Homeಚಳವಳಿರೈತ ಹೋರಾಟ: ಪಟ್ಟು ಬಿಡದ ಸರ್ಕಾರಕ್ಕೆ ವಿಭಿನ್ನವಾಗಿ ಪೆಟ್ಟು ನೀಡಲು ನಿಂತ ರೈತರು

ರೈತ ಹೋರಾಟ: ಪಟ್ಟು ಬಿಡದ ಸರ್ಕಾರಕ್ಕೆ ವಿಭಿನ್ನವಾಗಿ ಪೆಟ್ಟು ನೀಡಲು ನಿಂತ ರೈತರು

‘ಸಂವಿಧಾನ ದಿನ ಉಳಿಸಿ’ ಮತ್ತು ‘ಕಿಸಾನ್ ಬಹುಜನ ಏಕತೆ ದಿನ’ ದಿನವನ್ನು ಏಪ್ರಿಲ್ 14 ರಂದು ಆಚರಿಸಲಾಗುವುದು.

- Advertisement -
- Advertisement -

ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಲಕ್ಷಿಸಿದೆ ಎಂದಿರುವ ರೈತ ಸಂಘಟನೆ ಚಳುವಳಿ ತೀವ್ರಗೊಳಿಸುತ್ತಿದೆ. 24 ಗಂಟೆಗಳ ರಸ್ತೆ ತಡೆ, ‘ಸಂವಿಧಾನ ದಿನ ಉಳಿಸಿ’, ‘ಕಿಸಾನ್ ಬಹುಜನ ಏಕತೆ ದಿನಗಳ ಮೂಲಕ ವಿಭಿನ್ನವಾಗಿ ಪಟ್ಟು ಬಿಡದ ಸರ್ಕಾರಕ್ಕೆ ಪೆಟ್ಟು ನೀಡಲು ಹೊರಟಿದೆ.

ನವೆಂಬರ್‌ 26 ರಿಂದ ಶುರುವಾದ ರೈತ ಹೋರಾಟ 135 ದಿನಗಳನ್ನು ದಾಟುತ್ತಿದೆ. ಈ ನಡುವೆ ನೂರಾರು ರೈತ ಹೋರಾಟಗಾರರು ಹುತಾತ್ಮರಾಗಿದ್ದಾರೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯನ್ನು ಕಾನೂನುಬದ್ಧಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಈಗ ಕೇಂದ್ರ ಸರ್ಕಾರ ರೈತರೊಂದಿಗೆ ಸಂಧಾನ  ಸಭೆಗಳನ್ನು ನಡೆಸುವುದನ್ನು ನಿಲ್ಲಿಸಿದೆ. ಪ್ರತಿಭಟನಾ ನಿರತ ರೈತರ ಬೇಡಿಕೆಗಳನ್ನು ಆಲಿಸಲು ಸರ್ಕಾರ ಸಿದ್ಧವಿಲ್ಲ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ (ಎಸ್‌ಕೆಎಂ) ಚಳುವಳಿಯನ್ನು ಮುಂದುವರಿಸಲು ಮತ್ತು ಅದನ್ನು ತೀವ್ರಗೊಳಿಸಲು ಹಲವು ವಿಭಿನ್ನ ಮಾರ್ಗಗಳನ್ನು ಅನುಸರಿಸುತ್ತಿದೆ. ಈ ಕುರಿತು ಪ್ರತಿಭಟನಾ ನಿರತ ರೈತಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಇಂದು, ಏಪ್ರಿಲ್ 10 ರಂದು, ಬೆಳಗ್ಗೆ 8 ರಿಂದ ಕುಂಡ್ಲಿ-ಮಾನೇಸರ್-ಪಲ್ವಾಲ್ (ಕೆಎಂಪಿ) -ಕುಂಡ್ಲಿ-ಗಾಜಿಯಾಬಾದ್-ಪಾಲ್ವಾಲ್ (ಕೆಜಿಪಿ) ಎಕ್ಸ್‌ಪ್ರೆಸ್ ಹೆದ್ದಾರಿಗಳನ್ನು 24 ಗಂಟೆಗಳ ಕಾಲ (ಏಪ್ರಿಲ್ 11 ರ ಬೆಳಿಗ್ಗೆ 8 ರ ವರೆಗೆ) ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಶಾಹಿನ್‌ಬಾಗ್‌‌ ಅನ್ನು ನಡೆಸಿಕೊಂಡಂತೆ ರೈತ ಹೋರಾಟಗಾರರನ್ನು ನಡೆಸದಿರಿ: ಕೇಂದ್ರಕ್ಕೆ ಟಿಕಾಯತ್‌

ಏಪ್ರಿಲ್ 13 ರಂದು ಖಾಲ್ಸಾ ಪಂಥದ ಅಡಿಪಾಯ ದಿನವನ್ನು ದೆಹಲಿಯ ಗಡಿಯಲ್ಲಿ ಆಚರಿಸಲಾಗುವುದು. ಜೊತೆಗೆ ಅದೇ ಸಮಯದಲ್ಲಿ, ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ವಾರ್ಷಿಕೋತ್ಸವದಂದು ಹುತಾತ್ಮರ ಗೌರವಾರ್ಥ ಕಾರ್ಯಕ್ರಮಗಳು ನಡೆಯಲಿವೆ. ಎಂದು ಎಸ್‌ಕೆಎಂ ತಿಳಿಸಿದೆ.

