Homeಮುಖಪುಟಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಅಂದು ಪ್ರಧಾನಿ ಮೋದಿಯವರು ಪಾಕಿಸ್ತಾನಕ್ಕೆ ಹರಿದುಹೋಗುತ್ತಿರುವ ನೀರನ್ನು ರಾಜಸ್ತಾನಕ್ಕೆ ತರುವ ಬಗ್ಗೆ ಮಾತನಾಡಿದ್ದರು. ಆಗ ಮತ್ತೆ ನನ್ನ ಹೊಲ ಹಸಿರಿನಿಂದ ಕಂಗೊಳಿಸುವ ಕನಸು ಕಂಡಿದ್ದೆ. ಅದು ಮತ್ತೆ ನಿರಾಸೆಯಾಯಿತು...

- Advertisement -
- Advertisement -

“ಕಾಂಗ್ರೆಸ್ ಪಕ್ಷದ ನಾಯಕರು ಶ್ರೀಮಂತರ ಮನೆಯಲ್ಲಿ ಬೆಳೆದವರು. ಅವರಿಗೆ ಬಡವರು ಹೇಗಿರುತ್ತಾರೆ ಎಂದು ತಿಳಿದಿರುವುದಿಲ್ಲ. ಪ್ರಧಾನಿ ಮೋದಿ ಚುನಾವಣಾ ಪ್ರಚಾರಗಳಲ್ಲಿ ನಾನು ರೈಲು ನಿಲ್ದಾಣದಲ್ಲಿ ಟೀ ಮಾರುತ್ತಿದೆ ಎಂದು ಹೇಳಿದಾಗ, ಅವರು ಮಾರಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ಮನಸ್ಸು ಕಾಂಗ್ರೆಸ್‌ನಿಂದ ಮೋದಿ ಕಡೆಗೆ ವಾಲಿತ್ತು. ಬಡತನದಲ್ಲಿ ಬಂದವನಿಗೆ ಬಡವರ ಕಷ್ಟ ತಿಳಿದಿರುತ್ತದೆ. ನಮಗಾಗಿ ಕೆಲಸ ಮಾಡುತ್ತಾರೆ ಎಂದು ಮತ ನೀಡಿದ್ದೆ. ಆದರೆ, ಇಂದು ಅವರೇ ನಮ್ಮ ಜೀವನಕ್ಕೆ ಕೊಳ್ಳಿ ಇಡುತ್ತಿದ್ದಾರೆ”  ಹೀಗೆ ನೋವಿನಲ್ಲಿ ಮನದ ಮಾತುಗಳನ್ನು ಹೊರಹಾಕಿದವರು ರಾಜಸ್ತಾನದ ರೈತ ರೇಖಾರಾಮ್ ಗೋಟಿಯಾ.

61 ವರ್ಷದ , ರಾಜಸ್ತಾನದ ನಾಗೋರ್ ಜಿಲ್ಲೆಯವರು. 12ನೇ ತರಗತಿವರೆಗೆ (ದ್ವಿತೀಯ ಪಿಯುಸಿ) ಶಿಕ್ಷಣ ಪಡೆದಿರುವ ಇವರು ಸರ್ಕಾರಿ ಉದ್ಯೋಗದ ಬದಲು ಆಯ್ಕೆ ಮಾಡಿಕೊಂಡಿದ್ದು ಕೃಷಿ.

