Homeಚಳವಳಿರೈತ ಹೋರಾಟ: ಸುಳ್ಳು ಸುದ್ದಿ ವರದಿ ಮಾಡಿದ್ದ ಝೀ ನ್ಯೂಸ್‌ಗೆ NBDSA ಛೀಮಾರಿ

ರೈತ ಹೋರಾಟ: ಸುಳ್ಳು ಸುದ್ದಿ ವರದಿ ಮಾಡಿದ್ದ ಝೀ ನ್ಯೂಸ್‌ಗೆ NBDSA ಛೀಮಾರಿ

ಜೊತೆಗೆ ಕೆಂಪು ಕೋಟೆಯಿಂದ ಭಾರತದ ತ್ರಿವರ್ಣ ಧ್ವಜವನ್ನು ತೆಗೆದುಹಾಕಲಾಗಿದೆ ಎಂದು ಝೀ ನ್ಯೂಸ್ ಸುಳ್ಳು ವರದಿ ಮಾಡಿತ್ತು

- Advertisement -
- Advertisement -

ರೈತ ಹೋರಾಟದ ವರದಿಗಾರಿಕೆಯ ವೇಳೆ ಸುಳ್ಳು ವರದಿ ಮಾಡಿದ್ದಕ್ಕಾಗಿ ಝೀ ನ್ಯೂಸ್‌ ಚಾನಲ್‌ ವಿರುದ್ದ ಸಲ್ಲಿಸಲಾಗಿದ್ದ ದೂರನ್ನು News Broadcasting and Digital Standards Authority (NBDSA) ಪರಿಶೀಲನೆ ನಡೆಸಿ ಸುದ್ದಿ ಸಂಸ್ಥೆಗೆ ಛೀಮಾರಿ ಹಾಕಿದೆ. ಮಾತ್ರವಲ್ಲದೆ, ರೈತ ಹೋರಾಟದ ವಿರುದ್ದ ಪ್ರಸಾರ ಮಾಡಲಾಗಿದ್ದ, ಸುಳ್ಳು ವರದಿಗಳ ವೀಡಿಯೊಗಳನ್ನು ತಕ್ಷಣ ತೆಗೆದುಹಾಕಬೇಕೆಂದು ಸೂಚನೆ ನೀಡಿದೆ.

ಝೀ ನ್ಯೂಸ್ 2021 ರ ಗಣರಾಜ್ಯೋತ್ಸವದಂದು ರೈತರ ಪ್ರತಿಭಟನೆಯನ್ನು ‘ಖಲಿಸ್ತಾನಿಗಳಿಗೆ’ ಲಿಂಕ್ ಮಾಡುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಕಂಡುಬಂದಿದೆ. 2020 ರ ದೆಹಲಿ ಗಲಭೆ ಪ್ರಕರಣದ ಕುರಿತು ಟೈಮ್ಸ್ ನೌ ನಡೆಸಿದ ಎರಡು ಕಾರ್ಯಕ್ರಮಗಳು ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಕಂಡುಬಂದಿದೆ ಎಂದು NBDSA ತಿಳಿಸಿದೆ.  

