Homeಚಳವಳಿರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ಈ ಆರು ತಿಂಗಳಲ್ಲಿ ರೈತರು ಅನುಭವಿಸಿದ್ದು ಕೇವಲ ಸರ್ಕಾರದ ಕಿರುಕುಳವಲ್ಲ, ಜೊತೆಗೆ ಪ್ರಕೃತಿ ನೀಡಿದ ಸವಾಲುಗಳನ್ನು ಎದುರಿಸಿದ್ದಾರೆ.

- Advertisement -
- Advertisement -

“ರೈತ ಹೋರಾಟ…” ಕಳೆದ 6 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಅನ್ನದಾತರ ಹೋರಾಟದ ಕುರಿತು ಇಲ್ಲಿಯವರೆಗೆ ಸರ್ಕಾರ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಚುನಾವಣೆ ಹಿನ್ನೆಲೆ ಮಾತುಕತೆಗಳನ್ನು ನಿಲ್ಲಿಸಿದ್ದ ಕೇಂದ್ರ ಮತ್ತೆ ಮಾತುಕತೆಗೆ ಮುಂದಾಗಿಲ್ಲ. ಇವೆಲ್ಲದರ ನಡುವೆ ದೇಶದಲ್ಲೇ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರೂ ಗಡಿಗಳಲ್ಲಿ ಸೋಂಕಿನ ಸುಳಿವಿಲ್ಲ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನವೆಂವರ್ 26, 27 ರಂದು ದೆಹಲಿ ಚಲೋಗೆ ಪಂಜಾಬ್‌ ರೈತರ ನೇತೃತ್ವದಲ್ಲಿ ದೇಶದ ರೈತರು ಕರೆ ನೀಡಿದ್ದರು. ಅಂದಿನಿಂದ ದೆಹಲಿಯ ಗಡಿಗಳನ್ನು ಸುತ್ತುವರೆದಿರುವ ರೈತರು ಈ ಕರಾಳ ಕಾನೂನುಗಳ ರದ್ದತಿಗೆ ಆಗ್ರಹಿಸಿದ್ದಾರೆ. ಜೊತೆಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಜಾರಿ ಮಾಡಲು ಆಗ್ರಹಿಸಿದ್ದಾರೆ.

ಈ ಆರು ತಿಂಗಳಲ್ಲಿ ರೈತರು ಅನುಭವಿಸಿದ್ದು ಕೇವಲ ಸರ್ಕಾರದ ಕಿರುಕುಳವಲ್ಲ, ಜೊತೆಗೆ ಪ್ರಕೃತಿ ನೀಡಿದ ಸವಾಲುಗಳನ್ನು ಎದುರಿಸಿದ್ದಾರೆ. ತೀವ್ರ ಚಳಿ, ಮಳೆ, ಬಿಸಿಲು ಅದರ ಜೊತೆಗೆ ಕೊರೊನಾ ಸಾಂಕ್ರಾಮಿಕ ರೋಗ ಕೂಡ. ಇಡೀ ದೇಶದಲ್ಲಿ ಕೊರೊನಾ ಸೋಂಕು ಹರಡಿರುವ ಮಧ್ಯೆಯೇ ಈ ಸಾವಿರಾರು ಮಂದಿ ಒಂದೆಡೆ ಇರುವ ಸ್ಥಳದಲ್ಲಿ ಸೋಂಕು ಇಲ್ಲವೆ ಎಂಬ ಪ್ರಶ್ನೆ ಸಹಜವಾಗಿಯೇ ಹುಟ್ಟುತ್ತದೆ.

ಇದನ್ನೂ ಓದಿ: ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ – ಫೇಕ್‌, ಸುಳ್ಳು ಮತ್ತು ತಿರುಚುವಿಕೆಯೇ `ಜೀವಾಳ’