“ ನಾನು ಶಿಕ್ಷಣ ಮುಗಿಸಿದಾಗ ಸರ್ಕಾರಿ ಉದ್ಯೋಗದ ಅವಕಾಶ ಹೆಚ್ಚಾಗಿತ್ತು. ಆದರೆ, ಸರ್ಕಾರಿ ಉದ್ಯೋಗಕ್ಕಿಂತ ಕೃಷಿಯಲ್ಲಿ ಅಧಿಕ ಲಾಭವಿತ್ತು. ಹಾಗಾಗಿ ಇರುವ ಎರಡು ಎಕರೆ ಜಮೀನಿನಲ್ಲೇ ಉತ್ತಮ ಕೃಷಿಯನ್ನು ಮಾಡುವ ಪಣತೊಟ್ಟು ಸರ್ಕಾರಿ ಉದ್ಯೋಗ ನಿರಾಕರಿಸಿದೆ. ಅಂದು ಸರಿ ಅನಿಸಿದ ನಿರ್ಧಾರ ಈಗ ನನ್ನ ಮಕ್ಕಳನ್ನು ಕಾರ್ಮಿಕರನ್ನಾಗಿಸಿದೆ” ಎಂದು ಅಳಲು ತೋಡಿಕೊಳ್ಳುತ್ತಾರೆ.

ಇದನ್ನೂ ಓದಿ: ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ಡಿಸೆಂಬರ್ 13 ರಿಂದ ದೆಹಲಿ- ರಾಜಸ್ತಾನದ ಹೆದ್ದಾರಿ ಶಹಜಾನ್‌ಪುರ ಗಡಿಯಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ರೈತ ರೇಖಾರಾಮ್ ಗೋಟಿಯಾ, ಸುಮಾರು 2 ತಿಂಗಳುಗಳಾದರೂ ಒಂದು ದಿನವೂ ಮನೆಗೆ ಹೋಗಿ ಬಂದಿಲ್ಲ. ಬದಲಿಗೆ ತಮ್ಮ ಹೆಂಡತಿ, ಮೂವರು ಮಕ್ಕಳು, 5 ಮೊಮ್ಮಕ್ಕಳನ್ನು ಇಲ್ಲಿಗೆ ಕರೆಸಿಕೊಂಡು ಹೋರಾಟದಲ್ಲಿ ಪಾಲುದಾರರಾಗುವಂತೆ ಮಾಡಿದ್ದಾರೆ.

ಇರುವ 2 ಎಕರೆ ಜಮೀನಿನಲ್ಲಿ ಬಾಜ್ರಾ (ಜೋಳದ ರೀತಿಯ ಧಾನ್ಯ), ಹೆಸರುಕಾಳು, ಪಶು ಆಹಾರವನ್ನು ಬೆಳೆಯುತ್ತಾರೆ. ಮೂವರು ಮಕ್ಕಳು ಗ್ರಾಮದಲ್ಲಿ, ಪಕ್ಕದ ನಗರಗಳಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಾರೆ. ಇವರು ಮಾತ್ರ ಕೃಷಿ ಭೂಮಿಯನ್ನೇ ನಂಬಿಕೊಂಡಿದ್ದೇನೆ ಎನ್ನುತ್ತಾರೆ.

“ಪಂಜಾಬ್, ಹರಿಯಾಣದ ರೈತರಿಗೆ ಉತ್ತಮ ಎಂಎಸ್‌ಪಿ(MSP) ಸಿಗುತ್ತಿದೆ. ಅವರ ಬೆಳೆಗಳಿಗೆ ಕಾಲುವೆಗಳ ಮೂಲಕ ನೀರು ಸಿಗುತ್ತಿದೆ. ಆದರೆ ರಾಜಸ್ತಾನದಲ್ಲಿ ಎಷ್ಟು ಆಳಕ್ಕೆ ಬೋರ್‌ವೇಲ್ ಹಾಕಿದರೂ ನೀರು ಬರುತ್ತಿಲ್ಲ. ಬರುವ ನೀರು ನಮ್ಮ ಪಶುಗಳಿಗೆ ಸಾಕಾಗುತ್ತಿಲ್ಲ. ಹರಿಯಾಣದ ಗಡಿಯಲ್ಲಿ ಇಷ್ಟು ದಿನಗಳಿಂದ ಕುಳಿತಿರುವ ನನಗೆ ಇಲ್ಲಿನ ಹಸಿರು ಕಂಡು ನೋವಾಗುತ್ತಿದೆ. ನಾನು ಮೊದ ಮೊದಲು ಇದೆ ರೀತಿಯಲ್ಲಿ ಬೆಳೆ ಬೆಳೆದಿದ್ದೆ. ಆದರೆ ಈಗ ಅದ್ಯಾವುದು ಸಾಧ್ಯವಾಗುತ್ತಿಲ್ಲ” ಎಂದು ಕಂಬನಿ ಹರಿಸುತ್ತಾರೆ.