2021 ರ ಗಣರಾಜ್ಯೋತ್ಸವದಂದು ನಡೆಯಲು ಘೋಷಿಸಿದ್ದ ಟ್ಯ್ರಾಕ್ಟರ್‌ ರ್‍ಯಾಲಿ ರೈತರ ಪ್ರತಿಭಟನೆಯನ್ನು ಝೀ ನ್ಯೂಸ್ “ತಾಲ್ ಥೋಕ್ ಕೆ: ಖಲಿಸ್ತಾನ್ ಸೆ ಕಬ್ ಸಾವಧಾನ್ ಹೋಗಾ ಕಿಸಾನ್?” (ಖಲಿಸ್ತಾನ್ ಬಗ್ಗೆ ರೈತರು ಯಾವಾಗ ಎಚ್ಚರವಹಿಸುತ್ತಾರೆ?) ಮತ್ತು “ತಾಲ್ ಥೋಕ್ ಕೆ: ನಹೀ ಮಾನೆ ಕಿಸಾನ್ ತೋ ಕ್ಯಾ ಗಣರಾಜ್ಯೋತ್ಸವದ ಪರ ಹೋಗಾ ‘ಗೃಹ ಯುದ್ಧ’?” (ರೈತರು ಒಪ್ಪದಿದ್ದರೆ ಗಣರಾಜ್ಯೋತ್ಸವದಂದು ‘ಅಂತರ್ಯುದ್ಧ’ ನಡೆಯುವುದೇ?) ಎಂಬ ಎರಡು ಕಾರ್ಯಕ್ರಮ ಮಾಡಿ ಖಲಿಸ್ತಾನಿಗಳಿಗೆ ಲಿಂಕ್ ಮಾಡುವ ಪ್ರಯತ್ನ ಮಾಡಿತ್ತು. ಈ ಕಾರ್ಯಕ್ರಮ ಜನವರಿ 19 ಮತ್ತು ಜನವರಿ 20, 2021 ರಂದು ಝೀ ನ್ಯೂಸ್‌ನಲ್ಲಿ ಪ್ರಸಾರವಾಗಿತ್ತು. ಈ ಕಾರ್ಯಕ್ರಮಗಳಲ್ಲಿ ಝೀ ನ್ಯೂಸ್  ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದೆ ಎಂದು NBDSA ತಿಳಿಸಿದೆ ಆಕ್ಷೇಪ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಉಂಡ ಮನೆಗೆ ದ್ರೋಹ ಬಗೆದ ಭಾರತೀಯ ಮಾಧ್ಯಮಗಳು; ಅನ್ನದಾತರನ್ನೇ ಭಯೋತ್ಪಾದಕರು-ದೇಶದ್ರೋಹಿಗಳು ಎನ್ನುತ್ತಿವೆ!

ಈ ಎರಡೂ ಸುದ್ದಿಗಳ ವಿರುದ್ದ ದೂರುದಾರ ಇಂದ್ರಜಿತ್‌ ಘೋರ್ಪಡೆ ಎಂಬುವವರು NBDSAಗೆ ದೂರು ನೀಡಿದ್ದರು. ಅವರು ತಮ್ಮ ದೂರಿನಲ್ಲಿ ಜೀ ನ್ಯೂಸ್‌ 19.1.2021 ಮತ್ತು 20.1.2021. ರಂದು ಪ್ರಸಾರ ಮಾಡಿದ ಸುದ್ದಿಗಳು ಆಕ್ಷೇಪಾರ್ಹವಾಗಿದ್ದು, ಇವು NBDA ಮಾರ್ಗಸೂಚಿಗಳನ್ನು ಉಲ್ಲಂಘಿಸಿವೆ ಎಂದು ಹೇಳಿದ್ದರು.

ದೂರಿನ ವಿಚಾರಣೆ ನಡೆಸಿರುವ NBDSA ಜೀ ನ್ಯೂಸ್‌ಗೆ ವಿಡಿಯೋಗಳನ್ನು ಡಿಲೀಟ್‌ ಮಾಡಲು ಸೂಚಿಸಿದ್ದು, ಈ ವಿಡಿಯೋಗಳು ಈ ಕೆಳಗಿನ NBDSA ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ಹೇಳಿದೆ:

