Homeಚಳವಳಿರೈತ ಹೋರಾಟದಲ್ಲಿ ಜಿಮ್ ಆರಂಭ!: ತೀವ್ರ ಚಳಿಗೆ ಮನಸ್ಸಿನ ಜೊತೆಗೆ ದೇಹವೂ ಸದೃಢವಾಗಿರಬೇಕು!

ರೈತ ಹೋರಾಟದಲ್ಲಿ ಜಿಮ್ ಆರಂಭ!: ತೀವ್ರ ಚಳಿಗೆ ಮನಸ್ಸಿನ ಜೊತೆಗೆ ದೇಹವೂ ಸದೃಢವಾಗಿರಬೇಕು!

- Advertisement -
- Advertisement -

ರೈತ ಹೋರಾಟ ಹಲವು ಮಜಲುಗಳಲ್ಲಿ ದೇಶದ ಗಮನ ಸೆಳೆಯುತ್ತಿದೆ. ಹೋರಾಟಕ್ಕೆ 60 ದಿನಗಳು ತುಂಬುತ್ತಾ ಬಂದಿದೆ. ದೆಹಲಿಯಲ್ಲಿ ತೀವ್ರ ಚಳಿ, ಮಂಜು ವಿಪರೀತ ಎನ್ನುವ ಮಟ್ಟಕ್ಕೆ ಬಂದು ನಿಂತಿದೆ. ಈ ಸಂದರ್ಭದಲ್ಲಿ ರೈತರು ಹೋರಾಟದಲ್ಲಿ ಹುಮ್ಮಸ್ಸಿನಿಂದ ಭಾಗಿಯಾಗಲು ಮನಸ್ಸಿನ ಜೊತೆಗೆ ದೇಹವನ್ನೂ ಸದೃಢವಾಗಿಟ್ಟುಕೊಳ್ಳುವುದು ಮುಖ್ಯವಾಗಿದೆ.

ಉತ್ತಮ ಆಹಾರದ ಜೊತೆಗೆ ಸದೃಢ ದೇಹಕ್ಕೆ ಒಳ್ಳೆಯ ವ್ಯಾಯಾಮದ ಅವಶ್ಯಕತೆಯನ್ನು ಮನಗಂಡು ಪ್ರತಿಭಟನಾ ನಿರತ ರೈತರು ದೆಹಲಿಯ ಸಿಂಘ ಗಡಿಯ ಪ್ರತಿಭಟನಾ ಸ್ಥಳದಲ್ಲಿ ವ್ಯಾಯಾಮ ಶಾಲೆ (ಜಿಮ್) ಆರಂಭಿಸಿದ್ದಾರೆ.

ದೆಹಲಿ ಚಲೋ ಅಂಗವಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹರ್ಜಿಂದರ್ ಸಿಂಗ್, ಮೊದಲು ಪ್ರತಿಭಟನಾಕಾರರಿಗೆ ದಿನ ಬಳಕೆ ವಸ್ತುಗಳಾದ ಸೋಪು, ಪೇಸ್ಟ್, ಬ್ರಶ್, ಸ್ಯಾನಿಟರಿ ನ್ಯಾಪ್ಕಿನ್ಸ್, ಬಿಸಿ ನೀರಿನ ವ್ಯವಸ್ಥೆ ಮಾಡುತ್ತಿದ್ದರು. ಪ್ರತಿಭಟನೆಯ ದಿನಗಳು ಹೆಚ್ಚಾದಂತೆ ಔಷಧಿಗಳನ್ನು ನೀಡಲು ಮತ್ತು ರೈತರಿಗೆ ಚಿಕಿತ್ಸೆ ನೀಡಲು ವೈದ್ಯರನ್ನು ನೇಮಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

PC: Mass Media Foundation (ವ್ಯಾಯಾಮ ನಿರತ ಪ್ರತಿಭಟನಾಕಾರ)

ಹರ್ಜಿಂದರ್ ಸಿಂಗ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದನ್ನು ಗಮನಿಸಿದ ಇವರ ಸ್ನೇಹಿತರೊಬ್ಬರು, ತಾವು ಏನಾದರೂ ಸೇವೆ ಮಾಡಬೇಕು ಎಂದು ಕೋರಿಕೆ ಮುಂದಿಟ್ಟಿದ್ದಾರೆ. ಚಂಡಿಗಢದಲ್ಲಿ ಜಿಮ್ ನಡೆಸುತ್ತಿರುವುದರಿಂದ ಪ್ರತಿಭಟನಾ ಸ್ಥಳದಲ್ಲಿಯೂ ಒಂದು ಸಣ್ಣ ಜಿಮ್ ಆರಂಭಿಸಿ ಸೇವೆ ನೀಡುವ ಯೋಚನೆ ಮಾಡಿದ್ದಾರೆ.

