Homeಚಳವಳಿರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ಈ ಆರು ತಿಂಗಳಲ್ಲಿ ರೈತರು ಅನುಭವಿಸಿದ್ದು ಕೇವಲ ಸರ್ಕಾರದ ಕಿರುಕುಳವಲ್ಲ, ಜೊತೆಗೆ ಪ್ರಕೃತಿ ನೀಡಿದ ಸವಾಲುಗಳನ್ನು ಎದುರಿಸಿದ್ದಾರೆ.

- Advertisement -
- Advertisement -

“ರೈತ ಹೋರಾಟ…” ಕಳೆದ 6 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಅನ್ನದಾತರ ಹೋರಾಟದ ಕುರಿತು ಇಲ್ಲಿಯವರೆಗೆ ಸರ್ಕಾರ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಚುನಾವಣೆ ಹಿನ್ನೆಲೆ ಮಾತುಕತೆಗಳನ್ನು ನಿಲ್ಲಿಸಿದ್ದ ಕೇಂದ್ರ ಮತ್ತೆ ಮಾತುಕತೆಗೆ ಮುಂದಾಗಿಲ್ಲ. ಇವೆಲ್ಲದರ ನಡುವೆ ದೇಶದಲ್ಲೇ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರೂ ಗಡಿಗಳಲ್ಲಿ ಸೋಂಕಿನ ಸುಳಿವಿಲ್ಲ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನವೆಂವರ್ 26, 27 ರಂದು ದೆಹಲಿ ಚಲೋಗೆ ಪಂಜಾಬ್‌ ರೈತರ ನೇತೃತ್ವದಲ್ಲಿ ದೇಶದ ರೈತರು ಕರೆ ನೀಡಿದ್ದರು. ಅಂದಿನಿಂದ ದೆಹಲಿಯ ಗಡಿಗಳನ್ನು ಸುತ್ತುವರೆದಿರುವ ರೈತರು ಈ ಕರಾಳ ಕಾನೂನುಗಳ ರದ್ದತಿಗೆ ಆಗ್ರಹಿಸಿದ್ದಾರೆ. ಜೊತೆಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಜಾರಿ ಮಾಡಲು ಆಗ್ರಹಿಸಿದ್ದಾರೆ.

ಈ ಆರು ತಿಂಗಳಲ್ಲಿ ರೈತರು ಅನುಭವಿಸಿದ್ದು ಕೇವಲ ಸರ್ಕಾರದ ಕಿರುಕುಳವಲ್ಲ, ಜೊತೆಗೆ ಪ್ರಕೃತಿ ನೀಡಿದ ಸವಾಲುಗಳನ್ನು ಎದುರಿಸಿದ್ದಾರೆ. ತೀವ್ರ ಚಳಿ, ಮಳೆ, ಬಿಸಿಲು ಅದರ ಜೊತೆಗೆ ಕೊರೊನಾ ಸಾಂಕ್ರಾಮಿಕ ರೋಗ ಕೂಡ. ಇಡೀ ದೇಶದಲ್ಲಿ ಕೊರೊನಾ ಸೋಂಕು ಹರಡಿರುವ ಮಧ್ಯೆಯೇ ಈ ಸಾವಿರಾರು ಮಂದಿ ಒಂದೆಡೆ ಇರುವ ಸ್ಥಳದಲ್ಲಿ ಸೋಂಕು ಇಲ್ಲವೆ ಎಂಬ ಪ್ರಶ್ನೆ ಸಹಜವಾಗಿಯೇ ಹುಟ್ಟುತ್ತದೆ.

ಇದನ್ನೂ ಓದಿ: ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ – ಫೇಕ್‌, ಸುಳ್ಳು ಮತ್ತು ತಿರುಚುವಿಕೆಯೇ `ಜೀವಾಳ’

