Homeಚಳವಳಿರೈತ ಹೋರಾಟ: ಪಟ್ಟು ಬಿಡದ ಸರ್ಕಾರಕ್ಕೆ ವಿಭಿನ್ನವಾಗಿ ಪೆಟ್ಟು ನೀಡಲು ನಿಂತ ರೈತರು

ರೈತ ಹೋರಾಟ: ಪಟ್ಟು ಬಿಡದ ಸರ್ಕಾರಕ್ಕೆ ವಿಭಿನ್ನವಾಗಿ ಪೆಟ್ಟು ನೀಡಲು ನಿಂತ ರೈತರು

‘ಸಂವಿಧಾನ ದಿನ ಉಳಿಸಿ’ ಮತ್ತು ‘ಕಿಸಾನ್ ಬಹುಜನ ಏಕತೆ ದಿನ’ ದಿನವನ್ನು ಏಪ್ರಿಲ್ 14 ರಂದು ಆಚರಿಸಲಾಗುವುದು.

- Advertisement -
- Advertisement -

ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಲಕ್ಷಿಸಿದೆ ಎಂದಿರುವ ರೈತ ಸಂಘಟನೆ ಚಳುವಳಿ ತೀವ್ರಗೊಳಿಸುತ್ತಿದೆ. 24 ಗಂಟೆಗಳ ರಸ್ತೆ ತಡೆ, ‘ಸಂವಿಧಾನ ದಿನ ಉಳಿಸಿ’, ‘ಕಿಸಾನ್ ಬಹುಜನ ಏಕತೆ ದಿನಗಳ ಮೂಲಕ ವಿಭಿನ್ನವಾಗಿ ಪಟ್ಟು ಬಿಡದ ಸರ್ಕಾರಕ್ಕೆ ಪೆಟ್ಟು ನೀಡಲು ಹೊರಟಿದೆ.

ನವೆಂಬರ್‌ 26 ರಿಂದ ಶುರುವಾದ ರೈತ ಹೋರಾಟ 135 ದಿನಗಳನ್ನು ದಾಟುತ್ತಿದೆ. ಈ ನಡುವೆ ನೂರಾರು ರೈತ ಹೋರಾಟಗಾರರು ಹುತಾತ್ಮರಾಗಿದ್ದಾರೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯನ್ನು ಕಾನೂನುಬದ್ಧಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಈಗ ಕೇಂದ್ರ ಸರ್ಕಾರ ರೈತರೊಂದಿಗೆ ಸಂಧಾನ  ಸಭೆಗಳನ್ನು ನಡೆಸುವುದನ್ನು ನಿಲ್ಲಿಸಿದೆ. ಪ್ರತಿಭಟನಾ ನಿರತ ರೈತರ ಬೇಡಿಕೆಗಳನ್ನು ಆಲಿಸಲು ಸರ್ಕಾರ ಸಿದ್ಧವಿಲ್ಲ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ (ಎಸ್‌ಕೆಎಂ) ಚಳುವಳಿಯನ್ನು ಮುಂದುವರಿಸಲು ಮತ್ತು ಅದನ್ನು ತೀವ್ರಗೊಳಿಸಲು ಹಲವು ವಿಭಿನ್ನ ಮಾರ್ಗಗಳನ್ನು ಅನುಸರಿಸುತ್ತಿದೆ. ಈ ಕುರಿತು ಪ್ರತಿಭಟನಾ ನಿರತ ರೈತಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಇಂದು, ಏಪ್ರಿಲ್ 10 ರಂದು, ಬೆಳಗ್ಗೆ 8 ರಿಂದ ಕುಂಡ್ಲಿ-ಮಾನೇಸರ್-ಪಲ್ವಾಲ್ (ಕೆಎಂಪಿ) -ಕುಂಡ್ಲಿ-ಗಾಜಿಯಾಬಾದ್-ಪಾಲ್ವಾಲ್ (ಕೆಜಿಪಿ) ಎಕ್ಸ್‌ಪ್ರೆಸ್ ಹೆದ್ದಾರಿಗಳನ್ನು 24 ಗಂಟೆಗಳ ಕಾಲ (ಏಪ್ರಿಲ್ 11 ರ ಬೆಳಿಗ್ಗೆ 8 ರ ವರೆಗೆ) ನಿರ್ಬಂಧಿಸಲಾಗಿದೆ.

ಇದನ್ನೂ ಓದಿ: ಶಾಹಿನ್‌ಬಾಗ್‌‌ ಅನ್ನು ನಡೆಸಿಕೊಂಡಂತೆ ರೈತ ಹೋರಾಟಗಾರರನ್ನು ನಡೆಸದಿರಿ: ಕೇಂದ್ರಕ್ಕೆ ಟಿಕಾಯತ್‌

ಏಪ್ರಿಲ್ 13 ರಂದು ಖಾಲ್ಸಾ ಪಂಥದ ಅಡಿಪಾಯ ದಿನವನ್ನು ದೆಹಲಿಯ ಗಡಿಯಲ್ಲಿ ಆಚರಿಸಲಾಗುವುದು. ಜೊತೆಗೆ ಅದೇ ಸಮಯದಲ್ಲಿ, ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ವಾರ್ಷಿಕೋತ್ಸವದಂದು ಹುತಾತ್ಮರ ಗೌರವಾರ್ಥ ಕಾರ್ಯಕ್ರಮಗಳು ನಡೆಯಲಿವೆ. ಎಂದು ಎಸ್‌ಕೆಎಂ ತಿಳಿಸಿದೆ.

