Homeಚಳವಳಿರೈತರ ಪ್ರತಿಭಟನೆಗೆ ಹರಿದು ಬಂತು ವಿದೇಶಿ ರಾಜಕೀಯ ನಾಯಕರ ಬೆಂಬಲ

ರೈತರ ಪ್ರತಿಭಟನೆಗೆ ಹರಿದು ಬಂತು ವಿದೇಶಿ ರಾಜಕೀಯ ನಾಯಕರ ಬೆಂಬಲ

ಶಾಂತಿಯುತ ಪ್ರತಿಭಟನಾಕಾರರ ವಿರುದ್ಧದ ಈ ರೀತಿಯ ದಬ್ಬಾಳಿಕೆಯ ವರ್ತನೆ ಸ್ವೀಕಾರಾರ್ಹವಲ್ಲ. ಇದು ಭಾರತದ ಖ್ಯಾತಿಗೆ ಕಳಂಕ ತರುತ್ತದೆ.

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ವಿವಾದಾತ್ಮಕ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಭಾರತವಷ್ಟೇ ಅಲ್ಲದೆ ವಿದೇಶಗಳ ಹಲವು ರಾಜಕೀಯ ನಾಯಕರು ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ.

ಯುನೈಟೆಡ್ ಕಿಂಗ್‌ಡಮ್, ಕೆನಡಾ ಮತ್ತು ಅಮೆರಿಕಾದ ಹಲವಾರು ರಾಜಕೀಯ ಮುಖಂಡರು ರೈತರೊಂದಿಗೆ ನಾವಿದ್ದೇವೆ ಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ. ಜೊತೆಗೆ ಪ್ರತಿಭಟನೆಗಳನ್ನು ಮೋದಿ ಸರ್ಕಾರ ನಿರ್ವಹಿಸುತ್ತಿರುವ ರೀತಿಯನ್ನು ಟೀಕಿಸಿದ್ದಾರೆ.

ಕೆನಡಾದ ಪ್ರಧಾನಿ ಜಸ್ಟಿನ್ ಟ್ರೂಡ್ “ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಬೆಂಬಲಿಸುತ್ತದೆ. ಆದರೆ ಭಾರತದ ಪರಿಸ್ಥಿತಿ ತೀವ್ರ ಕಳವಳಕಾರಿಯಾಗಿದೆ. ಸಂವಾದದ ಮೂಲಕ ಸಮಸ್ಯೆಗಳನ್ನು ಬಗೆಹರಿಸಬೇಕು. ಸಾಧ್ಯವಿರುವ ಎಲ್ಲಾ ಮಾರ್ಗಗಳ ಮೂಲಕ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸುತ್ತೇನೆ” ಎಂದಿದ್ದಾರೆ.

ಯುನೈಟೆಡ್ ಕಿಂಗ್‌ಡಮ್‌ನ ಲೇಬರ್‌ ಪಾರ್ಟಿ ಸಂಸದ ತನ್ಮನ್‌ಜೀತ್ ಸಿಂಗ್ ಧೇಸಿ ತಮ್ಮ ಟ್ವಿಟರ್‌ ಖಾತೆಯಲ್ಲಿ ದೆಹಲಿ ಚಲೋ ಪ್ರತಿಭಟನೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ’ಖಾಸಗೀಕರಣದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ಪಂಜಾಬ್ ಮತ್ತು ಭಾರತದ ಇತರ ಭಾಗಗಳ ರೈತರೊಂದಿಗೆ ನಾನು, ನಮ್ಮ ಕುಟುಂಬ ಮತ್ತು ಸ್ನೇಹಿತರು ನಿಲ್ಲುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

 

ಮತ್ತೊಬ್ಬ ಲೇಬರ್‌ ಪಾರ್ಟಿ ಸಂಸದ ಜಾನ್ ಮೆಕ್‌ಡೊನೆಲ್ ಅವರು “ನಾನು ಸಂಸದ ತನ್ಮನ್‌ಜೀತ್ ಸಿಂಗ್ ಧೇಸಿ ಅವರ ಮಾತುಗಳನ್ನು ಒಪ್ಪುತ್ತೇನೆ. ಶಾಂತಿಯುತ ಪ್ರತಿಭಟನಾಕಾರರ ವಿರುದ್ಧದ ಈ ರೀತಿಯ ದಬ್ಬಾಳಿಕೆಯ ವರ್ತನೆ ಸ್ವೀಕಾರಾರ್ಹವಲ್ಲ. ಇದು ಭಾರತದ ಖ್ಯಾತಿಗೆ ಕಳಂಕ ತರುತ್ತದೆ” ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಕೆನಡಾದ ಜಗ್ಮೀತ್ ಸಿಂಗ್ ನೇತೃತ್ವದ ನ್ಯೂ ಡೆಮಾಕ್ರಟಿಕ್ ಪಕ್ಷದಿಂದ ರೈತರಿಗೆ ಬೆಂಬಲ ವ್ಯಕ್ತವಾಗಿದೆ.

“ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ರೈತರ ವಿರುದ್ಧ ಭಾರತೀಯ ಸರ್ಕಾರ ನಡೆಸುತ್ತಿರುವ ಹಿಂಸಾಚಾರವು ಭೀಕರವಾಗಿದೆ. ನಾನು ಪಂಜಾಬ್ ಮತ್ತು ಭಾರತದಾದ್ಯಂತದ ಪ್ರತಿಭಟನಾ ನಿರತ ರೈತರಿಗೆ ಬೆಂಬಲ ಸೂಚಿಸುತ್ತೇನೆ. ಹಿಂಸಾಚಾರಕ್ಕಿಂತ ಶಾಂತಿಯುತ ಸಂವಾದದಲ್ಲಿ ತೊಡಗಿಸಿಕೊಳ್ಳಲು ನಾನು ಭಾರತೀಯ ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ರೈತರ ಪರವಾಗಿ ನಿಲ್ಲುವುದನ್ನೇ ರಾಜಕಾರಣವೆನ್ನುವುದಾದರೆ, ಹೌದು ನಾವು ತಪ್ಪಿತಸ್ಥರೇ..!

ಒಂಟಾರಿಯೊ ಪ್ರಾಂತೀಯ ಸಂಸತ್ತಿನಲ್ಲಿ ಬ್ರಾಂಪ್ಟನ್ ಪೂರ್ವವನ್ನು ಪ್ರತಿನಿಧಿಸುವ ಗುರ್‌ರತನ್ ಸಿಂಗ್ ಅವರು ಸದನದಲ್ಲಿ ಭಾರತದ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ್ದಾರೆ.

“ಭಾರತದಲ್ಲಿ ರೈತರು ಸರ್ಕಾರದಿಂದ ಆಕ್ರಮಣಕ್ಕೊಳಗಾಗಿದ್ದಾರೆ. ಅದಕ್ಕಾಗಿಯೇ ಭಾರತ ಸರ್ಕಾರವು ಈ ಅನ್ಯಾಯದ ಕಾನೂನುಗಳ ವಿರುದ್ಧ ರೈತರೊಂದಿಗೆ ನಿಲ್ಲುವಂತೆ ನಾನು ಈ ಸದನವನ್ನು ಕೇಳುತ್ತಿದ್ದೇನೆ” ಎಂದಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಂಸದ ಗುರ್‌ರತನ್ ಸಿಂಗ್, ರೈತರ ಮೇಲೆ ಪೊಲಿಸರು ನಡೆಸಿದ ದೌರ್ಜನ್ಯದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ  “ಈ ಚಿತ್ರಗಳು ಭಯಾನಕವಾಗಿವೆ. ನಾನು ರೈತರ ಕುಟುಂಬದಿಂದ ಬಂದವನು. ತಮ್ಮ ಜೀವನೋಪಾಯಕ್ಕೆ ಧಕ್ಕೆ ತರುವ ಕಾನೂನುಗಳನ್ನು ವಿರೋಧಿಸುವ ರೈತರ ನೋವು ಮತ್ತು ಹೋರಾಟವನ್ನು ನಾನು ಅನುಭವಿಸುತ್ತೇನೆ. ಶಾಂತಿಯುತ ಪ್ರತಿಭಟನಾಕಾರರ ಮೇಲೆ ಸರ್ಕಾರ ದಾಳಿ ನಡೆಸುತ್ತಿದೆ. ನಾನು ರೈತರ ಜೊತೆ ಇದ್ದೇನೆ ಎಂದು ಟ್ವೀಟ್‌ಗಳಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ’ರೈತರು ದೇಶದ ಜೀವನಾಡಿ, ರೈತರೊಂದಿಗೆ ಇಡೀ ದೇಶ ನಿಲ್ಲಬೇಕು’- ಪಿಣರಾಯಿ ವಿಜಯನ್

ಅಮೆರಿಕಾದಲ್ಲಿ ಇಲ್ಲಿಯವರೆಗೆ ಪ್ರತಿಭಟನೆಗೆ ಬಹಿರಂಗವಾಗಿ ತಮ್ಮ ಪ್ರತಿಕ್ರಿಯೆಯನ್ನು ಹೇಳಿದವರು ಕಡಿಮೆಯೇ. ಆದರೆ, ವಕೀಲರು ಮತ್ತು ರಿಪಬ್ಲಿಕನ್ ಪಕ್ಷದ ಅಧಿಕಾರಿ ಹರ್ಮೀತ್ ಕೆ ಧಿಲ್ಲಾನ್ ಮಾತ್ರ ತಮ್ಮ ಅಭಿಪ್ರಾಯವನ್ನು ಟ್ವೀಟ್ ಮೂಲಕ ಹೊರಹಾಕಿದ್ದಾರೆ.

