Homeಚಳವಳಿರೈತ ಹೋರಾಟ: ಪಟ್ಟು ಬಿಡದ ಸರ್ಕಾರಕ್ಕೆ ವಿಭಿನ್ನವಾಗಿ ಪೆಟ್ಟು ನೀಡಲು ನಿಂತ ರೈತರು

ರೈತ ಹೋರಾಟ: ಪಟ್ಟು ಬಿಡದ ಸರ್ಕಾರಕ್ಕೆ ವಿಭಿನ್ನವಾಗಿ ಪೆಟ್ಟು ನೀಡಲು ನಿಂತ ರೈತರು

‘ಸಂವಿಧಾನ ದಿನ ಉಳಿಸಿ’ ಮತ್ತು ‘ಕಿಸಾನ್ ಬಹುಜನ ಏಕತೆ ದಿನ’ ದಿನವನ್ನು ಏಪ್ರಿಲ್ 14 ರಂದು ಆಚರಿಸಲಾಗುವುದು.

- Advertisement -
- Advertisement -

ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಲಕ್ಷಿಸಿದೆ ಎಂದಿರುವ ರೈತ ಸಂಘಟನೆ ಚಳುವಳಿ ತೀವ್ರಗೊಳಿಸುತ್ತಿದೆ. 24 ಗಂಟೆಗಳ ರಸ್ತೆ ತಡೆ, ‘ಸಂವಿಧಾನ ದಿನ ಉಳಿಸಿ’, ‘ಕಿಸಾನ್ ಬಹುಜನ ಏಕತೆ ದಿನಗಳ ಮೂಲಕ ವಿಭಿನ್ನವಾಗಿ ಪಟ್ಟು ಬಿಡದ ಸರ್ಕಾರಕ್ಕೆ ಪೆಟ್ಟು ನೀಡಲು ಹೊರಟಿದೆ.

ನವೆಂಬರ್‌ 26 ರಿಂದ ಶುರುವಾದ ರೈತ ಹೋರಾಟ 135 ದಿನಗಳನ್ನು ದಾಟುತ್ತಿದೆ. ಈ ನಡುವೆ ನೂರಾರು ರೈತ ಹೋರಾಟಗಾರರು ಹುತಾತ್ಮರಾಗಿದ್ದಾರೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯನ್ನು ಕಾನೂನುಬದ್ಧಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಈಗ ಕೇಂದ್ರ ಸರ್ಕಾರ ರೈತರೊಂದಿಗೆ ಸಂಧಾನ  ಸಭೆಗಳನ್ನು ನಡೆಸುವುದನ್ನು ನಿಲ್ಲಿಸಿದೆ. ಪ್ರತಿಭಟನಾ ನಿರತ ರೈತರ ಬೇಡಿಕೆಗಳನ್ನು ಆಲಿಸಲು ಸರ್ಕಾರ ಸಿದ್ಧವಿಲ್ಲ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ (ಎಸ್‌ಕೆಎಂ) ಚಳುವಳಿಯನ್ನು ಮುಂದುವರಿಸಲು ಮತ್ತು ಅದನ್ನು ತೀವ್ರಗೊಳಿಸಲು ಹಲವು ವಿಭಿನ್ನ ಮಾರ್ಗಗಳನ್ನು ಅನುಸರಿಸುತ್ತಿದೆ. ಈ ಕುರಿತು ಪ್ರತಿಭಟನಾ ನಿರತ ರೈತಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಇಂದು, ಏಪ್ರಿಲ್ 10 ರಂದು, ಬೆಳಗ್ಗೆ 8 ರಿಂದ ಕುಂಡ್ಲಿ-ಮಾನೇಸರ್-ಪಲ್ವಾಲ್ (ಕೆಎಂಪಿ) -ಕುಂಡ್ಲಿ-ಗಾಜಿಯಾಬಾದ್-ಪಾಲ್ವಾಲ್ (ಕೆಜಿಪಿ) ಎಕ್ಸ್‌ಪ್ರೆಸ್ ಹೆದ್ದಾರಿಗಳನ್ನು 24 ಗಂಟೆಗಳ ಕಾಲ (ಏಪ್ರಿಲ್ 11 ರ ಬೆಳಿಗ್ಗೆ 8 ರ ವರೆಗೆ) ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಶಾಹಿನ್‌ಬಾಗ್‌‌ ಅನ್ನು ನಡೆಸಿಕೊಂಡಂತೆ ರೈತ ಹೋರಾಟಗಾರರನ್ನು ನಡೆಸದಿರಿ: ಕೇಂದ್ರಕ್ಕೆ ಟಿಕಾಯತ್‌

ಏಪ್ರಿಲ್ 13 ರಂದು ಖಾಲ್ಸಾ ಪಂಥದ ಅಡಿಪಾಯ ದಿನವನ್ನು ದೆಹಲಿಯ ಗಡಿಯಲ್ಲಿ ಆಚರಿಸಲಾಗುವುದು. ಜೊತೆಗೆ ಅದೇ ಸಮಯದಲ್ಲಿ, ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ವಾರ್ಷಿಕೋತ್ಸವದಂದು ಹುತಾತ್ಮರ ಗೌರವಾರ್ಥ ಕಾರ್ಯಕ್ರಮಗಳು ನಡೆಯಲಿವೆ. ಎಂದು ಎಸ್‌ಕೆಎಂ ತಿಳಿಸಿದೆ.

