Homeಚಳವಳಿರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ಈ ಆರು ತಿಂಗಳಲ್ಲಿ ರೈತರು ಅನುಭವಿಸಿದ್ದು ಕೇವಲ ಸರ್ಕಾರದ ಕಿರುಕುಳವಲ್ಲ, ಜೊತೆಗೆ ಪ್ರಕೃತಿ ನೀಡಿದ ಸವಾಲುಗಳನ್ನು ಎದುರಿಸಿದ್ದಾರೆ.

- Advertisement -
- Advertisement -

“ರೈತ ಹೋರಾಟ…” ಕಳೆದ 6 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಅನ್ನದಾತರ ಹೋರಾಟದ ಕುರಿತು ಇಲ್ಲಿಯವರೆಗೆ ಸರ್ಕಾರ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಚುನಾವಣೆ ಹಿನ್ನೆಲೆ ಮಾತುಕತೆಗಳನ್ನು ನಿಲ್ಲಿಸಿದ್ದ ಕೇಂದ್ರ ಮತ್ತೆ ಮಾತುಕತೆಗೆ ಮುಂದಾಗಿಲ್ಲ. ಇವೆಲ್ಲದರ ನಡುವೆ ದೇಶದಲ್ಲೇ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರೂ ಗಡಿಗಳಲ್ಲಿ ಸೋಂಕಿನ ಸುಳಿವಿಲ್ಲ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನವೆಂವರ್ 26, 27 ರಂದು ದೆಹಲಿ ಚಲೋಗೆ ಪಂಜಾಬ್‌ ರೈತರ ನೇತೃತ್ವದಲ್ಲಿ ದೇಶದ ರೈತರು ಕರೆ ನೀಡಿದ್ದರು. ಅಂದಿನಿಂದ ದೆಹಲಿಯ ಗಡಿಗಳನ್ನು ಸುತ್ತುವರೆದಿರುವ ರೈತರು ಈ ಕರಾಳ ಕಾನೂನುಗಳ ರದ್ದತಿಗೆ ಆಗ್ರಹಿಸಿದ್ದಾರೆ. ಜೊತೆಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಜಾರಿ ಮಾಡಲು ಆಗ್ರಹಿಸಿದ್ದಾರೆ.

ಈ ಆರು ತಿಂಗಳಲ್ಲಿ ರೈತರು ಅನುಭವಿಸಿದ್ದು ಕೇವಲ ಸರ್ಕಾರದ ಕಿರುಕುಳವಲ್ಲ, ಜೊತೆಗೆ ಪ್ರಕೃತಿ ನೀಡಿದ ಸವಾಲುಗಳನ್ನು ಎದುರಿಸಿದ್ದಾರೆ. ತೀವ್ರ ಚಳಿ, ಮಳೆ, ಬಿಸಿಲು ಅದರ ಜೊತೆಗೆ ಕೊರೊನಾ ಸಾಂಕ್ರಾಮಿಕ ರೋಗ ಕೂಡ. ಇಡೀ ದೇಶದಲ್ಲಿ ಕೊರೊನಾ ಸೋಂಕು ಹರಡಿರುವ ಮಧ್ಯೆಯೇ ಈ ಸಾವಿರಾರು ಮಂದಿ ಒಂದೆಡೆ ಇರುವ ಸ್ಥಳದಲ್ಲಿ ಸೋಂಕು ಇಲ್ಲವೆ ಎಂಬ ಪ್ರಶ್ನೆ ಸಹಜವಾಗಿಯೇ ಹುಟ್ಟುತ್ತದೆ.

ಇದನ್ನೂ ಓದಿ: ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ – ಫೇಕ್‌, ಸುಳ್ಳು ಮತ್ತು ತಿರುಚುವಿಕೆಯೇ `ಜೀವಾಳ’

