Homeಚಳವಳಿರೈತರ ಪ್ರತಿಭಟನೆಗೆ ಹರಿದು ಬಂತು ವಿದೇಶಿ ರಾಜಕೀಯ ನಾಯಕರ ಬೆಂಬಲ

ರೈತರ ಪ್ರತಿಭಟನೆಗೆ ಹರಿದು ಬಂತು ವಿದೇಶಿ ರಾಜಕೀಯ ನಾಯಕರ ಬೆಂಬಲ

ಶಾಂತಿಯುತ ಪ್ರತಿಭಟನಾಕಾರರ ವಿರುದ್ಧದ ಈ ರೀತಿಯ ದಬ್ಬಾಳಿಕೆಯ ವರ್ತನೆ ಸ್ವೀಕಾರಾರ್ಹವಲ್ಲ. ಇದು ಭಾರತದ ಖ್ಯಾತಿಗೆ ಕಳಂಕ ತರುತ್ತದೆ.

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ವಿವಾದಾತ್ಮಕ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಭಾರತವಷ್ಟೇ ಅಲ್ಲದೆ ವಿದೇಶಗಳ ಹಲವು ರಾಜಕೀಯ ನಾಯಕರು ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ.

ಯುನೈಟೆಡ್ ಕಿಂಗ್‌ಡಮ್, ಕೆನಡಾ ಮತ್ತು ಅಮೆರಿಕಾದ ಹಲವಾರು ರಾಜಕೀಯ ಮುಖಂಡರು ರೈತರೊಂದಿಗೆ ನಾವಿದ್ದೇವೆ ಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ. ಜೊತೆಗೆ ಪ್ರತಿಭಟನೆಗಳನ್ನು ಮೋದಿ ಸರ್ಕಾರ ನಿರ್ವಹಿಸುತ್ತಿರುವ ರೀತಿಯನ್ನು ಟೀಕಿಸಿದ್ದಾರೆ.

ಕೆನಡಾದ ಪ್ರಧಾನಿ ಜಸ್ಟಿನ್ ಟ್ರೂಡ್ “ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಬೆಂಬಲಿಸುತ್ತದೆ. ಆದರೆ ಭಾರತದ ಪರಿಸ್ಥಿತಿ ತೀವ್ರ ಕಳವಳಕಾರಿಯಾಗಿದೆ. ಸಂವಾದದ ಮೂಲಕ ಸಮಸ್ಯೆಗಳನ್ನು ಬಗೆಹರಿಸಬೇಕು. ಸಾಧ್ಯವಿರುವ ಎಲ್ಲಾ ಮಾರ್ಗಗಳ ಮೂಲಕ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸುತ್ತೇನೆ” ಎಂದಿದ್ದಾರೆ.

ಯುನೈಟೆಡ್ ಕಿಂಗ್‌ಡಮ್‌ನ ಲೇಬರ್‌ ಪಾರ್ಟಿ ಸಂಸದ ತನ್ಮನ್‌ಜೀತ್ ಸಿಂಗ್ ಧೇಸಿ ತಮ್ಮ ಟ್ವಿಟರ್‌ ಖಾತೆಯಲ್ಲಿ ದೆಹಲಿ ಚಲೋ ಪ್ರತಿಭಟನೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ’ಖಾಸಗೀಕರಣದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ಪಂಜಾಬ್ ಮತ್ತು ಭಾರತದ ಇತರ ಭಾಗಗಳ ರೈತರೊಂದಿಗೆ ನಾನು, ನಮ್ಮ ಕುಟುಂಬ ಮತ್ತು ಸ್ನೇಹಿತರು ನಿಲ್ಲುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

 

ಮತ್ತೊಬ್ಬ ಲೇಬರ್‌ ಪಾರ್ಟಿ ಸಂಸದ ಜಾನ್ ಮೆಕ್‌ಡೊನೆಲ್ ಅವರು “ನಾನು ಸಂಸದ ತನ್ಮನ್‌ಜೀತ್ ಸಿಂಗ್ ಧೇಸಿ ಅವರ ಮಾತುಗಳನ್ನು ಒಪ್ಪುತ್ತೇನೆ. ಶಾಂತಿಯುತ ಪ್ರತಿಭಟನಾಕಾರರ ವಿರುದ್ಧದ ಈ ರೀತಿಯ ದಬ್ಬಾಳಿಕೆಯ ವರ್ತನೆ ಸ್ವೀಕಾರಾರ್ಹವಲ್ಲ. ಇದು ಭಾರತದ ಖ್ಯಾತಿಗೆ ಕಳಂಕ ತರುತ್ತದೆ” ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಕೆನಡಾದ ಜಗ್ಮೀತ್ ಸಿಂಗ್ ನೇತೃತ್ವದ ನ್ಯೂ ಡೆಮಾಕ್ರಟಿಕ್ ಪಕ್ಷದಿಂದ ರೈತರಿಗೆ ಬೆಂಬಲ ವ್ಯಕ್ತವಾಗಿದೆ.

“ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ರೈತರ ವಿರುದ್ಧ ಭಾರತೀಯ ಸರ್ಕಾರ ನಡೆಸುತ್ತಿರುವ ಹಿಂಸಾಚಾರವು ಭೀಕರವಾಗಿದೆ. ನಾನು ಪಂಜಾಬ್ ಮತ್ತು ಭಾರತದಾದ್ಯಂತದ ಪ್ರತಿಭಟನಾ ನಿರತ ರೈತರಿಗೆ ಬೆಂಬಲ ಸೂಚಿಸುತ್ತೇನೆ. ಹಿಂಸಾಚಾರಕ್ಕಿಂತ ಶಾಂತಿಯುತ ಸಂವಾದದಲ್ಲಿ ತೊಡಗಿಸಿಕೊಳ್ಳಲು ನಾನು ಭಾರತೀಯ ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ರೈತರ ಪರವಾಗಿ ನಿಲ್ಲುವುದನ್ನೇ ರಾಜಕಾರಣವೆನ್ನುವುದಾದರೆ, ಹೌದು ನಾವು ತಪ್ಪಿತಸ್ಥರೇ..!

ಒಂಟಾರಿಯೊ ಪ್ರಾಂತೀಯ ಸಂಸತ್ತಿನಲ್ಲಿ ಬ್ರಾಂಪ್ಟನ್ ಪೂರ್ವವನ್ನು ಪ್ರತಿನಿಧಿಸುವ ಗುರ್‌ರತನ್ ಸಿಂಗ್ ಅವರು ಸದನದಲ್ಲಿ ಭಾರತದ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ್ದಾರೆ.

“ಭಾರತದಲ್ಲಿ ರೈತರು ಸರ್ಕಾರದಿಂದ ಆಕ್ರಮಣಕ್ಕೊಳಗಾಗಿದ್ದಾರೆ. ಅದಕ್ಕಾಗಿಯೇ ಭಾರತ ಸರ್ಕಾರವು ಈ ಅನ್ಯಾಯದ ಕಾನೂನುಗಳ ವಿರುದ್ಧ ರೈತರೊಂದಿಗೆ ನಿಲ್ಲುವಂತೆ ನಾನು ಈ ಸದನವನ್ನು ಕೇಳುತ್ತಿದ್ದೇನೆ” ಎಂದಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಂಸದ ಗುರ್‌ರತನ್ ಸಿಂಗ್, ರೈತರ ಮೇಲೆ ಪೊಲಿಸರು ನಡೆಸಿದ ದೌರ್ಜನ್ಯದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ  “ಈ ಚಿತ್ರಗಳು ಭಯಾನಕವಾಗಿವೆ. ನಾನು ರೈತರ ಕುಟುಂಬದಿಂದ ಬಂದವನು. ತಮ್ಮ ಜೀವನೋಪಾಯಕ್ಕೆ ಧಕ್ಕೆ ತರುವ ಕಾನೂನುಗಳನ್ನು ವಿರೋಧಿಸುವ ರೈತರ ನೋವು ಮತ್ತು ಹೋರಾಟವನ್ನು ನಾನು ಅನುಭವಿಸುತ್ತೇನೆ. ಶಾಂತಿಯುತ ಪ್ರತಿಭಟನಾಕಾರರ ಮೇಲೆ ಸರ್ಕಾರ ದಾಳಿ ನಡೆಸುತ್ತಿದೆ. ನಾನು ರೈತರ ಜೊತೆ ಇದ್ದೇನೆ ಎಂದು ಟ್ವೀಟ್‌ಗಳಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ’ರೈತರು ದೇಶದ ಜೀವನಾಡಿ, ರೈತರೊಂದಿಗೆ ಇಡೀ ದೇಶ ನಿಲ್ಲಬೇಕು’- ಪಿಣರಾಯಿ ವಿಜಯನ್

ಅಮೆರಿಕಾದಲ್ಲಿ ಇಲ್ಲಿಯವರೆಗೆ ಪ್ರತಿಭಟನೆಗೆ ಬಹಿರಂಗವಾಗಿ ತಮ್ಮ ಪ್ರತಿಕ್ರಿಯೆಯನ್ನು ಹೇಳಿದವರು ಕಡಿಮೆಯೇ. ಆದರೆ, ವಕೀಲರು ಮತ್ತು ರಿಪಬ್ಲಿಕನ್ ಪಕ್ಷದ ಅಧಿಕಾರಿ ಹರ್ಮೀತ್ ಕೆ ಧಿಲ್ಲಾನ್ ಮಾತ್ರ ತಮ್ಮ ಅಭಿಪ್ರಾಯವನ್ನು ಟ್ವೀಟ್ ಮೂಲಕ ಹೊರಹಾಕಿದ್ದಾರೆ.