  1. ವರದಿ ಮಾಡುವುದು ವೀಕ್ಷಕರಲ್ಲಿ ಸಂವೇದನಾಶೀಲನೆಯನ್ನು ತೊಡೆದು ಹಾಕಬಾರದು, ಭಯ, ಸಂಕಟ ಅಥವಾ ಅನಗತ್ಯ ಭಯವನ್ನು ಸೃಷ್ಟಿಸಬಾರದು.
  2. ಯಾವುದೇ ವಿವಾದಾತ್ಮಕ ಸಾರ್ವಜನಿಕ ಸಮಸ್ಯೆಯ ಸಂದರ್ಭದಲ್ಲಿ ಯಾವುದಾದರೂ ಒಂದು ಬದಿಯವರಿಗೆ ಅಡ್ಡಿಪಡಿಸುವ ಉದ್ದೇಶಕ್ಕಾಗಿ ಸುದ್ದಿಗಳನ್ನು ಆಯ್ಕೆ ಮಾಡಬಾರದು.
  3. ಸುದ್ದಿ ಪ್ರಸಾರಕ್ಕೂ ಮುನ್ನ, ಸಾಧ್ಯವಾದರೆ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಮಾಹಿತಿಯನ್ನು ನೇರವಾಗಿ ಸಂಗ್ರಹಿಸಬೇಕು.
  4. ಸತ್ಯಗಳು ಸ್ಪಷ್ಟವಾಗಿ ಭಿನ್ನವಾಗಿರಬೇಕು. ಅವುಗಳು ಅಭಿಪ್ರಾಯ, ವಿಶ್ಲೇಷಣೆ ಮತ್ತು ಕಾಮೆಂಟ್‌ಗಳೊಂದಿಗೆ ಬೆರೆಸಬಾರದು.
  5. ಸತ್ಯದ ವಿರುದ್ದ ವಿದ್ದಲ್ಲಿ, ಅಂತಹ ದೋಷಗಳನ್ನು ಆದಷ್ಟು ಬೇಗ ಸರಿಪಡಿಸಬೇಕು, ಸತ್ಯದ ಸರಿಯಾದ ಆವೃತ್ತಿಯ ಪ್ರಸಾರಕ್ಕೆ ಸಾಕಷ್ಟು ಪ್ರಾಮುಖ್ಯತೆಯನ್ನು ನೀಡಬೇಕು.
  6. ಸಮತೋಲಿತ ವರದಿಗಾಗಿ, ಪ್ರಸಾರಕರು ತಟಸ್ಥವಾಗಿರಬೇಕು. ವಿಶೇಷವಾಗಿ ವಿವಾದಾತ್ಮಕ ವಿಷಯದ ಕುರಿತು ಯಾವುದೇ ನಿರ್ದಿಷ್ಟವಾದ ದೃಷ್ಟಿಕೋನಕ್ಕೆ ಅನಗತ್ಯ ಪ್ರಾಮುಖ್ಯತೆಯನ್ನು ನೀಡಬಾರದು.
  7. ರಾಷ್ಟ್ರೀಯ ಸಂಸ್ಥೆಗಳ ಹಿತಾಸಕ್ತಿ ರಕ್ಷಿಸುವ ಉದ್ದೇಶದಿಂದ ಸಾರ್ವಜನಿಕ ವಿಶ್ವಾಸವನ್ನು ಕುಗ್ಗಿಸುವ ವರದಿಯನ್ನು ಮಾಡಬಾರದು.
  8. ಮೂಢನಂಬಿಕೆಯನ್ನು ನಂಬಿಕೆ ವಿಷಯವೆಂದು ಪ್ರಚಾರ ಮಾಡಬಾರದು.

ಝೀ ವಾಹಿನಿಯ ಈ ಎರಡೂ ಕಾರ್ಯಕ್ರಮಗಳು NBDAಯ ಮೇಲಿನ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವುದು ಪರಿಶೀಲನೆ ವೇಳೆ ತಿಳಿದು ಬಂದಿದೆ. ಅಲ್ಲದೆ, ಈ ಕಾರ್ಯಕ್ರಮಗಳಲ್ಲಿ ಸಾಮಾಜಿಕ-ಮಾಧ್ಯಮದಿಂದ ಪರಿಶೀಲಿಸದ ಮಾರ್ಪಾಡು ಮಾಡಿದ ವೀಡಿಯೊಗಳನ್ನು ಪ್ರಸಾರ ಮಾಡಲಾಗಿದೆ ಎಂದು ದೂರುದಾರರು ಹೇಳಿದ್ದಾರೆ.

