HomeUncategorizedರೈತ ಹೋರಾಟ: ಕಡು ಬೇಸಿಗೆ ಎದುರಿಸಲು ಸಿದ್ದರಾಗುತ್ತಿದ್ದಾರೆ ಅನ್ನದಾತರು!

ರೈತ ಹೋರಾಟ: ಕಡು ಬೇಸಿಗೆ ಎದುರಿಸಲು ಸಿದ್ದರಾಗುತ್ತಿದ್ದಾರೆ ಅನ್ನದಾತರು!

ಕುಡಿಯುವ ನೀರು, ದಿನನಿತ್ಯದ ಬಳಕೆಯ ನೀರಿನ ಬವಣೆ ತಪ್ಪಿಸಲು ಪ್ರತಿಭಟನಾ ಸ್ಥಳದಲ್ಲಿ ಈಗಾಗಲೇ ಬೋರ್‌ವೇಲ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

- Advertisement -
- Advertisement -

ಐತಿಹಾಸಿಕ ರೈತ ಹೋರಾಟಕ್ಕೆ 100 ದಿನಗಳು ತುಂಬಲು ಇನ್ನೆರಡು ದಿನ ಬಾಕಿ ಇದೆ. ಇಡೀ ಚಳಿಗಾಲವನ್ನು ಕಳೆದಿರುವ ರೈತರು ಈಗ ಬಿರು ಬೇಸಿಗೆಗೆ ಸಜ್ಜಾಗುತ್ತಿದ್ದಾರೆ. ತೀವ್ರ ಚಳಿ ಅನುಭವಿಸಿದ್ದ ಪ್ರತಿಭಟನಾಕಾರರು ಈಗ ತೀವ್ರ ಬಿಸಿಲಿನ ತಾಪಕ್ಕೆ ಸಿಲುಕುತ್ತಿದ್ದು, ತಮ್ಮ ಸುರಕ್ಷತೆಗಾಗಿ ಕುಡಿಯುವ ನೀರಿನ ವ್ಯವಸ್ಥೆ, ಪ್ರಿಡ್ಜ್, ಎಸಿ, ಫ್ಯಾನ್, ಕೂಲರ್‌ಗಳ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.

ವಿವಾದಿತ ಕೃಷಿ ಕಾನೂನುಗಳನ್ನು ರದ್ದು ಮಾಡುವವರೆಗೂ ದೆಹಲಿಯ ಗಡಿಗಳಿಂದ ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವುದಿಲ್ಲ ಎಂದು ಈಗಾಗಲೇ ಹಲವಾರು ಬಾರಿ ರೈತ ಮುಖಂಡರು, ರೈತರು, ಪ್ರತಿಭಟನಾ ಬೆಂಬಲಿಗರು ಹೇಳಿದ್ದಾರೆ.

ಇದಕ್ಕೆ ಪೂರಕವಾಗಿ ಎಲ್ಲಾ ಗಡಿಗಳಲ್ಲಿ ಬೇಸಿಗೆಯ ಸಿದ್ಧತೆಯೂ ಸಾಗಿದೆ. ಕೂಲರ್‌ಗಳು, ಟ್ಯ್ರಾಲಿಯಲ್ಲಿ ಅಳವಡಿಸಲಾಗುವ ಫ್ಯಾನ್‌ಗಳು, ಟೇಬಲ್ ಫ್ಯಾನ್‌ಗಳು, ಎಸಿಗಳನ್ನು ಹಾಕಿಕೊಳ್ಳಲಾಗಿದೆ. ಕುಡಿಯುವ ನೀರು, ದಿನನಿತ್ಯದ ಬಳಕೆಯ ನೀರಿನ ಬವಣೆ ತಪ್ಪಿಸಲು ಪ್ರತಿಭಟನಾ ಸ್ಥಳದಲ್ಲಿ ಬೋರ್‌ವೇಲ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

