Homeಚಳವಳಿರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ರೈತ ಹೋರಾಟಕ್ಕೆ 6 ತಿಂಗಳು- ಹೇಗಿದೆ ಪ್ರತಿಭಟನಾ ನಿರತ ಗಡಿಗಳಲ್ಲಿನ ಪರಿಸ್ಥಿತಿ..?

ಈ ಆರು ತಿಂಗಳಲ್ಲಿ ರೈತರು ಅನುಭವಿಸಿದ್ದು ಕೇವಲ ಸರ್ಕಾರದ ಕಿರುಕುಳವಲ್ಲ, ಜೊತೆಗೆ ಪ್ರಕೃತಿ ನೀಡಿದ ಸವಾಲುಗಳನ್ನು ಎದುರಿಸಿದ್ದಾರೆ.

- Advertisement -
- Advertisement -

“ರೈತ ಹೋರಾಟ…” ಕಳೆದ 6 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ಅನ್ನದಾತರ ಹೋರಾಟದ ಕುರಿತು ಇಲ್ಲಿಯವರೆಗೆ ಸರ್ಕಾರ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಚುನಾವಣೆ ಹಿನ್ನೆಲೆ ಮಾತುಕತೆಗಳನ್ನು ನಿಲ್ಲಿಸಿದ್ದ ಕೇಂದ್ರ ಮತ್ತೆ ಮಾತುಕತೆಗೆ ಮುಂದಾಗಿಲ್ಲ. ಇವೆಲ್ಲದರ ನಡುವೆ ದೇಶದಲ್ಲೇ ಕೊರೊನಾ ಪ್ರಕರಣಗಳು ಹೆಚ್ಚಾಗಿದ್ದರೂ ಗಡಿಗಳಲ್ಲಿ ಸೋಂಕಿನ ಸುಳಿವಿಲ್ಲ.

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನವೆಂವರ್ 26, 27 ರಂದು ದೆಹಲಿ ಚಲೋಗೆ ಪಂಜಾಬ್‌ ರೈತರ ನೇತೃತ್ವದಲ್ಲಿ ದೇಶದ ರೈತರು ಕರೆ ನೀಡಿದ್ದರು. ಅಂದಿನಿಂದ ದೆಹಲಿಯ ಗಡಿಗಳನ್ನು ಸುತ್ತುವರೆದಿರುವ ರೈತರು ಈ ಕರಾಳ ಕಾನೂನುಗಳ ರದ್ದತಿಗೆ ಆಗ್ರಹಿಸಿದ್ದಾರೆ. ಜೊತೆಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಜಾರಿ ಮಾಡಲು ಆಗ್ರಹಿಸಿದ್ದಾರೆ.

ಈ ಆರು ತಿಂಗಳಲ್ಲಿ ರೈತರು ಅನುಭವಿಸಿದ್ದು ಕೇವಲ ಸರ್ಕಾರದ ಕಿರುಕುಳವಲ್ಲ, ಜೊತೆಗೆ ಪ್ರಕೃತಿ ನೀಡಿದ ಸವಾಲುಗಳನ್ನು ಎದುರಿಸಿದ್ದಾರೆ. ತೀವ್ರ ಚಳಿ, ಮಳೆ, ಬಿಸಿಲು ಅದರ ಜೊತೆಗೆ ಕೊರೊನಾ ಸಾಂಕ್ರಾಮಿಕ ರೋಗ ಕೂಡ. ಇಡೀ ದೇಶದಲ್ಲಿ ಕೊರೊನಾ ಸೋಂಕು ಹರಡಿರುವ ಮಧ್ಯೆಯೇ ಈ ಸಾವಿರಾರು ಮಂದಿ ಒಂದೆಡೆ ಇರುವ ಸ್ಥಳದಲ್ಲಿ ಸೋಂಕು ಇಲ್ಲವೆ ಎಂಬ ಪ್ರಶ್ನೆ ಸಹಜವಾಗಿಯೇ ಹುಟ್ಟುತ್ತದೆ.