ಝೀ ವಾಹಿನಿಯ ಈ ಕಾರ್ಯಕ್ರಮಗಳಲ್ಲಿ, ಡಿಸೆಂಬರ್ 2020ರಲ್ಲಿ ಜರ್ಮನಿಯಲ್ಲಿ ನಡೆದ ಚಾರಿಟಿ ಈವೆಂಟ್‌ ಸಂದರ್ಭದಲ್ಲಿ ದೀಪಗಳಿಂದ ಅಲಂಕರಿಸಲ್ಪಟ್ಟ ಟ್ರಾಕ್ಟರುಗಳ ವೀಡಿಯೊವನ್ನು, ಪ್ರತಿಭಟನಾನಿರತ ರೈತರು ಜನವರಿ 26 ರಂದು ನಡೆಸಲಿರುವ ಟ್ರ್ಯಾಕ್ಟರ್-ಮಾರ್ಚ್‌ಗೆ ಸಿದ್ಧವಾಗುತ್ತಿರುವ ಟ್ರಾಕ್ಟರ್‌ಗಳು ಎಂದು ಪ್ರಸಾರ ಮಾಡಲಾಗಿತ್ತು. ಇದರ ಬಗ್ಗೆ ಹಲವು ಏಜೆನ್ಸಿಗಳು ಫ್ಯಾಕ್ಟ್‌ಚೆಕ್‌ ನಡೆಸಿ, ಪರಿಶೀಲನೆ ನಡೆಸಿವೆ. ಆದರೂ, ತನ್ನ ವೀಕ್ಷಕರನ್ನು ದಾರಿ ತಪ್ಪಿಸಿದ್ದಕ್ಕಾಗಿ ಝೀ ನ್ಯೂಸ್‌ ಪ್ರಸಾರಕರು ಇನ್ನೂ ಕ್ಷಮೆಯಾಚಿಸಿಲ್ಲ ಎಂದು ದೂರುದಾರರು ಹೇಳಿದ್ದಾರೆ.

ಇದನ್ನೂ ಓದಿ: ಮಾಧ್ಯಮಗಳು ಸುಳ್ಳು ಹೇಳುತ್ತಿವೆ: ರೈತರ ಮಹಾಪಂಚಾಯತ್‌ ವೇದಿಕೆಯಲ್ಲಿ ABP ಚಾನೆಲ್‌ ವರದಿಗಾರನ ರಾಜೀನಾಮೆ!

ಜೊತೆಗೆ ಕೆಂಪು ಕೋಟೆಯಿಂದ ಭಾರತದ ತ್ರಿವರ್ಣ ಧ್ವಜವನ್ನು ತೆಗೆದುಹಾಕಲಾಗಿದೆ ಎಂದು ಝೀ ನ್ಯೂಸ್ ಸುಳ್ಳು ವರದಿ ಮಾಡಿದೆ ಎಂದು ಪ್ರಾಧಿಕಾರವು ಕಂಡು ಹಿಡಿದಿದೆ. ಝೀ ನ್ಯೂಸ್ ರೈತರ ಪ್ರತಿಭಟನೆಗಳನ್ನು ಖಲಿಸ್ತಾನಿಗಳಿಗೆ ಸಂಬಂಧಿಸಿ ಪ್ರಸಾರ ಮಾಡಿದ ಮೂರು ವೀಡಿಯೊಗಳಲ್ಲಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಹೇಳಿದೆ.

