Homeಚಳವಳಿರೈತ ಹೋರಾಟದಲ್ಲಿ ಜಿಮ್ ಆರಂಭ!: ತೀವ್ರ ಚಳಿಗೆ ಮನಸ್ಸಿನ ಜೊತೆಗೆ ದೇಹವೂ ಸದೃಢವಾಗಿರಬೇಕು!

ರೈತ ಹೋರಾಟದಲ್ಲಿ ಜಿಮ್ ಆರಂಭ!: ತೀವ್ರ ಚಳಿಗೆ ಮನಸ್ಸಿನ ಜೊತೆಗೆ ದೇಹವೂ ಸದೃಢವಾಗಿರಬೇಕು!

- Advertisement -
- Advertisement -

ರೈತ ಹೋರಾಟ ಹಲವು ಮಜಲುಗಳಲ್ಲಿ ದೇಶದ ಗಮನ ಸೆಳೆಯುತ್ತಿದೆ. ಹೋರಾಟಕ್ಕೆ 60 ದಿನಗಳು ತುಂಬುತ್ತಾ ಬಂದಿದೆ. ದೆಹಲಿಯಲ್ಲಿ ತೀವ್ರ ಚಳಿ, ಮಂಜು ವಿಪರೀತ ಎನ್ನುವ ಮಟ್ಟಕ್ಕೆ ಬಂದು ನಿಂತಿದೆ. ಈ ಸಂದರ್ಭದಲ್ಲಿ ರೈತರು ಹೋರಾಟದಲ್ಲಿ ಹುಮ್ಮಸ್ಸಿನಿಂದ ಭಾಗಿಯಾಗಲು ಮನಸ್ಸಿನ ಜೊತೆಗೆ ದೇಹವನ್ನೂ ಸದೃಢವಾಗಿಟ್ಟುಕೊಳ್ಳುವುದು ಮುಖ್ಯವಾಗಿದೆ.

ಉತ್ತಮ ಆಹಾರದ ಜೊತೆಗೆ ಸದೃಢ ದೇಹಕ್ಕೆ ಒಳ್ಳೆಯ ವ್ಯಾಯಾಮದ ಅವಶ್ಯಕತೆಯನ್ನು ಮನಗಂಡು ಪ್ರತಿಭಟನಾ ನಿರತ ರೈತರು ದೆಹಲಿಯ ಸಿಂಘ ಗಡಿಯ ಪ್ರತಿಭಟನಾ ಸ್ಥಳದಲ್ಲಿ ವ್ಯಾಯಾಮ ಶಾಲೆ (ಜಿಮ್) ಆರಂಭಿಸಿದ್ದಾರೆ.

ದೆಹಲಿ ಚಲೋ ಅಂಗವಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹರ್ಜಿಂದರ್ ಸಿಂಗ್, ಮೊದಲು ಪ್ರತಿಭಟನಾಕಾರರಿಗೆ ದಿನ ಬಳಕೆ ವಸ್ತುಗಳಾದ ಸೋಪು, ಪೇಸ್ಟ್, ಬ್ರಶ್, ಸ್ಯಾನಿಟರಿ ನ್ಯಾಪ್ಕಿನ್ಸ್, ಬಿಸಿ ನೀರಿನ ವ್ಯವಸ್ಥೆ ಮಾಡುತ್ತಿದ್ದರು. ಪ್ರತಿಭಟನೆಯ ದಿನಗಳು ಹೆಚ್ಚಾದಂತೆ ಔಷಧಿಗಳನ್ನು ನೀಡಲು ಮತ್ತು ರೈತರಿಗೆ ಚಿಕಿತ್ಸೆ ನೀಡಲು ವೈದ್ಯರನ್ನು ನೇಮಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

PC: Mass Media Foundation (ವ್ಯಾಯಾಮ ನಿರತ ಪ್ರತಿಭಟನಾಕಾರ)

ಹರ್ಜಿಂದರ್ ಸಿಂಗ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದನ್ನು ಗಮನಿಸಿದ ಇವರ ಸ್ನೇಹಿತರೊಬ್ಬರು, ತಾವು ಏನಾದರೂ ಸೇವೆ ಮಾಡಬೇಕು ಎಂದು ಕೋರಿಕೆ ಮುಂದಿಟ್ಟಿದ್ದಾರೆ. ಚಂಡಿಗಢದಲ್ಲಿ ಜಿಮ್ ನಡೆಸುತ್ತಿರುವುದರಿಂದ ಪ್ರತಿಭಟನಾ ಸ್ಥಳದಲ್ಲಿಯೂ ಒಂದು ಸಣ್ಣ ಜಿಮ್ ಆರಂಭಿಸಿ ಸೇವೆ ನೀಡುವ ಯೋಚನೆ ಮಾಡಿದ್ದಾರೆ.

