Homeಚಳವಳಿರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ಈ ಆರು ತಿಂಗಳಲ್ಲಿ ರೈತರು ಅನುಭವಿಸಿದ್ದು ಕೇವಲ ಸರ್ಕಾರದ ಕಿರುಕುಳವಲ್ಲ, ಜೊತೆಗೆ ಪ್ರಕೃತಿ ನೀಡಿದ ಸವಾಲುಗಳನ್ನು ಎದುರಿಸಿದ್ದಾರೆ.

- Advertisement -
- Advertisement -

“ರೈತ ಹೋರಾಟ…” ಕಳೆದ 6 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಅನ್ನದಾತರ ಹೋರಾಟದ ಕುರಿತು ಇಲ್ಲಿಯವರೆಗೆ ಸರ್ಕಾರ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಚುನಾವಣೆ ಹಿನ್ನೆಲೆ ಮಾತುಕತೆಗಳನ್ನು ನಿಲ್ಲಿಸಿದ್ದ ಕೇಂದ್ರ ಮತ್ತೆ ಮಾತುಕತೆಗೆ ಮುಂದಾಗಿಲ್ಲ. ಇವೆಲ್ಲದರ ನಡುವೆ ದೇಶದಲ್ಲೇ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರೂ ಗಡಿಗಳಲ್ಲಿ ಸೋಂಕಿನ ಸುಳಿವಿಲ್ಲ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನವೆಂವರ್ 26, 27 ರಂದು ದೆಹಲಿ ಚಲೋಗೆ ಪಂಜಾಬ್‌ ರೈತರ ನೇತೃತ್ವದಲ್ಲಿ ದೇಶದ ರೈತರು ಕರೆ ನೀಡಿದ್ದರು. ಅಂದಿನಿಂದ ದೆಹಲಿಯ ಗಡಿಗಳನ್ನು ಸುತ್ತುವರೆದಿರುವ ರೈತರು ಈ ಕರಾಳ ಕಾನೂನುಗಳ ರದ್ದತಿಗೆ ಆಗ್ರಹಿಸಿದ್ದಾರೆ. ಜೊತೆಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಜಾರಿ ಮಾಡಲು ಆಗ್ರಹಿಸಿದ್ದಾರೆ.

ಈ ಆರು ತಿಂಗಳಲ್ಲಿ ರೈತರು ಅನುಭವಿಸಿದ್ದು ಕೇವಲ ಸರ್ಕಾರದ ಕಿರುಕುಳವಲ್ಲ, ಜೊತೆಗೆ ಪ್ರಕೃತಿ ನೀಡಿದ ಸವಾಲುಗಳನ್ನು ಎದುರಿಸಿದ್ದಾರೆ. ತೀವ್ರ ಚಳಿ, ಮಳೆ, ಬಿಸಿಲು ಅದರ ಜೊತೆಗೆ ಕೊರೊನಾ ಸಾಂಕ್ರಾಮಿಕ ರೋಗ ಕೂಡ. ಇಡೀ ದೇಶದಲ್ಲಿ ಕೊರೊನಾ ಸೋಂಕು ಹರಡಿರುವ ಮಧ್ಯೆಯೇ ಈ ಸಾವಿರಾರು ಮಂದಿ ಒಂದೆಡೆ ಇರುವ ಸ್ಥಳದಲ್ಲಿ ಸೋಂಕು ಇಲ್ಲವೆ ಎಂಬ ಪ್ರಶ್ನೆ ಸಹಜವಾಗಿಯೇ ಹುಟ್ಟುತ್ತದೆ.

ಇದನ್ನೂ ಓದಿ: ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ – ಫೇಕ್‌, ಸುಳ್ಳು ಮತ್ತು ತಿರುಚುವಿಕೆಯೇ `ಜೀವಾಳ’