“ಪಂಜಾಬ್ ಮೂಲದ ರೈತರ ವಂಶಸ್ಥರಾಗಿ, ಪಂಜಾಬಿ ರೈತರು ತಮ್ಮ ಹೊಲಗಳು, ಜೀವನ ವಿಧಾನ ಮತ್ತು ಸಂಸ್ಕೃತಿಯನ್ನು ನಾಶಪಡಿಸುವ ಭಾರತೀಯ ಸರ್ಕಾರದ ದೊಡ್ಡ-ಕಾರ್ಪೊರೇಷನ್ ಪರ ಕೃಷಿ ಮಸೂದೆಯನ್ನು ಪ್ರತಿಭಟಿಸಿದ್ದಕ್ಕಾಗಿ ಹಲ್ಲೆಗೊಳಗಾಗಿದ್ದನ್ನು ನೋಡಲು ನನಗೆ ನೋವಾಗುತ್ತಿದೆ. ಪ್ರಧಾನಿ ಮೋದಿಯವರೇ ರೈತರ ಸಮಸ್ಯೆಗಳನ್ನು ಆಲಿಸಿ, ಅವರನ್ನು ಭೇಟಿ ಮಾಡಿ, ಮತ್ತು ರಾಜಿ ಮಾಡಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ಜಗ್ಮೀತ್ ಸಿಂಗ್ ಮತ್ತು ತನ್ಮನ್‌ಜೀತ್ ಸಿಂಗ್ ಧೇಸಿ ಅವರಂತಹ ನಾಯಕರು ಈ ಹಿಂದೆಯೂ ಮೋದಿ ಸರ್ಕಾರವನ್ನು, ಕಾಶ್ಮೀರ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಬಗ್ಗೆ ಹಲವು ಬಾರಿ ಟೀಕಿಸಿದ್ದಾರೆ.

ಪ್ರತಿಭಟನಾ ನಿರತ ರೈತರಿಗೆ ಬೆಂಬಲ ಮತ್ತು ಪ್ರತಿಭಟನೆಯನ್ನು ಮೋದಿ ಸರ್ಕಾರ ನಿಭಾಯಿಸುತ್ತಿರುವ ಕುರಿತ ಟೀಕೆಗಳು ಕೇವಲ ಪಂಜಾಬ್ ಮೂಲದ ರಾಜಕಾರಣಿಗಳಾದ ಧೇಸಿ, ಗಿಲ್, ಜಗ್ಮೀತ್ ಸಿಂಗ್, ಗುರಾರತನ್ ಸಿಂಗ್ ಮತ್ತು ಸಾರಾ ಸಿಂಗ್ ಅವರಿಂದ ಮಾತ್ರ ಬಂದಿಲ್ಲ. ಜ್ಯಾಕ್, ಹ್ಯಾರಿಸ್, ಜಾನ್ ಮೆಕ್‌ಡೊನೆಲ್, ಕೆವಿನ್ ಯಾರ್ಡ್ ಮತ್ತು ಆಂಡ್ರಿಯಾ ಹೊರ್ವಾತ್ ಕೂಡ ತಮ್ಮ ಪ್ರತಿರೋಧ ನೀಡಿದ್ದಾರೆ.

ಭಾರತದ ರೈತರ ಪ್ರತಿಭಟನೆ ಬಗ್ಗೆ ಮಾತನಾಡಿರುವ ಬಹುತೇಕ ಎಲ್ಲಾ ರಾಜಕೀಯ ನಾಯಕರು ಆಯಾ ದೇಶಗಳೊಳಗಿನ ವಿರೋಧ ಪಕ್ಷಗಳ ನಾಯಕರು. ಇದು ಮೋದಿ ಸರ್ಕಾರದ ಮೇಲೆ ಅಂತರರಾಷ್ಟ್ರೀಯ ಒತ್ತಡಕ್ಕೆ ಕಾರಣವಾಗುವ ಸಂಭವವಿದೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ದೆಹಲಿಯಲ್ಲಿ ರೈತರ ಗುಡುಗು: ಇಂದಿನ ಹೋರಾಟದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...