“ನಾನು ಮೊದಲು ಇಲ್ಲಿಗೆ ಒಬ್ಬ ಪ್ರತಿಭಟನಾಕಾರನಾಗಿ, ರೈತನಾಗಿ ಪಂಜಾಬ್‌ನಿಂದ ಬಂದಿದ್ದೆ. ದೆಹಲಿ ಪೊಲೀಸರು ನಮ್ಮನ್ನು ಸಿಂಘು ಗಡಿಯಲ್ಲಿಯೇ ತಡೆ ಹಿಡಿದ ಕಾರಣ ನಾವಿಲ್ಲಿಯೇ ಇರಬೇಕಾಯಿತು. ನಂತರ ಊರಿಗೆ ಹೋಗಿ ದಿನ ಬಳಕೆ ವಸ್ತುಗಳು ಮತ್ತು ಔಷಧಿಗಳನ್ನು ತಂದು ರೈತರ ಬಳಕೆಗಾಗಿ ಇಟ್ಟಿದ್ದೇನೆ’ ಎಂದು ಹರ್ಜಿಂದರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ: ರೈತರಿಲ್ಲದೆ ಅನ್ನವಿಲ್ಲ ಎಂದ ಸರ್ಕಾರಿ ಅಧಿಕಾರಿಗಳು

PC: Mass Media Foundation (ವ್ಯಾಯಾಮ ನಿರತ ಪ್ರತಿಭಟನಾಕಾರ)

’ನಾನಿಲ್ಲಿ ಇರುವುದನ್ನು ಗಮನಿಸಿದ ನನ್ನ ಚಂಡಿಗಢದ ಸ್ನೇಹಿತ, ತನ್ನಿಂದ ಏನು ಸೇವೆಯಾಗಬಹುದು ಎಂದು ಕೇಳಿದರು. ಜಿಮ್ ಮಾಲೀಕನಾಗಿರುವ ಆತನಿಗೆ ಜಿಮ್ ಸೇವೆಯನ್ನೇ ನೀಡಲು ತಿಳಿಸಿದೆ. ಹಾಗಾಗಿ ಆತ ಇಲ್ಲಿ ಜಿಮ್ ಆರಂಭಿಸಿದ್ದಾನೆ. ಚಂಡಿಗಢದಿಂದ ಜಿಮ್ ಸಲಕರಣೆಗಳನ್ನು ಕಳುಹಿಸಿದ್ದಾನೆ. ನಾನು ಇವುಗಳ ಉಸ್ತುವಾರಿ ನೋಡಿಕೊಳ್ಳುತ್ತೇನೆ. ಇನ್ನು ಎಷ್ಟು ದಿನ ನಾವಿಲ್ಲಿಯೇ ಇರಬೇಕಾಗುತ್ತದೊ ಗೊತ್ತಿಲ್ಲ. ಅಲ್ಲಿಯವರೆಗೂ ಇವುಗಳು ಜನರ ಬಳಕೆಗೆ ಲಭ್ಯವಿರುತ್ತವೆ. ಈ ಚಳಿಯಲ್ಲಿ ದೇಹವನ್ನು ಗಟ್ಟಿಯಾಗಿಟ್ಟುಕೊಳ್ಳುವುದು ಮುಖ್ಯ’ ಎನ್ನುತ್ತಾರೆ.

“ನಿತ್ಯ ನೂರಾರು ಪ್ರತಿಭಟನಾಕಾರರು ಈ ಪುಟ್ಟ ಜಿಮ್‌ನಲ್ಲಿ ಕಸರತ್ತು ನಡೆಸುತ್ತಾರೆ. ದೆಹಲಿಯ ತೀವ್ರ ಚಳಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯಕವಾಗಿದೆ. ಒಳ್ಳೆಯ ಆಹಾರದ ಜೊತೆಗೆ ಉತ್ತಮ ವ್ಯಾಯಾಮ ಎಂತಹ ಸನ್ನಿವೇಶದಲ್ಲೂ ಆರೋಗ್ಯ ಹಾಳಾಗದಂತೆ ನೋಡಿಕೊಳ್ಳುತ್ತದೆ. ಈ ಕಾರಣಕ್ಕೆ ನಮ್ಮಿಂದ ಈ ಸೇವೆ ಒದಗಿಸುತ್ತಿದ್ದೆವೆ” ಎಂದು ಜಿಮ್ ಸೇವೆ ನೀಡುತ್ತಿರುವ ಹರ್ಜಿಂದರ್‌ ಸಿಂಗ್ ಹೇಳುತ್ತಾರೆ.


ಇದನ್ನೂ ಓದಿ: ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...