ಆದರೆ, ಅಚ್ಚರಿಯೆಂದರೆ ಇಲ್ಲಿ ಕೊರೊನಾ ಸೋಂಕಿತ ಪ್ರಕರನಗಳು ವರದಿಯಾಗಿಲ್ಲ. ಇದಕ್ಕೆ ಮೂಲ ಕಾರಣ ಇಲ್ಲಿ ಪ್ರತಿಭಟನೆ ಆರಂಭವಾದಾಗಿನಿಂದ ಇರುವ ಆಸ್ಪತ್ರೆಗಳು. ಹೌದು, ಪ್ರತಿಭಟನಾ ನಿರತ ಸಿಂಘು, ಟಿಕ್ರಿ, ಗಾಜಿಪುರ್‌, ಶಹಾಜಾನ್‌ಪುರ ಗಡಿಗಳಲ್ಲಿ ನೂರಾರು ಮೆಡಿಕಲ್ ಕ್ಯಾಂಪ್‌ಗಳಿವೆ. ಜೊತೆಗೆ ಎಲ್ಲಾ ಸೌಲಭ್ಯಗಳಿರುವ 24 ಗಂಟೆಗಳು ಕಾರ್ಯನಿರ್ವಹಿಸುವ ಆಸ್ಪತ್ರೆಗಳಿವೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ, ಕಳೆದ ನವೆಂಬರ್‌ ತಿಂಗಳಿನಿಂದ ಸಿಂಘು ಗಡಿಯಲ್ಲಿರುವ ಮಾರುತಿ ಮಾನವ್, ’ಇಲ್ಲಿ ಯಾವುದೇ ಕೊರೊನಾ ಸೋಂಕಿತರು ಪತ್ತೆಯಾಗಿಲ್ಲ. ನಾನು ಇಲ್ಲಿಯೇ ಇದ್ದೇನೆ. ಜನರಲ್ಲಿ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಮೆಡಿಕಲ್ ಕ್ಯಾಂಪ್‌ಗಳು ಇರುವುದರಿಂದ ಸಣ್ಣ ಪುಟ್ಟ ಜ್ವರ ಕಾಣಿಸಿಕೊಂಡ ತಕ್ಷಣವೇ ಚಿಕಿತ್ಸೆ ಪಡೆಯಲಾಗುತ್ತದೆ’ ಎಂದಿದ್ದಾರೆ.

’ಮೇ 26 ಕ್ಕೆ ಕರಾಳ ದಿನ ಆಚರಣೆಗೆ ಕರೆ ನೀಡಿರುವ ಹಿನ್ನೆಲೆ, ಕಳೆದೆರಡು ದಿನಗಳಿಂದ ರೈತರು ಗಡಿಯಲ್ಲಿ ಹೆಚ್ಚಾಗುತ್ತಿದ್ದಾರೆ. ಎರಡು ವೇದಿಕೆಗಳ ಬಳಿ ಮೊದಲು ಇದ್ದಷ್ಟೇ ಜನರು ಈಗಲೂ ಇದ್ದಾರೆ. 26 ರ ವೇಳೆಗೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಟ್ಯ್ರಾಲಿಗಳಿಗಿಂತ ಟೆಂಟ್‌ಗಳು ಹೆಚ್ಚಾಗಿವೆ’ ಎಂದಿದ್ದಾರೆ.

ಇದನ್ನೂ ಓದಿ: “ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

ಇನ್ನು “ರಾಜಸ್ಥಾನದ ಶಹಜಾನ್‌ಪುರ ಗಡಿಗೆ ರಾಜಸ್ಥಾನದಿಂದ ಸಾವಿರಾರು ರೈತರು ಕಪ್ಪು ದಿನ ಆಚರಣೆಗೆ ಪ್ರತಿಭಟನಾ ಸ್ಥಳಕ್ಕೆ ಬರುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದೆ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಇಲ್ಲಿಗೆ ಬಂದು ರೈತರಲ್ಲಿ ಹುಮ್ಮಸ್ಸು ತುಂಬಿದ್ದಾರೆ. ಈ ಬಾರಿಯ ಕಪ್ಪು ದಿನ ಆಚರಣೆಯನ್ನು ಸರ್ಕಾರ ನೆನಪು ಇಟ್ಟುಕೊಳ್ಳುತ್ತದೆ” ಎಂದು ಸ್ವರಾಜ್ ಇಂಡಿಯಾದ ರಾಜೀವ್ ಅವರು ನಾನುಗೌರಿ.ಕಾಂ ಜೊತೆಗೆ ಹಂಚಿಕೊಂಡಿದ್ದಾರೆ.

