Homeಚಳವಳಿರೈತರ ಪ್ರತಿಭಟನೆಗೆ ಹರಿದು ಬಂತು ವಿದೇಶಿ ರಾಜಕೀಯ ನಾಯಕರ ಬೆಂಬಲ

ರೈತರ ಪ್ರತಿಭಟನೆಗೆ ಹರಿದು ಬಂತು ವಿದೇಶಿ ರಾಜಕೀಯ ನಾಯಕರ ಬೆಂಬಲ

ಶಾಂತಿಯುತ ಪ್ರತಿಭಟನಾಕಾರರ ವಿರುದ್ಧದ ಈ ರೀತಿಯ ದಬ್ಬಾಳಿಕೆಯ ವರ್ತನೆ ಸ್ವೀಕಾರಾರ್ಹವಲ್ಲ. ಇದು ಭಾರತದ ಖ್ಯಾತಿಗೆ ಕಳಂಕ ತರುತ್ತದೆ.

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ವಿವಾದಾತ್ಮಕ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಭಾರತವಷ್ಟೇ ಅಲ್ಲದೆ ವಿದೇಶಗಳ ಹಲವು ರಾಜಕೀಯ ನಾಯಕರು ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ.

ಯುನೈಟೆಡ್ ಕಿಂಗ್‌ಡಮ್, ಕೆನಡಾ ಮತ್ತು ಅಮೆರಿಕಾದ ಹಲವಾರು ರಾಜಕೀಯ ಮುಖಂಡರು ರೈತರೊಂದಿಗೆ ನಾವಿದ್ದೇವೆ ಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ. ಜೊತೆಗೆ ಪ್ರತಿಭಟನೆಗಳನ್ನು ಮೋದಿ ಸರ್ಕಾರ ನಿರ್ವಹಿಸುತ್ತಿರುವ ರೀತಿಯನ್ನು ಟೀಕಿಸಿದ್ದಾರೆ.

ಕೆನಡಾದ ಪ್ರಧಾನಿ ಜಸ್ಟಿನ್ ಟ್ರೂಡ್ “ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಬೆಂಬಲಿಸುತ್ತದೆ. ಆದರೆ ಭಾರತದ ಪರಿಸ್ಥಿತಿ ತೀವ್ರ ಕಳವಳಕಾರಿಯಾಗಿದೆ. ಸಂವಾದದ ಮೂಲಕ ಸಮಸ್ಯೆಗಳನ್ನು ಬಗೆಹರಿಸಬೇಕು. ಸಾಧ್ಯವಿರುವ ಎಲ್ಲಾ ಮಾರ್ಗಗಳ ಮೂಲಕ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸುತ್ತೇನೆ” ಎಂದಿದ್ದಾರೆ.

ಯುನೈಟೆಡ್ ಕಿಂಗ್‌ಡಮ್‌ನ ಲೇಬರ್‌ ಪಾರ್ಟಿ ಸಂಸದ ತನ್ಮನ್‌ಜೀತ್ ಸಿಂಗ್ ಧೇಸಿ ತಮ್ಮ ಟ್ವಿಟರ್‌ ಖಾತೆಯಲ್ಲಿ ದೆಹಲಿ ಚಲೋ ಪ್ರತಿಭಟನೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ’ಖಾಸಗೀಕರಣದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ಪಂಜಾಬ್ ಮತ್ತು ಭಾರತದ ಇತರ ಭಾಗಗಳ ರೈತರೊಂದಿಗೆ ನಾನು, ನಮ್ಮ ಕುಟುಂಬ ಮತ್ತು ಸ್ನೇಹಿತರು ನಿಲ್ಲುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

 

ಮತ್ತೊಬ್ಬ ಲೇಬರ್‌ ಪಾರ್ಟಿ ಸಂಸದ ಜಾನ್ ಮೆಕ್‌ಡೊನೆಲ್ ಅವರು “ನಾನು ಸಂಸದ ತನ್ಮನ್‌ಜೀತ್ ಸಿಂಗ್ ಧೇಸಿ ಅವರ ಮಾತುಗಳನ್ನು ಒಪ್ಪುತ್ತೇನೆ. ಶಾಂತಿಯುತ ಪ್ರತಿಭಟನಾಕಾರರ ವಿರುದ್ಧದ ಈ ರೀತಿಯ ದಬ್ಬಾಳಿಕೆಯ ವರ್ತನೆ ಸ್ವೀಕಾರಾರ್ಹವಲ್ಲ. ಇದು ಭಾರತದ ಖ್ಯಾತಿಗೆ ಕಳಂಕ ತರುತ್ತದೆ” ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಕೆನಡಾದ ಜಗ್ಮೀತ್ ಸಿಂಗ್ ನೇತೃತ್ವದ ನ್ಯೂ ಡೆಮಾಕ್ರಟಿಕ್ ಪಕ್ಷದಿಂದ ರೈತರಿಗೆ ಬೆಂಬಲ ವ್ಯಕ್ತವಾಗಿದೆ.

“ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ರೈತರ ವಿರುದ್ಧ ಭಾರತೀಯ ಸರ್ಕಾರ ನಡೆಸುತ್ತಿರುವ ಹಿಂಸಾಚಾರವು ಭೀಕರವಾಗಿದೆ. ನಾನು ಪಂಜಾಬ್ ಮತ್ತು ಭಾರತದಾದ್ಯಂತದ ಪ್ರತಿಭಟನಾ ನಿರತ ರೈತರಿಗೆ ಬೆಂಬಲ ಸೂಚಿಸುತ್ತೇನೆ. ಹಿಂಸಾಚಾರಕ್ಕಿಂತ ಶಾಂತಿಯುತ ಸಂವಾದದಲ್ಲಿ ತೊಡಗಿಸಿಕೊಳ್ಳಲು ನಾನು ಭಾರತೀಯ ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ರೈತರ ಪರವಾಗಿ ನಿಲ್ಲುವುದನ್ನೇ ರಾಜಕಾರಣವೆನ್ನುವುದಾದರೆ, ಹೌದು ನಾವು ತಪ್ಪಿತಸ್ಥರೇ..!

ಒಂಟಾರಿಯೊ ಪ್ರಾಂತೀಯ ಸಂಸತ್ತಿನಲ್ಲಿ ಬ್ರಾಂಪ್ಟನ್ ಪೂರ್ವವನ್ನು ಪ್ರತಿನಿಧಿಸುವ ಗುರ್‌ರತನ್ ಸಿಂಗ್ ಅವರು ಸದನದಲ್ಲಿ ಭಾರತದ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ್ದಾರೆ.

“ಭಾರತದಲ್ಲಿ ರೈತರು ಸರ್ಕಾರದಿಂದ ಆಕ್ರಮಣಕ್ಕೊಳಗಾಗಿದ್ದಾರೆ. ಅದಕ್ಕಾಗಿಯೇ ಭಾರತ ಸರ್ಕಾರವು ಈ ಅನ್ಯಾಯದ ಕಾನೂನುಗಳ ವಿರುದ್ಧ ರೈತರೊಂದಿಗೆ ನಿಲ್ಲುವಂತೆ ನಾನು ಈ ಸದನವನ್ನು ಕೇಳುತ್ತಿದ್ದೇನೆ” ಎಂದಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಂಸದ ಗುರ್‌ರತನ್ ಸಿಂಗ್, ರೈತರ ಮೇಲೆ ಪೊಲಿಸರು ನಡೆಸಿದ ದೌರ್ಜನ್ಯದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ  “ಈ ಚಿತ್ರಗಳು ಭಯಾನಕವಾಗಿವೆ. ನಾನು ರೈತರ ಕುಟುಂಬದಿಂದ ಬಂದವನು. ತಮ್ಮ ಜೀವನೋಪಾಯಕ್ಕೆ ಧಕ್ಕೆ ತರುವ ಕಾನೂನುಗಳನ್ನು ವಿರೋಧಿಸುವ ರೈತರ ನೋವು ಮತ್ತು ಹೋರಾಟವನ್ನು ನಾನು ಅನುಭವಿಸುತ್ತೇನೆ. ಶಾಂತಿಯುತ ಪ್ರತಿಭಟನಾಕಾರರ ಮೇಲೆ ಸರ್ಕಾರ ದಾಳಿ ನಡೆಸುತ್ತಿದೆ. ನಾನು ರೈತರ ಜೊತೆ ಇದ್ದೇನೆ ಎಂದು ಟ್ವೀಟ್‌ಗಳಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ’ರೈತರು ದೇಶದ ಜೀವನಾಡಿ, ರೈತರೊಂದಿಗೆ ಇಡೀ ದೇಶ ನಿಲ್ಲಬೇಕು’- ಪಿಣರಾಯಿ ವಿಜಯನ್

ಅಮೆರಿಕಾದಲ್ಲಿ ಇಲ್ಲಿಯವರೆಗೆ ಪ್ರತಿಭಟನೆಗೆ ಬಹಿರಂಗವಾಗಿ ತಮ್ಮ ಪ್ರತಿಕ್ರಿಯೆಯನ್ನು ಹೇಳಿದವರು ಕಡಿಮೆಯೇ. ಆದರೆ, ವಕೀಲರು ಮತ್ತು ರಿಪಬ್ಲಿಕನ್ ಪಕ್ಷದ ಅಧಿಕಾರಿ ಹರ್ಮೀತ್ ಕೆ ಧಿಲ್ಲಾನ್ ಮಾತ್ರ ತಮ್ಮ ಅಭಿಪ್ರಾಯವನ್ನು ಟ್ವೀಟ್ ಮೂಲಕ ಹೊರಹಾಕಿದ್ದಾರೆ.

