Homeಚಳವಳಿರೈತ ಹೋರಾಟ: ಪಟ್ಟು ಬಿಡದ ಸರ್ಕಾರಕ್ಕೆ ವಿಭಿನ್ನವಾಗಿ ಪೆಟ್ಟು ನೀಡಲು ನಿಂತ ರೈತರು

ರೈತ ಹೋರಾಟ: ಪಟ್ಟು ಬಿಡದ ಸರ್ಕಾರಕ್ಕೆ ವಿಭಿನ್ನವಾಗಿ ಪೆಟ್ಟು ನೀಡಲು ನಿಂತ ರೈತರು

‘ಸಂವಿಧಾನ ದಿನ ಉಳಿಸಿ’ ಮತ್ತು ‘ಕಿಸಾನ್ ಬಹುಜನ ಏಕತೆ ದಿನ’ ದಿನವನ್ನು ಏಪ್ರಿಲ್ 14 ರಂದು ಆಚರಿಸಲಾಗುವುದು.

- Advertisement -
- Advertisement -

ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಲಕ್ಷಿಸಿದೆ ಎಂದಿರುವ ರೈತ ಸಂಘಟನೆ ಚಳುವಳಿ ತೀವ್ರಗೊಳಿಸುತ್ತಿದೆ. 24 ಗಂಟೆಗಳ ರಸ್ತೆ ತಡೆ, ‘ಸಂವಿಧಾನ ದಿನ ಉಳಿಸಿ’, ‘ಕಿಸಾನ್ ಬಹುಜನ ಏಕತೆ ದಿನಗಳ ಮೂಲಕ ವಿಭಿನ್ನವಾಗಿ ಪಟ್ಟು ಬಿಡದ ಸರ್ಕಾರಕ್ಕೆ ಪೆಟ್ಟು ನೀಡಲು ಹೊರಟಿದೆ.

ನವೆಂಬರ್‌ 26 ರಿಂದ ಶುರುವಾದ ರೈತ ಹೋರಾಟ 135 ದಿನಗಳನ್ನು ದಾಟುತ್ತಿದೆ. ಈ ನಡುವೆ ನೂರಾರು ರೈತ ಹೋರಾಟಗಾರರು ಹುತಾತ್ಮರಾಗಿದ್ದಾರೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯನ್ನು ಕಾನೂನುಬದ್ಧಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಈಗ ಕೇಂದ್ರ ಸರ್ಕಾರ ರೈತರೊಂದಿಗೆ ಸಂಧಾನ  ಸಭೆಗಳನ್ನು ನಡೆಸುವುದನ್ನು ನಿಲ್ಲಿಸಿದೆ. ಪ್ರತಿಭಟನಾ ನಿರತ ರೈತರ ಬೇಡಿಕೆಗಳನ್ನು ಆಲಿಸಲು ಸರ್ಕಾರ ಸಿದ್ಧವಿಲ್ಲ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ (ಎಸ್‌ಕೆಎಂ) ಚಳುವಳಿಯನ್ನು ಮುಂದುವರಿಸಲು ಮತ್ತು ಅದನ್ನು ತೀವ್ರಗೊಳಿಸಲು ಹಲವು ವಿಭಿನ್ನ ಮಾರ್ಗಗಳನ್ನು ಅನುಸರಿಸುತ್ತಿದೆ. ಈ ಕುರಿತು ಪ್ರತಿಭಟನಾ ನಿರತ ರೈತಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಇಂದು, ಏಪ್ರಿಲ್ 10 ರಂದು, ಬೆಳಗ್ಗೆ 8 ರಿಂದ ಕುಂಡ್ಲಿ-ಮಾನೇಸರ್-ಪಲ್ವಾಲ್ (ಕೆಎಂಪಿ) -ಕುಂಡ್ಲಿ-ಗಾಜಿಯಾಬಾದ್-ಪಾಲ್ವಾಲ್ (ಕೆಜಿಪಿ) ಎಕ್ಸ್‌ಪ್ರೆಸ್ ಹೆದ್ದಾರಿಗಳನ್ನು 24 ಗಂಟೆಗಳ ಕಾಲ (ಏಪ್ರಿಲ್ 11 ರ ಬೆಳಿಗ್ಗೆ 8 ರ ವರೆಗೆ) ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಶಾಹಿನ್‌ಬಾಗ್‌‌ ಅನ್ನು ನಡೆಸಿಕೊಂಡಂತೆ ರೈತ ಹೋರಾಟಗಾರರನ್ನು ನಡೆಸದಿರಿ: ಕೇಂದ್ರಕ್ಕೆ ಟಿಕಾಯತ್‌

ಏಪ್ರಿಲ್ 13 ರಂದು ಖಾಲ್ಸಾ ಪಂಥದ ಅಡಿಪಾಯ ದಿನವನ್ನು ದೆಹಲಿಯ ಗಡಿಯಲ್ಲಿ ಆಚರಿಸಲಾಗುವುದು. ಜೊತೆಗೆ ಅದೇ ಸಮಯದಲ್ಲಿ, ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ವಾರ್ಷಿಕೋತ್ಸವದಂದು ಹುತಾತ್ಮರ ಗೌರವಾರ್ಥ ಕಾರ್ಯಕ್ರಮಗಳು ನಡೆಯಲಿವೆ. ಎಂದು ಎಸ್‌ಕೆಎಂ ತಿಳಿಸಿದೆ.