Image
PC: ANI

“ನಾವು ಎರಡು ಎಸಿಗಳನ್ನು ಈಗಾಗಲೇ ಅಳವಡಿಸಿದ್ದೇವೆ. ನಾವು ದೀರ್ಘಕಾಲದ ಪ್ರತಿಭಟನೆಗೆ ಸಿದ್ಧರಿದ್ದೇವೆ. ಮೊದಲು ನಮ್ಮ ದೇಹದ ಮೂಳೆಗಳು ತಣ್ಣಗಾಗುವ ಚಳಿಯನ್ನು ಧೈರ್ಯದಿಂದ ಗೆದ್ದಿದ್ದೇವೆ. ಈಗಲು ಅದೇ ಉತ್ಸಾಹದಿಂದ ತೀವ್ರ ಬಿಸಿಲನ್ನು ಎದುರಿಸಲು ಸಿದ್ಧರಿದ್ದೇವೆ” ಎಂದು ಪಂಜಾಬಿನ ಮೊಗಾ ಜಿಲ್ಲೆಯ ರೈತ ಕೆವಾಲ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

ಇತ್ತ ಸಿಂಘು ಗಡಿ ಭಾಗದಲ್ಲೂ ರೈತರು ಬೇಸಿಗೆಯಲ್ಲಿ ಕುಳಿತುಕೊಳ್ಳಲು, ಮಲಗಲು ತಾತ್ಕಾಲಿಕ ವಸತಿಗಳನ್ನು ನಿರ್ಮಿಸಲು ಪ್ರಾರಂಭಿಸಿದ್ದಾರೆ. ಟೆಂಟ್‌ಗಳು ಮತ್ತು ಶೆಡ್‌ಗಳಲ್ಲಿ 5 ನಿಮಿಷವೂ ಕೂರಲು ಸಾಧ್ಯವಿಲ್ಲದಂತಹ ಬಿಸಿಲು ಪ್ರತಿಭಟನಾಕಾರರನ್ನು ಕಾಡುತ್ತಿದ್ದು, ತಾತ್ಕಾಲಿಕ ವ್ಯವಸ್ಥೆಗೆ ಮೊರೆಹೋಗುತ್ತಿದ್ದಾರೆ.

ರೈತರು ತಂಗಿರುವ ಟ್ಯ್ರಾಲಿಗಳಿಗೆ ಹೋಲಿಸಿದರೇ, ಈ ಚಪ್ಪರದ ವ್ಯವಸ್ಥೆ ಹೆಚ್ಚು ತಂಪಾಗಿರುತ್ತವೆ. ಅಲ್ಲದೆ, ಪಂಜಾಬ್, ಹರಿಯಾಣ ರಾಜ್ಯಗಳಲ್ಲಿ ಗೋಧಿ ಕೊಯ್ಲು ಆರಂಭವಾಗಲಿದ್ದು, ರೈತರು ಟ್ರಾಲಿಗಳನ್ನು ತಮ್ಮ ಊರುಗಳಿಗೆ ವಾಪಸ್ ಕಳುಹಿಸಬೇಕಾಗಬಹುದು ಎನ್ನಲಾಗಿದೆ.

ಇದರ ಜೊತೆಗೆ ಪ್ರತಿಭಟನಾ ಸ್ಥಳಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಲವಾರು ಸಂಘ ಸಂಸ್ಥೆಗಳು ಕೂಡ ಪ್ರತಿಭಟನಾ ನಿರತ ರೈತರಿಗೆ ಬೇಸಿಗೆಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವತ್ತ ಗಮನ ಹರಿಸಿವೆ. ಹಳ್ಳಿಗಳಲ್ಲಿ ತಮ್ಮ ಊರಿನ ಪ್ರತಿಭಟನಾ ನಿರತರಿಗೆ ಬೇಕಾಗುವ ವ್ಯವಸ್ಥೆ ಮಾಡಿಕೊಡಲು ಹಣವನ್ನು ಸಂಗ್ರಹಿಸಿ ನೀಡಲಾಗುತ್ತಿದೆ. ದೆಹಲಿಯಲ್ಲಿರುವ ರೈತರಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡುವ ಬಗ್ಗೆ ಮಹಾಪಂಚಾಯತ್‌ಗಳಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...