“ನಾನು ಮೊದಲು ಇಲ್ಲಿಗೆ ಒಬ್ಬ ಪ್ರತಿಭಟನಾಕಾರನಾಗಿ, ರೈತನಾಗಿ ಪಂಜಾಬ್‌ನಿಂದ ಬಂದಿದ್ದೆ. ದೆಹಲಿ ಪೊಲೀಸರು ನಮ್ಮನ್ನು ಸಿಂಘು ಗಡಿಯಲ್ಲಿಯೇ ತಡೆ ಹಿಡಿದ ಕಾರಣ ನಾವಿಲ್ಲಿಯೇ ಇರಬೇಕಾಯಿತು. ನಂತರ ಊರಿಗೆ ಹೋಗಿ ದಿನ ಬಳಕೆ ವಸ್ತುಗಳು ಮತ್ತು ಔಷಧಿಗಳನ್ನು ತಂದು ರೈತರ ಬಳಕೆಗಾಗಿ ಇಟ್ಟಿದ್ದೇನೆ’ ಎಂದು ಹರ್ಜಿಂದರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ: ರೈತರಿಲ್ಲದೆ ಅನ್ನವಿಲ್ಲ ಎಂದ ಸರ್ಕಾರಿ ಅಧಿಕಾರಿಗಳು

PC: Mass Media Foundation (ವ್ಯಾಯಾಮ ನಿರತ ಪ್ರತಿಭಟನಾಕಾರ)

’ನಾನಿಲ್ಲಿ ಇರುವುದನ್ನು ಗಮನಿಸಿದ ನನ್ನ ಚಂಡಿಗಢದ ಸ್ನೇಹಿತ, ತನ್ನಿಂದ ಏನು ಸೇವೆಯಾಗಬಹುದು ಎಂದು ಕೇಳಿದರು. ಜಿಮ್ ಮಾಲೀಕನಾಗಿರುವ ಆತನಿಗೆ ಜಿಮ್ ಸೇವೆಯನ್ನೇ ನೀಡಲು ತಿಳಿಸಿದೆ. ಹಾಗಾಗಿ ಆತ ಇಲ್ಲಿ ಜಿಮ್ ಆರಂಭಿಸಿದ್ದಾನೆ. ಚಂಡಿಗಢದಿಂದ ಜಿಮ್ ಸಲಕರಣೆಗಳನ್ನು ಕಳುಹಿಸಿದ್ದಾನೆ. ನಾನು ಇವುಗಳ ಉಸ್ತುವಾರಿ ನೋಡಿಕೊಳ್ಳುತ್ತೇನೆ. ಇನ್ನು ಎಷ್ಟು ದಿನ ನಾವಿಲ್ಲಿಯೇ ಇರಬೇಕಾಗುತ್ತದೊ ಗೊತ್ತಿಲ್ಲ. ಅಲ್ಲಿಯವರೆಗೂ ಇವುಗಳು ಜನರ ಬಳಕೆಗೆ ಲಭ್ಯವಿರುತ್ತವೆ. ಈ ಚಳಿಯಲ್ಲಿ ದೇಹವನ್ನು ಗಟ್ಟಿಯಾಗಿಟ್ಟುಕೊಳ್ಳುವುದು ಮುಖ್ಯ’ ಎನ್ನುತ್ತಾರೆ.

“ನಿತ್ಯ ನೂರಾರು ಪ್ರತಿಭಟನಾಕಾರರು ಈ ಪುಟ್ಟ ಜಿಮ್‌ನಲ್ಲಿ ಕಸರತ್ತು ನಡೆಸುತ್ತಾರೆ. ದೆಹಲಿಯ ತೀವ್ರ ಚಳಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯಕವಾಗಿದೆ. ಒಳ್ಳೆಯ ಆಹಾರದ ಜೊತೆಗೆ ಉತ್ತಮ ವ್ಯಾಯಾಮ ಎಂತಹ ಸನ್ನಿವೇಶದಲ್ಲೂ ಆರೋಗ್ಯ ಹಾಳಾಗದಂತೆ ನೋಡಿಕೊಳ್ಳುತ್ತದೆ. ಈ ಕಾರಣಕ್ಕೆ ನಮ್ಮಿಂದ ಈ ಸೇವೆ ಒದಗಿಸುತ್ತಿದ್ದೆವೆ” ಎಂದು ಜಿಮ್ ಸೇವೆ ನೀಡುತ್ತಿರುವ ಹರ್ಜಿಂದರ್‌ ಸಿಂಗ್ ಹೇಳುತ್ತಾರೆ.


ಇದನ್ನೂ ಓದಿ: ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...