“ಪಂಜಾಬ್ ಮೂಲದ ರೈತರ ವಂಶಸ್ಥರಾಗಿ, ಪಂಜಾಬಿ ರೈತರು ತಮ್ಮ ಹೊಲಗಳು, ಜೀವನ ವಿಧಾನ ಮತ್ತು ಸಂಸ್ಕೃತಿಯನ್ನು ನಾಶಪಡಿಸುವ ಭಾರತೀಯ ಸರ್ಕಾರದ ದೊಡ್ಡ-ಕಾರ್ಪೊರೇಷನ್ ಪರ ಕೃಷಿ ಮಸೂದೆಯನ್ನು ಪ್ರತಿಭಟಿಸಿದ್ದಕ್ಕಾಗಿ ಹಲ್ಲೆಗೊಳಗಾಗಿದ್ದನ್ನು ನೋಡಲು ನನಗೆ ನೋವಾಗುತ್ತಿದೆ. ಪ್ರಧಾನಿ ಮೋದಿಯವರೇ ರೈತರ ಸಮಸ್ಯೆಗಳನ್ನು ಆಲಿಸಿ, ಅವರನ್ನು ಭೇಟಿ ಮಾಡಿ, ಮತ್ತು ರಾಜಿ ಮಾಡಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ಜಗ್ಮೀತ್ ಸಿಂಗ್ ಮತ್ತು ತನ್ಮನ್‌ಜೀತ್ ಸಿಂಗ್ ಧೇಸಿ ಅವರಂತಹ ನಾಯಕರು ಈ ಹಿಂದೆಯೂ ಮೋದಿ ಸರ್ಕಾರವನ್ನು, ಕಾಶ್ಮೀರ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಬಗ್ಗೆ ಹಲವು ಬಾರಿ ಟೀಕಿಸಿದ್ದಾರೆ.

ಪ್ರತಿಭಟನಾ ನಿರತ ರೈತರಿಗೆ ಬೆಂಬಲ ಮತ್ತು ಪ್ರತಿಭಟನೆಯನ್ನು ಮೋದಿ ಸರ್ಕಾರ ನಿಭಾಯಿಸುತ್ತಿರುವ ಕುರಿತ ಟೀಕೆಗಳು ಕೇವಲ ಪಂಜಾಬ್ ಮೂಲದ ರಾಜಕಾರಣಿಗಳಾದ ಧೇಸಿ, ಗಿಲ್, ಜಗ್ಮೀತ್ ಸಿಂಗ್, ಗುರಾರತನ್ ಸಿಂಗ್ ಮತ್ತು ಸಾರಾ ಸಿಂಗ್ ಅವರಿಂದ ಮಾತ್ರ ಬಂದಿಲ್ಲ. ಜ್ಯಾಕ್, ಹ್ಯಾರಿಸ್, ಜಾನ್ ಮೆಕ್‌ಡೊನೆಲ್, ಕೆವಿನ್ ಯಾರ್ಡ್ ಮತ್ತು ಆಂಡ್ರಿಯಾ ಹೊರ್ವಾತ್ ಕೂಡ ತಮ್ಮ ಪ್ರತಿರೋಧ ನೀಡಿದ್ದಾರೆ.

ಭಾರತದ ರೈತರ ಪ್ರತಿಭಟನೆ ಬಗ್ಗೆ ಮಾತನಾಡಿರುವ ಬಹುತೇಕ ಎಲ್ಲಾ ರಾಜಕೀಯ ನಾಯಕರು ಆಯಾ ದೇಶಗಳೊಳಗಿನ ವಿರೋಧ ಪಕ್ಷಗಳ ನಾಯಕರು. ಇದು ಮೋದಿ ಸರ್ಕಾರದ ಮೇಲೆ ಅಂತರರಾಷ್ಟ್ರೀಯ ಒತ್ತಡಕ್ಕೆ ಕಾರಣವಾಗುವ ಸಂಭವವಿದೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ದೆಹಲಿಯಲ್ಲಿ ರೈತರ ಗುಡುಗು: ಇಂದಿನ ಹೋರಾಟದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...