‘ಸಂವಿಧಾನ ದಿನ ಉಳಿಸಿ’ ಮತ್ತು ‘ಕಿಸಾನ್ ಬಹುಜನ ಏಕತೆ ದಿನ’ ದಿನವನ್ನು ಏಪ್ರಿಲ್ 14 ರಂದು ಆಚರಿಸಲಾಗುವುದು. ಈ ದಿನ, ಸಮುಕ್ತ ಕಿಸಾನ್ ಮೋರ್ಚಾದ ಎಲ್ಲಾ ಕಾರ್ಯಕ್ರಮಗಳನ್ನು ಬಹುಜನ ಸಮಾಜದ ಹೋರಾಟಗಾರರು ನಿರ್ವಹಿಸಲಿದ್ದಾರೆ. ವೇದಿಕೆಗಳು ಅವರಿಗಾಗಿ ಮೀಸಲಿರುತ್ತವೆ ಎಂದಿದ್ದಾರೆ.

ದ್ವೇಷ ಮತ್ತು ವಿಭಜನೆಯ ಮನೋಭಾವ ಹರಡಲು, ರೈತರು ಮತ್ತು ಕಾರ್ಮಿಕರನ್ನು ಶತ್ರುಗಳೆಂದು ನಿರೂಪಿಸಲು ಬಿಜೆಪಿ ನಾಯಕರು ಹರಿಯಾಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಮಾಡಬಹುದು. ಏಪ್ರಿಲ್ 14 ರಂದು ಹರಿಯಾಣದ ಉಪಮುಖ್ಯಮಂತ್ರಿ ಉದ್ದೇಶಪೂರ್ವಕವಾಗಿ ಕೈತಾಲ್‌ನಲ್ಲಿ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ. ಹಾಗಾಗಿ ಶಾಂತಿಯುತವಾಗಿ ಇವರ ವಿರುದ್ಧ ಪ್ರತಿಭಟಿಸುವಂತೆ ನಾವು ಎಲ್ಲಾ ದಲಿತ-ಬಹುಜನರು ಮತ್ತು ರೈತರಲ್ಲಿ ಮನವಿ ಮಾಡುತ್ತೇವೆ ಎಂದಿದ್ದಾರೆ.

ಕಿಸಾನ್ ಆಂದೋಲನದಲ್ಲಿ ಸ್ಥಳೀಯ ಜನರ ಭಾಗವಹಿಸುವಿಕೆ ಮತ್ತು ಸಮರ್ಪಣೆಯನ್ನು ಗುರುತಿಸಿ, ಏಪ್ರಿಲ್ 18 ರಂದು ಸ್ಥಳೀಯ ಜನರನ್ನು ವೇದಿಕೆಗಳಲ್ಲಿ ಗೌರವಿಸಲಾಗುವುದು. ಅಂದು ವೇದಿಕೆಯ ನಿರ್ವಹಣೆಯ ಜವಾಬ್ದಾರಿಯನ್ನು ಸ್ಥಳೀಯ ಜನರಿಗೆ ನೀಡಲಾಗುವುದು ಎಂದಿದೆ.

ಗಾಜಿಪುರ್‌ ಗಡಿಯಲ್ಲಿರುವ ರೈತರ ಹುತಾತ್ಮ ಸ್ಮಾರಕ

ಏಪ್ರಿಲ್ 20 ರಂದು, ಧನ್ನಾ ಭಗತ್ ಅವರ ಜನ್ಮ ದಿನಾಚರಣೆಯಂದು, ಅವರ ಗ್ರಾಮ ದೋಹಾ ಕಲನ್‌ನಿಂದ ದೆಹಲಿಯ ಗಡಿಗೆ ಮಣ್ಣನ್ನು ತರಲಾಗುವುದು. ಅಂದು ಅವರ ನೆನಪಿಗಾಗಿ ಟಿಕ್ರಿ ಬಾರ್ಡರ್ ವೇದಿಕೆಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

2021 ರ ಏಪ್ರಿಲ್ 24 ರಂದು ದೆಹಲಿ ಗಡಿಯಲ್ಲಿ ಈ ಚಳವಳಿಯ 150 ದಿನಗಳು ಪೂರ್ಣಗೊಳ್ಳುವ ಕಾರಣ, ವಾರ ಪೂರ್ತಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು, ಇದರಲ್ಲಿ ರೈತರು ಮತ್ತು ಕಾರ್ಮಿಕರು, ನೌಕರರು, ಯುವಕರು, ವ್ಯಾಪಾರಿಗಳು, ವಿದ್ಯಾರ್ಥಿಗಳು ಮತ್ತು ಇತರ ಸಂಸ್ಥೆಗಳು ಸೇರಲು ಕರೆ ನೀಡಲಾಗುವುದು ಎಂದು ಎಸ್‌ಕೆಎಂ ತಿಳಿಸಿದೆ.


ಇದನ್ನೂ ಓದಿ: ರೈತ ಹೋರಾಟ: ಹುತಾತ್ಮ ಸ್ಮಾರಕಕ್ಕೆ ಸೇರಿದ ದೇಶದ 23 ರಾಜ್ಯಗಳ 1,500 ಹಳ್ಳಿಗಳ ಮಣ್ಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...