ಇದನ್ನೂ ಓದಿ: ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ – ಫೇಕ್‌, ಸುಳ್ಳು ಮತ್ತು ತಿರುಚುವಿಕೆಯೇ `ಜೀವಾಳ’

ಆದರೆ, ಅಚ್ಚರಿಯೆಂದರೆ ಇಲ್ಲಿ ಕೊರೊನಾ ಸೋಂಕಿತ ಪ್ರಕರನಗಳು ವರದಿಯಾಗಿಲ್ಲ. ಇದಕ್ಕೆ ಮೂಲ ಕಾರಣ ಇಲ್ಲಿ ಪ್ರತಿಭಟನೆ ಆರಂಭವಾದಾಗಿನಿಂದ ಇರುವ ಆಸ್ಪತ್ರೆಗಳು. ಹೌದು, ಪ್ರತಿಭಟನಾ ನಿರತ ಸಿಂಘು, ಟಿಕ್ರಿ, ಗಾಜಿಪುರ್‌, ಶಹಾಜಾನ್‌ಪುರ ಗಡಿಗಳಲ್ಲಿ ನೂರಾರು ಮೆಡಿಕಲ್ ಕ್ಯಾಂಪ್‌ಗಳಿವೆ. ಜೊತೆಗೆ ಎಲ್ಲಾ ಸೌಲಭ್ಯಗಳಿರುವ 24 ಗಂಟೆಗಳು ಕಾರ್ಯನಿರ್ವಹಿಸುವ ಆಸ್ಪತ್ರೆಗಳಿವೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ, ಕಳೆದ ನವೆಂಬರ್‌ ತಿಂಗಳಿನಿಂದ ಸಿಂಘು ಗಡಿಯಲ್ಲಿರುವ ಮಾರುತಿ ಮಾನವ್, ’ಇಲ್ಲಿ ಯಾವುದೇ ಕೊರೊನಾ ಸೋಂಕಿತರು ಪತ್ತೆಯಾಗಿಲ್ಲ. ನಾನು ಇಲ್ಲಿಯೇ ಇದ್ದೇನೆ. ಜನರಲ್ಲಿ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಮೆಡಿಕಲ್ ಕ್ಯಾಂಪ್‌ಗಳು ಇರುವುದರಿಂದ ಸಣ್ಣ ಪುಟ್ಟ ಜ್ವರ ಕಾಣಿಸಿಕೊಂಡ ತಕ್ಷಣವೇ ಚಿಕಿತ್ಸೆ ಪಡೆಯಲಾಗುತ್ತದೆ’ ಎಂದಿದ್ದಾರೆ.

’ಮೇ 26 ಕ್ಕೆ ಕರಾಳ ದಿನ ಆಚರಣೆಗೆ ಕರೆ ನೀಡಿರುವ ಹಿನ್ನೆಲೆ, ಕಳೆದೆರಡು ದಿನಗಳಿಂದ ರೈತರು ಗಡಿಯಲ್ಲಿ ಹೆಚ್ಚಾಗುತ್ತಿದ್ದಾರೆ. ಎರಡು ವೇದಿಕೆಗಳ ಬಳಿ ಮೊದಲು ಇದ್ದಷ್ಟೇ ಜನರು ಈಗಲೂ ಇದ್ದಾರೆ. 26 ರ ವೇಳೆಗೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಟ್ಯ್ರಾಲಿಗಳಿಗಿಂತ ಟೆಂಟ್‌ಗಳು ಹೆಚ್ಚಾಗಿವೆ’ ಎಂದಿದ್ದಾರೆ.

ಇದನ್ನೂ ಓದಿ: “ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

ಇನ್ನು “ರಾಜಸ್ಥಾನದ ಶಹಜಾನ್‌ಪುರ ಗಡಿಗೆ ರಾಜಸ್ಥಾನದಿಂದ ಸಾವಿರಾರು ರೈತರು ಕಪ್ಪು ದಿನ ಆಚರಣೆಗೆ ಪ್ರತಿಭಟನಾ ಸ್ಥಳಕ್ಕೆ ಬರುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದೆ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಇಲ್ಲಿಗೆ ಬಂದು ರೈತರಲ್ಲಿ ಹುಮ್ಮಸ್ಸು ತುಂಬಿದ್ದಾರೆ. ಈ ಬಾರಿಯ ಕಪ್ಪು ದಿನ ಆಚರಣೆಯನ್ನು ಸರ್ಕಾರ ನೆನಪು ಇಟ್ಟುಕೊಳ್ಳುತ್ತದೆ” ಎಂದು ಸ್ವರಾಜ್ ಇಂಡಿಯಾದ ರಾಜೀವ್ ಅವರು ನಾನುಗೌರಿ.ಕಾಂ ಜೊತೆಗೆ ಹಂಚಿಕೊಂಡಿದ್ದಾರೆ.

