Homeಚಳವಳಿರೈತ ಹೋರಾಟ: ದೆಹಲಿಯ ಗಡಿಗಳಲ್ಲಿ ರೈತರ ತಿರಂಗಾ ಯಾತ್ರೆ

ರೈತ ಹೋರಾಟ: ದೆಹಲಿಯ ಗಡಿಗಳಲ್ಲಿ ರೈತರ ತಿರಂಗಾ ಯಾತ್ರೆ

- Advertisement -
- Advertisement -

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವರ ರೈತರು, 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸ್ವಾತಂತ್ರ್ಯ ದಿನವನ್ನು ‘ಕಿಸಾನ್ ಮಜ್ದೂರ್ ಆಜಾದಿ ಸಂಗ್ರಾಮ ದಿವಸ್’ ಎಂದು ಆಚರಿಸಿ, ತಿರಂಗಾ ಯಾತ್ರೆ ನಡೆಸಿದ್ದಾರೆ.

ಮಾಜಿ ಸೈನಿಕರು, ಪ್ರತಿಭಟನಾ ನಿರತ ರೈತರು ಭಾನುವಾರ ಸಿಂಘು ಗಡಿಯಲ್ಲಿ ತ್ರಿವರ್ಣ ಧ್ವಜ ಮೆರವಣಿಗೆ ನಡೆಸಿದ್ದಾರೆ. ಜೊತೆಗೆ ಪ್ರತಿಭಟನಾ ನಿರತ ರೈತರು ‘ಕಿಸಾನ್ ಮಜ್ದೂರ್ ಆಜಾದಿ ಸಂಗ್ರಾಮ ದಿವಸ್’ ಆಚರಿಸಿದ್ದಾರೆ.

ದೇಶಾದ್ಯಂತ ರೈತರು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಂಡು ಪ್ರತಿಭಟನೆ ನಡೆಸಿದ್ದಾರೆ.  ಸಿಂಘು, ಟಿಕ್ರಿ ಮತ್ತು ಘಾಜಿಪುರ ಸೇರಿದಂತೆ ದೆಹಲಿಯ ಗಡಿಗಳಲ್ಲಿ, ದಿನವಿಡೀ ತ್ರಿವರ್ಣ ಧ್ವಜದ ಮೆರವಣಿಗೆಗಳು ಮತ್ತು ಕಾರ್ಯಕ್ರಮಗಳು ನಡೆದಿವೆ. ರೈತರ ಟೆಂಟ್, ಗುಡಿಸಲು, ಟ್ಯ್ರಾಲಿಗಳ ಮೇಲೆ ತಿರಂಗ ಧ್ವಜ ಹಾರಿಸಲಾಗಿದೆ.

ಇದನ್ನೂ ಓದಿ: ‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

Image

“ನಾವು ಬೆಳಿಗ್ಗೆ 8 ಗಂಟೆಗೆ ತಿರಂಗ ಧ್ವಜವನ್ನು ಹಾರಿಸಿದ್ದೇವೆ. ಸ್ವಾತಂತ್ರ್ಯ ದಿನವನ್ನು ಆಚರಿಸಲು ಹಪುರ್‌ನಿಂದ 500 ಮೋಟಾರ್ ಬೈಕ್‌ಗಳ ತಿರಂಗಾ ಯಾತ್ರೆ ಮಧ್ಯಾಹ್ನ 2 ಗಂಟೆಗೆ ಗಾಜಿಪುರ ಗಡಿಯನ್ನು ತಲುಪಿದೆ” ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನ ಧರ್ಮೇಂದ್ರ ಮಲ್ಲಿಕ್ ಹೇಳಿದ್ದಾರೆ.

ಪಂಜಾಬ್‌ನ ಮೊಗ್ಗ ಜಿಲ್ಲೆಯ ಅದಾನಿ ಸೈಲೋ ಬಳಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ರೈತರು ಕೃಷಿ ಕಾನೂನುಗಳ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಸೈಲೋ ಕಟ್ಟಲು ಪ್ರಧಾನಿ ಮೋದಿಯವರು 2015 ರಲ್ಲಿ ಅಧಿಕಾರಕ್ಕೆ ಬಂದಾಗ ಸಹಾಯ ಮಾಡಿದರು. ಆಗ ಹೊಸ ಕಾನೂನುಗಳ ಮೂಲಕ ಅವರಿಗೆ ನೆರವಾಗುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ: ಮುಂದಿನ 6 ತಿಂಗಳಿಗಾಗಿ ಪಡಿತರ ಸಂಗ್ರಹಿಸುತ್ತಿರುವ ರೈತ ಮಹಿಳೆಯರು

“ಜನವರಿ 26 ರಂದು ನಡೆದ ಘಟನೆಗಳು ನಮ್ಮ ಚಳುವಳಿಗೆ ಧಕ್ಕೆ ತಂದಿವೆ. ಆದ್ದರಿಂದ ಆಗಸ್ಟ್ 15 ರಂದು ನಡೆಯುವ ತಿರಂಗಾ ಯಾತ್ರೆ ಯಾವುದೇ ನಗರವನ್ನು ಪ್ರವೇಶಿಸುವುದಿಲ್ಲ. ಆದರೆ ನಮ್ಮ ಬೇಡಿಕೆಗಳು ಈಡೇರುವವರೆಗೂ ನಮ್ಮ ಪ್ರತಿಭಟನೆ ನಿಲ್ಲುವುದಿಲ್ಲ” ಎಂದು ರೈತ ನಾಯಕ ಜಗಮೋಹನ್ ಸಿಂಗ್ ಈ ಹಿಂದೆ ಸ್ಪಷ್ಟಪಡಿಸಿದ್ದರು.


ಇದನ್ನೂ ಓದಿ: ರೈತ ಹೋರಾಟ: ಸ್ವಾತಂತ್ರ್ಯ ದಿನದಂದು ತಿರಂಗಾ ಯಾತ್ರೆ ನಡೆಸಲಿರುವ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....