Homeಚಳವಳಿರೈತ ಹೋರಾಟದಲ್ಲಿ ಜಿಮ್ ಆರಂಭ!: ತೀವ್ರ ಚಳಿಗೆ ಮನಸ್ಸಿನ ಜೊತೆಗೆ ದೇಹವೂ ಸದೃಢವಾಗಿರಬೇಕು!

ರೈತ ಹೋರಾಟದಲ್ಲಿ ಜಿಮ್ ಆರಂಭ!: ತೀವ್ರ ಚಳಿಗೆ ಮನಸ್ಸಿನ ಜೊತೆಗೆ ದೇಹವೂ ಸದೃಢವಾಗಿರಬೇಕು!

- Advertisement -
- Advertisement -

ರೈತ ಹೋರಾಟ ಹಲವು ಮಜಲುಗಳಲ್ಲಿ ದೇಶದ ಗಮನ ಸೆಳೆಯುತ್ತಿದೆ. ಹೋರಾಟಕ್ಕೆ 60 ದಿನಗಳು ತುಂಬುತ್ತಾ ಬಂದಿದೆ. ದೆಹಲಿಯಲ್ಲಿ ತೀವ್ರ ಚಳಿ, ಮಂಜು ವಿಪರೀತ ಎನ್ನುವ ಮಟ್ಟಕ್ಕೆ ಬಂದು ನಿಂತಿದೆ. ಈ ಸಂದರ್ಭದಲ್ಲಿ ರೈತರು ಹೋರಾಟದಲ್ಲಿ ಹುಮ್ಮಸ್ಸಿನಿಂದ ಭಾಗಿಯಾಗಲು ಮನಸ್ಸಿನ ಜೊತೆಗೆ ದೇಹವನ್ನೂ ಸದೃಢವಾಗಿಟ್ಟುಕೊಳ್ಳುವುದು ಮುಖ್ಯವಾಗಿದೆ.

ಉತ್ತಮ ಆಹಾರದ ಜೊತೆಗೆ ಸದೃಢ ದೇಹಕ್ಕೆ ಒಳ್ಳೆಯ ವ್ಯಾಯಾಮದ ಅವಶ್ಯಕತೆಯನ್ನು ಮನಗಂಡು ಪ್ರತಿಭಟನಾ ನಿರತ ರೈತರು ದೆಹಲಿಯ ಸಿಂಘ ಗಡಿಯ ಪ್ರತಿಭಟನಾ ಸ್ಥಳದಲ್ಲಿ ವ್ಯಾಯಾಮ ಶಾಲೆ (ಜಿಮ್) ಆರಂಭಿಸಿದ್ದಾರೆ.

ದೆಹಲಿ ಚಲೋ ಅಂಗವಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹರ್ಜಿಂದರ್ ಸಿಂಗ್, ಮೊದಲು ಪ್ರತಿಭಟನಾಕಾರರಿಗೆ ದಿನ ಬಳಕೆ ವಸ್ತುಗಳಾದ ಸೋಪು, ಪೇಸ್ಟ್, ಬ್ರಶ್, ಸ್ಯಾನಿಟರಿ ನ್ಯಾಪ್ಕಿನ್ಸ್, ಬಿಸಿ ನೀರಿನ ವ್ಯವಸ್ಥೆ ಮಾಡುತ್ತಿದ್ದರು. ಪ್ರತಿಭಟನೆಯ ದಿನಗಳು ಹೆಚ್ಚಾದಂತೆ ಔಷಧಿಗಳನ್ನು ನೀಡಲು ಮತ್ತು ರೈತರಿಗೆ ಚಿಕಿತ್ಸೆ ನೀಡಲು ವೈದ್ಯರನ್ನು ನೇಮಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

PC: Mass Media Foundation (ವ್ಯಾಯಾಮ ನಿರತ ಪ್ರತಿಭಟನಾಕಾರ)

ಹರ್ಜಿಂದರ್ ಸಿಂಗ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದನ್ನು ಗಮನಿಸಿದ ಇವರ ಸ್ನೇಹಿತರೊಬ್ಬರು, ತಾವು ಏನಾದರೂ ಸೇವೆ ಮಾಡಬೇಕು ಎಂದು ಕೋರಿಕೆ ಮುಂದಿಟ್ಟಿದ್ದಾರೆ. ಚಂಡಿಗಢದಲ್ಲಿ ಜಿಮ್ ನಡೆಸುತ್ತಿರುವುದರಿಂದ ಪ್ರತಿಭಟನಾ ಸ್ಥಳದಲ್ಲಿಯೂ ಒಂದು ಸಣ್ಣ ಜಿಮ್ ಆರಂಭಿಸಿ ಸೇವೆ ನೀಡುವ ಯೋಚನೆ ಮಾಡಿದ್ದಾರೆ.

