Homeಚಳವಳಿವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಿರ್ಣಯ ಅಂಗೀಕರಿಸಿದ ಪಂಜಾಬ್ ಸರ್ಕಾರ

ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಿರ್ಣಯ ಅಂಗೀಕರಿಸಿದ ಪಂಜಾಬ್ ಸರ್ಕಾರ

- Advertisement -
- Advertisement -

ಒಕ್ಕೂಟ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ವಿಧಾನಸಭೆ ಗುರುವಾರ ನಿರ್ಣಯ ಅಂಗೀಕರಿಸಿದೆ. ಕೇಂದ್ರ ಸರ್ಕಾರ ಕಾನೂನುಬಾಹಿರವಾಗಿ ರಾಜ್ಯ ಸರ್ಕಾರದ ವಿಷಯಗಳಲ್ಲಿ ಪ್ರವೇಶಿಸಿದೆ ಎಂದು ಪಂಜಾಬ್ ಸರ್ಕಾರ ತಿಳಿಸಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿಯೂ ಕೂಡ ಅಮರಿಂದರ್ ಸಿಂಗ್ ಪಂಜಾಬ್ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ವಿಧಾನ ಸಭೆ ನಿರ್ಣಯ ಅಂಗೀಕರಿಸಿತ್ತು. ಈಗ ಎರಡನೇ ಬಾರಿ  ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ನೇತೃತ್ವದಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.

ಎರಡು ದಿನಗಳ ವಿಧಾನಸಭೆ ಅಧಿವೇಶನದ ಮುಕ್ತಾಯದ ದಿನದಂದು ರಾಜ್ಯ ಕೃಷಿ ಸಚಿವ ರಣದೀಪ್ ಸಿಂಗ್ ನಾಭಾ ಅವರು ನಿರ್ಣಯ ಮಂಡಿಸಿದರು. ಸದನದಲ್ಲಿ ಚರ್ಚೆಯ ನಂತರ ಇಬ್ಬರು ಬಿಜೆಪಿ ಶಾಸಕರ ಅನುಪಸ್ಥಿತಿಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.

ಇದನ್ನೂ ಓದಿ: ದೆಹಲಿ ಹೋರಾಟಕ್ಕೆ 1 ವರ್ಷ: ನವೆಂಬರ್‌ 29 ರಂದು ಸಂಸತ್ತಿನ ಕಡೆಗೆ ರೈತರ ಮೆರವಣಿಗೆ

 

“ನವೆಂಬರ್ 11, 2021 ರಂದು ನಡೆದ ಈ ವಿಧಾನ ಸಭೆಯ ವಿಶೇಷ ಅಧಿವೇಶನದಲ್ಲಿ ಪಂಜಾಬ್ ಕೃಷಿ ಸಚಿವರು ಮಂಡಿಸಿದ ನಿರ್ಣಯ ಸದನದಲ್ಲಿ ಅಂಗೀಕರಿಸಲ್ಪಟ್ಟಿದೆ. ಕೇಂದ್ರ ಸರ್ಕಾರವು ಯಾವುದೇ ಅರ್ಹತೆ ಇಲ್ಲದೆ ರಾಜ್ಯಗಳ ಪಟ್ಟಿಯಲ್ಲಿನ ವಿಷಯದಲ್ಲಿ ಕಾನೂನುಬಾಹಿರವಾಗಿ ಜಾರಿಗೆ ತಂದ ಮೂರು ವಿವಾದಾತ್ಮಕ ಕಾನೂನುಗಳನ್ನು ಮತ್ತೊಮ್ಮೆ ತಿರಸ್ಕರಿಸುತ್ತದೆ” ಎಂದು ಹೇಳಿದೆ.
ಮೂರು ಕೃಷಿ ಕಾನೂನುಗಳನ್ನು “ಫೆಡರಲ್ ರಚನೆಯ ಮೇಲಿನ ದಾಳಿ” ಎಂದು ವಿವರಿಸಿರುವ ರಾಜ್ಯ ಕೃಷಿ ಸಚಿವ ರಣದೀಪ್ ಸಿಂಗ್ ನಾಭಾ, ಪಂಜಾಬ್ ಸರ್ಕಾರವು ಇವುಗಳನ್ನು ಜಾರಿಗೆ ತರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ನಿರ್ಣಯದ ಪ್ರಕಾರ, ವಿಧಾನ ಸಭೆಯು “ರೈತ ಸ್ನೇಹಿ ನಿಯಂತ್ರಿತ ಎಪಿಎಂಸಿ ಮಂಡಿಗಳನ್ನು ವ್ಯವಸ್ಥಿತವಾಗಿ ಕಿತ್ತುಹಾಕುವ ಮತ್ತು ಕಾರ್ಪೋರೇಟ್ ಸ್ನೇಹಿ ಮಂಡಿಗಳನ್ನು ಸ್ಥಾಪಿಸುವ” ಗುರಿಯನ್ನು ಹೊಂದಿರುವ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ಬಲವಾಗಿ ಖಂಡಿಸುತ್ತದೆ” ಎಂದಿದೆ.

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಎಎಪಿ ನೇತೃತ್ವದ ದೆಹಲಿ ಸರ್ಕಾರ, ಮತ್ತು ಶಿರೋಮಣಿ ಅಕಾಲಿ ದಳದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಅಕಾಲಿದಳದ ಶಾಸಕರು ಅವರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಜೊತೆಗೆ ಅಕಾಲಿ ದಳವು ಎನ್‌ಡಿಎ ಜೊತೆಗಿನ ತನ್ನ ಸಂಬಂಧವನ್ನು ಮುರಿದುಕೊಂಡಿದೆ. ಕೃಷಿ ಕಾನೂನುಗಳ ಜಾರಿ ವಿರೋಧಿಸಿ ಕೇಂದ್ರ ಸಚಿವ ಸಂಪುಟದಲ್ಲಿದ್ದ ಸಚಿವ ಸ್ಥಾನವನ್ನು ತೊರೆದಿದೆ ಎಂದು ಅಕಾಲಿದಳದ ಶಾಸಕ ಗುರ್‌ಪರ್ತಾಪ್ ಸಿಂಗ್ ವಡಾಲಾ ಹೇಳಿದ್ದಾರೆ.

ಎಎಪಿ ಶಾಸಕ ಹರ್ಪಾಲ್ ಸಿಂಗ್ ಚೀಮಾ ಅವರು ಕೃಷಿ ಕಾನೂನುಗಳ ವಿಚಾರದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಪಾತ್ರವನ್ನು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ, ಅಂಕಿತ್ ದಾಸ್‌ ಗನ್‌ಗಳಿಂದ ಗುಂಡು ಹಾರಿಸಲಾಗಿದೆ- ಪ್ರಯೋಗಾಲಯದ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....