ಆದರೆ, ಅಚ್ಚರಿಯೆಂದರೆ ಇಲ್ಲಿ ಕೊರೊನಾ ಸೋಂಕಿತ ಪ್ರಕರನಗಳು ವರದಿಯಾಗಿಲ್ಲ. ಇದಕ್ಕೆ ಮೂಲ ಕಾರಣ ಇಲ್ಲಿ ಪ್ರತಿಭಟನೆ ಆರಂಭವಾದಾಗಿನಿಂದ ಇರುವ ಆಸ್ಪತ್ರೆಗಳು. ಹೌದು, ಪ್ರತಿಭಟನಾ ನಿರತ ಸಿಂಘು, ಟಿಕ್ರಿ, ಗಾಜಿಪುರ್‌, ಶಹಾಜಾನ್‌ಪುರ ಗಡಿಗಳಲ್ಲಿ ನೂರಾರು ಮೆಡಿಕಲ್ ಕ್ಯಾಂಪ್‌ಗಳಿವೆ. ಜೊತೆಗೆ ಎಲ್ಲಾ ಸೌಲಭ್ಯಗಳಿರುವ 24 ಗಂಟೆಗಳು ಕಾರ್ಯನಿರ್ವಹಿಸುವ ಆಸ್ಪತ್ರೆಗಳಿವೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ, ಕಳೆದ ನವೆಂಬರ್‌ ತಿಂಗಳಿನಿಂದ ಸಿಂಘು ಗಡಿಯಲ್ಲಿರುವ ಮಾರುತಿ ಮಾನವ್, ’ಇಲ್ಲಿ ಯಾವುದೇ ಕೊರೊನಾ ಸೋಂಕಿತರು ಪತ್ತೆಯಾಗಿಲ್ಲ. ನಾನು ಇಲ್ಲಿಯೇ ಇದ್ದೇನೆ. ಜನರಲ್ಲಿ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಮೆಡಿಕಲ್ ಕ್ಯಾಂಪ್‌ಗಳು ಇರುವುದರಿಂದ ಸಣ್ಣ ಪುಟ್ಟ ಜ್ವರ ಕಾಣಿಸಿಕೊಂಡ ತಕ್ಷಣವೇ ಚಿಕಿತ್ಸೆ ಪಡೆಯಲಾಗುತ್ತದೆ’ ಎಂದಿದ್ದಾರೆ.

’ಮೇ 26 ಕ್ಕೆ ಕರಾಳ ದಿನ ಆಚರಣೆಗೆ ಕರೆ ನೀಡಿರುವ ಹಿನ್ನೆಲೆ, ಕಳೆದೆರಡು ದಿನಗಳಿಂದ ರೈತರು ಗಡಿಯಲ್ಲಿ ಹೆಚ್ಚಾಗುತ್ತಿದ್ದಾರೆ. ಎರಡು ವೇದಿಕೆಗಳ ಬಳಿ ಮೊದಲು ಇದ್ದಷ್ಟೇ ಜನರು ಈಗಲೂ ಇದ್ದಾರೆ. 26 ರ ವೇಳೆಗೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಟ್ಯ್ರಾಲಿಗಳಿಗಿಂತ ಟೆಂಟ್‌ಗಳು ಹೆಚ್ಚಾಗಿವೆ’ ಎಂದಿದ್ದಾರೆ.

ಇದನ್ನೂ ಓದಿ: “ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

ಇನ್ನು “ರಾಜಸ್ಥಾನದ ಶಹಜಾನ್‌ಪುರ ಗಡಿಗೆ ರಾಜಸ್ಥಾನದಿಂದ ಸಾವಿರಾರು ರೈತರು ಕಪ್ಪು ದಿನ ಆಚರಣೆಗೆ ಪ್ರತಿಭಟನಾ ಸ್ಥಳಕ್ಕೆ ಬರುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದೆ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಇಲ್ಲಿಗೆ ಬಂದು ರೈತರಲ್ಲಿ ಹುಮ್ಮಸ್ಸು ತುಂಬಿದ್ದಾರೆ. ಈ ಬಾರಿಯ ಕಪ್ಪು ದಿನ ಆಚರಣೆಯನ್ನು ಸರ್ಕಾರ ನೆನಪು ಇಟ್ಟುಕೊಳ್ಳುತ್ತದೆ” ಎಂದು ಸ್ವರಾಜ್ ಇಂಡಿಯಾದ ರಾಜೀವ್ ಅವರು ನಾನುಗೌರಿ.ಕಾಂ ಜೊತೆಗೆ ಹಂಚಿಕೊಂಡಿದ್ದಾರೆ.