ಇದನ್ನೂ ಓದಿ:ಗೆಲ್ಲುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ: ಸಿಂಘು ಗಡಿಯಲ್ಲಿ ಗುರ್ತೇಜ್ ಸಿಂಗ್ ಗುಡುಗು

“ಅಂದು ಪ್ರಧಾನಿ ಮೋದಿಯವರು ಪಾಕಿಸ್ತಾನಕ್ಕೆ ಹರಿದುಹೋಗುತ್ತಿರುವ ನೀರನ್ನು ರಾಜಸ್ತಾನಕ್ಕೆ ತರುವ ಬಗ್ಗೆ ಮಾತನಾಡಿದ್ದರು. ಆಗ ಮತ್ತೆ ನನ್ನ ಹೊಲ ಹಸಿರಿನಿಂದ ಕಂಗೊಳಿಸುವ ಕನಸು ಕಂಡಿದ್ದೆ. ಅದು ಮತ್ತೆ ನಿರಾಸೆಯಾಯಿತು. ಇಲ್ಲಿನ ರೈತರು (ಪಂಜಾಬ್, ಹರಿಯಾಣ) ವರ್ಷಕ್ಕೆ ಮೂರು ಬೆಳೆ ಬೆಳೆಯುತ್ತಾರೆ. ಆದರೆ ನಮ್ಮ ರಾಜಸ್ತಾನದ ರೈತರು 2 ಬೆಳೆ ಬೆಳೆಯಲು ಹರಸಾಹಸ ಪಡುತ್ತಿದ್ದೇವೆ.”

“ಇನ್ನೊಂದು ವಿಷಯ ಗೊತ್ತಾ, ಮೋದಿಯವರ ಮಾತನ್ನು ಅದೆಷ್ಟು ನಿಷ್ಠೆಯಿಂದ ಪಾಲಿಸಿದ್ದೆ ಎಂದರೆ, 15 ಲಕ್ಷ ಹಾಕುವುದಾಗಿ ಅವರು ಹೇಳಿದಾಗ, ಅವರ ಮಾತು ನಂಬಿ ಹೊಸ ಅಕೌಂಟ್ ಮಾಡಿಸಿ, ಅದರಲ್ಲಿ ಯಾರಿಂದಲೂ ಒಂದು ರೂಪಾಯಿ ಹಾಕದಂತೆ ಎಚ್ಚರ ವಹಿಸಿದ್ದೆ. ಅದರಲ್ಲಿ ಮೋದಿಯವರೇ ಹಣ ಹಾಕಬೇಕು ಅದನ್ನು ಎಲ್ಲರಿಗೂ ಹೇಳಬೇಕು ಎಂದುಕೊಂಡಿದ್ದೆ. ಅದು ಕೂಡ ಸುಳ್ಳಾಯಿತು”.