ಶಹಜಾನ್‌ಪುರ ಗಡಿಯಲ್ಲಿ ರೈತ ಮುಖಂಡರು

ಅತಿ ಹೆಚ್ಚು ವಿಸ್ತೀರ್ಣ ಹೊಂದಿರುವ ಟಿಕ್ರಿ ಗಡಿಯಲ್ಲಿಯೂ ರೈತರ ಸಂಖ್ಯೆ ಹೆಚ್ಚಾಗುತ್ತಿದೆ. ಭಾನುವಾರ ಪಂಜಾಬ್‌ನ ಸಾಗ್ರೂರ್‌ನಲ್ಲಿರುವ ಖಾನೌರಿ ಪ್ರತಿಭಟನಾ ಸ್ಥಳದಿಂದ ಹೊರಟ ಸಾವಿರಾರು ಜನರು ಸೇರಿಕೊಂಡಿದ್ದಾರೆ. ಟಿಕ್ರಿ ಗಡಿಯಲ್ಲಿನ ಪಕೋಡಾ ಚೌಕ್‌ನಲ್ಲಿರುವ ಭಾರತೀಯ ಕಿಸಾನ್ ಯೂನಿಯನ್ ಉಗ್ರಾಹನ್ ಸಂಘಟನೆಯ ಸಾವಿರಾರು ಮಂದಿ ಗಡಿಯನ್ನು ಸೇರಿಕೊಂಡಿದ್ದಾರೆ.

ಟಿಕ್ರಿಗಡಿಯಲ್ಲಿ ಜನ ನಾಯಕ್‌ ದೇವಿಲಾಲ್‌ ಕಿಸಾನ್‌ ಹೆಸರಿನ 40 ಬೆಡ್‌ಗಳಿರುವ ಆಸ್ಪತ್ರೆಯನ್ನು ಆರಂಭಿಸಲಾಗಿದೆ. ಇಂಡಿಯನ್‌ ನ್ಯಾಷನಲ್‌ ಲೋಕ್‌ ದಳ ವತಿಯಿಂದ ಆರಂಭವಾದ ಈ ಆಸ್ಪತ್ರೆ ಎರಡು ಜನರಲ್‌ ವಾರ್ಡ್‌, ಒಂದು ಮಹಿಳಾ ವಾರ್ಡ್‌ ಒಳಗೊಂಡಿದೆ.

ಪ್ರತಿಭಟನಾ ನಿರತ ಗಡಿಗಳು ಈಗ ಮತ್ತೆ ರೈತರಿಂದ ತುಂಬುತ್ತಿವೆ. ಹೋರಾಟಕ್ಕೆ 6 ತಿಂಗಳು ತುಂಬುತ್ತಿರುವ ಹಿನ್ನೆಲೆ ಸಂಯುಕ್ತ ಕಿಸಾನ್ ಮೋರ್ಚಾ ಕಪ್ಪು ದಿನಕ್ಕೆ ಕರೆ ನೀಡಿದೆ. ಸಾವಿರಾರು ರೈತರು ತಮ್ಮ ಹಳ್ಳಿಗಳಿಂದ ದೆಹಲಿಯ ಗಡಿಗಳನ್ನು ಸೇರಿಕೊಳ್ಳುತ್ತಿದ್ದಾರೆ.

ಕೊರೊನಾ ಲಾಕ್‌ಡೌನ್ ನೆಪದಲ್ಲಿ ರೈತರನ್ನು ಗಡಿಗಳಿಂದ ಎತ್ತಂಗಡಿ ಮಾಡಲು ಸರ್ಕಾರ ಪ್ರಯತ್ನ ಪಡುತ್ತಿದೆ. ಆದರೆ, ಗಡಿಗಳಲ್ಲಿ ಇಲ್ಲಿಯವರೆಗೆ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ರೈತರು ವಹಿಸಿರುವ ಮುನ್ನೆಚ್ಚರಿಕೆ ಮತ್ತು ದೇಶ-ವಿದೇಶಗಳ ರೈತರು ತೆಗೆದುಕೊಳ್ಳುತ್ತಿರುವ ಆರೈಕೆಯಿಂದಾಗಿ ಅಂತಹ ಕೇಸ್‌ಗಳು ಇಲ್ಲಿ ಕಂಡು ಬಂದಿಲ್ಲ ಎಂದು ವೈದ್ಯರು ಹೇಳಿದ್ದಾರೆ.


ಇದನ್ನೂ ಓದಿ: ಮೇ 26 ಕ್ಕೆ ಪ್ರತಿಭಟನಾ ಗಡಿಗಳಲ್ಲಿ ಕರಾಳ ದಿನ: ದೆಹಲಿಗೆ ಹೊರಟ ಅನ್ನದಾತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...