HomeUncategorizedರೈತ ಹೋರಾಟ: ಕಡು ಬೇಸಿಗೆ ಎದುರಿಸಲು ಸಿದ್ದರಾಗುತ್ತಿದ್ದಾರೆ ಅನ್ನದಾತರು!

ರೈತ ಹೋರಾಟ: ಕಡು ಬೇಸಿಗೆ ಎದುರಿಸಲು ಸಿದ್ದರಾಗುತ್ತಿದ್ದಾರೆ ಅನ್ನದಾತರು!

ಕುಡಿಯುವ ನೀರು, ದಿನನಿತ್ಯದ ಬಳಕೆಯ ನೀರಿನ ಬವಣೆ ತಪ್ಪಿಸಲು ಪ್ರತಿಭಟನಾ ಸ್ಥಳದಲ್ಲಿ ಈಗಾಗಲೇ ಬೋರ್‌ವೇಲ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

- Advertisement -
- Advertisement -

ಐತಿಹಾಸಿಕ ರೈತ ಹೋರಾಟಕ್ಕೆ 100 ದಿನಗಳು ತುಂಬಲು ಇನ್ನೆರಡು ದಿನ ಬಾಕಿ ಇದೆ. ಇಡೀ ಚಳಿಗಾಲವನ್ನು ಕಳೆದಿರುವ ರೈತರು ಈಗ ಬಿರು ಬೇಸಿಗೆಗೆ ಸಜ್ಜಾಗುತ್ತಿದ್ದಾರೆ. ತೀವ್ರ ಚಳಿ ಅನುಭವಿಸಿದ್ದ ಪ್ರತಿಭಟನಾಕಾರರು ಈಗ ತೀವ್ರ ಬಿಸಿಲಿನ ತಾಪಕ್ಕೆ ಸಿಲುಕುತ್ತಿದ್ದು, ತಮ್ಮ ಸುರಕ್ಷತೆಗಾಗಿ ಕುಡಿಯುವ ನೀರಿನ ವ್ಯವಸ್ಥೆ, ಪ್ರಿಡ್ಜ್, ಎಸಿ, ಫ್ಯಾನ್, ಕೂಲರ್‌ಗಳ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.

ವಿವಾದಿತ ಕೃಷಿ ಕಾನೂನುಗಳನ್ನು ರದ್ದು ಮಾಡುವವರೆಗೂ ದೆಹಲಿಯ ಗಡಿಗಳಿಂದ ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವುದಿಲ್ಲ ಎಂದು ಈಗಾಗಲೇ ಹಲವಾರು ಬಾರಿ ರೈತ ಮುಖಂಡರು, ರೈತರು, ಪ್ರತಿಭಟನಾ ಬೆಂಬಲಿಗರು ಹೇಳಿದ್ದಾರೆ.

ಇದಕ್ಕೆ ಪೂರಕವಾಗಿ ಎಲ್ಲಾ ಗಡಿಗಳಲ್ಲಿ ಬೇಸಿಗೆಯ ಸಿದ್ಧತೆಯೂ ಸಾಗಿದೆ. ಕೂಲರ್‌ಗಳು, ಟ್ಯ್ರಾಲಿಯಲ್ಲಿ ಅಳವಡಿಸಲಾಗುವ ಫ್ಯಾನ್‌ಗಳು, ಟೇಬಲ್ ಫ್ಯಾನ್‌ಗಳು, ಎಸಿಗಳನ್ನು ಹಾಕಿಕೊಳ್ಳಲಾಗಿದೆ. ಕುಡಿಯುವ ನೀರು, ದಿನನಿತ್ಯದ ಬಳಕೆಯ ನೀರಿನ ಬವಣೆ ತಪ್ಪಿಸಲು ಪ್ರತಿಭಟನಾ ಸ್ಥಳದಲ್ಲಿ ಬೋರ್‌ವೇಲ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