ಆದರೆ, ಅಚ್ಚರಿಯೆಂದರೆ ಇಲ್ಲಿ ಕೊರೊನಾ ಸೋಂಕಿತ ಪ್ರಕರನಗಳು ವರದಿಯಾಗಿಲ್ಲ. ಇದಕ್ಕೆ ಮೂಲ ಕಾರಣ ಇಲ್ಲಿ ಪ್ರತಿಭಟನೆ ಆರಂಭವಾದಾಗಿನಿಂದ ಇರುವ ಆಸ್ಪತ್ರೆಗಳು. ಹೌದು, ಪ್ರತಿಭಟನಾ ನಿರತ ಸಿಂಘು, ಟಿಕ್ರಿ, ಗಾಜಿಪುರ್‌, ಶಹಾಜಾನ್‌ಪುರ ಗಡಿಗಳಲ್ಲಿ ನೂರಾರು ಮೆಡಿಕಲ್ ಕ್ಯಾಂಪ್‌ಗಳಿವೆ. ಜೊತೆಗೆ ಎಲ್ಲಾ ಸೌಲಭ್ಯಗಳಿರುವ 24 ಗಂಟೆಗಳು ಕಾರ್ಯನಿರ್ವಹಿಸುವ ಆಸ್ಪತ್ರೆಗಳಿವೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ, ಕಳೆದ ನವೆಂಬರ್‌ ತಿಂಗಳಿನಿಂದ ಸಿಂಘು ಗಡಿಯಲ್ಲಿರುವ ಮಾರುತಿ ಮಾನವ್, ’ಇಲ್ಲಿ ಯಾವುದೇ ಕೊರೊನಾ ಸೋಂಕಿತರು ಪತ್ತೆಯಾಗಿಲ್ಲ. ನಾನು ಇಲ್ಲಿಯೇ ಇದ್ದೇನೆ. ಜನರಲ್ಲಿ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಮೆಡಿಕಲ್ ಕ್ಯಾಂಪ್‌ಗಳು ಇರುವುದರಿಂದ ಸಣ್ಣ ಪುಟ್ಟ ಜ್ವರ ಕಾಣಿಸಿಕೊಂಡ ತಕ್ಷಣವೇ ಚಿಕಿತ್ಸೆ ಪಡೆಯಲಾಗುತ್ತದೆ’ ಎಂದಿದ್ದಾರೆ.

’ಮೇ 26 ಕ್ಕೆ ಕರಾಳ ದಿನ ಆಚರಣೆಗೆ ಕರೆ ನೀಡಿರುವ ಹಿನ್ನೆಲೆ, ಕಳೆದೆರಡು ದಿನಗಳಿಂದ ರೈತರು ಗಡಿಯಲ್ಲಿ ಹೆಚ್ಚಾಗುತ್ತಿದ್ದಾರೆ. ಎರಡು ವೇದಿಕೆಗಳ ಬಳಿ ಮೊದಲು ಇದ್ದಷ್ಟೇ ಜನರು ಈಗಲೂ ಇದ್ದಾರೆ. 26 ರ ವೇಳೆಗೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಟ್ಯ್ರಾಲಿಗಳಿಗಿಂತ ಟೆಂಟ್‌ಗಳು ಹೆಚ್ಚಾಗಿವೆ’ ಎಂದಿದ್ದಾರೆ.

ಇದನ್ನೂ ಓದಿ: “ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

ಇನ್ನು “ರಾಜಸ್ಥಾನದ ಶಹಜಾನ್‌ಪುರ ಗಡಿಗೆ ರಾಜಸ್ಥಾನದಿಂದ ಸಾವಿರಾರು ರೈತರು ಕಪ್ಪು ದಿನ ಆಚರಣೆಗೆ ಪ್ರತಿಭಟನಾ ಸ್ಥಳಕ್ಕೆ ಬರುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದೆ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಇಲ್ಲಿಗೆ ಬಂದು ರೈತರಲ್ಲಿ ಹುಮ್ಮಸ್ಸು ತುಂಬಿದ್ದಾರೆ. ಈ ಬಾರಿಯ ಕಪ್ಪು ದಿನ ಆಚರಣೆಯನ್ನು ಸರ್ಕಾರ ನೆನಪು ಇಟ್ಟುಕೊಳ್ಳುತ್ತದೆ” ಎಂದು ಸ್ವರಾಜ್ ಇಂಡಿಯಾದ ರಾಜೀವ್ ಅವರು ನಾನುಗೌರಿ.ಕಾಂ ಜೊತೆಗೆ ಹಂಚಿಕೊಂಡಿದ್ದಾರೆ.

