Homeಚಳವಳಿರೈತ ಹೋರಾಟದಲ್ಲಿ ಜಿಮ್ ಆರಂಭ!: ತೀವ್ರ ಚಳಿಗೆ ಮನಸ್ಸಿನ ಜೊತೆಗೆ ದೇಹವೂ ಸದೃಢವಾಗಿರಬೇಕು!

ರೈತ ಹೋರಾಟದಲ್ಲಿ ಜಿಮ್ ಆರಂಭ!: ತೀವ್ರ ಚಳಿಗೆ ಮನಸ್ಸಿನ ಜೊತೆಗೆ ದೇಹವೂ ಸದೃಢವಾಗಿರಬೇಕು!

- Advertisement -
- Advertisement -

ರೈತ ಹೋರಾಟ ಹಲವು ಮಜಲುಗಳಲ್ಲಿ ದೇಶದ ಗಮನ ಸೆಳೆಯುತ್ತಿದೆ. ಹೋರಾಟಕ್ಕೆ 60 ದಿನಗಳು ತುಂಬುತ್ತಾ ಬಂದಿದೆ. ದೆಹಲಿಯಲ್ಲಿ ತೀವ್ರ ಚಳಿ, ಮಂಜು ವಿಪರೀತ ಎನ್ನುವ ಮಟ್ಟಕ್ಕೆ ಬಂದು ನಿಂತಿದೆ. ಈ ಸಂದರ್ಭದಲ್ಲಿ ರೈತರು ಹೋರಾಟದಲ್ಲಿ ಹುಮ್ಮಸ್ಸಿನಿಂದ ಭಾಗಿಯಾಗಲು ಮನಸ್ಸಿನ ಜೊತೆಗೆ ದೇಹವನ್ನೂ ಸದೃಢವಾಗಿಟ್ಟುಕೊಳ್ಳುವುದು ಮುಖ್ಯವಾಗಿದೆ.

ಉತ್ತಮ ಆಹಾರದ ಜೊತೆಗೆ ಸದೃಢ ದೇಹಕ್ಕೆ ಒಳ್ಳೆಯ ವ್ಯಾಯಾಮದ ಅವಶ್ಯಕತೆಯನ್ನು ಮನಗಂಡು ಪ್ರತಿಭಟನಾ ನಿರತ ರೈತರು ದೆಹಲಿಯ ಸಿಂಘ ಗಡಿಯ ಪ್ರತಿಭಟನಾ ಸ್ಥಳದಲ್ಲಿ ವ್ಯಾಯಾಮ ಶಾಲೆ (ಜಿಮ್) ಆರಂಭಿಸಿದ್ದಾರೆ.

ದೆಹಲಿ ಚಲೋ ಅಂಗವಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹರ್ಜಿಂದರ್ ಸಿಂಗ್, ಮೊದಲು ಪ್ರತಿಭಟನಾಕಾರರಿಗೆ ದಿನ ಬಳಕೆ ವಸ್ತುಗಳಾದ ಸೋಪು, ಪೇಸ್ಟ್, ಬ್ರಶ್, ಸ್ಯಾನಿಟರಿ ನ್ಯಾಪ್ಕಿನ್ಸ್, ಬಿಸಿ ನೀರಿನ ವ್ಯವಸ್ಥೆ ಮಾಡುತ್ತಿದ್ದರು. ಪ್ರತಿಭಟನೆಯ ದಿನಗಳು ಹೆಚ್ಚಾದಂತೆ ಔಷಧಿಗಳನ್ನು ನೀಡಲು ಮತ್ತು ರೈತರಿಗೆ ಚಿಕಿತ್ಸೆ ನೀಡಲು ವೈದ್ಯರನ್ನು ನೇಮಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

PC: Mass Media Foundation (ವ್ಯಾಯಾಮ ನಿರತ ಪ್ರತಿಭಟನಾಕಾರ)

ಹರ್ಜಿಂದರ್ ಸಿಂಗ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದನ್ನು ಗಮನಿಸಿದ ಇವರ ಸ್ನೇಹಿತರೊಬ್ಬರು, ತಾವು ಏನಾದರೂ ಸೇವೆ ಮಾಡಬೇಕು ಎಂದು ಕೋರಿಕೆ ಮುಂದಿಟ್ಟಿದ್ದಾರೆ. ಚಂಡಿಗಢದಲ್ಲಿ ಜಿಮ್ ನಡೆಸುತ್ತಿರುವುದರಿಂದ ಪ್ರತಿಭಟನಾ ಸ್ಥಳದಲ್ಲಿಯೂ ಒಂದು ಸಣ್ಣ ಜಿಮ್ ಆರಂಭಿಸಿ ಸೇವೆ ನೀಡುವ ಯೋಚನೆ ಮಾಡಿದ್ದಾರೆ.