ಶಹಜಾನ್‌ಪುರ ಗಡಿಯಲ್ಲಿ ರೈತ ಮುಖಂಡರು

ಅತಿ ಹೆಚ್ಚು ವಿಸ್ತೀರ್ಣ ಹೊಂದಿರುವ ಟಿಕ್ರಿ ಗಡಿಯಲ್ಲಿಯೂ ರೈತರ ಸಂಖ್ಯೆ ಹೆಚ್ಚಾಗುತ್ತಿದೆ. ಭಾನುವಾರ ಪಂಜಾಬ್‌ನ ಸಾಗ್ರೂರ್‌ನಲ್ಲಿರುವ ಖಾನೌರಿ ಪ್ರತಿಭಟನಾ ಸ್ಥಳದಿಂದ ಹೊರಟ ಸಾವಿರಾರು ಜನರು ಸೇರಿಕೊಂಡಿದ್ದಾರೆ. ಟಿಕ್ರಿ ಗಡಿಯಲ್ಲಿನ ಪಕೋಡಾ ಚೌಕ್‌ನಲ್ಲಿರುವ ಭಾರತೀಯ ಕಿಸಾನ್ ಯೂನಿಯನ್ ಉಗ್ರಾಹನ್ ಸಂಘಟನೆಯ ಸಾವಿರಾರು ಮಂದಿ ಗಡಿಯನ್ನು ಸೇರಿಕೊಂಡಿದ್ದಾರೆ.

ಟಿಕ್ರಿಗಡಿಯಲ್ಲಿ ಜನ ನಾಯಕ್‌ ದೇವಿಲಾಲ್‌ ಕಿಸಾನ್‌ ಹೆಸರಿನ 40 ಬೆಡ್‌ಗಳಿರುವ ಆಸ್ಪತ್ರೆಯನ್ನು ಆರಂಭಿಸಲಾಗಿದೆ. ಇಂಡಿಯನ್‌ ನ್ಯಾಷನಲ್‌ ಲೋಕ್‌ ದಳ ವತಿಯಿಂದ ಆರಂಭವಾದ ಈ ಆಸ್ಪತ್ರೆ ಎರಡು ಜನರಲ್‌ ವಾರ್ಡ್‌, ಒಂದು ಮಹಿಳಾ ವಾರ್ಡ್‌ ಒಳಗೊಂಡಿದೆ.

ಪ್ರತಿಭಟನಾ ನಿರತ ಗಡಿಗಳು ಈಗ ಮತ್ತೆ ರೈತರಿಂದ ತುಂಬುತ್ತಿವೆ. ಹೋರಾಟಕ್ಕೆ 6 ತಿಂಗಳು ತುಂಬುತ್ತಿರುವ ಹಿನ್ನೆಲೆ ಸಂಯುಕ್ತ ಕಿಸಾನ್ ಮೋರ್ಚಾ ಕಪ್ಪು ದಿನಕ್ಕೆ ಕರೆ ನೀಡಿದೆ. ಸಾವಿರಾರು ರೈತರು ತಮ್ಮ ಹಳ್ಳಿಗಳಿಂದ ದೆಹಲಿಯ ಗಡಿಗಳನ್ನು ಸೇರಿಕೊಳ್ಳುತ್ತಿದ್ದಾರೆ.

ಕೊರೊನಾ ಲಾಕ್‌ಡೌನ್ ನೆಪದಲ್ಲಿ ರೈತರನ್ನು ಗಡಿಗಳಿಂದ ಎತ್ತಂಗಡಿ ಮಾಡಲು ಸರ್ಕಾರ ಪ್ರಯತ್ನ ಪಡುತ್ತಿದೆ. ಆದರೆ, ಗಡಿಗಳಲ್ಲಿ ಇಲ್ಲಿಯವರೆಗೆ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ರೈತರು ವಹಿಸಿರುವ ಮುನ್ನೆಚ್ಚರಿಕೆ ಮತ್ತು ದೇಶ-ವಿದೇಶಗಳ ರೈತರು ತೆಗೆದುಕೊಳ್ಳುತ್ತಿರುವ ಆರೈಕೆಯಿಂದಾಗಿ ಅಂತಹ ಕೇಸ್‌ಗಳು ಇಲ್ಲಿ ಕಂಡು ಬಂದಿಲ್ಲ ಎಂದು ವೈದ್ಯರು ಹೇಳಿದ್ದಾರೆ.


ಇದನ್ನೂ ಓದಿ: ಮೇ 26 ಕ್ಕೆ ಪ್ರತಿಭಟನಾ ಗಡಿಗಳಲ್ಲಿ ಕರಾಳ ದಿನ: ದೆಹಲಿಗೆ ಹೊರಟ ಅನ್ನದಾತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...