ಶಹಜಾನ್‌ಪುರ ಗಡಿಯಲ್ಲಿ ರೈತ ಮುಖಂಡರು

ಅತಿ ಹೆಚ್ಚು ವಿಸ್ತೀರ್ಣ ಹೊಂದಿರುವ ಟಿಕ್ರಿ ಗಡಿಯಲ್ಲಿಯೂ ರೈತರ ಸಂಖ್ಯೆ ಹೆಚ್ಚಾಗುತ್ತಿದೆ. ಭಾನುವಾರ ಪಂಜಾಬ್‌ನ ಸಾಗ್ರೂರ್‌ನಲ್ಲಿರುವ ಖಾನೌರಿ ಪ್ರತಿಭಟನಾ ಸ್ಥಳದಿಂದ ಹೊರಟ ಸಾವಿರಾರು ಜನರು ಸೇರಿಕೊಂಡಿದ್ದಾರೆ. ಟಿಕ್ರಿ ಗಡಿಯಲ್ಲಿನ ಪಕೋಡಾ ಚೌಕ್‌ನಲ್ಲಿರುವ ಭಾರತೀಯ ಕಿಸಾನ್ ಯೂನಿಯನ್ ಉಗ್ರಾಹನ್ ಸಂಘಟನೆಯ ಸಾವಿರಾರು ಮಂದಿ ಗಡಿಯನ್ನು ಸೇರಿಕೊಂಡಿದ್ದಾರೆ.

ಟಿಕ್ರಿಗಡಿಯಲ್ಲಿ ಜನ ನಾಯಕ್‌ ದೇವಿಲಾಲ್‌ ಕಿಸಾನ್‌ ಹೆಸರಿನ 40 ಬೆಡ್‌ಗಳಿರುವ ಆಸ್ಪತ್ರೆಯನ್ನು ಆರಂಭಿಸಲಾಗಿದೆ. ಇಂಡಿಯನ್‌ ನ್ಯಾಷನಲ್‌ ಲೋಕ್‌ ದಳ ವತಿಯಿಂದ ಆರಂಭವಾದ ಈ ಆಸ್ಪತ್ರೆ ಎರಡು ಜನರಲ್‌ ವಾರ್ಡ್‌, ಒಂದು ಮಹಿಳಾ ವಾರ್ಡ್‌ ಒಳಗೊಂಡಿದೆ.

ಪ್ರತಿಭಟನಾ ನಿರತ ಗಡಿಗಳು ಈಗ ಮತ್ತೆ ರೈತರಿಂದ ತುಂಬುತ್ತಿವೆ. ಹೋರಾಟಕ್ಕೆ 6 ತಿಂಗಳು ತುಂಬುತ್ತಿರುವ ಹಿನ್ನೆಲೆ ಸಂಯುಕ್ತ ಕಿಸಾನ್ ಮೋರ್ಚಾ ಕಪ್ಪು ದಿನಕ್ಕೆ ಕರೆ ನೀಡಿದೆ. ಸಾವಿರಾರು ರೈತರು ತಮ್ಮ ಹಳ್ಳಿಗಳಿಂದ ದೆಹಲಿಯ ಗಡಿಗಳನ್ನು ಸೇರಿಕೊಳ್ಳುತ್ತಿದ್ದಾರೆ.

ಕೊರೊನಾ ಲಾಕ್‌ಡೌನ್ ನೆಪದಲ್ಲಿ ರೈತರನ್ನು ಗಡಿಗಳಿಂದ ಎತ್ತಂಗಡಿ ಮಾಡಲು ಸರ್ಕಾರ ಪ್ರಯತ್ನ ಪಡುತ್ತಿದೆ. ಆದರೆ, ಗಡಿಗಳಲ್ಲಿ ಇಲ್ಲಿಯವರೆಗೆ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ರೈತರು ವಹಿಸಿರುವ ಮುನ್ನೆಚ್ಚರಿಕೆ ಮತ್ತು ದೇಶ-ವಿದೇಶಗಳ ರೈತರು ತೆಗೆದುಕೊಳ್ಳುತ್ತಿರುವ ಆರೈಕೆಯಿಂದಾಗಿ ಅಂತಹ ಕೇಸ್‌ಗಳು ಇಲ್ಲಿ ಕಂಡು ಬಂದಿಲ್ಲ ಎಂದು ವೈದ್ಯರು ಹೇಳಿದ್ದಾರೆ.


ಇದನ್ನೂ ಓದಿ: ಮೇ 26 ಕ್ಕೆ ಪ್ರತಿಭಟನಾ ಗಡಿಗಳಲ್ಲಿ ಕರಾಳ ದಿನ: ದೆಹಲಿಗೆ ಹೊರಟ ಅನ್ನದಾತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...