ಆದರೆ, ಅಚ್ಚರಿಯೆಂದರೆ ಇಲ್ಲಿ ಕೊರೊನಾ ಸೋಂಕಿತ ಪ್ರಕರನಗಳು ವರದಿಯಾಗಿಲ್ಲ. ಇದಕ್ಕೆ ಮೂಲ ಕಾರಣ ಇಲ್ಲಿ ಪ್ರತಿಭಟನೆ ಆರಂಭವಾದಾಗಿನಿಂದ ಇರುವ ಆಸ್ಪತ್ರೆಗಳು. ಹೌದು, ಪ್ರತಿಭಟನಾ ನಿರತ ಸಿಂಘು, ಟಿಕ್ರಿ, ಗಾಜಿಪುರ್‌, ಶಹಾಜಾನ್‌ಪುರ ಗಡಿಗಳಲ್ಲಿ ನೂರಾರು ಮೆಡಿಕಲ್ ಕ್ಯಾಂಪ್‌ಗಳಿವೆ. ಜೊತೆಗೆ ಎಲ್ಲಾ ಸೌಲಭ್ಯಗಳಿರುವ 24 ಗಂಟೆಗಳು ಕಾರ್ಯನಿರ್ವಹಿಸುವ ಆಸ್ಪತ್ರೆಗಳಿವೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ, ಕಳೆದ ನವೆಂಬರ್‌ ತಿಂಗಳಿನಿಂದ ಸಿಂಘು ಗಡಿಯಲ್ಲಿರುವ ಮಾರುತಿ ಮಾನವ್, ’ಇಲ್ಲಿ ಯಾವುದೇ ಕೊರೊನಾ ಸೋಂಕಿತರು ಪತ್ತೆಯಾಗಿಲ್ಲ. ನಾನು ಇಲ್ಲಿಯೇ ಇದ್ದೇನೆ. ಜನರಲ್ಲಿ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಮೆಡಿಕಲ್ ಕ್ಯಾಂಪ್‌ಗಳು ಇರುವುದರಿಂದ ಸಣ್ಣ ಪುಟ್ಟ ಜ್ವರ ಕಾಣಿಸಿಕೊಂಡ ತಕ್ಷಣವೇ ಚಿಕಿತ್ಸೆ ಪಡೆಯಲಾಗುತ್ತದೆ’ ಎಂದಿದ್ದಾರೆ.

’ಮೇ 26 ಕ್ಕೆ ಕರಾಳ ದಿನ ಆಚರಣೆಗೆ ಕರೆ ನೀಡಿರುವ ಹಿನ್ನೆಲೆ, ಕಳೆದೆರಡು ದಿನಗಳಿಂದ ರೈತರು ಗಡಿಯಲ್ಲಿ ಹೆಚ್ಚಾಗುತ್ತಿದ್ದಾರೆ. ಎರಡು ವೇದಿಕೆಗಳ ಬಳಿ ಮೊದಲು ಇದ್ದಷ್ಟೇ ಜನರು ಈಗಲೂ ಇದ್ದಾರೆ. 26 ರ ವೇಳೆಗೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಟ್ಯ್ರಾಲಿಗಳಿಗಿಂತ ಟೆಂಟ್‌ಗಳು ಹೆಚ್ಚಾಗಿವೆ’ ಎಂದಿದ್ದಾರೆ.

ಇದನ್ನೂ ಓದಿ: “ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

ಇನ್ನು “ರಾಜಸ್ಥಾನದ ಶಹಜಾನ್‌ಪುರ ಗಡಿಗೆ ರಾಜಸ್ಥಾನದಿಂದ ಸಾವಿರಾರು ರೈತರು ಕಪ್ಪು ದಿನ ಆಚರಣೆಗೆ ಪ್ರತಿಭಟನಾ ಸ್ಥಳಕ್ಕೆ ಬರುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದೆ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಇಲ್ಲಿಗೆ ಬಂದು ರೈತರಲ್ಲಿ ಹುಮ್ಮಸ್ಸು ತುಂಬಿದ್ದಾರೆ. ಈ ಬಾರಿಯ ಕಪ್ಪು ದಿನ ಆಚರಣೆಯನ್ನು ಸರ್ಕಾರ ನೆನಪು ಇಟ್ಟುಕೊಳ್ಳುತ್ತದೆ” ಎಂದು ಸ್ವರಾಜ್ ಇಂಡಿಯಾದ ರಾಜೀವ್ ಅವರು ನಾನುಗೌರಿ.ಕಾಂ ಜೊತೆಗೆ ಹಂಚಿಕೊಂಡಿದ್ದಾರೆ.

