Homeಚಳವಳಿರೈತ ಹೋರಾಟ: ಪಟ್ಟು ಬಿಡದ ಸರ್ಕಾರಕ್ಕೆ ವಿಭಿನ್ನವಾಗಿ ಪೆಟ್ಟು ನೀಡಲು ನಿಂತ ರೈತರು

ರೈತ ಹೋರಾಟ: ಪಟ್ಟು ಬಿಡದ ಸರ್ಕಾರಕ್ಕೆ ವಿಭಿನ್ನವಾಗಿ ಪೆಟ್ಟು ನೀಡಲು ನಿಂತ ರೈತರು

‘ಸಂವಿಧಾನ ದಿನ ಉಳಿಸಿ’ ಮತ್ತು ‘ಕಿಸಾನ್ ಬಹುಜನ ಏಕತೆ ದಿನ’ ದಿನವನ್ನು ಏಪ್ರಿಲ್ 14 ರಂದು ಆಚರಿಸಲಾಗುವುದು.

- Advertisement -
- Advertisement -

ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಲಕ್ಷಿಸಿದೆ ಎಂದಿರುವ ರೈತ ಸಂಘಟನೆ ಚಳುವಳಿ ತೀವ್ರಗೊಳಿಸುತ್ತಿದೆ. 24 ಗಂಟೆಗಳ ರಸ್ತೆ ತಡೆ, ‘ಸಂವಿಧಾನ ದಿನ ಉಳಿಸಿ’, ‘ಕಿಸಾನ್ ಬಹುಜನ ಏಕತೆ ದಿನಗಳ ಮೂಲಕ ವಿಭಿನ್ನವಾಗಿ ಪಟ್ಟು ಬಿಡದ ಸರ್ಕಾರಕ್ಕೆ ಪೆಟ್ಟು ನೀಡಲು ಹೊರಟಿದೆ.

ನವೆಂಬರ್‌ 26 ರಿಂದ ಶುರುವಾದ ರೈತ ಹೋರಾಟ 135 ದಿನಗಳನ್ನು ದಾಟುತ್ತಿದೆ. ಈ ನಡುವೆ ನೂರಾರು ರೈತ ಹೋರಾಟಗಾರರು ಹುತಾತ್ಮರಾಗಿದ್ದಾರೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯನ್ನು ಕಾನೂನುಬದ್ಧಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಈಗ ಕೇಂದ್ರ ಸರ್ಕಾರ ರೈತರೊಂದಿಗೆ ಸಂಧಾನ  ಸಭೆಗಳನ್ನು ನಡೆಸುವುದನ್ನು ನಿಲ್ಲಿಸಿದೆ. ಪ್ರತಿಭಟನಾ ನಿರತ ರೈತರ ಬೇಡಿಕೆಗಳನ್ನು ಆಲಿಸಲು ಸರ್ಕಾರ ಸಿದ್ಧವಿಲ್ಲ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ (ಎಸ್‌ಕೆಎಂ) ಚಳುವಳಿಯನ್ನು ಮುಂದುವರಿಸಲು ಮತ್ತು ಅದನ್ನು ತೀವ್ರಗೊಳಿಸಲು ಹಲವು ವಿಭಿನ್ನ ಮಾರ್ಗಗಳನ್ನು ಅನುಸರಿಸುತ್ತಿದೆ. ಈ ಕುರಿತು ಪ್ರತಿಭಟನಾ ನಿರತ ರೈತಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಇಂದು, ಏಪ್ರಿಲ್ 10 ರಂದು, ಬೆಳಗ್ಗೆ 8 ರಿಂದ ಕುಂಡ್ಲಿ-ಮಾನೇಸರ್-ಪಲ್ವಾಲ್ (ಕೆಎಂಪಿ) -ಕುಂಡ್ಲಿ-ಗಾಜಿಯಾಬಾದ್-ಪಾಲ್ವಾಲ್ (ಕೆಜಿಪಿ) ಎಕ್ಸ್‌ಪ್ರೆಸ್ ಹೆದ್ದಾರಿಗಳನ್ನು 24 ಗಂಟೆಗಳ ಕಾಲ (ಏಪ್ರಿಲ್ 11 ರ ಬೆಳಿಗ್ಗೆ 8 ರ ವರೆಗೆ) ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಶಾಹಿನ್‌ಬಾಗ್‌‌ ಅನ್ನು ನಡೆಸಿಕೊಂಡಂತೆ ರೈತ ಹೋರಾಟಗಾರರನ್ನು ನಡೆಸದಿರಿ: ಕೇಂದ್ರಕ್ಕೆ ಟಿಕಾಯತ್‌

ಏಪ್ರಿಲ್ 13 ರಂದು ಖಾಲ್ಸಾ ಪಂಥದ ಅಡಿಪಾಯ ದಿನವನ್ನು ದೆಹಲಿಯ ಗಡಿಯಲ್ಲಿ ಆಚರಿಸಲಾಗುವುದು. ಜೊತೆಗೆ ಅದೇ ಸಮಯದಲ್ಲಿ, ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ವಾರ್ಷಿಕೋತ್ಸವದಂದು ಹುತಾತ್ಮರ ಗೌರವಾರ್ಥ ಕಾರ್ಯಕ್ರಮಗಳು ನಡೆಯಲಿವೆ. ಎಂದು ಎಸ್‌ಕೆಎಂ ತಿಳಿಸಿದೆ.