“ಈ ಕೃಷಿ ಕಾನೂನುಗಳ ಮೂಲಕ ಇರುವ ಎಲ್ಲಾ ಆದಾಯವನ್ನು, ಭೂಮಿಯನ್ನು ಕಿತ್ತುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ. ನಮ್ಮನ್ನು ದೊಡ್ಡ ದೊಡ್ಡ ಖಾಸಗಿ ಕಂಪನಿಗಳ ಗುಲಾಮರನ್ನಾಗಿಸಲು ಸರ್ಕಾರ ಪ್ರಯತ್ನ ಪಡುತ್ತಿದೆ. ಇರುವ ಎಂಎಸ್‌ಪಿ ಸರಿಯಾಗಿ ನೀಡದೆ ಸರ್ಕಾರ ನಮ್ಮನ್ನು ಆಟ ಆಡಿಸುತ್ತಿದೆ. ಅಂತಹದರಲ್ಲಿ ಈ ಕಾನೂನುಗಳು ನಮ್ಮ ಜೀವನವನ್ನೇ ಬಲಿ ತೆಗೆದುಕೊಳ್ಳಲು ಹೊರಟಿವೆ. ಇವು ರದ್ದಾಗುವವರೆಗೆ ನಾವು ಹೋರಾಟ ಮುಂದುವರೆಸುತ್ತವೇ ಇರುತ್ತೇವೆ. ಮನೆಯಲ್ಲಿ ಈಗಾಗಲೇ ಹೇಳಿ ಬಂದಿದ್ದೇನೆ. ನನ್ನನ್ನು ಮನೆಗೆ ಕರೆಯಬೇಡಿ ನಾನು ಸತ್ತು ಹೋದೆ ಎಂದು ಭಾವಿಸಿಕೊಳ್ಳಿ. ಗೆದ್ದ ಮೇಲೆ ಮಾತ್ರ ಇಲ್ಲಿಂದ ಮನೆಗೆ ಬರುತ್ತೇನೆ ಎಂದಿದ್ದೇನೆ. ಇರುವ ಜಮೀನು ಹೋದರೆ, ಇನ್ನೊಬ್ಬರ ಗುಲಾಮನಾಗಲಾರೆ” ಎಂದು ರೇಖಾರಾಮ್ ಗೋಟಿಯಾ ಹೇಳುತ್ತಾರೆ.

ಇದನ್ನೂ ಓದಿ: ಆರ್ಥಿಕ ಸ್ವಾತಂತ್ರ್ಯ & ಸಂವಿಧಾನ ರಕ್ಷಣೆಗಾಗಿ ಮತ್ತೊಂದು ಬೃಹತ್ ಹೋರಾಟದತ್ತ ದೇಶ ಸಾಗುತ್ತಿದೆ

“ಅಂದು ರೈತರು ಎಂದರೆ ಸಂತೋಷದಿಂದ ಹೆಣ್ಣು ಕೊಡುತ್ತಿದ್ದರು. ಈಗ ರೈತರಿಗೆ, ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೆ ಮುಂದೆ ನೋಡುತ್ತಾರೆ. ಕೃಷಿ ಕ್ಷೇತ್ರವನ್ನು ಲಾಭದಾಯಕವನ್ನಾಗಿಸಿದರೇ ಬೇರೆ ಉದ್ಯೋಗಕ್ಕೆ ಜನ ಯಾಕೆ ಹೋಗುತ್ತಾರೆ..? ಇದರಿಂದ ನಿರುದ್ಯೋಗ ಕೂಡ ಕಡಿಮೆಯಾಗಲಿದೆ. ಆದರೆ ಸರ್ಕಾರ ಇರುವ ಕೃಷಿ ಕ್ಷೇತ್ರವನ್ನು ಖಾಸಗಿಯವರಿಗೆ ನೀಡಲು ಹೊರಟಿದೆ. ನಾವು ಇನ್ನೆಷ್ಟು ವರ್ಷ ಬದುಕಬಲ್ಲವು..? ಸರ್ಕಾರದ ಈ ಕಾನುನೂಗಳ ಪ್ರಭಾವ ಬೀರುವುದು ಈಗಿನ ಯುವಜನತೆ ಮೇಲೆ’ ಎನ್ನುತ್ತಾರೆ ರೇಖಾರಾಮ್.

