Homeಚಳವಳಿರೈತ ಹೋರಾಟದಲ್ಲಿ ಜಿಮ್ ಆರಂಭ!: ತೀವ್ರ ಚಳಿಗೆ ಮನಸ್ಸಿನ ಜೊತೆಗೆ ದೇಹವೂ ಸದೃಢವಾಗಿರಬೇಕು!

ರೈತ ಹೋರಾಟದಲ್ಲಿ ಜಿಮ್ ಆರಂಭ!: ತೀವ್ರ ಚಳಿಗೆ ಮನಸ್ಸಿನ ಜೊತೆಗೆ ದೇಹವೂ ಸದೃಢವಾಗಿರಬೇಕು!

- Advertisement -
- Advertisement -

ರೈತ ಹೋರಾಟ ಹಲವು ಮಜಲುಗಳಲ್ಲಿ ದೇಶದ ಗಮನ ಸೆಳೆಯುತ್ತಿದೆ. ಹೋರಾಟಕ್ಕೆ 60 ದಿನಗಳು ತುಂಬುತ್ತಾ ಬಂದಿದೆ. ದೆಹಲಿಯಲ್ಲಿ ತೀವ್ರ ಚಳಿ, ಮಂಜು ವಿಪರೀತ ಎನ್ನುವ ಮಟ್ಟಕ್ಕೆ ಬಂದು ನಿಂತಿದೆ. ಈ ಸಂದರ್ಭದಲ್ಲಿ ರೈತರು ಹೋರಾಟದಲ್ಲಿ ಹುಮ್ಮಸ್ಸಿನಿಂದ ಭಾಗಿಯಾಗಲು ಮನಸ್ಸಿನ ಜೊತೆಗೆ ದೇಹವನ್ನೂ ಸದೃಢವಾಗಿಟ್ಟುಕೊಳ್ಳುವುದು ಮುಖ್ಯವಾಗಿದೆ.

ಉತ್ತಮ ಆಹಾರದ ಜೊತೆಗೆ ಸದೃಢ ದೇಹಕ್ಕೆ ಒಳ್ಳೆಯ ವ್ಯಾಯಾಮದ ಅವಶ್ಯಕತೆಯನ್ನು ಮನಗಂಡು ಪ್ರತಿಭಟನಾ ನಿರತ ರೈತರು ದೆಹಲಿಯ ಸಿಂಘ ಗಡಿಯ ಪ್ರತಿಭಟನಾ ಸ್ಥಳದಲ್ಲಿ ವ್ಯಾಯಾಮ ಶಾಲೆ (ಜಿಮ್) ಆರಂಭಿಸಿದ್ದಾರೆ.

ದೆಹಲಿ ಚಲೋ ಅಂಗವಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಹರ್ಜಿಂದರ್ ಸಿಂಗ್, ಮೊದಲು ಪ್ರತಿಭಟನಾಕಾರರಿಗೆ ದಿನ ಬಳಕೆ ವಸ್ತುಗಳಾದ ಸೋಪು, ಪೇಸ್ಟ್, ಬ್ರಶ್, ಸ್ಯಾನಿಟರಿ ನ್ಯಾಪ್ಕಿನ್ಸ್, ಬಿಸಿ ನೀರಿನ ವ್ಯವಸ್ಥೆ ಮಾಡುತ್ತಿದ್ದರು. ಪ್ರತಿಭಟನೆಯ ದಿನಗಳು ಹೆಚ್ಚಾದಂತೆ ಔಷಧಿಗಳನ್ನು ನೀಡಲು ಮತ್ತು ರೈತರಿಗೆ ಚಿಕಿತ್ಸೆ ನೀಡಲು ವೈದ್ಯರನ್ನು ನೇಮಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

PC: Mass Media Foundation (ವ್ಯಾಯಾಮ ನಿರತ ಪ್ರತಿಭಟನಾಕಾರ)

ಹರ್ಜಿಂದರ್ ಸಿಂಗ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದನ್ನು ಗಮನಿಸಿದ ಇವರ ಸ್ನೇಹಿತರೊಬ್ಬರು, ತಾವು ಏನಾದರೂ ಸೇವೆ ಮಾಡಬೇಕು ಎಂದು ಕೋರಿಕೆ ಮುಂದಿಟ್ಟಿದ್ದಾರೆ. ಚಂಡಿಗಢದಲ್ಲಿ ಜಿಮ್ ನಡೆಸುತ್ತಿರುವುದರಿಂದ ಪ್ರತಿಭಟನಾ ಸ್ಥಳದಲ್ಲಿಯೂ ಒಂದು ಸಣ್ಣ ಜಿಮ್ ಆರಂಭಿಸಿ ಸೇವೆ ನೀಡುವ ಯೋಚನೆ ಮಾಡಿದ್ದಾರೆ.