“ಪಂಜಾಬ್ ಮೂಲದ ರೈತರ ವಂಶಸ್ಥರಾಗಿ, ಪಂಜಾಬಿ ರೈತರು ತಮ್ಮ ಹೊಲಗಳು, ಜೀವನ ವಿಧಾನ ಮತ್ತು ಸಂಸ್ಕೃತಿಯನ್ನು ನಾಶಪಡಿಸುವ ಭಾರತೀಯ ಸರ್ಕಾರದ ದೊಡ್ಡ-ಕಾರ್ಪೊರೇಷನ್ ಪರ ಕೃಷಿ ಮಸೂದೆಯನ್ನು ಪ್ರತಿಭಟಿಸಿದ್ದಕ್ಕಾಗಿ ಹಲ್ಲೆಗೊಳಗಾಗಿದ್ದನ್ನು ನೋಡಲು ನನಗೆ ನೋವಾಗುತ್ತಿದೆ. ಪ್ರಧಾನಿ ಮೋದಿಯವರೇ ರೈತರ ಸಮಸ್ಯೆಗಳನ್ನು ಆಲಿಸಿ, ಅವರನ್ನು ಭೇಟಿ ಮಾಡಿ, ಮತ್ತು ರಾಜಿ ಮಾಡಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ಜಗ್ಮೀತ್ ಸಿಂಗ್ ಮತ್ತು ತನ್ಮನ್‌ಜೀತ್ ಸಿಂಗ್ ಧೇಸಿ ಅವರಂತಹ ನಾಯಕರು ಈ ಹಿಂದೆಯೂ ಮೋದಿ ಸರ್ಕಾರವನ್ನು, ಕಾಶ್ಮೀರ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಬಗ್ಗೆ ಹಲವು ಬಾರಿ ಟೀಕಿಸಿದ್ದಾರೆ.

ಪ್ರತಿಭಟನಾ ನಿರತ ರೈತರಿಗೆ ಬೆಂಬಲ ಮತ್ತು ಪ್ರತಿಭಟನೆಯನ್ನು ಮೋದಿ ಸರ್ಕಾರ ನಿಭಾಯಿಸುತ್ತಿರುವ ಕುರಿತ ಟೀಕೆಗಳು ಕೇವಲ ಪಂಜಾಬ್ ಮೂಲದ ರಾಜಕಾರಣಿಗಳಾದ ಧೇಸಿ, ಗಿಲ್, ಜಗ್ಮೀತ್ ಸಿಂಗ್, ಗುರಾರತನ್ ಸಿಂಗ್ ಮತ್ತು ಸಾರಾ ಸಿಂಗ್ ಅವರಿಂದ ಮಾತ್ರ ಬಂದಿಲ್ಲ. ಜ್ಯಾಕ್, ಹ್ಯಾರಿಸ್, ಜಾನ್ ಮೆಕ್‌ಡೊನೆಲ್, ಕೆವಿನ್ ಯಾರ್ಡ್ ಮತ್ತು ಆಂಡ್ರಿಯಾ ಹೊರ್ವಾತ್ ಕೂಡ ತಮ್ಮ ಪ್ರತಿರೋಧ ನೀಡಿದ್ದಾರೆ.

ಭಾರತದ ರೈತರ ಪ್ರತಿಭಟನೆ ಬಗ್ಗೆ ಮಾತನಾಡಿರುವ ಬಹುತೇಕ ಎಲ್ಲಾ ರಾಜಕೀಯ ನಾಯಕರು ಆಯಾ ದೇಶಗಳೊಳಗಿನ ವಿರೋಧ ಪಕ್ಷಗಳ ನಾಯಕರು. ಇದು ಮೋದಿ ಸರ್ಕಾರದ ಮೇಲೆ ಅಂತರರಾಷ್ಟ್ರೀಯ ಒತ್ತಡಕ್ಕೆ ಕಾರಣವಾಗುವ ಸಂಭವವಿದೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ದೆಹಲಿಯಲ್ಲಿ ರೈತರ ಗುಡುಗು: ಇಂದಿನ ಹೋರಾಟದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...