‘ಸಂವಿಧಾನ ದಿನ ಉಳಿಸಿ’ ಮತ್ತು ‘ಕಿಸಾನ್ ಬಹುಜನ ಏಕತೆ ದಿನ’ ದಿನವನ್ನು ಏಪ್ರಿಲ್ 14 ರಂದು ಆಚರಿಸಲಾಗುವುದು. ಈ ದಿನ, ಸಮುಕ್ತ ಕಿಸಾನ್ ಮೋರ್ಚಾದ ಎಲ್ಲಾ ಕಾರ್ಯಕ್ರಮಗಳನ್ನು ಬಹುಜನ ಸಮಾಜದ ಹೋರಾಟಗಾರರು ನಿರ್ವಹಿಸಲಿದ್ದಾರೆ. ವೇದಿಕೆಗಳು ಅವರಿಗಾಗಿ ಮೀಸಲಿರುತ್ತವೆ ಎಂದಿದ್ದಾರೆ.

ದ್ವೇಷ ಮತ್ತು ವಿಭಜನೆಯ ಮನೋಭಾವ ಹರಡಲು, ರೈತರು ಮತ್ತು ಕಾರ್ಮಿಕರನ್ನು ಶತ್ರುಗಳೆಂದು ನಿರೂಪಿಸಲು ಬಿಜೆಪಿ ನಾಯಕರು ಹರಿಯಾಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಮಾಡಬಹುದು. ಏಪ್ರಿಲ್ 14 ರಂದು ಹರಿಯಾಣದ ಉಪಮುಖ್ಯಮಂತ್ರಿ ಉದ್ದೇಶಪೂರ್ವಕವಾಗಿ ಕೈತಾಲ್‌ನಲ್ಲಿ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ. ಹಾಗಾಗಿ ಶಾಂತಿಯುತವಾಗಿ ಇವರ ವಿರುದ್ಧ ಪ್ರತಿಭಟಿಸುವಂತೆ ನಾವು ಎಲ್ಲಾ ದಲಿತ-ಬಹುಜನರು ಮತ್ತು ರೈತರಲ್ಲಿ ಮನವಿ ಮಾಡುತ್ತೇವೆ ಎಂದಿದ್ದಾರೆ.

ಕಿಸಾನ್ ಆಂದೋಲನದಲ್ಲಿ ಸ್ಥಳೀಯ ಜನರ ಭಾಗವಹಿಸುವಿಕೆ ಮತ್ತು ಸಮರ್ಪಣೆಯನ್ನು ಗುರುತಿಸಿ, ಏಪ್ರಿಲ್ 18 ರಂದು ಸ್ಥಳೀಯ ಜನರನ್ನು ವೇದಿಕೆಗಳಲ್ಲಿ ಗೌರವಿಸಲಾಗುವುದು. ಅಂದು ವೇದಿಕೆಯ ನಿರ್ವಹಣೆಯ ಜವಾಬ್ದಾರಿಯನ್ನು ಸ್ಥಳೀಯ ಜನರಿಗೆ ನೀಡಲಾಗುವುದು ಎಂದಿದೆ.

ಗಾಜಿಪುರ್‌ ಗಡಿಯಲ್ಲಿರುವ ರೈತರ ಹುತಾತ್ಮ ಸ್ಮಾರಕ

ಏಪ್ರಿಲ್ 20 ರಂದು, ಧನ್ನಾ ಭಗತ್ ಅವರ ಜನ್ಮ ದಿನಾಚರಣೆಯಂದು, ಅವರ ಗ್ರಾಮ ದೋಹಾ ಕಲನ್‌ನಿಂದ ದೆಹಲಿಯ ಗಡಿಗೆ ಮಣ್ಣನ್ನು ತರಲಾಗುವುದು. ಅಂದು ಅವರ ನೆನಪಿಗಾಗಿ ಟಿಕ್ರಿ ಬಾರ್ಡರ್ ವೇದಿಕೆಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

2021 ರ ಏಪ್ರಿಲ್ 24 ರಂದು ದೆಹಲಿ ಗಡಿಯಲ್ಲಿ ಈ ಚಳವಳಿಯ 150 ದಿನಗಳು ಪೂರ್ಣಗೊಳ್ಳುವ ಕಾರಣ, ವಾರ ಪೂರ್ತಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು, ಇದರಲ್ಲಿ ರೈತರು ಮತ್ತು ಕಾರ್ಮಿಕರು, ನೌಕರರು, ಯುವಕರು, ವ್ಯಾಪಾರಿಗಳು, ವಿದ್ಯಾರ್ಥಿಗಳು ಮತ್ತು ಇತರ ಸಂಸ್ಥೆಗಳು ಸೇರಲು ಕರೆ ನೀಡಲಾಗುವುದು ಎಂದು ಎಸ್‌ಕೆಎಂ ತಿಳಿಸಿದೆ.


ಇದನ್ನೂ ಓದಿ: ರೈತ ಹೋರಾಟ: ಹುತಾತ್ಮ ಸ್ಮಾರಕಕ್ಕೆ ಸೇರಿದ ದೇಶದ 23 ರಾಜ್ಯಗಳ 1,500 ಹಳ್ಳಿಗಳ ಮಣ್ಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...