ಶಹಜಾನ್‌ಪುರ ಗಡಿಯಲ್ಲಿ ರೈತ ಮುಖಂಡರು

ಅತಿ ಹೆಚ್ಚು ವಿಸ್ತೀರ್ಣ ಹೊಂದಿರುವ ಟಿಕ್ರಿ ಗಡಿಯಲ್ಲಿಯೂ ರೈತರ ಸಂಖ್ಯೆ ಹೆಚ್ಚಾಗುತ್ತಿದೆ. ಭಾನುವಾರ ಪಂಜಾಬ್‌ನ ಸಾಗ್ರೂರ್‌ನಲ್ಲಿರುವ ಖಾನೌರಿ ಪ್ರತಿಭಟನಾ ಸ್ಥಳದಿಂದ ಹೊರಟ ಸಾವಿರಾರು ಜನರು ಸೇರಿಕೊಂಡಿದ್ದಾರೆ. ಟಿಕ್ರಿ ಗಡಿಯಲ್ಲಿನ ಪಕೋಡಾ ಚೌಕ್‌ನಲ್ಲಿರುವ ಭಾರತೀಯ ಕಿಸಾನ್ ಯೂನಿಯನ್ ಉಗ್ರಾಹನ್ ಸಂಘಟನೆಯ ಸಾವಿರಾರು ಮಂದಿ ಗಡಿಯನ್ನು ಸೇರಿಕೊಂಡಿದ್ದಾರೆ.

ಟಿಕ್ರಿಗಡಿಯಲ್ಲಿ ಜನ ನಾಯಕ್‌ ದೇವಿಲಾಲ್‌ ಕಿಸಾನ್‌ ಹೆಸರಿನ 40 ಬೆಡ್‌ಗಳಿರುವ ಆಸ್ಪತ್ರೆಯನ್ನು ಆರಂಭಿಸಲಾಗಿದೆ. ಇಂಡಿಯನ್‌ ನ್ಯಾಷನಲ್‌ ಲೋಕ್‌ ದಳ ವತಿಯಿಂದ ಆರಂಭವಾದ ಈ ಆಸ್ಪತ್ರೆ ಎರಡು ಜನರಲ್‌ ವಾರ್ಡ್‌, ಒಂದು ಮಹಿಳಾ ವಾರ್ಡ್‌ ಒಳಗೊಂಡಿದೆ.

ಪ್ರತಿಭಟನಾ ನಿರತ ಗಡಿಗಳು ಈಗ ಮತ್ತೆ ರೈತರಿಂದ ತುಂಬುತ್ತಿವೆ. ಹೋರಾಟಕ್ಕೆ 6 ತಿಂಗಳು ತುಂಬುತ್ತಿರುವ ಹಿನ್ನೆಲೆ ಸಂಯುಕ್ತ ಕಿಸಾನ್ ಮೋರ್ಚಾ ಕಪ್ಪು ದಿನಕ್ಕೆ ಕರೆ ನೀಡಿದೆ. ಸಾವಿರಾರು ರೈತರು ತಮ್ಮ ಹಳ್ಳಿಗಳಿಂದ ದೆಹಲಿಯ ಗಡಿಗಳನ್ನು ಸೇರಿಕೊಳ್ಳುತ್ತಿದ್ದಾರೆ.

ಕೊರೊನಾ ಲಾಕ್‌ಡೌನ್ ನೆಪದಲ್ಲಿ ರೈತರನ್ನು ಗಡಿಗಳಿಂದ ಎತ್ತಂಗಡಿ ಮಾಡಲು ಸರ್ಕಾರ ಪ್ರಯತ್ನ ಪಡುತ್ತಿದೆ. ಆದರೆ, ಗಡಿಗಳಲ್ಲಿ ಇಲ್ಲಿಯವರೆಗೆ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ರೈತರು ವಹಿಸಿರುವ ಮುನ್ನೆಚ್ಚರಿಕೆ ಮತ್ತು ದೇಶ-ವಿದೇಶಗಳ ರೈತರು ತೆಗೆದುಕೊಳ್ಳುತ್ತಿರುವ ಆರೈಕೆಯಿಂದಾಗಿ ಅಂತಹ ಕೇಸ್‌ಗಳು ಇಲ್ಲಿ ಕಂಡು ಬಂದಿಲ್ಲ ಎಂದು ವೈದ್ಯರು ಹೇಳಿದ್ದಾರೆ.


ಇದನ್ನೂ ಓದಿ: ಮೇ 26 ಕ್ಕೆ ಪ್ರತಿಭಟನಾ ಗಡಿಗಳಲ್ಲಿ ಕರಾಳ ದಿನ: ದೆಹಲಿಗೆ ಹೊರಟ ಅನ್ನದಾತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...