“ನಾನು ಮೊದಲು ಇಲ್ಲಿಗೆ ಒಬ್ಬ ಪ್ರತಿಭಟನಾಕಾರನಾಗಿ, ರೈತನಾಗಿ ಪಂಜಾಬ್‌ನಿಂದ ಬಂದಿದ್ದೆ. ದೆಹಲಿ ಪೊಲೀಸರು ನಮ್ಮನ್ನು ಸಿಂಘು ಗಡಿಯಲ್ಲಿಯೇ ತಡೆ ಹಿಡಿದ ಕಾರಣ ನಾವಿಲ್ಲಿಯೇ ಇರಬೇಕಾಯಿತು. ನಂತರ ಊರಿಗೆ ಹೋಗಿ ದಿನ ಬಳಕೆ ವಸ್ತುಗಳು ಮತ್ತು ಔಷಧಿಗಳನ್ನು ತಂದು ರೈತರ ಬಳಕೆಗಾಗಿ ಇಟ್ಟಿದ್ದೇನೆ’ ಎಂದು ಹರ್ಜಿಂದರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ: ರೈತರಿಲ್ಲದೆ ಅನ್ನವಿಲ್ಲ ಎಂದ ಸರ್ಕಾರಿ ಅಧಿಕಾರಿಗಳು

PC: Mass Media Foundation (ವ್ಯಾಯಾಮ ನಿರತ ಪ್ರತಿಭಟನಾಕಾರ)

’ನಾನಿಲ್ಲಿ ಇರುವುದನ್ನು ಗಮನಿಸಿದ ನನ್ನ ಚಂಡಿಗಢದ ಸ್ನೇಹಿತ, ತನ್ನಿಂದ ಏನು ಸೇವೆಯಾಗಬಹುದು ಎಂದು ಕೇಳಿದರು. ಜಿಮ್ ಮಾಲೀಕನಾಗಿರುವ ಆತನಿಗೆ ಜಿಮ್ ಸೇವೆಯನ್ನೇ ನೀಡಲು ತಿಳಿಸಿದೆ. ಹಾಗಾಗಿ ಆತ ಇಲ್ಲಿ ಜಿಮ್ ಆರಂಭಿಸಿದ್ದಾನೆ. ಚಂಡಿಗಢದಿಂದ ಜಿಮ್ ಸಲಕರಣೆಗಳನ್ನು ಕಳುಹಿಸಿದ್ದಾನೆ. ನಾನು ಇವುಗಳ ಉಸ್ತುವಾರಿ ನೋಡಿಕೊಳ್ಳುತ್ತೇನೆ. ಇನ್ನು ಎಷ್ಟು ದಿನ ನಾವಿಲ್ಲಿಯೇ ಇರಬೇಕಾಗುತ್ತದೊ ಗೊತ್ತಿಲ್ಲ. ಅಲ್ಲಿಯವರೆಗೂ ಇವುಗಳು ಜನರ ಬಳಕೆಗೆ ಲಭ್ಯವಿರುತ್ತವೆ. ಈ ಚಳಿಯಲ್ಲಿ ದೇಹವನ್ನು ಗಟ್ಟಿಯಾಗಿಟ್ಟುಕೊಳ್ಳುವುದು ಮುಖ್ಯ’ ಎನ್ನುತ್ತಾರೆ.

“ನಿತ್ಯ ನೂರಾರು ಪ್ರತಿಭಟನಾಕಾರರು ಈ ಪುಟ್ಟ ಜಿಮ್‌ನಲ್ಲಿ ಕಸರತ್ತು ನಡೆಸುತ್ತಾರೆ. ದೆಹಲಿಯ ತೀವ್ರ ಚಳಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯಕವಾಗಿದೆ. ಒಳ್ಳೆಯ ಆಹಾರದ ಜೊತೆಗೆ ಉತ್ತಮ ವ್ಯಾಯಾಮ ಎಂತಹ ಸನ್ನಿವೇಶದಲ್ಲೂ ಆರೋಗ್ಯ ಹಾಳಾಗದಂತೆ ನೋಡಿಕೊಳ್ಳುತ್ತದೆ. ಈ ಕಾರಣಕ್ಕೆ ನಮ್ಮಿಂದ ಈ ಸೇವೆ ಒದಗಿಸುತ್ತಿದ್ದೆವೆ” ಎಂದು ಜಿಮ್ ಸೇವೆ ನೀಡುತ್ತಿರುವ ಹರ್ಜಿಂದರ್‌ ಸಿಂಗ್ ಹೇಳುತ್ತಾರೆ.


ಇದನ್ನೂ ಓದಿ: ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...