“ನಾನು ಮೊದಲು ಇಲ್ಲಿಗೆ ಒಬ್ಬ ಪ್ರತಿಭಟನಾಕಾರನಾಗಿ, ರೈತನಾಗಿ ಪಂಜಾಬ್‌ನಿಂದ ಬಂದಿದ್ದೆ. ದೆಹಲಿ ಪೊಲೀಸರು ನಮ್ಮನ್ನು ಸಿಂಘು ಗಡಿಯಲ್ಲಿಯೇ ತಡೆ ಹಿಡಿದ ಕಾರಣ ನಾವಿಲ್ಲಿಯೇ ಇರಬೇಕಾಯಿತು. ನಂತರ ಊರಿಗೆ ಹೋಗಿ ದಿನ ಬಳಕೆ ವಸ್ತುಗಳು ಮತ್ತು ಔಷಧಿಗಳನ್ನು ತಂದು ರೈತರ ಬಳಕೆಗಾಗಿ ಇಟ್ಟಿದ್ದೇನೆ’ ಎಂದು ಹರ್ಜಿಂದರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ: ರೈತರಿಲ್ಲದೆ ಅನ್ನವಿಲ್ಲ ಎಂದ ಸರ್ಕಾರಿ ಅಧಿಕಾರಿಗಳು

PC: Mass Media Foundation (ವ್ಯಾಯಾಮ ನಿರತ ಪ್ರತಿಭಟನಾಕಾರ)

’ನಾನಿಲ್ಲಿ ಇರುವುದನ್ನು ಗಮನಿಸಿದ ನನ್ನ ಚಂಡಿಗಢದ ಸ್ನೇಹಿತ, ತನ್ನಿಂದ ಏನು ಸೇವೆಯಾಗಬಹುದು ಎಂದು ಕೇಳಿದರು. ಜಿಮ್ ಮಾಲೀಕನಾಗಿರುವ ಆತನಿಗೆ ಜಿಮ್ ಸೇವೆಯನ್ನೇ ನೀಡಲು ತಿಳಿಸಿದೆ. ಹಾಗಾಗಿ ಆತ ಇಲ್ಲಿ ಜಿಮ್ ಆರಂಭಿಸಿದ್ದಾನೆ. ಚಂಡಿಗಢದಿಂದ ಜಿಮ್ ಸಲಕರಣೆಗಳನ್ನು ಕಳುಹಿಸಿದ್ದಾನೆ. ನಾನು ಇವುಗಳ ಉಸ್ತುವಾರಿ ನೋಡಿಕೊಳ್ಳುತ್ತೇನೆ. ಇನ್ನು ಎಷ್ಟು ದಿನ ನಾವಿಲ್ಲಿಯೇ ಇರಬೇಕಾಗುತ್ತದೊ ಗೊತ್ತಿಲ್ಲ. ಅಲ್ಲಿಯವರೆಗೂ ಇವುಗಳು ಜನರ ಬಳಕೆಗೆ ಲಭ್ಯವಿರುತ್ತವೆ. ಈ ಚಳಿಯಲ್ಲಿ ದೇಹವನ್ನು ಗಟ್ಟಿಯಾಗಿಟ್ಟುಕೊಳ್ಳುವುದು ಮುಖ್ಯ’ ಎನ್ನುತ್ತಾರೆ.

“ನಿತ್ಯ ನೂರಾರು ಪ್ರತಿಭಟನಾಕಾರರು ಈ ಪುಟ್ಟ ಜಿಮ್‌ನಲ್ಲಿ ಕಸರತ್ತು ನಡೆಸುತ್ತಾರೆ. ದೆಹಲಿಯ ತೀವ್ರ ಚಳಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯಕವಾಗಿದೆ. ಒಳ್ಳೆಯ ಆಹಾರದ ಜೊತೆಗೆ ಉತ್ತಮ ವ್ಯಾಯಾಮ ಎಂತಹ ಸನ್ನಿವೇಶದಲ್ಲೂ ಆರೋಗ್ಯ ಹಾಳಾಗದಂತೆ ನೋಡಿಕೊಳ್ಳುತ್ತದೆ. ಈ ಕಾರಣಕ್ಕೆ ನಮ್ಮಿಂದ ಈ ಸೇವೆ ಒದಗಿಸುತ್ತಿದ್ದೆವೆ” ಎಂದು ಜಿಮ್ ಸೇವೆ ನೀಡುತ್ತಿರುವ ಹರ್ಜಿಂದರ್‌ ಸಿಂಗ್ ಹೇಳುತ್ತಾರೆ.


ಇದನ್ನೂ ಓದಿ: ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...