ಮಾಸ್ಟರ್‌ಸ್ಟ್ರೋಕ್

ರಾಜಸ್ತಾನದಲ್ಲಿ ಬೆಳೆಗಳಿಗಿರುವ ಎಂಎಸ್‌ಪಿ ಬಗ್ಗೆ ಮಾತನಾಡುತ್ತಾ, ನಮ್ಮ ರಾಜ್ಯದಲ್ಲೂ ಉತ್ತಮ ಎಂಎಸ್‌ಪಿ ಇದೆ. ಆದರೆ ಅವುಗಳೆಲ್ಲ ಕಾಗದದಲ್ಲಿ ಮಾತ್ರ ಎನ್ನುತ್ತಾರೆ. ಹೆಸರುಕಾಳಿಗೆ ಪ್ರತಿ ಕ್ವಿಂಟಾಲ್‌ಗೆ 7,300 ರೂಪಾಯಿ ಸರ್ಕಾರಿ ಎಂಎಸ್‌ಪಿ ಇದೆ ಆದರೆ ಸರ್ಕಾರಿ ಮಂಡಿಗಳಲ್ಲಿ ನಮ್ಮ ಬೆಳೆಯನ್ನು ಖರೀದಿಸುತ್ತಿಲ್ಲ. 5 ಸಾವಿರ ರೈತರು ಸರ್ಕಾ‌ರಿ ಮಂಡಿಗೆ ಹೋದರೆ ಅದರಲ್ಲಿ ಕೇವಲ 20 ರೈತರ ಮಾಲನ್ನು ಮಾತ್ರ ಖರೀದಿಸಲಾಗುತ್ತಿದೆ. ಅನಿವಾರ್ಯವಾಗಿ ನಾವು ಖಾಸಗಿ ಮಂಡಿಗೆ ಹೋಗಬೇಕಾಗಿದೆ, ಅಲ್ಲಿ ನಮಗೆ 5,000 ರೂಪಾಯಿ ದೊರೆಯುತ್ತದೆ. ಹಾಗೆ ಬಾಜ್ರಾ ಬೆಳೆಗೆ ಸರ್ಕಾರಿ ಎಂಎಸ್‌ಪಿ 2,160 ರೂಪಾಯಿ ಇದೆ. ಅದು ಕೂಡ ನಮಗೆ ಸಿಗುತ್ತಿಲ್ಲ, ಖಾಸಗಿ ಮಂಡಿಯಲ್ಲಿ 1,200 ರೂಪಾಯಿಗೆ ಮಾರಾಟ ಮಾಡುತ್ತಿದ್ದೇವೆ. ಇಂತಹ ಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಇನ್ನೂ ದೊಡ್ಡ ದೊಡ್ಡ ಖಾಸಗಿ ಕಂಪನಿಗಳಿಗೆ ನಮ್ಮನ್ನು ಮಾರಾಟ ಮಾಡುತ್ತಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ದೇಶ ಭಕ್ತರು ಯಾರು? ದೇಶ ದ್ರೋಹಿಗಳು ಯಾರು? – ನಟ ಚೇತನ್ ಹೇಳುತ್ತಾರೆ ಕೇಳಿ

