂನುಗಳನ್ನು ವಾಪಸ್ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದ್ದ ರೈಲ್ ರೋಕೋಗೆ ರಾಜ್ಯದಲ್ಲಿಯೂ ಭಾರಿ ಬೆಂಬಲ ವ್ಯಕ್ತವಾಗಿದೆ. ಕೆಲವು ಜಿಲ್ಲೆಗಳಲ್ಲಿ ಬೆಳಗ್ಗೆ 10 ಗಂಟೆಗೆ ಪ್ರತಿಭಟನೆ ಆರಂಭವಾದರೆ, ಮತ್ತೆ ಕೆಲವು ಕಡೆ 12 ಗಂಟೆಗೆ ಚಳವಳಿ ಆರಂಭವಾಗಿತ್ತು.

ಒಟ್ಟಾರೆ, ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕೆಂದು ಕಳೆದ 85 ದಿನಗಳಿಂದ ನಡೆಯುತ್ತಿರುವ ರೈತ ಹೋರಾಟಕ್ಕೆ ರಾಜ್ಯದ ರೈತರು ಸಾಥ್ ನೀಡುತ್ತಿದ್ದಾರೆ.

ದಾವಣಗೆರೆಯಲ್ಲಿ ರೈಲ್ ರೋಕೋ ಚಳವಳಿ
ವಿಜಯಪುರದಲ್ಲಿ ರೈಲ್ ರೋಕೋ ಚಳವಳಿ
ಬಂಗಾರಪೇಟೆಯಲ್ಲಿ ರೈಲ್ ರೋಕೋ ಪ್ರತಿಭಟನೆ
ರಾಯಚೂರಿನಲ್ಲಿ ರೈಲ್ ರೋಕೋ ಪ್ರತಿಭಟನೆ
ಶಿವಮೊಗ್ಗದಲ್ಲಿ ರೈಲ್ ರೋಕೋ ಚಳವಳಿ

ಇದನ್ನೂ ಓದಿ: ರೈತ ಹೋರಾಟದ ಆಕ್ರೋಶ: ಪಂಜಾಬ್‌ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...