‘ಸಂವಿಧಾನ ದಿನ ಉಳಿಸಿ’ ಮತ್ತು ‘ಕಿಸಾನ್ ಬಹುಜನ ಏಕತೆ ದಿನ’ ದಿನವನ್ನು ಏಪ್ರಿಲ್ 14 ರಂದು ಆಚರಿಸಲಾಗುವುದು. ಈ ದಿನ, ಸಮುಕ್ತ ಕಿಸಾನ್ ಮೋರ್ಚಾದ ಎಲ್ಲಾ ಕಾರ್ಯಕ್ರಮಗಳನ್ನು ಬಹುಜನ ಸಮಾಜದ ಹೋರಾಟಗಾರರು ನಿರ್ವಹಿಸಲಿದ್ದಾರೆ. ವೇದಿಕೆಗಳು ಅವರಿಗಾಗಿ ಮೀಸಲಿರುತ್ತವೆ ಎಂದಿದ್ದಾರೆ.

ದ್ವೇಷ ಮತ್ತು ವಿಭಜನೆಯ ಮನೋಭಾವ ಹರಡಲು, ರೈತರು ಮತ್ತು ಕಾರ್ಮಿಕರನ್ನು ಶತ್ರುಗಳೆಂದು ನಿರೂಪಿಸಲು ಬಿಜೆಪಿ ನಾಯಕರು ಹರಿಯಾಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಮಾಡಬಹುದು. ಏಪ್ರಿಲ್ 14 ರಂದು ಹರಿಯಾಣದ ಉಪಮುಖ್ಯಮಂತ್ರಿ ಉದ್ದೇಶಪೂರ್ವಕವಾಗಿ ಕೈತಾಲ್‌ನಲ್ಲಿ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದಾರೆ. ಹಾಗಾಗಿ ಶಾಂತಿಯುತವಾಗಿ ಇವರ ವಿರುದ್ಧ ಪ್ರತಿಭಟಿಸುವಂತೆ ನಾವು ಎಲ್ಲಾ ದಲಿತ-ಬಹುಜನರು ಮತ್ತು ರೈತರಲ್ಲಿ ಮನವಿ ಮಾಡುತ್ತೇವೆ ಎಂದಿದ್ದಾರೆ.

ಕಿಸಾನ್ ಆಂದೋಲನದಲ್ಲಿ ಸ್ಥಳೀಯ ಜನರ ಭಾಗವಹಿಸುವಿಕೆ ಮತ್ತು ಸಮರ್ಪಣೆಯನ್ನು ಗುರುತಿಸಿ, ಏಪ್ರಿಲ್ 18 ರಂದು ಸ್ಥಳೀಯ ಜನರನ್ನು ವೇದಿಕೆಗಳಲ್ಲಿ ಗೌರವಿಸಲಾಗುವುದು. ಅಂದು ವೇದಿಕೆಯ ನಿರ್ವಹಣೆಯ ಜವಾಬ್ದಾರಿಯನ್ನು ಸ್ಥಳೀಯ ಜನರಿಗೆ ನೀಡಲಾಗುವುದು ಎಂದಿದೆ.

ಗಾಜಿಪುರ್‌ ಗಡಿಯಲ್ಲಿರುವ ರೈತರ ಹುತಾತ್ಮ ಸ್ಮಾರಕ

ಏಪ್ರಿಲ್ 20 ರಂದು, ಧನ್ನಾ ಭಗತ್ ಅವರ ಜನ್ಮ ದಿನಾಚರಣೆಯಂದು, ಅವರ ಗ್ರಾಮ ದೋಹಾ ಕಲನ್‌ನಿಂದ ದೆಹಲಿಯ ಗಡಿಗೆ ಮಣ್ಣನ್ನು ತರಲಾಗುವುದು. ಅಂದು ಅವರ ನೆನಪಿಗಾಗಿ ಟಿಕ್ರಿ ಬಾರ್ಡರ್ ವೇದಿಕೆಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

2021 ರ ಏಪ್ರಿಲ್ 24 ರಂದು ದೆಹಲಿ ಗಡಿಯಲ್ಲಿ ಈ ಚಳವಳಿಯ 150 ದಿನಗಳು ಪೂರ್ಣಗೊಳ್ಳುವ ಕಾರಣ, ವಾರ ಪೂರ್ತಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು, ಇದರಲ್ಲಿ ರೈತರು ಮತ್ತು ಕಾರ್ಮಿಕರು, ನೌಕರರು, ಯುವಕರು, ವ್ಯಾಪಾರಿಗಳು, ವಿದ್ಯಾರ್ಥಿಗಳು ಮತ್ತು ಇತರ ಸಂಸ್ಥೆಗಳು ಸೇರಲು ಕರೆ ನೀಡಲಾಗುವುದು ಎಂದು ಎಸ್‌ಕೆಎಂ ತಿಳಿಸಿದೆ.


ಇದನ್ನೂ ಓದಿ: ರೈತ ಹೋರಾಟ: ಹುತಾತ್ಮ ಸ್ಮಾರಕಕ್ಕೆ ಸೇರಿದ ದೇಶದ 23 ರಾಜ್ಯಗಳ 1,500 ಹಳ್ಳಿಗಳ ಮಣ್ಣು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...