‘ಸಂವಿಧಾನ ದಿನ ಉಳಿಸಿ’ ಮತ್ತು ‘ಕಿಸಾನ್ ಬಹುಜನ ಏಕತೆ ದಿನ’ ದಿನವನ್ನು ಏಪ್ರಿಲ್ 14 ರಂದು ಆಚರಿಸಲಾಗುವುದು. ಈ ದಿನ, ಸಮುಕ್ತ ಕಿಸಾನ್ ಮೋರ್ಚಾದ ಎಲ್ಲಾ ಕಾರ್ಯಕ್ರಮಗಳನ್ನು ಬಹುಜನ ಸಮಾಜದ ಹೋರಾಟಗಾರರು ನಿರ್ವಹಿಸಲಿದ್ದಾರೆ. ವೇದಿಕೆಗಳು ಅವರಿಗಾಗಿ ಮೀಸಲಿರುತ್ತವೆ ಎಂದಿದ್ದಾರೆ.

ದ್ವೇಷ ಮತ್ತು ವಿಭಜನೆಯ ಮನೋಭಾವ ಹರಡಲು, ರೈತರು ಮತ್ತು ಕಾರ್ಮಿಕರನ್ನು ಶತ್ರುಗಳೆಂದು ನಿರೂಪಿಸಲು ಬಿಜೆಪಿ ನಾಯಕರು ಹರಿಯಾಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಮಾಡಬಹುದು. ಏಪ್ರಿಲ್ 14 ರಂದು ಹರಿಯಾಣದ ಉಪಮುಖ್ಯಮಂತ್ರಿ ಉದ್ದೇಶಪೂರ್ವಕವಾಗಿ ಕೈತಾಲ್‌ನಲ್ಲಿ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ. ಹಾಗಾಗಿ ಶಾಂತಿಯುತವಾಗಿ ಇವರ ವಿರುದ್ಧ ಪ್ರತಿಭಟಿಸುವಂತೆ ನಾವು ಎಲ್ಲಾ ದಲಿತ-ಬಹುಜನರು ಮತ್ತು ರೈತರಲ್ಲಿ ಮನವಿ ಮಾಡುತ್ತೇವೆ ಎಂದಿದ್ದಾರೆ.

ಕಿಸಾನ್ ಆಂದೋಲನದಲ್ಲಿ ಸ್ಥಳೀಯ ಜನರ ಭಾಗವಹಿಸುವಿಕೆ ಮತ್ತು ಸಮರ್ಪಣೆಯನ್ನು ಗುರುತಿಸಿ, ಏಪ್ರಿಲ್ 18 ರಂದು ಸ್ಥಳೀಯ ಜನರನ್ನು ವೇದಿಕೆಗಳಲ್ಲಿ ಗೌರವಿಸಲಾಗುವುದು. ಅಂದು ವೇದಿಕೆಯ ನಿರ್ವಹಣೆಯ ಜವಾಬ್ದಾರಿಯನ್ನು ಸ್ಥಳೀಯ ಜನರಿಗೆ ನೀಡಲಾಗುವುದು ಎಂದಿದೆ.

ಗಾಜಿಪುರ್‌ ಗಡಿಯಲ್ಲಿರುವ ರೈತರ ಹುತಾತ್ಮ ಸ್ಮಾರಕ

ಏಪ್ರಿಲ್ 20 ರಂದು, ಧನ್ನಾ ಭಗತ್ ಅವರ ಜನ್ಮ ದಿನಾಚರಣೆಯಂದು, ಅವರ ಗ್ರಾಮ ದೋಹಾ ಕಲನ್‌ನಿಂದ ದೆಹಲಿಯ ಗಡಿಗೆ ಮಣ್ಣನ್ನು ತರಲಾಗುವುದು. ಅಂದು ಅವರ ನೆನಪಿಗಾಗಿ ಟಿಕ್ರಿ ಬಾರ್ಡರ್ ವೇದಿಕೆಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

2021 ರ ಏಪ್ರಿಲ್ 24 ರಂದು ದೆಹಲಿ ಗಡಿಯಲ್ಲಿ ಈ ಚಳವಳಿಯ 150 ದಿನಗಳು ಪೂರ್ಣಗೊಳ್ಳುವ ಕಾರಣ, ವಾರ ಪೂರ್ತಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು, ಇದರಲ್ಲಿ ರೈತರು ಮತ್ತು ಕಾರ್ಮಿಕರು, ನೌಕರರು, ಯುವಕರು, ವ್ಯಾಪಾರಿಗಳು, ವಿದ್ಯಾರ್ಥಿಗಳು ಮತ್ತು ಇತರ ಸಂಸ್ಥೆಗಳು ಸೇರಲು ಕರೆ ನೀಡಲಾಗುವುದು ಎಂದು ಎಸ್‌ಕೆಎಂ ತಿಳಿಸಿದೆ.


ಇದನ್ನೂ ಓದಿ: ರೈತ ಹೋರಾಟ: ಹುತಾತ್ಮ ಸ್ಮಾರಕಕ್ಕೆ ಸೇರಿದ ದೇಶದ 23 ರಾಜ್ಯಗಳ 1,500 ಹಳ್ಳಿಗಳ ಮಣ್ಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...