“ನಾನು ಮೊದಲು ಇಲ್ಲಿಗೆ ಒಬ್ಬ ಪ್ರತಿಭಟನಾಕಾರನಾಗಿ, ರೈತನಾಗಿ ಪಂಜಾಬ್‌ನಿಂದ ಬಂದಿದ್ದೆ. ದೆಹಲಿ ಪೊಲೀಸರು ನಮ್ಮನ್ನು ಸಿಂಘು ಗಡಿಯಲ್ಲಿಯೇ ತಡೆ ಹಿಡಿದ ಕಾರಣ ನಾವಿಲ್ಲಿಯೇ ಇರಬೇಕಾಯಿತು. ನಂತರ ಊರಿಗೆ ಹೋಗಿ ದಿನ ಬಳಕೆ ವಸ್ತುಗಳು ಮತ್ತು ಔಷಧಿಗಳನ್ನು ತಂದು ರೈತರ ಬಳಕೆಗಾಗಿ ಇಟ್ಟಿದ್ದೇನೆ’ ಎಂದು ಹರ್ಜಿಂದರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಬೆಂಬಲ: ರೈತರಿಲ್ಲದೆ ಅನ್ನವಿಲ್ಲ ಎಂದ ಸರ್ಕಾರಿ ಅಧಿಕಾರಿಗಳು

PC: Mass Media Foundation (ವ್ಯಾಯಾಮ ನಿರತ ಪ್ರತಿಭಟನಾಕಾರ)

’ನಾನಿಲ್ಲಿ ಇರುವುದನ್ನು ಗಮನಿಸಿದ ನನ್ನ ಚಂಡಿಗಢದ ಸ್ನೇಹಿತ, ತನ್ನಿಂದ ಏನು ಸೇವೆಯಾಗಬಹುದು ಎಂದು ಕೇಳಿದರು. ಜಿಮ್ ಮಾಲೀಕನಾಗಿರುವ ಆತನಿಗೆ ಜಿಮ್ ಸೇವೆಯನ್ನೇ ನೀಡಲು ತಿಳಿಸಿದೆ. ಹಾಗಾಗಿ ಆತ ಇಲ್ಲಿ ಜಿಮ್ ಆರಂಭಿಸಿದ್ದಾನೆ. ಚಂಡಿಗಢದಿಂದ ಜಿಮ್ ಸಲಕರಣೆಗಳನ್ನು ಕಳುಹಿಸಿದ್ದಾನೆ. ನಾನು ಇವುಗಳ ಉಸ್ತುವಾರಿ ನೋಡಿಕೊಳ್ಳುತ್ತೇನೆ. ಇನ್ನು ಎಷ್ಟು ದಿನ ನಾವಿಲ್ಲಿಯೇ ಇರಬೇಕಾಗುತ್ತದೊ ಗೊತ್ತಿಲ್ಲ. ಅಲ್ಲಿಯವರೆಗೂ ಇವುಗಳು ಜನರ ಬಳಕೆಗೆ ಲಭ್ಯವಿರುತ್ತವೆ. ಈ ಚಳಿಯಲ್ಲಿ ದೇಹವನ್ನು ಗಟ್ಟಿಯಾಗಿಟ್ಟುಕೊಳ್ಳುವುದು ಮುಖ್ಯ’ ಎನ್ನುತ್ತಾರೆ.

“ನಿತ್ಯ ನೂರಾರು ಪ್ರತಿಭಟನಾಕಾರರು ಈ ಪುಟ್ಟ ಜಿಮ್‌ನಲ್ಲಿ ಕಸರತ್ತು ನಡೆಸುತ್ತಾರೆ. ದೆಹಲಿಯ ತೀವ್ರ ಚಳಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯಕವಾಗಿದೆ. ಒಳ್ಳೆಯ ಆಹಾರದ ಜೊತೆಗೆ ಉತ್ತಮ ವ್ಯಾಯಾಮ ಎಂತಹ ಸನ್ನಿವೇಶದಲ್ಲೂ ಆರೋಗ್ಯ ಹಾಳಾಗದಂತೆ ನೋಡಿಕೊಳ್ಳುತ್ತದೆ. ಈ ಕಾರಣಕ್ಕೆ ನಮ್ಮಿಂದ ಈ ಸೇವೆ ಒದಗಿಸುತ್ತಿದ್ದೆವೆ” ಎಂದು ಜಿಮ್ ಸೇವೆ ನೀಡುತ್ತಿರುವ ಹರ್ಜಿಂದರ್‌ ಸಿಂಗ್ ಹೇಳುತ್ತಾರೆ.


ಇದನ್ನೂ ಓದಿ: ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...