ಶಹಜಾನ್‌ಪುರ ಗಡಿಯಲ್ಲಿ ರೈತ ಮುಖಂಡರು

ಅತಿ ಹೆಚ್ಚು ವಿಸ್ತೀರ್ಣ ಹೊಂದಿರುವ ಟಿಕ್ರಿ ಗಡಿಯಲ್ಲಿಯೂ ರೈತರ ಸಂಖ್ಯೆ ಹೆಚ್ಚಾಗುತ್ತಿದೆ. ಭಾನುವಾರ ಪಂಜಾಬ್‌ನ ಸಾಗ್ರೂರ್‌ನಲ್ಲಿರುವ ಖಾನೌರಿ ಪ್ರತಿಭಟನಾ ಸ್ಥಳದಿಂದ ಹೊರಟ ಸಾವಿರಾರು ಜನರು ಸೇರಿಕೊಂಡಿದ್ದಾರೆ. ಟಿಕ್ರಿ ಗಡಿಯಲ್ಲಿನ ಪಕೋಡಾ ಚೌಕ್‌ನಲ್ಲಿರುವ ಭಾರತೀಯ ಕಿಸಾನ್ ಯೂನಿಯನ್ ಉಗ್ರಾಹನ್ ಸಂಘಟನೆಯ ಸಾವಿರಾರು ಮಂದಿ ಗಡಿಯನ್ನು ಸೇರಿಕೊಂಡಿದ್ದಾರೆ.

ಟಿಕ್ರಿಗಡಿಯಲ್ಲಿ ಜನ ನಾಯಕ್‌ ದೇವಿಲಾಲ್‌ ಕಿಸಾನ್‌ ಹೆಸರಿನ 40 ಬೆಡ್‌ಗಳಿರುವ ಆಸ್ಪತ್ರೆಯನ್ನು ಆರಂಭಿಸಲಾಗಿದೆ. ಇಂಡಿಯನ್‌ ನ್ಯಾಷನಲ್‌ ಲೋಕ್‌ ದಳ ವತಿಯಿಂದ ಆರಂಭವಾದ ಈ ಆಸ್ಪತ್ರೆ ಎರಡು ಜನರಲ್‌ ವಾರ್ಡ್‌, ಒಂದು ಮಹಿಳಾ ವಾರ್ಡ್‌ ಒಳಗೊಂಡಿದೆ.

ಪ್ರತಿಭಟನಾ ನಿರತ ಗಡಿಗಳು ಈಗ ಮತ್ತೆ ರೈತರಿಂದ ತುಂಬುತ್ತಿವೆ. ಹೋರಾಟಕ್ಕೆ 6 ತಿಂಗಳು ತುಂಬುತ್ತಿರುವ ಹಿನ್ನೆಲೆ ಸಂಯುಕ್ತ ಕಿಸಾನ್ ಮೋರ್ಚಾ ಕಪ್ಪು ದಿನಕ್ಕೆ ಕರೆ ನೀಡಿದೆ. ಸಾವಿರಾರು ರೈತರು ತಮ್ಮ ಹಳ್ಳಿಗಳಿಂದ ದೆಹಲಿಯ ಗಡಿಗಳನ್ನು ಸೇರಿಕೊಳ್ಳುತ್ತಿದ್ದಾರೆ.

ಕೊರೊನಾ ಲಾಕ್‌ಡೌನ್ ನೆಪದಲ್ಲಿ ರೈತರನ್ನು ಗಡಿಗಳಿಂದ ಎತ್ತಂಗಡಿ ಮಾಡಲು ಸರ್ಕಾರ ಪ್ರಯತ್ನ ಪಡುತ್ತಿದೆ. ಆದರೆ, ಗಡಿಗಳಲ್ಲಿ ಇಲ್ಲಿಯವರೆಗೆ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ರೈತರು ವಹಿಸಿರುವ ಮುನ್ನೆಚ್ಚರಿಕೆ ಮತ್ತು ದೇಶ-ವಿದೇಶಗಳ ರೈತರು ತೆಗೆದುಕೊಳ್ಳುತ್ತಿರುವ ಆರೈಕೆಯಿಂದಾಗಿ ಅಂತಹ ಕೇಸ್‌ಗಳು ಇಲ್ಲಿ ಕಂಡು ಬಂದಿಲ್ಲ ಎಂದು ವೈದ್ಯರು ಹೇಳಿದ್ದಾರೆ.


ಇದನ್ನೂ ಓದಿ: ಮೇ 26 ಕ್ಕೆ ಪ್ರತಿಭಟನಾ ಗಡಿಗಳಲ್ಲಿ ಕರಾಳ ದಿನ: ದೆಹಲಿಗೆ ಹೊರಟ ಅನ್ನದಾತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...