ಮೋದಿಯವರಲ್ಲಿ ಒಂದು ಪ್ರಶ್ನೆ ಕೇಳಬೇಕು. ಟೀ ಮಾರುತ್ತಿದ್ದೆ ಎನ್ನುವ ನೀವು ಬಡವರು ಎಂದು ಕೊಂಡಿದ್ದೆ. ನೀವು ಹೇಳಿದ ಎಲ್ಲಾ ಮಾತುಗಳನ್ನು ನಾನು ನಂಬಿಕೊಂಡಿದ್ದೆ. ಆದರೆ ನಿಮ್ಮ ಮಾತುಗಳನ್ನು, ವಾಗ್ದಾನಗಳನ್ನು ಹೇಗೆ ಮರೆತಿರಿ..? ನಾವು ಕಾಂಗ್ರೆಸ್ ಅವರನ್ನು ಶ್ರೀಮಂತರು ಎಂದುಕೊಂಡಿದ್ದೇವು. ಆದರೆ ನೀವು ಬಡವರಲ್ಲ. ನಿಮಗೆ ಬಡತನದ ಬಗ್ಗೆ ಕೊಂಚವು ಅರಿವಿಲ್ಲ. ನೀವು ಶ್ರೀಮಂತರ ಹಿಂದೆ ಬಿದ್ದಿರಿ. ಅಂದು ಸಿಹಿ ಸಿಹಿ ಮಾತನಾಡಿ ಮತ ಪಡೆದ ಮೋದಿ ಬೇರೆ. ಇಂದಿನ ಮೋದಿಯೇ ಬೇರೆ.  ನಮ್ಮ (ರೈತರ) ಆದಾಯವನ್ನು ದ್ವಿಗುಣಗಿಳಿಸುವ ಮಾತನಾಡಿದ್ದಿರಿ. ಈಗ ಪಶು ಆಹಾರವನ್ನು ಕೊಳ್ಳುವುದನ್ನು ಬಂದ್ ಮಾಡಿಸಿದ್ದೀರ. ಬಿಜೆಪಿಯ ಬೈರೋಗ್ ಸಿಂಗ್ ಸರ್ಕಾರ ನಮ್ಮ ಬೆಳೆ ತೆಗೆದುಕೊಳ್ಳುವುದನ್ನು ನಿಲ್ಲಿಸಿತು. ಇಂತಹದರಲ್ಲಿ ನಮ್ಮ ಆದಾಯ ಹೇಗೆ ದ್ವಿಗುಣಗೊಳಿಸುವಿರಿ….?” ಎಂದು ಪ್ರಶ್ನಿಸಿದ್ದಾರೆ.

“ಇದು ಸರ್ವಾಧಿಕಾರಿ ಸರ್ಕಾರವಾಗಿದೆ. ಇದೇನು ರಾಜರಿಂದ ಬಂದ ಸರ್ಕಾರವಲ್ಲ. ಇದು ನಾವು ಮತ ನೀಡಿ ಹುಟ್ಟು ಹಾಕಿದ ಸರ್ಕಾರ. ಆದರೆ ನಮ್ಮನ್ನೇ ಆತಂಕವಾದಿ ಎನ್ನುತ್ತಾರೆ. ದೇಶದ್ರೋಹಿ ಎನ್ನುತ್ತಾರೆ. ನಮಗೆ ತುಂಬಾ ನೋವಾಗುತ್ತದೆ ನಮ್ಮನ್ನು ದೇಶದ್ರೋಹಿ ಎಂದಾಗ. ಇವರು ದೇಶದ್ರೋಹಿಗಳು, ದೇಶದ ಬಾವುಟವನ್ನು ಅವಮಾನ ಮಾಡಿದ ಇವರ ಚೇಲಾಗಳು ದೇಶದ್ರೋಹಿಗಳು. ನಮ್ಮ ರೈತರನ್ನು ದೇಶದ್ರೋಹಿಗಳು ಎನ್ನುತ್ತಾರೆ ಇವರನ್ನು ರೈತರು ಎಂದಿಗೂ ಕ್ಷಮಿಸುವುದಿಲ್ಲ. ನಾವು ನಮ್ಮ ಊರಿನಲ್ಲಿ ಮನೆ ಮನೆಗೆ ತೆರಳಿ ಹೇಳಿದ್ದೇವೆ ಬಿಜೆಪಿಗೆ ಎಂದಿಗೂ ಮತ ನೀಡಬೇಡಿ ಎಂದ್ದಿದ್ದೇವೆ” ಎಂದು ರೈತ ರೇಖಾರಾಮ್ ಗೋಟಿಯಾ ಹೇಳುತ್ತಾರೆ.

ಮಮತ.ಎಂ


ಇದನ್ನೂ ಓದಿ; 3 ತಿಂಗಳಿನಿಂದ ಒಂದು ದಿನವೂ ರಜೆಯಿಲ್ಲ: ಪ್ರತಿದಿನವೂ ರೈತ ಹೋರಾಟದ ಕ್ಷಣ ಕ್ಷಣದ ಮಾಹಿತಿ ನೀಡುತ್ತಿರುವ ಯುವಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...