‘ಸಂವಿಧಾನ ದಿನ ಉಳಿಸಿ’ ಮತ್ತು ‘ಕಿಸಾನ್ ಬಹುಜನ ಏಕತೆ ದಿನ’ ದಿನವನ್ನು ಏಪ್ರಿಲ್ 14 ರಂದು ಆಚರಿಸಲಾಗುವುದು. ಈ ದಿನ, ಸಮುಕ್ತ ಕಿಸಾನ್ ಮೋರ್ಚಾದ ಎಲ್ಲಾ ಕಾರ್ಯಕ್ರಮಗಳನ್ನು ಬಹುಜನ ಸಮಾಜದ ಹೋರಾಟಗಾರರು ನಿರ್ವಹಿಸಲಿದ್ದಾರೆ. ವೇದಿಕೆಗಳು ಅವರಿಗಾಗಿ ಮೀಸಲಿರುತ್ತವೆ ಎಂದಿದ್ದಾರೆ.

ದ್ವೇಷ ಮತ್ತು ವಿಭಜನೆಯ ಮನೋಭಾವ ಹರಡಲು, ರೈತರು ಮತ್ತು ಕಾರ್ಮಿಕರನ್ನು ಶತ್ರುಗಳೆಂದು ನಿರೂಪಿಸಲು ಬಿಜೆಪಿ ನಾಯಕರು ಹರಿಯಾಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಮಾಡಬಹುದು. ಏಪ್ರಿಲ್ 14 ರಂದು ಹರಿಯಾಣದ ಉಪಮುಖ್ಯಮಂತ್ರಿ ಉದ್ದೇಶಪೂರ್ವಕವಾಗಿ ಕೈತಾಲ್‌ನಲ್ಲಿ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ. ಹಾಗಾಗಿ ಶಾಂತಿಯುತವಾಗಿ ಇವರ ವಿರುದ್ಧ ಪ್ರತಿಭಟಿಸುವಂತೆ ನಾವು ಎಲ್ಲಾ ದಲಿತ-ಬಹುಜನರು ಮತ್ತು ರೈತರಲ್ಲಿ ಮನವಿ ಮಾಡುತ್ತೇವೆ ಎಂದಿದ್ದಾರೆ.

ಕಿಸಾನ್ ಆಂದೋಲನದಲ್ಲಿ ಸ್ಥಳೀಯ ಜನರ ಭಾಗವಹಿಸುವಿಕೆ ಮತ್ತು ಸಮರ್ಪಣೆಯನ್ನು ಗುರುತಿಸಿ, ಏಪ್ರಿಲ್ 18 ರಂದು ಸ್ಥಳೀಯ ಜನರನ್ನು ವೇದಿಕೆಗಳಲ್ಲಿ ಗೌರವಿಸಲಾಗುವುದು. ಅಂದು ವೇದಿಕೆಯ ನಿರ್ವಹಣೆಯ ಜವಾಬ್ದಾರಿಯನ್ನು ಸ್ಥಳೀಯ ಜನರಿಗೆ ನೀಡಲಾಗುವುದು ಎಂದಿದೆ.

ಗಾಜಿಪುರ್‌ ಗಡಿಯಲ್ಲಿರುವ ರೈತರ ಹುತಾತ್ಮ ಸ್ಮಾರಕ

ಏಪ್ರಿಲ್ 20 ರಂದು, ಧನ್ನಾ ಭಗತ್ ಅವರ ಜನ್ಮ ದಿನಾಚರಣೆಯಂದು, ಅವರ ಗ್ರಾಮ ದೋಹಾ ಕಲನ್‌ನಿಂದ ದೆಹಲಿಯ ಗಡಿಗೆ ಮಣ್ಣನ್ನು ತರಲಾಗುವುದು. ಅಂದು ಅವರ ನೆನಪಿಗಾಗಿ ಟಿಕ್ರಿ ಬಾರ್ಡರ್ ವೇದಿಕೆಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

2021 ರ ಏಪ್ರಿಲ್ 24 ರಂದು ದೆಹಲಿ ಗಡಿಯಲ್ಲಿ ಈ ಚಳವಳಿಯ 150 ದಿನಗಳು ಪೂರ್ಣಗೊಳ್ಳುವ ಕಾರಣ, ವಾರ ಪೂರ್ತಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು, ಇದರಲ್ಲಿ ರೈತರು ಮತ್ತು ಕಾರ್ಮಿಕರು, ನೌಕರರು, ಯುವಕರು, ವ್ಯಾಪಾರಿಗಳು, ವಿದ್ಯಾರ್ಥಿಗಳು ಮತ್ತು ಇತರ ಸಂಸ್ಥೆಗಳು ಸೇರಲು ಕರೆ ನೀಡಲಾಗುವುದು ಎಂದು ಎಸ್‌ಕೆಎಂ ತಿಳಿಸಿದೆ.


ಇದನ್ನೂ ಓದಿ: ರೈತ ಹೋರಾಟ: ಹುತಾತ್ಮ ಸ್ಮಾರಕಕ್ಕೆ ಸೇರಿದ ದೇಶದ 23 ರಾಜ್ಯಗಳ 1,500 ಹಳ್ಳಿಗಳ ಮಣ್ಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...