ಈ ಎಲ್ಲಾ ಅಂಶಗಳನ್ನು ಗಮನಿಸಿರುವ NBDSA, ಝೀ ವಾಹಿನಿಯ ಈ ಎರಡೂ ಕಾರ್ಯಕ್ರಮಗಳ ಬಗ್ಗೆ ತನ್ನ ಅಸಮ್ಮತಿಯನ್ನು ಸೂಚಿಸಿದೆ. ಅಲ್ಲದೆ, ಪ್ರಸಾರ ಮಾಡಲಾಗಿರುವ ಆ ಎರಡೂ ವೀಡಿಯೊಗಳು ಚಾನಲ್‌ನ ವೆಬ್‌ಸೈಟ್ ಅಥವಾ YouTube ಅಥವಾ ಯಾವುದೇ ಇತರ ಲಿಂಕ್‌ಗಳಲ್ಲಿ ಇನ್ನೂ ಲಭ್ಯವಿದ್ದರೆ, ತಕ್ಷಣವೇ ತೆಗೆದುಹಾಕಬೇಕು ಮತ್ತು ಆ ಬಗ್ಗೆ 7 ದಿನಗಳಲ್ಲಿ NBDSA ಗೆ ಲಿಖಿತ ರೂಪದಲ್ಲಿ ದೃಢೀಕರಿಸಬೇಕು ಎಂದು ನಿರ್ದೇಶಿಸಿದೆ.

ಯಾವುದೇ ಸುದ್ದಿಯನ್ನು ವರದಿ ಮಾಡುವಾಗ ಜಾಗರೂಕತೆ ಮತ್ತು ಎಚ್ಚರಿಕೆಯನ್ನು ವಹಿಸಬೇಕು. ಪತ್ರಿಕಾ ನೀತಿ ಸಂಹಿತೆ ಮತ್ತು ಬ್ರಾಡ್‌ಕಾಸ್ಟಿಂಗ್ ಮಾನದಂಡಗಳ ಮೂಲಭೂತ ತತ್ವಗಳನ್ನು ಅನುಸರಿಸಬೇಕು ಅಲ್ಲದೆ, ಸರಿಯಾದ ನಿಖರತೆ ಮತ್ತು ನಿಷ್ಪಕ್ಷಪಾತದ ತತ್ವ, ಪ್ರಸಾರದ ಸಂದರ್ಭದಲ್ಲಿ ಮಾಡಿದ ಗಮನಾರ್ಹ ತಪ್ಪುಗಳನ್ನು ತಕ್ಷಣವೇ ಸರಿಪಡಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದೆ.

ಮಾತ್ರವಲ್ಲದೆ, ಮುಂದೆ ಪ್ರಸಾರ ಮಾಡಲಾಗುವ ಸುದ್ದಿಗಳಿಗೆ ಟ್ಯಾಗ್‌ಲೈನ್‌ಗಳು, ಹ್ಯಾಶ್‌ಟ್ಯಾಗ್‌ಗಳು ಮತ್ತು ಚಿತ್ರಗಳು/ಛಾಯಾಚಿತ್ರಗಳ ಬಳಕೆಯನ್ನು ಪ್ರಸಾರ ಮಾಡಲು/ಪ್ರಕಟಿಸಲು ನಿರ್ದಿಷ್ಟ ಮಾರ್ಗಸೂಚಿಗಳನ್ನು ನೀಡಲು ನಿರ್ಧರಿಸಿದೆ.

ಇತ್ತ ದುಬೈನ ಚಾರ್ಟರ್ಡ್ ಅಕೌಂಟೆಂಟ್‍ಗಳ ಅಬುಧಾಬಿ ಸಂಘ ಝೀ ನ್ಯೂಸ್ ನಿರೂಪಕ ಸುಧೀರ್ ಚೌಧರಿಯನ್ನು ಎಮಿರೇಟ್ಸ್‌ಗೆ ಸ್ವಾಗತಿಸಲು ಸಿದ್ಧವಾಗಿತ್ತು. ಆದರೆ, ತೀವ್ರ ಟೀಕೆಗಳಿಂದಾಗಿ ಅವರನ್ನು ಕಾರ್ಯಕ್ರಮದಿಂದ ಹೊರಗಿಡಲಾಗಿದೆ.


ಇದನ್ನೂ ಓದಿ: ಕೆಂಪು ಕೋಟೆಯಲ್ಲಿ ಧ್ವಜ ಹಾರಾಟ – ಸುಳ್ಳು ಸುದ್ದಿ ಹರಡುತ್ತಿರುವ ಬಿಜೆಪಿ ಮತ್ತು ಮಾಧ್ಯಮಗಳು: ಭಾರಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...