Homeಚಳವಳಿರೈತ ಹೋರಾಟ: ರೈತರಿಗೆ ಇ-ಶೌಚಾಲಯ, ಗೀಸರ್ ದಾನ‌ ನೀಡಿದ ಎನ್‌ಜಿಒಗಳು

ರೈತ ಹೋರಾಟ: ರೈತರಿಗೆ ಇ-ಶೌಚಾಲಯ, ಗೀಸರ್ ದಾನ‌ ನೀಡಿದ ಎನ್‌ಜಿಒಗಳು

ದೆಹಲಿಯ ಟಿಕ್ರಿ ಗಡಿಯಲ್ಲಿ ಈಗ ಸಾವಿರಾರು ಸಂಖ್ಯೆಯಲ್ಲಿ ನೆರೆದಿರುವ ರೈತರಿಗೆ ಅಮೆರಿಕಾ ಮೂಲದ 2 ಸಿಖ್ ಎನ್‌ಜಿಒಗಳು 200 ಶೌಚಾಲಯಗಳು, ಗೀಸರ್‌ ಮತ್ತು ಮಲಗಲು ಡೇರೆಗಳನ್ನು ದಾನ ಮಾಡಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ 25 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರಿಗೆ ಹಲವು ಸಂಘ ಸಂಸ್ಥೆಗಳು, ಎನ್‌ಜಿಒಗಳು ನೆರವಿಗೆ ಧಾವಿಸಿವೆ. ಕೊರೆಯುವ ಚಳಿಯಲ್ಲಿ ನಡುಗುತ್ತಾ, ಮೂಲಸೌಕರ್ಯಗಳಿಲ್ಲದ ಪರಿಸ್ಥಿತಿಯಲ್ಲೂ ರೈತರ ಹೋರಾಟ ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ.

ಸರ್ಕಾರ ತನ್ನ ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್ ಪಡೆಯುವಂತೆ ಮಾಡೇ ಮಾಡುತ್ತೆವೆ ಎಂಬ ದೃಢ ಸಂಕಲ್ಪ ತೊಟ್ಟಿರುವ ರೈತರ ನೆರವಿಗೆ ಹಲವು ಸಂಘ ಸಂಸ್ಥೆಗಳು, ವಿದ್ಯಾರ್ಥಿ ಸಂಘಗಳು, ದೇಶಿಯ, ವಿದೇಶಿ ಸಂಘಗಳು ನಿಂತಿವೆ.

ದೆಹಲಿಯ ಟಿಕ್ರಿ ಗಡಿಯಲ್ಲಿ ಈಗ ಸಾವಿರಾರು ಸಂಖ್ಯೆಯಲ್ಲಿ ನೆರೆದಿರುವ ರೈತರಿಗೆ ಅಮೆರಿಕಾ ಮೂಲದ 2 ಸಿಖ್ ಎನ್‌ಜಿಒಗಳು ಶೌಚಾಲಯಗಳು, ಗೀಸರ್‌ ಮತ್ತು ಮಲಗಲು ಡೇರೆಗಳನ್ನು ದಾನ  ಮಾಡಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಅನ್ನದಾತರಿಗೆ ಆಹಾರ ವಿತರಿಸಿದ ಬಾಕ್ಸರ್‌ ವಿಜೇಂದರ್ ಸಿಂಗ್

 

“ಪ್ರತಿಭಟನಾ ಸ್ಥಳಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಇರುವುದರಿಂದಾಗಿ, ನಾವು 200 ಪೋರ್ಟಬಲ್ ಶೌಚಾಲಯ ಮತ್ತು ಗೀಸರ್‌ಗಳನ್ನು ದಾನ ಮಾಡಲು ನಿರ್ಧರಿಸಿದ್ದೇವು” ಎಂದು ಸಿಖ್ ಪಂಚಾಯತ್ ಫ್ರೀಮಾಂಟ್ ಕ್ಯಾಲಿಫೋರ್ನಿಯಾದ ಹೋಶಿಯಾರ್‌ಪುರದ ಸಂಯೋಜಕ ಎಸ್.ಪಿ.ಸಿಂಗ್ ಖಲ್ಸಾ ಮಾಹಿತಿ ನೀಡಿದ್ದಾರೆ.

ತೀವ್ರ ಚಳಿ ಇರುವ ದೆಹಲಿಯಲ್ಲಿ ರೈತರಿಗೆ ಉಳಿದುಕೊಳ್ಳಲು ಡೇರೆಗಳನ್ನು ನೀಡಲಾಗಿದೆ. ಪ್ರತಿಭಟನಾ ನಿರತ 20ಕ್ಕೂ ಹೆಚ್ಚು ರೈತರು ಚಳಿ ಸೇರಿದಂತೆ ಅನೇಕ ಅನಾರೋಗ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ರೈತ ಹೋರಾಟವನ್ನು ಬೆಂಬಲಿಸಿ ಆತ್ಮಹತ್ಯೆ ಮಾಡಿಕೊಂಡ ಸಿಖ್ ಧರ್ಮಗುರು!

ಪ್ರತಿಭಟನಾ ನಿರತ ರೈತರಿಗೆ ದೆಹಲಿ-ಹರಿಯಾಣದ ಸಿಂಘ ಗಡಿಯಲ್ಲಿ ಸ್ವಯಂ ಸೇವಕರು ಚಹಾ ಮತ್ತು ಉಪಹಾರವನ್ನು ನೀಡಿದ್ದಾರೆ.

ದೆಹಲಿಯ ಟಿಕ್ರಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಅನ್ನದಾತರಿಗೆ ಜಮೀನ್ದಾರ ವಿದ್ಯಾರ್ಥಿ ಸಂಸ್ಥೆ (ಜೆಎಸ್‌ಒ) ಆಯೋಜಿಸಿದ್ದ ವತಿಯಿಂದ ಕಾಂಗ್ರೆಸ್ ಮುಖಂಡ ಮತ್ತು ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ಬಾಕ್ಸರ್ ವಿಜೇಂದರ್ ಸಿಂಗ್ ರೈತರಿಗೆ ಆಹಾರ ವಿತರಿಸಿದ್ದರು.

ಈ ಹಿಂದೆ ರೈತರಿಗೆ ಪಿಜ್ಜಾ ವಿತರಿಸಿದ್ದ ನಾಲ್ವರು ಸ್ನೇಹಿತರ ತಂಡದ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ರೈತರು ಪಿಜ್ಜಾ ತಿಂದಿದ್ದನ್ನು ಅನೇಕ ಜನ ವ್ಯಂಗ್ಯದ ಧಾಟಿಯಲ್ಲಿ ಟೀಕಿಸಿದ್ದರು ಇದಕ್ಕೆ ಅನೇಕರು ನಮಗಾಗಿ ಅನ್ನ ಬೆಳೆಯುವವರಿಗೆ ಪಿಜ್ಜಾ ತಿನ್ನುವ ಹಕ್ಕಿಲ್ಲವೇ ಎಂದು ಪೋಸ್ಟ್‌ಗಳನ್ನು ಹಾಕುವ ಮೂಲಕ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು.


ಇದನ್ನು ಓದಿ: ರೈತ ಹೋರಾಟಕ್ಕೆ ಬೆಂಬಲ ನೀಡಿದ ಚಿಪ್ಕೋ ಚಳುವಳಿಯ ನೇತಾರ ಸುಂದರ್‌ಲಾಲ್ ಬಹುಗುಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...