Image
PC: ANI

“ನಾವು ಎರಡು ಎಸಿಗಳನ್ನು ಈಗಾಗಲೇ ಅಳವಡಿಸಿದ್ದೇವೆ. ನಾವು ದೀರ್ಘಕಾಲದ ಪ್ರತಿಭಟನೆಗೆ ಸಿದ್ಧರಿದ್ದೇವೆ. ಮೊದಲು ನಮ್ಮ ದೇಹದ ಮೂಳೆಗಳು ತಣ್ಣಗಾಗುವ ಚಳಿಯನ್ನು ಧೈರ್ಯದಿಂದ ಗೆದ್ದಿದ್ದೇವೆ. ಈಗಲು ಅದೇ ಉತ್ಸಾಹದಿಂದ ತೀವ್ರ ಬಿಸಿಲನ್ನು ಎದುರಿಸಲು ಸಿದ್ಧರಿದ್ದೇವೆ” ಎಂದು ಪಂಜಾಬಿನ ಮೊಗಾ ಜಿಲ್ಲೆಯ ರೈತ ಕೆವಾಲ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

ಇತ್ತ ಸಿಂಘು ಗಡಿ ಭಾಗದಲ್ಲೂ ರೈತರು ಬೇಸಿಗೆಯಲ್ಲಿ ಕುಳಿತುಕೊಳ್ಳಲು, ಮಲಗಲು ತಾತ್ಕಾಲಿಕ ವಸತಿಗಳನ್ನು ನಿರ್ಮಿಸಲು ಪ್ರಾರಂಭಿಸಿದ್ದಾರೆ. ಟೆಂಟ್‌ಗಳು ಮತ್ತು ಶೆಡ್‌ಗಳಲ್ಲಿ 5 ನಿಮಿಷವೂ ಕೂರಲು ಸಾಧ್ಯವಿಲ್ಲದಂತಹ ಬಿಸಿಲು ಪ್ರತಿಭಟನಾಕಾರರನ್ನು ಕಾಡುತ್ತಿದ್ದು, ತಾತ್ಕಾಲಿಕ ವ್ಯವಸ್ಥೆಗೆ ಮೊರೆಹೋಗುತ್ತಿದ್ದಾರೆ.

ರೈತರು ತಂಗಿರುವ ಟ್ಯ್ರಾಲಿಗಳಿಗೆ ಹೋಲಿಸಿದರೇ, ಈ ಚಪ್ಪರದ ವ್ಯವಸ್ಥೆ ಹೆಚ್ಚು ತಂಪಾಗಿರುತ್ತವೆ. ಅಲ್ಲದೆ, ಪಂಜಾಬ್, ಹರಿಯಾಣ ರಾಜ್ಯಗಳಲ್ಲಿ ಗೋಧಿ ಕೊಯ್ಲು ಆರಂಭವಾಗಲಿದ್ದು, ರೈತರು ಟ್ರಾಲಿಗಳನ್ನು ತಮ್ಮ ಊರುಗಳಿಗೆ ವಾಪಸ್ ಕಳುಹಿಸಬೇಕಾಗಬಹುದು ಎನ್ನಲಾಗಿದೆ.

ಇದರ ಜೊತೆಗೆ ಪ್ರತಿಭಟನಾ ಸ್ಥಳಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಲವಾರು ಸಂಘ ಸಂಸ್ಥೆಗಳು ಕೂಡ ಪ್ರತಿಭಟನಾ ನಿರತ ರೈತರಿಗೆ ಬೇಸಿಗೆಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವತ್ತ ಗಮನ ಹರಿಸಿವೆ. ಹಳ್ಳಿಗಳಲ್ಲಿ ತಮ್ಮ ಊರಿನ ಪ್ರತಿಭಟನಾ ನಿರತರಿಗೆ ಬೇಕಾಗುವ ವ್ಯವಸ್ಥೆ ಮಾಡಿಕೊಡಲು ಹಣವನ್ನು ಸಂಗ್ರಹಿಸಿ ನೀಡಲಾಗುತ್ತಿದೆ. ದೆಹಲಿಯಲ್ಲಿರುವ ರೈತರಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡುವ ಬಗ್ಗೆ ಮಹಾಪಂಚಾಯತ್‌ಗಳಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...